ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತುಮಕೂರು

Road Accident: ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Koratagere News: ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ ಶುಭಕಲ್ಯಾಣ್

ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ

ಕೊರಟಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಸುವ ಮಾಹಿತಿ ಮಳಿಗೆ ಸ್ಥಾಪಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

45 ದಿನದಿಂದ ಏಕಾಏಕಿ ಇ-ಖಾತಾ ಸ್ಥಗಿತ: ಲ್ಯಾಂಡ್‌ ಡೆವಲಪರ್ಸ್‌ ಅಸೋಸಿಯೇಷನ್‌ ಆಕ್ರೋಶ

45 ದಿನದಿಂದ ಇ-ಖಾತಾ ಸ್ಥಗಿತ: ಲ್ಯಾಂಡ್‌ ಡೆವಲಪರ್ಸ್ ಆಕ್ರೋಶ

Tumkur News: ಇ-ಖಾತಾ ಸ್ಥಗಿತದಿಂದ ಬ್ಯಾಂಕ್‌ನಿಂದ ಸಾಲ ಸೌಲಭ್ಯ ದೊರೆಯದೆ ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಸಿಸಿ ಹಾಗೂ ಒಸಿ ಪಡೆಯುವ ಪ್ರಕ್ರಿಯೆ ಸುಮಾರು 2 ವರ್ಷಗಳಿಂದ ವಿಳಂಬವಾಗುತ್ತಿದೆ ಎಂದು ಲ್ಯಾಂಡ್‌ ಡೆವಲಪರ್ಸ್‌ ಅಸೋಸಿಯೇಷನ್‌ನ ಅಧ್ಯಕ್ಷ ಸ್ಪೂರ್ತಿ ಚಿದಾನಂದ್ ಆರೋಪಿಸಿದ್ದಾರೆ.

2 ಸಾವಿರಕ್ಕೆ ಮರುಳಾಗಬೇಡಿ, 5 ವರ್ಷ ಒಂದು ಅವಕಾಶ ಕೊಡಿ: ಗೃಹಲಕ್ಷ್ಮಿಯರಿಗೆ ಎಚ್‌.ಡಿ. ಕುಮಾರಸ್ವಾಮಿ ಮನವಿ

2 ಸಾವಿರಕ್ಕೆ ಮರುಳಾಗಬೇಡಿ, 5 ವರ್ಷ ಒಂದು ಅವಕಾಶ ಕೊಡಿ: ಎಚ್‌ಡಿಕೆ ಮನವಿ

HD Kumaraswamy: ತಾತ್ಕಾಲಿಕ ಉಪಶಮನ ಅಷ್ಟೇ ಐದು ಗ್ಯಾರಂಟಿಗಳು. ಇವುಗಳಿಂದ ಏನು ಉಪಯೋಗ ಇಲ್ಲ. ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿಗಳಿಗೆ ವರ್ಷಕ್ಕೆ ₹50,000 ಕೋಟಿ ಹಣವನ್ನು ಖರ್ಚು ಮಾಡುತ್ತಿದೆ. ನೀವು ಕಟ್ಟುವ ತೆರಿಗೆ ಹಣವನ್ನೇ ನಿಮಗೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ವಾರ್ಷಿಕ ₹1ರಿಂದ ₹1.25 ಲಕ್ಷ ಕೋಟಿ ಸಾಲ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹಟ್ಟಿಗಳ ಸರ್ವಾಂಗೀಣ ಪ್ರಗತಿಗೆ ‘ಶ್ರೀʼ ಸಂಕಲ್ಪ: ಜ. 27ರಿಂದ ಚಿಕ್ಕನಾಯಕನಹಳ್ಳಿಯಲ್ಲಿ ಬಸವರಾಮಾನಂದ ಸ್ವಾಮೀಜಿಗಳ ಪಾದಯಾತ್ರೆ

ಜ. 27ರಿಂದ ಚಿಕ್ಕನಾಯಕನಹಳ್ಳಿಯಲ್ಲಿ ಬಸವರಾಮಾನಂದ ಶ್ರೀಗಳ ಪಾದಯಾತ್ರೆ

Chikkanayakanahalli News: ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾಡುಗೊಲ್ಲರ ಹಟ್ಟಿಗಳ ಅಭಿವೃದ್ಧಿ ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಸಲುವಾಗಿ ಶ್ರೀ ಬಸವರಾಮಾನಂದ ಮಹಾಸ್ವಾಮೀಜಿ ಅವರು ಇದೇ ಜನವರಿ 27 ರಿಂದ ಏಳು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

Pavagada News: ಗುಜ್ಜನಡು ವೀರಾಂಜನೇಯ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಗುಜ್ಜನಡು ವೀರಾಂಜನೇಯ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ನೆರವೇರಿದ ಭೂಮಿ ಪೂಜೆ

ಪಾವಗಡ ತಾಲೂಕಿನ ಐತಿಹಾಸಿಕ ಗುಜ್ಜನಡು ಗ್ರಾಮದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ, ಶ್ರೀ ಲಕ್ಷ್ಮಿ ವೆಂಕಟೇಶ್ವರ ಹಾಗೂ ಶಿರಡಿ ಸಾಯಿಬಾಬಾ ನೂತನ ದೇವಾಲಯದ ಭೂಮಿ ಪೂಜೆ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು.

ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆಯಿಂದ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ವಾಹನ ನಿಲುಗಡೆಯಿಂದ ಕಿರಿಕಿರಿ

Madhugiri News: ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿರುವುದರಿಂದ ವೃದ್ಧರು ಹಾಗೂ ಮಹಿಳೆಯರು ಕಚೇರಿಗೆ ತೆರಳಲು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Bhimanna Khandre: ಭೀಮಣ್ಣ ಖಂಡ್ರೆ ಸಮಾಜಮುಖಿ ವ್ಯಕ್ತಿತ್ವದ ಮೇರು ಪರ್ವತ

ಭೀಮಣ್ಣ ಖಂಡ್ರೆ ಸಮಾಜಮುಖಿ ವ್ಯಕ್ತಿತ್ವದ ಮೇರು ಪರ್ವತ

ಮಹಾಸಭಾ ಮಹಾನಗರ ಪಾಲಿಕೆ ಘಟಕದ ಅಧ್ಯಕ್ಷ ಕೆ.ಎಸ್.ಉಮಾಮಹೇಶ್, 'ಖಂಡ್ರೆ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸಮಾಜಕ್ಕೆ ತೊಂದರೆಯಾದ ಸಂದರ್ಭದಲ್ಲಿ ಸಿಡಿದೆದ್ದು ಹೋರಾಟ ಮಾಡುತ್ತಿದ್ದರು. ಹಾವನೂರು ವರದಿ ಲಿಂಗಾಯತ ವಿರೋಧಿಯೆಂದು ವಾದಿಸಿ ವಿಧಾನ ಸಭೆಯಲ್ಲಿ ವರದಿ ಪ್ರತಿಯನ್ನು ಹರಿದುಹಾಕಿ ಪ್ರತಿಭಟಿಸುವ ಎದೆಗಾರಿಕೆ ತೋರಿದ್ದರು' ಎಂದು ನೆನಪಿಸಿಕೊಂಡರು

ಜ.18ರಂದು ಚಿಕ್ಕನಾಯಕನಹಳ್ಳಿಯಲ್ಲಿ ಶ್ರೀ ರಾಮಕೃಷ್ಣ ಸೇವಾಶ್ರಮದಿಂದ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಣೆ

ಜ.18ರಂದು ಚಿಕ್ಕನಾಯಕನಹಳ್ಳಿಯಲ್ಲಿ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಣೆ

Chikkanayakanahalli News: ಪಾವಗಡದ ಖ್ಯಾತ ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಚಿಕ್ಕನಾಯಕನಹಳ್ಳಿ ಪಟ್ಟಣ ಹಾಗೂ ತಾಲೂಕಿನ ಪತ್ರಿಕಾ ವಿತರಕರಿಗೆ ಉಚಿತವಾಗಿ ಜರ್ಕಿನ್ ವಿತರಿಸುವ ಕಾರ್ಯಕ್ರಮವನ್ನು ಜ. 18ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Madhugiri News: ತಿಮ್ಲಾಪುರ ಅಭಯಾರಣ್ಯದಲ್ಲಿ ಬೆಂಕಿ ನಂದಿಸುವ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

ತಿಮ್ಲಾಪುರ ಅಭಯಾರಣ್ಯದಲ್ಲಿ ಬೆಂಕಿ ನಂದಿಸುವ ಬಗ್ಗೆ ಅರಿವು ಕಾರ್ಯಕ್ರಮ

ಮಧುಗಿರಿ ತಾಲೂಕಿನ ತಿಮ್ಲಾಪುರ ಅಭಯಾರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ವತಿಯಿಂದ ಡಿ.ವಿ.ಹಳ್ಳಿ ಮತ್ತು ಸೋದೇನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ಬೆಂಕಿ ನಂದಿಸುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕುರಿತ ವಿವರ ಇಲ್ಲಿದೆ.

ಮಧುಗಿರಿಯ ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ; ಜ.22 ರಿಂದ ಫೆ. 4 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಮಧುಗಿರಿ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ; ಜ.22ರಿಂದ ವಿವಿಧ ಕಾರ್ಯಕ್ರಮ

Madhugiri News: ಮಧುಗಿರಿ ಪಟ್ಟಣದ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸ್ವಾಮಿಯವರ ಬ್ರಹ್ಮರಥೋತ್ಸವದ ಅಂಗವಾಗಿ ಜ.22 ರಿಂದ ಫೆ. 4 ರವರೆಗೆ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಈ ಕುರಿತ ವಿವರ ಇಲ್ಲಿದೆ.

Koratagere News: ಕೊರಟಗೆರೆಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನ

ಕೊರಟಗೆರೆಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನ

ಕೊರಟಗೆರೆ ಪಟ್ಟಣದ ಕಾವಲುಬೀಳು ಗ್ರಾಮದಲ್ಲಿ ಸಾಕುನಾಯಿ ಮೇಲೆ ಮಂಗಳವಾರ ರಾತ್ರಿ ಚಿರತೆ ದಾಳಿ ನಡೆಸಿತ್ತು. ಇದರಿಂದ ಜನ ಭಯಭೀತರಾಗಿದ್ದರು. ಇದೀಗ ಎರಡು ವರ್ಷ ಚಿರತೆಯು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಚಿರತೆ ಸ್ಥಳಾಂತರಕ್ಕೆ ಅರಣ್ಯ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.

ಗಾಂಧಿ ಕ್ರೀಡಾಂಗಣಕ್ಕೆ ಸಚಿವ ಡಾ.ಪರಮೇಶ್ವರ್ ಹೆಸರು: ನಾಮಫಲಕ ತೆರವಿಗೆ ಬಿಜೆಪಿ ಆಗ್ರಹ

ಗಾಂಧಿ ಕ್ರೀಡಾಂಗಣಕ್ಕೆ ಸಚಿವ ಡಾ.ಪರಮೇಶ್ವರ್ ಹೆಸರು: ಬಿಜೆಪಿ ಆಕ್ಷೇಪ

ಮನರೇಗಾ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್‌ನವರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ, ಈಗ ಮಹಾತ್ಮ ಗಾಂಧಿ ಹೆಸರು ತೆಗೆದು ತಮ್ಮ ಹೆಸರು ಇಟ್ಟುಕೊಂಡು ಡಾ.ಪರಮೇಶ್ವರ್ ಅವರೇ ವಿವಾದ ಮಾಡಿಕೊಂಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಶಾಸಕ ಜ್ಯೋತಿಗಣೇಶ್ ಹೇಳಿದ್ದಾರೆ.

ಚಿಕ್ಕನಾಯಕನಹಳ್ಳಿಯ ಜೀರ್ಣೋದ್ಧಾರಗೊಂಡ ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಜ.15ಕ್ಕೆ ಉದ್ಘಾಟನೆ

ಜ.15ರಂದು ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ದಶಕಗಳ ಇತಿಹಾಸವಿರುವ ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಶಿಥಿಲಗೊಂಡಿದ್ದ ಕಾರಣ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಸದ್ಯ ದರ್ಗಾದ ವಿನ್ಯಾಸ, ಬಣ್ಣದ ಕೆಲಸ ಹಾಗೂ ಆವರಣದ ಸೌಂದರ್ಯೀಕರಣದ ಕೆಲಸಗಳು ಅತಿ ವೇಗವಾಗಿ ಸಾಗುತ್ತಿದ್ದು, ಜ.15ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕಾಡು ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ಮಧುಗಿರಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ವೀರನಾಗೇನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಗಾಯಾಳು ರೈತನನ್ನು ಆಂಬ್ಯುಲೆನ್ಸ್ ಮೂಲಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ಕೊಡಿಸಲಾಗಿದೆ. ಪ್ರಾಣಿಗಳ ಬೇಟೆಗೆ ಕೆಲ ಕಿಡಿಗೇಡಿಗಳು ಅಕ್ರಮವಾಗಿ ಸಿಡಿಮದ್ದುಗಳನ್ನು ಇಡುತ್ತಿರುವುದು ರೈತರ ಜೀವಕ್ಕೆ ಮಾರಕವಾಗಿದೆ ಎಂದು ಗ್ರಾಮಸ್ಥರು ಆತಂಕ ಹೊರಹಾಕಿದ್ದಾರೆ.

Self Harming: ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಸಚಿವ ಪರಮೇಶ್ವರ್ ಹೆಸರು ವಿರೋಧಿಸಿ ಬಿಜೆಪಿ ಪ್ರತಿಭಟನೆ

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಸಚಿವ ಪರಮೇಶ್ವರ್ ಹೆಸರು

ಹಾಳಾಗಿದ್ದ ಮಹಾತ್ಮ ಗಾಂಧಿ ಕ್ರೀಡಾಂಗಣವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣದಂತೆ ನಿರ್ಮಾಣ ಮಾಡಲು ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾಳಜಿ ವಹಿಸಿದ್ದರು. ಆದರೆ, ಏನೂ ಮಾಡದ ಸಚಿವ ಡಾ.ಪರಮೇಶ್ವರ್ ಅವರು ತಮ್ಮ ಹೆಸರು ಹಾಕಿಕೊಂಡು, ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ.

Question paper leak: ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ನೀಡಿದ್ದರು. ಪೊಲೀಸರ ತನಿಖೆ ವೇಳೆ ಪ್ರಶ್ನೆಪತ್ರಿಕೆ ಲೀಕ್ ಮಾಡಿರುವ ದೊಡ್ಡ ಜಾಲ ಬಯಲಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ವಿಶ್ವೇಶ್ವರಯ್ಯ ಜಲ ನಿಗಮ ಹಾಗೂ ಹೇಮಾವತಿ ನೀರಾವರಿ ಇಲಾಖೆ ವತಿಯಿಂದ ತಾಲೂ ಕಿನ ಮರಾಠಿ ಪಾಳ್ಯ, ಚೇಳೂರು ಹಟ್ಟಿ, ತಿಮ್ಮಣ್ಣಪಳ್ಯ, ಎಣ್ಣೆ ಕಟ್ಟೆ, ಸೋಮಲಾಪುರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೆಎಸ್ಆರ್‌ಟಿಸಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್ ಆರ್ ಶ್ರೀನಿವಾಸ್(MLA S R Srinivas) ಭೂಮಿ ಪೂಜೆ ನೆರವೇರಿಸಿದರು

Gubbi News: ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ: ಕುರಿಗಾಯಿ ಮಹಿಳೆ ಕೂದಲೆಳೆಯಲ್ಲಿ ಪಾರು

ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ

ತೋಟದ ಸಾಲಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಹಠಾತ್ ದಾಳಿ ಮಾಡಿದ ಚಿರತೆ ಎರಡು ಮೇಕೆಗಳನ್ನು ಬಲಿ ತೆಗೆದುಕೊಂಡಿದೆ. ಮೇಕೆ ಕಾಯುತ್ತಿದ್ದ ಕುರಿಗಾಯಿ ಮಹಿಳೆ ಮೇಲೆರ ಗುವ ಮುನ್ನ ಸ್ಥಳದಿಂದ ಓಡಿಹೋಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು ಗಳಿಸಬಹುದು: ಡಾ. ವಿಜಯಲಕ್ಷ್ಮಿ ದೇಶಮಾನೆ

ಕರ್ಮಯೋಗ ಸಿದ್ಧಾಂತದಿಂದ ಬದುಕಿನಲ್ಲಿ ಯಶಸ್ಸು: ವಿಜಯಲಕ್ಷ್ಮಿ ದೇಶಮಾನೆ

Tumkur News: ತುಮಕೂರು ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ 33ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಜೀವಂತ ದುರ್ಗಾಪೂಜಾ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತೆ, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಉದ್ಘಾಟಿಸಿ, ಮಾತನಾಡಿದ್ದಾರೆ.

Tumkur News: ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ: ರಾಜ್ಯಾಧ್ಯಕ್ಷ ಸುಧಾಕರ್ ಆಗ್ರಹ

ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಲು ಆಗ್ರಹ

Tumkur News: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದ್ದಾರೆ.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

Tumkur News: ವಿಮರ್ಶೆ ಎಂದರೆ ಅಂತಿಮ ತೀರ್ಪು ಅಲ್ಲ

Tumkur News: ವಿಮರ್ಶೆ ಎಂದರೆ ಅಂತಿಮ ತೀರ್ಪು ಅಲ್ಲ

ಭಿನ್ನ-ಭಿನ್ನ ಆಲೋಚನಾ ಕ್ರಮಗಳ ಹಿನ್ನೆಲೆಯಿಂದ ಬಂದವರ ಅಭಿಪ್ರಾಯಗಳನ್ನು ಪಡೆಯುವ ಮೂಲಕ ಹೊಸ ಅರಿವನ್ನು ಕಾಣುವುದು ಕಾಣಿಸು ವುದು ಆ ಮೂಲಕ ನಮ್ಮನ್ನ ನಾವು ಹಿಗ್ಗಿಸಿಕೊಳ್ಳು ವುದು ಸಾಧ್ಯ ಇದನ್ನು ಇಂದಿನ ಕಾರ್ಯಕ್ರಮ ಆಗುಮಾಡಿದೆ. ಕೋಮಲವಾಗಿರುವುದು ದುರ್ಭಲವಲ್ಲ ಎನ್ನುವುದು ನನ್ನ ಅನುಭವದಲ್ಲಿ ಮೂಡಿದ ಲೋಕದೃಷ್ಟಿ

Loading...