ಸಕ್ಕರೆ ಕಾಯಿಲೆ ನಿಯಂತ್ರಿಸದಿದ್ದರೆ ಅಂಧತ್ವ ಹೆಚ್ಚುತ್ತದೆ
ಬದಲಾದ ವಾತಾವರಣದಲ್ಲಿ ಜನರು ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಸಕಾಲದಲ್ಲಿ ಆರೋಗ್ಯ ಪರೀಕ್ಷೆ ಮತ್ತು ಚಿಕಿತ್ಸೆ ದೊರೆಯದ ಕಾರಣ ಬಿಪಿ ಮತ್ತು ಶುಗರ್ ಹೆಚ್ಚಲು ಕಾರಣವಾಗಿದೆ. ಇದರಿಂದ ಕಣ್ಣಿನ ದೃಷ್ಟಿ ದೋಷ ಸಹಜವಾಗಿ ಹೆಚ್ಚಾ ಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೇ ಇದ್ದರೆ, ಅಂಧತ್ವ ಬರುವ ಅಪಾಯವಿದ್ದು ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದು ಹೆಚ್ಚು ಸೂಕ್ತ ಎಂದರು.