ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

ಚಿನ್ನದ ಪದಕದ ಬದಲು ಚೆಕ್ ನೀಡಲು ಮುಂದಾದ ತುಮಕೂರು ವಿವಿ; ವಿದ್ಯಾರ್ಥಿಗಳ ಪ್ರತಿಭಟನೆ

ಚಿನ್ನದ ಪದಕದ ಬದಲು ಚೆಕ್ ನೀಡಲು ಮುಂದಾದ ತುಮಕೂರು ವಿವಿ

Tumkur News: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಗೋಲ್ಡ್ ಮೆಡಲಿಸ್ಟ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ವಿವಿ ವತಿಯಿಂದ ಚೆಕ್ ನೀಡಲು ಮುಂದಾದಾಗ ವಿದ್ಯಾರ್ಥಿಗಳು ಚೆಕ್ ವಾಪಸ್ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರ ಭಾರಿ ಸದ್ದು ಮಾಡುತ್ತಿದೆ.

ಸಾಧನೆಗೆ ವಯಸ್ಸು ಅಡ್ಡಿಯಲ್ಲ; 76ನೇ ವರ್ಷದಲ್ಲಿ LLMನಲ್ಲಿ 4ನೇ ರ‍್ಯಾಂಕ್ ಪಡೆದ ನಿವೃತ್ತ ಅಧಿಕಾರಿ ವಿ. ತಿಪ್ಪೇಸ್ವಾಮಿ

76ನೇ ವಯಸ್ಸಿನಲ್ಲಿ 4ನೇ ರ‍್ಯಾಂಕ್ ಪಡೆದ ವಿ. ತಿಪ್ಪೇಸ್ವಾಮಿ

Tumkur News: ನಿವೃತ್ತ ಅಧಿಕಾರಿ ವಿ. ತಿಪ್ಪೇಸ್ವಾಮಿ 76ನೇ ವಯಸ್ಸಿನಲ್ಲಿ ಕಾನೂನು ವಿಭಾಗದ ಎಲ್‌ಎಲ್‌ಎಂ ಕೋರ್ಸ್‌ನಲ್ಲಿ ನಾಲ್ಕನೇ ರ‍್ಯಾಂಕ್ ಪಡೆಯುವ ಮೂಲಕ ಯುವ ಪೀಳಿಗೆಗೆ ಪ್ರೇರಣೆಯಾಗಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಅವರು ಪ್ರಮಾಣ ಪತ್ರ ಸ್ವೀಕರಿಸಿದರು.

Tumkur News: ಬ್ಯಾಕ್‌ಬೆಂಚ್ ಗುಡ್‌ಬೈ; ಶ್ರೀ ಸತ್ಯಸಾಯಿ ಗುರುಕುಲಮ್‌ನಲ್ಲಿ U ಆಕಾರದ ಆಸನ ವ್ಯವಸ್ಥೆ: ಗಮನ ಸೆಳೆದ ಪ್ರಯೋಗ

ಶ್ರೀ ಸತ್ಯಸಾಯಿ ಗುರುಕುಲಮ್‌ನಲ್ಲಿ ಯು ಆಕಾರದ ಆಸನ ವ್ಯವಸ್ಥೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಾಣದಹುಣಸೆ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಕಾರುಣ್ಯ ನಿಕೇತನಂ ಶಾಲೆಯಲ್ಲಿ ಬ್ಯಾಕ್‌ಬೆಂಚ್ ವ್ಯವಸ್ಥೆಗೆ ವಿದಾಯ ಹೇಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಲೋಕಸೇವಾ ಗುರುಕುಲಮ್‌ ಸಂಸ್ಥೆಯ ಅಧೀನದಲ್ಲಿರುವ ಉಚಿತ ವಸತಿ ಸಹಿತ ಶಿಕ್ಷಣ ನೀಡುತ್ತಿರುವ ಈ ಶಾಲೆಯಲ್ಲಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ 8ನೇ ತರಗತಿಯಲ್ಲಿ ವಿನೂತನ ಪ್ರಯೋಗ ಆರಂಭಿಸಲಾಗಿದೆ. ವಿದ್ಯಾರ್ಥಿಗಳನ್ನು ಯು ಆಕಾರದಲ್ಲಿ ಕೂರಿಸಲಾಗುತ್ತಿದೆ.

ಗುರುಗಳ ಆಶೀರ್ವಾದವೇ ಯಶಸ್ಸಿನ ರಹಸ್ಯ: ಹಂದನಕೆರೆ, ತಿಪಟೂರು ಕಾಡಸಿದ್ದೇಶ್ವರ ಮಠಗಳೊಂದಿಗೆ ಡಿಕೆಶಿಗೆ ಅವಿನಾಭಾವ ಬಾಂಧವ್ಯ

ತುಮಕೂರಿನ ಧಾರ್ಮಿಕ ಕ್ಷೇತ್ರಗಳೊಂದಿಗೆ ಡಿಕೆಶಿಗೆ ಅವಿನಾಭಾವ ಬಾಂಧವ್ಯ

CM DK Shivakumar: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ತುಮಕೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳೊಂದಿಗೆ ಅವರಿಗಿರುವ ದಶಕಗಳ ಅವಿನಾಭಾವ ಬಾಂಧವ್ಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕುರಿತ ವಿವರ ಇಲ್ಲಿದೆ.

ಕಮರ್ಷಿಯಲ್ ಶೆಡ್ಡುಗಳ ನಿರ್ಮಾಣ ಕಣ್ಮುಚ್ಚಿ ಕುಳಿತ ನಗರಸಭೆ, ಸಾರ್ವಜನಿಕರ ಆಕ್ರೋಶ: ಜನವಸತಿ ಪ್ರದೇಶಗಳಲ್ಲಿ ಅನಧಿಕೃತ ಕಮರ್ಷಿಯಲ್ ಶೆಡ್ಡುಗಳು!

Tiptur News: ಜನವಸತಿ ಪ್ರದೇಶಗಳಲ್ಲಿ ಅನಧಿಕೃತ ಕಮರ್ಷಿಯಲ್ ಶೆಡ್ಡುಗಳು!

ನಗರ ಪ್ರದೇಶದಲ್ಲಿ ಕೆಲ ಸೈಟಿನ ಮಾಲೀಕರು ಹಣ ಮಾಡುವ ಆಸೆಯಿಂದಾಗಿ ಶೆಡ್ಡು ಗಳನ್ನು ನಿರ್ಮಿಸಿ ಬಾಡಿಗೆಗೆ ಅಥವಾ ಜಾಗವನ್ನು ಭೋಗ್ಯಕ್ಕೆ ಕೊಡುತ್ತಿದ್ದಾರೆ. ಅಂತಹ ಶೆಡ್ಡುಗಳ ಬಾಡಿಗೆದಾರರು ಯಾವ ರೀತಿಯಲ್ಲಿ ಅದನ್ನು ಬಳಸಿಕೊಳ್ಳುತ್ತಿದ್ದಾರೆ, ಇದರಿಂದ ಅಕ್ಕಪಕ್ಕ ದವರಿಗೆ ತೊಂದರೆಯಾಗುತ್ತಿದೆಯೇ ಎಂಬುದನ್ನು ಅರಿಯಬೇಕಿದೆ.

ಡಿಕೆಶಿ ಸಂಪುಟದಲ್ಲಿ ಪುಟ್ಟರಂಗಶೆಟ್ಟಿಗೆ ಮಂತ್ರಿಗಿರಿ ನೀಡಿ: ರಾಜ್ಯ ಉಪ್ಪಾರ ಸಂಘ ಒತ್ತಾಯ

ಸಿ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಉಪ್ಪಾರ ಸಂಘ ಒತ್ತಾಯ

Chikkanayakanahalli News: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಡಿ.ಕೆ. ಶಿವಕುಮಾರ್‌ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಒತ್ತಾಯಿಸಿದ್ದಾರೆ.

Railway Minister V.Somanna: ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ರೈಲ್ವೆ ಸಚಿವ ವಿ.ಸೋಮಣ್ಣ

ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ

ಕೇಂದ್ರ ಸರ್ಕಾರ ಮಹತ್ವದ ಲಸಿಕೆ ಅಭಿಯಾನ ಇಂದು ಆರಂಭಿಸಿದೆ. ಆದರೆ ಈ ವ್ಯಾಕ್ಸಿನ್ ಬಗ್ಗೆ ಯಾರಿಗೂ ಮಾಹಿತಿಯಾಗಲಿ, ಪ್ರಚಾರವಾಗಲಿ ಮಾಡಿಲ್ಲ. 16900 ವ್ಯಾಕ್ಸಿನ್ ಜಿಲ್ಲೆಗೆ ಬಂದಿ ದ್ದರೂ ಹೆಣ್ಣು ಮಕ್ಕಳ ಆರೋಗ್ಯ ಬಗ್ಗೆ ಇಲಾಖೆಯು ನಿರಾಸಕ್ತಿ ತೋರಿರುವುದು ಬೇಸರ ತಂದಿದೆ.

MLA S.R.Srinivas: ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನಕ್ಕೆ ಕಾಡು ಗೊಲ್ಲರ ಆಗ್ರಹ

ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನಕ್ಕೆ ಕಾಡು ಗೊಲ್ಲರ ಆಗ್ರಹ

ಕಾಂಗ್ರೆಸ್ ಆಡಳಿತ ತರುವಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರ ಶ್ರಮ ವಿದೆ. ಸಮಸ್ತ ಕಾಡುಗೊಲ್ಲರ ಪರವಾಗಿ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಸಾಮಾಜಿಕ ಶೈಕ್ಷಣಿಕವಾಗಿ ಹಿಂದುಳಿದ ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲರನ್ನು ಮುಖ್ಯವಾಹಿನಿಗೆ ತರಲು ಮುಖ್ಯಮಂತ್ರಿಗಳು ಗುಬ್ಬಿಯ ಶ್ರೀನಿವಾಸ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳ ಬೇಕು. ಎಲ್ಲಾ ಓಬಿಸಿ ವರ್ಗಗಳನ್ನು ಕೈ ಹಿಡಿದ ವಾಸಣ್ಣ ನಮ್ಮ ಸಮಾಜಕ್ಕೆ ಆಧಾರವಾಗಲಿದ್ದಾರೆ

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿಯಲ್ಲಿ ಅಕ್ರಮ ಎಸಗಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಮೂವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Tiptur Rain: ಕೊಬ್ಬರಿ ನಾಡಿನಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ, ಶೆಡ್‌ ಶೀಟ್‌ ಬಿದ್ದು ಬಾಲಕನಿಗೆ ಗಂಭೀರ ಗಾಯ

ಕೊಬ್ಬರಿ ನಾಡಿನಲ್ಲಿ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ

Tiptur News: ತಿಪಟೂರಿನಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಮೇತ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ತೆಂಗಿನಕಾಯಿ ಫ್ಯಾಕ್ಟರಿ ಕಾರ್ಮಿಕರಿಗೆಂದು ನಿರ್ಮಿಸಿದ್ದ ಶೆಡ್ಡುಗಳ ಮೇಲ್ಚಾವಣಿ ಹಾರಿ ಹೋಗಿವೆ. ಹುಳಿಯಾರು ಮುಖ್ಯ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಬಿರುಗಾಳಿಯ ಅರ್ಭಟಕ್ಕೆ 500ಕ್ಕೂ ಹೆಚ್ಚು ತೆಂಗಿನ ಮರಗಳು ಬಿದ್ದು ಹೋಗಿವೆ, 3000ಕ್ಕೂ ಹೆಚ್ಚು ಬಾಳೆ ಗಿಡಗಳು ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು ನೆಲಕಚ್ಚಿವೆ.

ಸ್ವಗ್ರಾಮ ಹನುಮಂತನಹಳ್ಳಿಯಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ; ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ದರ್ಶನ

ಸ್ವಗ್ರಾಮದಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ

Former Minister Venkataramanappa: ಪಾವಗಡ ತಾಲೂಕಿನ ಹನುಮಂತನಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರಗಳೊಂದಿಗೆ ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುಖಂಡ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ರಾಜಕೀಯ ಗಣ್ಯರು, ಸಾರ್ವಜನಿಕರು, ಅಭಿಮಾನಿಗಳು ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ರುದ್ರಪ್ಪ ಲಮಾಣಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಶ್ರೀ ಸೇವಾಲಾಲ್ ಲಂಬಾಣಿ ಸಂಘ ಒತ್ತಾಯ

ರುದ್ರಪ್ಪ ಲಮಾಣಿಗೆ ಡಿಸಿಎಂ ಸ್ಥಾನ ನೀಡಿ; ಬಿ.ಟಿ. ಕುಮಾರ್ ಒತ್ತಾಯ

ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮಾಜದ ಪಕ್ಷದ ಮುಖಂಡರುಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘ ಮನವಿ ಮಾಡಿದೆ.

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ; ಶನಿವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

Former minister Venkataramanappa Death: ಪಾವಗಡದ ಮಾಜಿ ಸಚಿವ ವೆಂಕಟರಮಣಪ್ಪ (80) ಹೃದಯಾಘಾತದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದರು. ಇವರ ಅಂತ್ಯಕ್ರಿಯೆ ಪಾವಗಡ ತಾಲೂಕಿನ ಸ್ವ ಗ್ರಾಮದ ಹನುಮಂತನಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ.

Tiptur News: ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ತಿಪಟೂರಿನ ಪ್ರಣವ್ ಲೋಕೇಶ್ ಆಯ್ಕೆ

ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ಪ್ರಣವ್ ಲೋಕೇಶ್

Tiptur News: ತಿಪಟೂರು ನಗರದ ಜೈ ಮಾರುತಿ ಟೇಕ್ವಾಂಡೋ ತರಬೇತಿ ಕೇಂದ್ರದ ವಿದ್ಯಾರ್ಥಿ ಪ್ರಣವ್ ಲೋಕೇಶ್ ಥೈಲ್ಯಾಂಡ್‌ನಲ್ಲಿ ಮೇ 30ರಂದು ಶನಿವಾರ ಹಾಗೂ ಮೇ 31ರಂದು ಭಾನುವಾರ ನಡೆಯಲಿರುವ ಅಂತಾರಾಷ್ಟಿಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ.

ʼʼಮುಂದೆ ಇದೆ ಭಾರಿ ಸವಾಲು, ಎಚ್ಚರಿಕೆ ಅಗತ್ಯʼʼ:  ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ  ಕರಿಬಸವೇಶ್ವರ ಸ್ವಾಮೀಜಿ

ಡಿಕೆಶಿ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ ಅಜ್ಜಯ್ಯ

DK Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸದ್ಯದಲ್ಲೇ ಸಿಎಂ ಪಟ್ಟಕ್ಕೆ ಏರಲಿದ್ದಾರೆ. ಹಾಗಂತ ಡಿಕೆಶಿ ಅವರ ಮುಂದಿನ ಹಾದಿ ಹೂವಿನ ಹಾಸಲ್ಲ. ಕಲ್ಲು-ಮುಳ್ಳುಗಳ, ಸವಾಲಿನ ಹಾದಿಯೇ ಮುಂದಿದೆ ಎಂದು ಡಿಕೆಶಿ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಹೇಳಿದ್ದಾರೆ. ಸದ್ಯ ಈ ಭವಿಷ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ಮಾ 2020ರ ಅಂತ್ಯಕ್ಕೆ ಲಭ್ಯವಿರುವ ದತ್ತಾಂಶಗಳ ಪ್ರಕಾರ, ಜಿಲ್ಲೆಯ ರೈತರು ರೇಷ್ಮೆ ಕೃಷಿಯನ್ನು ಒಂದು ಲಾಭದಾಯಕ ಉದ್ದಿಮೆಯಾಗಿ ಸ್ವೀಕರಿಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 10223 ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಬೆಳೆಯುವ ಗುರಿಯನ್ನು ತಲುಪಲಾಗಿದ್ದು, ಹಸಿರು ಹೊದಿಕೆಯಂತೆ ಕಾಡುತ್ತಿರುವ ಹಿಪ್ಪು ನೇರಳೆ ತೋಟಗಳು ಜಿಲ್ಲೆಯ ಆರ್ಥಿಕತೆಗೆ ಬಲ ತುಂಬುತ್ತಿವೆ.

Tiptur News: ಸಕ್ಕರೆ ಕಾಯಿಲೆ ನಿಯಂತ್ರಿಸದಿದ್ದರೆ ಅಂಧತ್ವ ಹೆಚ್ಚುತ್ತದೆ: ಡಾ.ವಿವೇಚನ

ಸಕ್ಕರೆ ಕಾಯಿಲೆ ನಿಯಂತ್ರಿಸದಿದ್ದರೆ ಅಂಧತ್ವ ಹೆಚ್ಚುತ್ತದೆ

ಬದಲಾದ ವಾತಾವರಣದಲ್ಲಿ ಜನರು ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ‌. ಗ್ರಾಮೀಣ ಪ್ರದೇಶದ ಜನರು ಸಕಾಲದಲ್ಲಿ ಆರೋಗ್ಯ ಪರೀಕ್ಷೆ ಮತ್ತು ಚಿಕಿತ್ಸೆ ದೊರೆಯದ ಕಾರಣ ಬಿಪಿ ಮತ್ತು ಶುಗರ್ ಹೆಚ್ಚಲು ಕಾರಣವಾಗಿದೆ. ಇದರಿಂದ ಕಣ್ಣಿನ ದೃಷ್ಟಿ ದೋಷ ಸಹಜವಾಗಿ ಹೆಚ್ಚಾ ಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೇ ಇದ್ದರೆ, ಅಂಧತ್ವ ಬರುವ ಅಪಾಯವಿದ್ದು ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದು ಹೆಚ್ಚು ಸೂಕ್ತ ಎಂದರು.

MLA S.R.Srinivas: ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ತಾಲ್ಲೂಕಿನ ಚೇಳೂರಿನ ಎಪಿಎಂಸಿ ಯಾರ್ಡ್ ಆವರಣದಲ್ಲಿ 1 ಕೋಟಿ ರೂಗಳ ಸಿಸಿರಸ್ತೆ ಕಾಮಗಾರಿ ಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹನಿಟ್ರ್ಯಾಪ್ ಬಗ್ಗೆ ಮಾತನಾಡುವ ವ್ಯಕ್ತಿಗೆ ಯಾಕೆ ಭಯ ಹುಟ್ಟಿದೆ. ಅಂತಹ ಮಾಡಬಾರದ್ದು ಮಾಡಿದ್ದಕ್ಕೆ ಈ ಭಯ ಕಾಣುತ್ತಿದೆ ಎನಿಸುತ್ತದೆ. ಚಿಲ್ಲರೆ ಮಾತು ಗಳು, ಕೀಳುಮಟ್ಟದ ರಾಜಕಾರಣ ಅವರ ಚರಿತ್ರೆ ತಿಳಿಸುತ್ತದೆ

Congress Sadhana Samavesha: 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಕೆಶಿ

DK Shivakumar: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ. ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ.

Gubbi News: ಮೇ.25 ರಂದು ಅರ್ಥಪೂರ್ಣ ಬಸವ ಜಯಂತಿ: ತಾಲ್ಲೂಕಿನಾದ್ಯಂತ ಪ್ರಚಾರಕ್ಕೆ ಚಾಲನೆ ನೀಡಿದ ಪ್ರಮುಖರು.

ಮೇ.25 ರಂದು ಅರ್ಥಪೂರ್ಣ ಬಸವ ಜಯಂತಿ

ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ, ಇದೇ ತಿಂಗಳ 25ರಂದು ಬಸವ ಜಯಂತಿ ಆಚರಣೆ ಯನ್ನು ಹೇರೂರು ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯಭವನದಲ್ಲಿ ಬೆಳಿಗ್ಗೆ 7 ಗಂಟೆಗೆ ಇಷ್ಟಲಿಂಗ ಪೂಜೆ ಮೂಲಕ ಆರಂಭಿಸಲಾಗುವುದು. ತಾಲ್ಲೂಕಿನ ಎಲ್ಲಾ ಧರ್ಮ ಗುರುಗಳ ಉಪಸ್ಥಿತಿ ಯಲ್ಲಿ ನಡೆಯುವ ಇಷ್ಟ ಲಿಂಗ ಪೂಜೆಗೆ ತಾಲ್ಲೂಕಿನ ಎಲ್ಲಾ ಸಮಾಜದ ಬಂಧುಗಳು ಆಗಮಿಸಬೇಕು

ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 600 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಪತ್ರ ವಿತರಣೆ: ಹೆಬ್ಬಾಳ್ಕರ್

ತುಮಕೂರಿನಲ್ಲಿ ಒಂದೇ ದಿನ 600 ಅಂಗನವಾಡಿ ನೌಕರರ ನೇಮಕಾತಿ

Laxmi Hebbalkar: ತುಮಕೂರು ಜಿಲ್ಲೆ ಒಂದರಲ್ಲೇ 600 ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಒಂದೇ ದಿನ ನೇಮಕಾತಿ ಪತ್ರವನ್ನು ಕೊಡಲಾಗಿದ್ದು, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಟ್ಟಿಗೆ ದಾಖಲೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Congress Sadhana Samavesha: ಕರ್ನಾಟಕ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು: ಸಿಎಂ

Congress Sadhana Samavesha: ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ಧಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದು, ಶವ ಹೂತು ಹಾಕಿದ ಪಾಪಿ ತಂದೆ!

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದು, ಶವ ಹೂತು ಹಾಕಿದ ತಂದೆ!

Tumkur Murder Case: ತುಮಕೂರು ಜಿಲ್ಲೆ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ವಿರೋಧದ ನಡುವೆಯೂ ಸಂಬಂಧಿಕರ ಹುಡುಗನನ್ನು ಪ್ರೀತಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ತಂದೆಯು ಮಗಳನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Gubbi News: ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಕ್ರೀಡಾ ಜಗತ್ತಿನಲ್ಲಿ ಬೆಳೆದ ಸಾವಿರಾರು ಮಂದಿ ಬದುಕು ಕಂಡುಕೊಂಡಿದ್ದಾರೆ. ನಗರ ಪ್ರದೇಶದಲ್ಲಿ ಮಕ್ಕಳನ್ನು ಕೈಹಿಡಿದು ನಡೆಸುವ ದೃಶ್ಯ ನೋಡುತ್ತೇವೆ. ಶಾಲೆ ಅಷ್ಟೇ ನೋಡುವ ಮಕ್ಕಳು ಇನ್ನಿತರ ಚಟುವಟಿಕೆ ಬಗ್ಗೆ ತೊಡಗದೆ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಆಟದಲ್ಲಿ ತೊಡಗಿಸಬೇಕು. ಮೈದಾನದಲ್ಲಿ ಬೆವರು ಹರಿಸಿ ಆಟ ಆಡಿದ್ದಲ್ಲಿ ದೈಹಿಕ ಆರೋಗ್ಯ ಪ್ರಾಪ್ತಿಯಾಗುತ್ತದೆ. ನಂತರ ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ

Loading...