ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

MLA S R Srinivas: ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ

ಕಳೆದ ಎಂಟು ವರ್ಷದಿಂದ ಬಡವರಿಗೆ ಮನೆ ಮಂಜೂರು ಆಗುತ್ತಿಲ್ಲ. ಇತ್ತೀಚೆಗೆ ಬರುತ್ತಿದ್ದರೂ ಕೇವಲ ತಾಲ್ಲೂಕಿಗೆ 50 ಮನೆ ಬರುತ್ತದೆ. ಇದು ಹೇಗೆ ಬಡವರಿಗೆ ಹಂಚಲು ಸಾಧ್ಯ. ಈ ಬಗ್ಗೆ ಸದನದಲ್ಲಿ ಚರ್ಚಿಸು ತ್ತೇನೆ ಎಂದ ಅವರು ಸಚಿವ ಸ್ಥಾನ ಬಗ್ಗೆ ಎರಡು ತಿಂಗಳ ಹಿಂದೆ ಸಿದ್ದರಾಮಯ್ಯ ಅವರ ಬಳಿ ಕೇಳಿದ್ದೆ

Gubbi News: ಗುಬ್ಬಿಯಲ್ಲಿ ಅರ್ಥಪೂರ್ಣ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಗುಬ್ಬಿಯಲ್ಲಿ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕ ಆಯೋಜಿಸಿದ್ದ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ, ಹುತಾತ್ಮರ ಭಾವಚಿತ್ರ ಮೆರವಣಿಗೆ ಮಾಡುವ ಮೂಲಕ ಅರ್ಥಪೂರ್ಣವಾಗಿ ನಡೆಸಲಾಯಿತು.

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಈ ಹಳ್ಳಿಯ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು ಇಲ್ಲಿ ಮದುವೆಯೋ, ಇನ್ಯಾವುದೋ ಜಾತ್ರೆಯ ಸಂಭ್ರಮವಲ್ಲ ಅದು ಗೋಮಾತೆ ಲಕ್ಷ್ಮಿಯ ವಿಶೇಷ ಸೀಮಂತ ಕಾರ್ಯಕ್ರಮ ಇಡೀ ಗ್ರಾಮದ ರೈತರು, ಮಹಿಳೆಯರು,ಸಂಬಂದಿಗಳು ಸ್ನೇಹಿತರು ಎಲ್ಲರೂ ಒಟ್ಟುಗೂಡಿ ಲಕ್ಷ್ಮಿ ಯ ಸೀಮಂತ ಕಾರ್ಯಕ್ರಮವನ್ನು ಮಾಡುತ್ತಿದ್ದ ಕಾರ್ಯಕ್ರಮ.

Gubbi News: ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಶಾಸಕ ಎಂ.ಟಿ. ಕೃಷ್ಣಪ್ಪ

ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ

ದೇಶದ ಎಲ್ಲ ನಾಗರಿಕರಿಗೂ ಒಂದೇ ಕಾನೂನು ಅನ್ವಯವಾಗಬೇಕು ಎಂದು ಪ್ರತಿಪಾದಿಸಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಸಂಸತ್ತಿನಲ್ಲಿ ಸತತ ಏಳು ದಿನಗಳ ಕಾಲ ಹೋರಾಟ ನಡೆಸಿತ್ತು. ಬಳಿಕ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿ ಆರೋಪಿ ಗಳನ್ನು ಬಂಧಿಸಿತ್ತು ಹಾಗೂ ಸಂಬಂಧಪಟ್ಟ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

Madhugiri News: ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯಬಾರದು. ಆಸಕ್ತಿ ವಹಿಸಿ ಗಣತಿ ನಮೂನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿಯವರೆಗೂ ಸಂಪರ್ಕಕ್ಕೆ ಸಿಗದವರನ್ನು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅವರನ್ನು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು‌‌ ಎಂದು‌ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಬಿಎಲ್‌ಒಗಳಿಗೆ ಸಲಹೆ ನೀಡಿದ್ದಾರೆ.

ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್!

ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್

Tumkur News: ಪೊಲೀಸ್ ಸಿಬ್ಬಂದಿಯ ಪುತ್ರ ಗ್ಯಾಂಗ್ ಕಟ್ಟಿಕೊಂಡು ದುಬಾರಿ 'ಹೈಡ್ರೋ ಗಾಂಜಾ' ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ನೂತನ 'ಕ್ಯೂಆರ್ ಕೋಡ್' ತಂತ್ರಜ್ಞಾನದ ರಹಸ್ಯ ಕಾರ್ಯಾಚರಣೆಯಿಂದ ಈ ಕರಾಳ ದಂಧೆ ಬಯಲಾಗಿದೆ.

ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಧುಗಿರಿಯಲ್ಲಿ ಮೌನ ಮೆರವಣಿಗೆ

ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ; ಕ್ರಮಕ್ಕೆ ಆಗ್ರಹಿಸಿ ಮೌನ ಮೆರವಣಿಗೆ

Madhugiri News: ಇತ್ತೀಚೆಗೆ ಆದಿಶಂಕರಾಚಾರ್ಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಭದ್ರ ಹಿತಾಸಕ್ತಿಯುಳ್ಳವರು ಅವಹೇಳನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದು. ಸ್ಮಾರ್ತ ಹಾಗು ಮಾಧ್ವ ವಿಪ್ರರನ್ನು ಬೇರ್ಪಡಿಸುವ ಹುನ್ನಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಆದಿಶಂಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಧುಗಿರಿಯ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ.

Tumkur News: ಜ್ಯುವೆಲರಿ ಶಾಪ್‌ನಲ್ಲಿ 10 ಲಕ್ಷ ಮೌಲ್ಯದ ವಜ್ರ, ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ, ಇಲಿಯೇ ಕಳ್ಳ!

ಜ್ಯುವೆಲರಿ ಶಾಪ್‌ನಲ್ಲಿ ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ!

ತುಮಕೂರು ನಗರದ ಕಾಲ್‌ಟೆಕ್ಸ್ ವೃತ್ತದ ಬಳಿ ಇರುವ ‘ವಿಶ್ವಾಸ್‌ ಜ್ಯುವೆಲರಿ ಶಾಪ್‌ʼ ನಲ್ಲಿ ಈ ವಿಚಿತ್ರ ಘಟನೆ ಜರುಗಿದೆ. ಅಂಗಡಿಯಲ್ಲಿದ್ದ 50 ಗ್ರಾಂ ಗೂ ಅಧಿಕ ತೂಕದ, ಅಂದರೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ವಜ್ರ ಖಚಿತ ಸರಗಳು ಹಾಗೂ ಉಂಗುರಗಳು ನಾಪತ್ತೆಯಾಗಿದ್ದವು. ಆದರೆ ಇದರ ಹಿಂದೆ ಯಾವುದೇ ಮಾನವ ಕಳ್ಳನ ಕೈವಾಡವಿಲ್ಲ, ಬದಲಿಗೆ ಕಳ್ಳತನ ಮಾಡಿದ್ದು ಪುಟ್ಟ ಇಲಿ ಎಂಬುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗಗೊಂಡಿದೆ.

Madhugiri News: ಯುವಜನತೆಯನ್ನು ಮಾದಕ ವ್ಯಸನದಿಂದ ರಕ್ಷಿಸಲು ಅಗತ್ಯ ಕಠಿಣ ಕ್ರಮ: ಕೆ.ಎನ್. ರಾಜಣ್ಣ

ಯುವಜನತೆಯನ್ನು ಮಾದಕ ವ್ಯಸನದಿಂದ ರಕ್ಷಿಸಲು ಕಠಿಣ ಕ್ರಮ: ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಅಡಿಯಲ್ಲಿ ಮಧುಗಿರಿ ಪೊಲೀಸ್ ಉಪವಿಭಾಗ ಮತ್ತು ವೃತ್ತ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ "ರೈಸ್(RISE), ಬೇಡ ಬ್ರೋ" ಡ್ರಗ್ಸ್ ಮುಕ್ತ ಕರ್ನಾಟಕ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜರುಗಿತು.

S R Srinivas: ವಿದ್ಯುತ್ ಸಮಸ್ಯೆ ಆಗದಂತೆ  ವಿದ್ಯುತ್ ಸರಬರಾಜು ಉಪಸ್ಥಾವರ ಸ್ಥಾಪನೆ

ವಿದ್ಯುತ್ ಸಮಸ್ಯೆ ಆಗದಂತೆ  ವಿದ್ಯುತ್ ಸರಬರಾಜು ಉಪಸ್ಥಾವರ ಸ್ಥಾಪನೆ

ವಿದ್ಯುತ್ ಕೊರತೆ ಪರಿಹರಿಸಲು 150 ಕೋಟಿ ವೆಚ್ಚದಲ್ಲಿ ರಿಸೀವಿಂಗ್ ಸೆಂಟರ್ ಸ್ಥಾಪನೆ ಮಾಡಲಾಗು ತ್ತದೆ. ಜೊತೆಗೆ 9 ಕಡೆ ವಿದ್ಯುತ್ ಉಪಕೇಂದ್ರಗಳನ್ನು ತೆರೆದು ಗ್ರಾಮೀಣ ಭಾಗದ ರೈತರಿಗೆ ಅನುಕೂಲ ಮಾಡಲಾಗುತ್ತದೆ  ಎಂದು ಕೆಎಸ್ಆರ್ಟಿಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಎಸ್ಆರ್ ಶ್ರೀನಿವಾಸ್(S R Srinivas) ತಿಳಿಸಿದರು

MLA S R Srinivas: ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ತಾಲ್ಲೂಕು ಕಚೇರಿ ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ

ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ಪಂಚಾಯಿತಿ ಸಿಬ್ಬಂದಿ

ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ನೇತ್ರಾವತಿ ದಂಪತಿಯ ಮಗಳು ಯೋಗಿತಾ ಹತ್ತು ವರ್ಷ ವಯಸ್ಸಿನಲ್ಲೇ ಮೆದುಳು ಕ್ಯಾನ್ಸರ್ ಪೀಡಿತರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಧಾರ್ ಕಾರ್ಡ್ ನಲ್ಲಿ ತಾಂತ್ರಿಕ ದೋಷ ಹಿನ್ನಲೆ ಕುಟುಂಬ ಅಲೆದಾಡಿ ಬೇಸತ್ತಿತ್ತು. ಈ ಮಾಹಿತಿ ತಿಳಿದ ಮಾಧ್ಯಮ ಕೂಡಲೇ ಮಗುವಿನ ನೆರವಿಗೆ ಜಿಲ್ಲಾಡಳಿತವನ್ನು ಎಚ್ಚರಿಸಿತು.

Gubbi News: ದುಡಿಮೆಯ ಒಂದಂಶ ಬಡ ಮಕ್ಕಳ ಶಿಕ್ಷಣಕ್ಕೆ : ಕಳ್ಳಿಪಾಳ್ಯ ಲೋಕೇಶ್

ದುಡಿಮೆಯ ಒಂದಂಶ ಬಡ ಮಕ್ಕಳ ಶಿಕ್ಷಣಕ್ಕೆ

ಆಡಂಬರ ಹುಟ್ಟುಹಬ್ಬ ಆಚರಣೆ ಮಾಡಿ ಹಣ ವ್ಯಯ ಮಾಡುವ ಬದಲು ಹಳ್ಳಿಗಾಡಿನ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಒಂದು ರೀತಿಯ ಸಾರ್ಥಕ ಬದುಕು ಎನಿಸುತ್ತದೆ. ಆರೋಗ್ಯ ಮತ್ತು ಶಿಕ್ಷಣ ಸಮಾಜಕ್ಕೆ ಉಚಿತ ಸೇವೆ ಆಗಬೇಕಿದೆ. ಆದರೆ ದುರದೃಷ್ಟ ರೀತಿಯಲ್ಲಿ ಈ ಎರಡೂ ಕ್ಷೇತ್ರ ಕಮರ್ಷಿಯಲ್ ಆಗಿದೆ ಎಂದು ವಿಷಾದಿಸಿದ ಅವರು ಆಂಗ್ಲ ಮಾಧ್ಯಮ ಶಿಕ್ಷಣ ಹಳ್ಳಿ ಮಕ್ಕಳಿಗೆ ದೊರೆಯಬೇಕು

Gubbi News: ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳ ಆಯ್ಕೆ

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳ ಆಯ್ಕೆ

ಸಾವಿತ್ರಿಬಾಯಿ ಫುಲೆಯವರ ಶೈಕ್ಷಣಿಕ ಮತ್ತು ಸಾಮಾಜಿಕ ಸೌಹಾರ್ದತೆಯ ವಿಚಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುವ ಗುರುತರ ಜವಾಬ್ದಾರಿ ಈಗ ನಿಮ್ಮ ಹೆಗಲೇರಿದೆ. ಶಿಕ್ಷಣ, ಮಹಿಳಾ ಸಬಲೀಕರಣ, ಸಾಮಾಜಿಕ ಸಮಾನತೆ ಮತ್ತು ಜಾಗೃತಿ ಮೂಡಿಸುವ ನಿಮ್ಮ ಈ ಕಾರ್ಯಕ್ಕೆ ನಮ್ಮೆಲ್ಲರ ಪೂರ್ಣ ಬೆಂಬಲವಿದೆ.

Gubbi News: ಪ್ರಸ್ತುತ ದುಡಿದು ಹಂಚಿ ತಿನ್ನುವ ಗುಣ ಬೇಕಿದೆ : ಶ್ರೀ ಚಂದ್ರಶೇಖರ ಸ್ವಾಮೀಜಿ

ಪ್ರಸ್ತುತ ದುಡಿದು ಹಂಚಿ ತಿನ್ನುವ ಗುಣ ಬೇಕಿದೆ

ಮಕ್ಕಳಿಗೆ ಸನ್ಮಾನಿಸಿ ಗೌರವಿಸಿ ಪುರಸ್ಕಾರ ನೀಡುವ ಕೆಲಸ ಕಳೆದ 20 ವರ್ಷದಿಂದ ನಡೆಸಿರುವ ನೌಕರರ ಸಂಘ ಮೌಲ್ಯಾಧಾರಿತ ಅರಿವು ನೀಡುವ ವೇದಿಕೆ ಆಯೋಜಿಸುತ್ತಾರೆ. ಇಲ್ಲಿ ಸೇರುವ ಆಸ್ತಿಕ ಬಂಧುಗಳು ತಮ್ಮ ದಾನಧರ್ಮ ಎಂದಿಗೂ ನಿಲ್ಲಿಸದೆ ಹೆಚ್ಚಿಸಿ ನಮ್ಮ ಸಮುದಾಯ ಕಟ್ಟಬೇಕು. ಈ ಜೊತೆಗೆ ಕೋಟಿಗಟ್ಟಲೆ ಆಸ್ತಿ ಹೊಂದಿದ ನಮ್ಮ ಜನರಲ್ಲಿ ಸ್ವಾರ್ಥ ಬೆಳೆದು ಈಗ ವಾರಸುದಾರ ಇಲ್ಲದೇ ಹಾಗೆಯೇ ಆಸ್ತಿ ಬಿದ್ದಿರುವ ನಿದರ್ಶನ ನಮ್ಮ ತಾಲ್ಲೂಕಿನಲ್ಲಿದೆ

Tiptur News: ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ: ಟುಡಾ ಶಶಿಧರ್ ಆರೋಪ

ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ: ಟುಡಾ ಶಶಿಧರ್ ಆರೋಪ

Tiptur News: ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಧ್ವನಿಯೆತ್ತಿದವರ ಮೇಲೆ ಲಾಟಿ ಪ್ರಹಾರ ನಡೆಸುತ್ತಿದೆ, ಹತ್ತು ಹನ್ನೆರಡು ವರ್ಷಗಳಿಂದಲೂ ಪ್ರಶ್ನೆ ಪತ್ರಿಕೆ ಸೋರಿಕೆ ನಿರಂತರವಾಗಿ ನಡೆಯುತ್ತಲೇ ಇದೆ. ನೀಟ್ ಪ್ರಶ್ನೆ ಪತ್ರಿಕೆಯನ್ನು ಮಾರಿಕೊಂಡು ಹಣ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಜನಸ್ಪಂದನ ಟ್ರಸ್ಟ್‌ನ ಅಧ್ಯಕ್ಷ ಟುಡಾ ಶಶಿಧರ್ ಆರೋಪಿಸಿದ್ದಾರೆ.

Pavagada News: ಉತ್ತಮ ಹುದ್ದೆ ತಲುಪಿದಾಗ ಸಮಾಜಕ್ಕೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಿ: ಗಾಯತ್ರಿಬಾಯಿ

ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಗಾಯತ್ರಿಬಾಯಿ

Pavagada News: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಯಶಸ್ಸು ವೈಯಕ್ತಿಕ ಸಾಧನೆಗೆ ಮಾತ್ರ ಸೀಮಿತವಾಗದೆ ಸಮಾಜದ ಅಭಿವೃದ್ಧಿಗೂ ಕಾರಣವಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗಾಯತ್ರಿಬಾಯಿ ತಿಳಿಸಿದ್ದಾರೆ.

Tiptur News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ತಿಪಟೂರಿನಲ್ಲಿ ಎಬಿವಿಪಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Tiptur News: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ಶನಿವಾರ ತಿಪಟೂರು ನಗರದ ಐಬಿ ಸರ್ಕಲ್ ಬಳಿ ನೂರಾರು ವಿದ್ಯಾರ್ಥಿಗಳೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಸಿ.ವೀರಣ್ಣ ನಿಧನ; ಗಣ್ಯರಿಂದ ಸಂತಾಪ

ಮಾಜಿ ಸಚಿವ ಸಿ.ವೀರಣ್ಣ ನಿಧನ; ಗಣ್ಯರಿಂದ ಸಂತಾಪ

ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಸಿ.ವೀರಣ್ಣ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೊರಟಗೆರೆ (Koratagere) ತಾಲೂಕಿನ ಬುಕ್ಕ ಪಟ್ಟಣದ ನಿವಾಸದಲ್ಲಿದ್ದರು.

Madhugiri News: ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

ಮಧುಗಿರಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಂ. ಶಿವಣ್ಣ ಆಯ್ಕೆ

Madhugiri News: ಮಧುಗಿರಿ ತಾಲೂಕಿನ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವಣ್ಣ, ಉಪಾಧ್ಯಕ್ಷರಾಗಿ ಎಸ್. ಆರ್. ಅಶ್ವತ್ಥನಾರಾಯಾಣ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಎಸ್. ರಘುನಾಥರೆಡ್ಡಿ ಹಾಗೂ ಜಿ.ಆರ್. ಗಂಗಾಧರಯ್ಯ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ಶ್ರೀ ರಾಘವೇಂದ್ರ ಸ್ವಾಮಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಉಚಿತ ಜಾಗ ನೀಡಿದ ದಂಪತಿ

ತುಮಕೂರಿನಲ್ಲಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಜಾಗ ನೀಡಿದ ದಾನಿಗಳು

Tumkur News: ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿಗಳವರ ನೂತನ ಶಾಖಾ ಮಠವು ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಈ ಪವಿತ್ರ ಕಾರ್ಯಕ್ಕೆ ರಾಮಸ್ವಾಮಿ ಹಾಗೂ ಶೀಲಾ ದಂಪತಿ ಸ್ವಂತ ಜಾಗವನ್ನು ಉಚಿತವಾಗಿ ನೀಡಿದ್ದಾರೆ.

Folk singer Kesturu Govinda Raju: ಗುಬ್ಬಿಯಲ್ಲಿ ಜನಪದ ಗಾಯಕ ಕೆಸ್ತೂರು ಗೋವಿಂದರಾಜುಗೆ ಸನ್ಮಾನ

ಗುಬ್ಬಿಯಲ್ಲಿ ಜನಪದ ಗಾಯಕ ಕೆಸ್ತೂರು ಗೋವಿಂದರಾಜುಗೆ ಸನ್ಮಾನ

ತಂದೆಯಿಂದ ಬಳುವಳಿಯಾಗಿ ಬಂದ ಜನಪದ ಸಂಗೀತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಬಾಲ್ಯದಿಂದಲೂ ನಿರಂತರವಾಗಿ ಹಾಡುತ್ತಾ ಬಂದಿದ್ದೇನೆ. ದೂರದರ್ಶನದಂತಹ ಪ್ರತಿಷ್ಠಿತ ವೇದಿಕೆ ಯಲ್ಲಿ ರಾಜ್ಯದ ಜನರ ಮುಂದೆ ಪ್ರತಿಭೆ ಪ್ರದರ್ಶಿಸುವ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಈ ಸಾಧನೆಗೆ ನನ್ನ ಕುಟುಂಬ, ಹಿತೈಷಿ ಗಳು ಹಾಗೂ ಕಲಾಭಿಮಾನಿಗಳ ಪ್ರೋತ್ಸಾಹವೇ ಪ್ರಮುಖ ಕಾರಣ

ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಕೆ.ಎನ್. ರಾಜಣ್ಣ ಸೂಚನೆ

ನಿರಂತರ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಕೆ.ಎನ್. ರಾಜಣ್ಣ

Madhugiri News: ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರೂ ಹಾಗೂ ಶಾಸಕ ಕೆ.ಎನ್. ರಾಜಣ್ಣ ಸೂಚನೆ ನೀಡಿದ್ದಾರೆ.

Gubbi News: ರಸ್ತೆ ವಿವಾದಕ್ಕೆ ತೆರೆ: ತಹಶೀಲ್ದಾರ್ ಭೇಟಿ; ಜಮೀನುಗಳಿಗೆ ರಸ್ತೆ ಸುಗಮ

ರಸ್ತೆ ವಿವಾದಕ್ಕೆ ತೆರೆ: ತಹಶೀಲ್ದಾರ್ ಭೇಟಿ; ಜಮೀನುಗಳಿಗೆ ರಸ್ತೆ ಸುಗಮ

ದಲಿತ ಸಮುದಾಯ ದವರಾದ ಮಂಜುಳಾ, ನರಸಿಂಹಯ್ಯ, ವೆಂಕಟೇಶ್ ಎಂಬುವವರ ಜಮೀನಿಗೆ ದಾರಿ ಬಿಡಲು ತೊಗರಿಘಟ್ಟ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು ಅಡ್ಡಿಪಡಿಸು ತ್ತಿದ್ದರು. ಇಂದು ತಹಶೀಲ್ದಾರ್ ರವರ ಸಮ್ಮುಖದಲ್ಲಿ ಗ್ರಾಮಸ್ಥರನ್ನು ಮನವೊಲಿಸಿ ನ್ಯಾಯ ದೊರಕಿಸಿಕೊಡಲಾಗಿದೆ

ನವಜಾತ ಶಿಶುವಿಗೆ ಮರುಜೀವ; ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ವೈದ್ಯರ ಸಾಧನೆ

ನವಜಾತ ಶಿಶುವಿಗೆ ಮರುಜೀವ ನೀಡಿದ ಸಿದ್ದಾರ್ಥ ಆಸ್ಪತ್ರೆ ವೈದ್ಯರು

Tumkur News: ನವಜಾತ ಶಿಶುಗಳಲ್ಲಿ ಎದುರಾಗುವ ಕರುಳಿನ ಅಡಚಣೆಯಂತಹ ಅತ್ಯಂತ ಅಪರೂಪದ ಹಾಗೂ ಮಾರಣಾಂತಿಕ ಕಾಯಿಲೆಯನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ತುರ್ತು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ತುಮಕೂರು ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ವೈದ್ಯರ ತಂಡವು ಮಗುವಿಗೆ ಮರುಜೀವ ನೀಡಿದೆ.

Loading...