ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ; ಕ್ರಮಕ್ಕೆ ಆಗ್ರಹಿಸಿ ಮೌನ ಮೆರವಣಿಗೆ
Madhugiri News: ಇತ್ತೀಚೆಗೆ ಆದಿಶಂಕರಾಚಾರ್ಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಭದ್ರ ಹಿತಾಸಕ್ತಿಯುಳ್ಳವರು ಅವಹೇಳನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದು. ಸ್ಮಾರ್ತ ಹಾಗು ಮಾಧ್ವ ವಿಪ್ರರನ್ನು ಬೇರ್ಪಡಿಸುವ ಹುನ್ನಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಆದಿಶಂಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಧುಗಿರಿಯ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ.