ಪ್ರತಿಯೊಬ್ಬರಿಗೆ ಸಾಲ ಸಿಗಬೇಕು ಎಂಬುದು ಸಂಘದ ಉದ್ದೇಶ: ಕೆ.ಶ್ರೀನಿವಾಸರೆಡ್ಡಿ
ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಆವರಣದಲ್ಲಿ ಭಾನುವಾರ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಷೇರುದಾರರು, ರೈತರು ಹಾಗೂ ವಿವಿಧ ಮುಖಂಡರು ಭಾಗವಹಿಸಿದ್ದರು.