ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತುಮಕೂರು

Puneeth Kerehalli: ಅಕ್ರಮ ಗೋ ಸಾಗಾಣಿಕೆ ವಿರೋಧಿಸಿ ಬಂದ್; ತುಮಕೂರು ಜಿಲ್ಲೆ ಪ್ರವೇಶಕ್ಕೆ ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಕೊಪ್ಪಳ ಬಳಿಕ ತುಮಕೂರು ಜಿಲ್ಲೆ ಪ್ರವೇಶಕ್ಕೆ ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಮಾರ್ಚ್‌ 23ರಂದು ತಿಪಟೂರು ಬಂದ್‌ಗೆ ಬಿಜೆಪಿ, ಹಿಂದೂ ಪರ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ತಿಪಟೂರಿಗೆ ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಆಗಮಿಸುತ್ತಿದ್ದರು. ಅವರನ್ನು ಸೋಮವಾರ ರಾತ್ರಿ ಪೊಲೀಸರು ತಡೆದು ತುಮಕೂರು ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್‌ ನೀಡಿದ್ದಾರೆ.

ಸಂಸ್ಕೃತಿಗೆ ಭದ್ರ ಬುನಾದಿ ಹಾಕಿದವರು ದೇವರ ದಾಸಿಮಯ್ಯ: ತಹಸೀಲ್ದಾರ್ ಮಮತಾ

ಸಂಸ್ಕೃತಿಗೆ ಭದ್ರ ಬುನಾದಿ ಹಾಕಿದವರು ದೇವರ ದಾಸಿಮಯ್ಯ: ತಹಸೀಲ್ದಾರ್ ಮಮತಾ

Chikkanayakanahalli News: ಭಾರತೀಯ ಸಂಸ್ಕೃತಿಗೆ ಭದ್ರ ಬುನಾದಿ ಹಾಕಿದವರು ಹಾಗೂ ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಶ್ರೇಷ್ಠ ಮೌಲ್ಯಗಳನ್ನು ನೀಡಿದವರು ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ತಹಸೀಲ್ದಾರ್ ಮಮತಾ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ ವೇಳೆ ಆದಿ ಜಾಂಬವ ಮಠದ ಸ್ವಾಮೀಜಿ ಅಸ್ವಸ್ಥ

ಒಳ ಮೀಸಲಾತಿ ಪಾದಯಾತ್ರೆ ವೇಳೆ ಆದಿ ಜಾಂಬವ ಮಠದ ಸ್ವಾಮೀಜಿ ಅಸ್ವಸ್ಥ

Internal Reservation: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರದಿಂದ ಬೆಂಗಳೂರಿನವರೆಗೆ ಸಾಗುತ್ತಿದ್ದ ಬೃಹತ್ ಪಾದಯಾತ್ರೆ ವೇಳೆ ಆದಿ ಜಾಂಬವ ಮಠದ ಷಡಕ್ಷರಿ ಮುನಿ ಸ್ವಾಮೀಜಿ ಅಸ್ವಸ್ಥರಾಗಿದ್ದರು. ಅವರನ್ನು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

Minister Shivraj Thangadagi hospitalised: ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ(Shivraj Thangadgi) ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

MLA S.R.Srinivas: ಸದನದಲ್ಲಿ ಚುಕ್ಕಿ ಪ್ರಶ್ನೆಗೆ ಶೀಘ್ರ ಉತ್ತರ ಬಯಸಿದ್ದು ಒಳ್ಳೆ ಬೆಳವಣಿಗೆ : ಎಸ್.ಆರ್.ಶ್ರೀನಿವಾಸ್

ಸದನದಲ್ಲಿ ಚುಕ್ಕಿ ಪ್ರಶ್ನೆಗೆ ಶೀಘ್ರ ಉತ್ತರ ಬಯಸಿದ್ದು ಒಳ್ಳೆ ಬೆಳವಣಿಗೆ

ತಾಲ್ಲೂಕಿನ ಕಸಬ ಹೋಬಳಿ ನಡುವಲಪಾಳ್ಯ, ಬ್ಯಾಡಿಗೆರೆ ಹಾಗೂ ಜವರೇಗೌಡನಪಾಳ್ಯ ಗ್ರಾಮ ದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ರಸ್ತೆ ಅಭಿವೃದ್ಧಿಯ ಅಂದಾಜು 5 ಕೋಟಿ ರೂಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾ, ಸಭಾಪತಿಗಳು ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರಿಗೆ ಸೂಚನೆ ನೀಡಿದ್ದು ಮುಂದಿನ ದಿನದಲ್ಲಿ ಸದನದ ಶಾಸಕರ ಪ್ರಶ್ನೆಗೆ ಶೀಘ್ರ ಉತ್ತರ ಕೊಡುವ ಕೆಲಸ ಆಗಲಿದೆ

Madhugiri News: ರಂಜಾನ್‌ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗಿ; ಪರಸ್ಪರ ಗೌರವ, ಐಕ್ಯತೆಯಿಂದ ಬಾಳಲು ಕರೆ

ರಂಜಾನ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗಿ

Madhugiri News: ಮಧುಗಿರಿ ಪಟ್ಟಣದ ಶಿರಾ ಗೇಟ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಅವರು ಶನಿವಾರ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಈದ್ಗಾ ಮೈದಾನದಲ್ಲಿ ಶಾಶ್ವತವಾಗಿ ಶೆಡ್ ನಿರ್ಮಾಣ ಮಾಡಿಸಲಾಗುವುದು. ಇದರಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

Self Harming: ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ!

ನಿವೃತ್ತಿಗೆ ಒಂದೇ ವಾರ, ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ!

ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಮಲ್ಲಿಕಾರ್ಜುನ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಒಂದೇ ವಾರದಲ್ಲಿ ಇವರ ಸೇವಾವಧಿ ಮುಕ್ತಾಯಗೊಳ್ಳಬೇಕಿತ್ತು. ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ವಿಡಿಯೋದಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

BESCOM: ಪೂರ್ವ ಮುಂಗಾರು ಮಳೆ ಅಬ್ಬರ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

ಭಾರಿ ಮಳೆ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

BESCOM: ಗಾಳಿ-ಮಳೆ ಸಂದರ್ಭದಲ್ಲಿ ಕರೆಗಳ ಒತ್ತಡದಿಂದ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಕೆಲವೊಮ್ಮೆ ಲಭ್ಯವಾಗುವುದಿಲ್ಲ, ಹೀಗಾಗಿ ಬೆಸ್ಕಾಂ ವಾಟ್ಸ್ ಆಪ್ ಸಂಖ್ಯೆಗಳಿಗೆ ವಿದ್ಯುತ್ ಸಮಸ್ಯೆ ಕುರಿತ ಸಂದೇಶಗಳನ್ನು ಕಳುಹಿಸಲು ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

Lockup death: ಹುಳಿಯಾರು ಠಾಣೆಯಲ್ಲಿ ಲಾಕಪ್ ಡೆತ್: ತನಿಖೆಗೆ ಆಗ್ರಹ

ಹುಳಿಯಾರು ಠಾಣೆಯಲ್ಲಿ ಲಾಕಪ್ ಡೆತ್: ತನಿಖೆಗೆ ಆಗ್ರಹ

ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಹುಳಿಯಾರು ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಕಾಂತರಾಜು (45) ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆತಂದಿದ್ದರು. ಆದರೆ, ಠಾಣೆಗೆ ಬಂದ ಕೆಲವೇ ಸಮಯದಲ್ಲಿ ಕಾಂತರಾಜು ಮೃತಪಟ್ಟಿದ್ದಾರೆ.

Tumkur news: ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Madhugiri News: ಮಧುಗಿರಿಯಲ್ಲಿ ಜಿಲ್ಲಾಧಿಕಾರಿಯಿಂದ ಜನ ಸಂಪರ್ಕ ಸಭೆ; ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಮಧುಗಿರಿಯಲ್ಲಿ ಜಿಲ್ಲಾಧಿಕಾರಿಯಿಂದ ಜನ ಸಂಪರ್ಕ ಸಭೆ

Madhugiri News: ಮಧುಗಿರಿ ತಾಲೂಕು ಕಚೇರಿಯಲ್ಲಿ ಸೋಮವಾರ ತುಮಕೂರು ಜಿಲ್ಲಾಧಿಕಾರಿ ಕೆ. ಶುಭ ಕಲ್ಯಾಣ್, ಜನ ಸಂಪರ್ಕ ಸಭೆ ನಡೆಸಿದರು. ಈ ವೇಳೆ 331 ಅರ್ಜಿಗಳು ಬಂದಿದ್ದು, ಕೆಲವು ಸ್ಥಳದಲ್ಲೇ ಸಮಸ್ಯೆಯನ್ನು ಬಗೆಹರಿಸಿದರು. ಈ ಕುರಿತ ವಿವರ ಇಲ್ಲಿದೆ.

ಮುದ್ದೇನಹಳ್ಳಿಯಲ್ಲಿ ಅಪೋಲೋ ಫೌಂಡೇಶನ್, ಬಿಎಸ್‌ಎಸ್ ಮೈಕ್ರೋ ಫೈನಾನ್ಸ್‌ನಿಂದ ಉಚಿತ ಆರೋಗ್ಯ ಶಿಬಿರ

​ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ

​Free health camp: ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಹಾಗೂ ಅಪೋಲೋ ಫೌಂಡೇಶನ್ ಸಹಯೋಗದಲ್ಲಿ ಉಚಿತ ವಿಶೇಷ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.

ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ: ಎಸ್ಸಿ ಎಸ್ಟಿ ಹೆಚ್ಚಿನ ಮೀಸಲಾತಿ ಜಾರಿಗೆ ಆಗ್ರಹ

ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ

ಕಳೆದ 70 ವರ್ಷದಿಂದಲೂ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇದ್ದರೂ ಈಗ ಹೆಚ್ಚಳ ಮಾಡಿ ಮೂಗಿಗೆ ತುಪ್ಪ ಸವರಿದಂತೆ ಸರ್ಕಾರಗಳು ನಿರ್ಲಕ್ಷ್ಯ ತೋರಿದೆ. 57 ಸಾವಿರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದೆ. ಹಳೆಯ ಮೀಸಲಾತಿ ಶೇ.3ರಂತೆ 1600 ಹುದ್ದೆ ಮಾತ್ರ ದೊರೆ ಯಲಿದೆ. ಹೆಚ್ಚುವರಿ ಶೇ.7ರಂತೆ ಭರ್ತಿ ಮಾಡಿದರೆ ಎಸ್ಟಿ ಜನಾಂಗಕ್ಕೆ 3 ಸಾವಿರಕ್ಕೂ ಅಧಿಕ ಹುದ್ದೆ ಸಿಗಲಿದೆ ಎಂದರು

ವಡ್ಡಗೆರೆ ದೇವಸ್ಥಾನದಲ್ಲಿ ಹೈಟೆಕ್‌ ಕಳ್ಳರ ಕೈಚಳಕ; ಕೋಟಿ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಕಳವು

ವಡ್ಡಗೆರೆ ದೇವಸ್ಥಾನದಿಂದ ಕೋಟಿ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಕಳವು

Tumakuru News: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಗರ್ಭಗುಡಿ ಸೇರಿ 4 ಬಾಗಿಲನ್ನು ಗ್ಯಾಸ್ ಕಟರ್‌ನಿಂದ ತುಂಡರಿಸಿ 1 ಕೋಟಿ ರುಪಾಯಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಜತೆ ಸಿಸಿಟಿವಿಯ ಡಿವಿಆರ್ ಅನ್ನು ಕಳ್ಳರು ಹೊತ್ತೊಯ್ದಿದ್ದಾರೆ.

Gubbi News: ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ನಡೆದ 3 ಕೋಟಿ ರೂ ವೆಚ್ಚದ ವಿವಿಧ ಗ್ರಾಮದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಶಾಸಕರು ಬಜೆಟ್'ಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದೆವು. ಈ ವರ್ಷ ಮನ್ನಣೆಗೆ ಬಂದಿಲ್ಲ. ಮುಂದಿನ ವರ್ಷದ ಬಜೆಟ್'ನಲ್ಲಿ ಎಲ್ಲಾ ಯೋಜನೆಗೆ ಅಸ್ತು ಸಿಗಲಿದೆ

ನಾಯಿ ಕೊಂದು ಬಸ್‌ ತಂಗುದಾಣದಲ್ಲಿ ನೇತು ಹಾಕಿದ ಕಿಡಿಗೇಡಿಗಳು!

ನಾಯಿ ಕೊಂದು ಬಸ್‌ ತಂಗುದಾಣದಲ್ಲಿ ನೇತು ಹಾಕಿದ ಕಿಡಿಗೇಡಿಗಳು!

Tiptur News: ತಿಪಟೂರಿನಲ್ಲಿ ಘಟನೆ ನಡೆದಿದೆ. ನಾಯಿಯನ್ನು ಕೊಂದು ತಂಗುದಾಣದಲ್ಲಿ ನೇತು ಹಾಕಿದ್ದು, 4- 5 ದಿನಗಳ ಹಿಂದೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೃತ್ಯ ಹೆಸಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Gubbi News: ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ

ನಾನು ನೋಡುತ್ತಾ ಇದ್ದೇನೆ. ಪಟ್ಟಣ ಪಂಚಾಯಿತಿ ಕೆಲಸ ಕೇವಲ ಬಿಲ್ ಮಾಡುವುದು ಅಷ್ಟೇ ಎನಿಸಿದೆ. ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಚರಂಡಿ ನೀರು ಬಿಡುತ್ತಿರುವ ಬಗ್ಗೆ ಗಂಭೀರತೆ ಕಂಡಿಲ್ಲ. ರಾಜ ಕಾಲುವೆಯಲ್ಲಿ ಚರಂಡಿ ನೀರು ಹೇಗೆ ಹರಿಯುತ್ತಿದೆ. ಅಲ್ಲಿನ ತೋಟದ ರೈತರ ಸಮಸ್ಯೆ ಕೂಡಾ ಆಲಿಸಬೇಕಿದೆ

ನವಚೇತನ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ನಿರ್ವಾಣಯ್ಯ ಅವಿರೋಧ ಆಯ್ಕೆ

ಸಂಘದ ಅಧ್ಯಕ್ಷರಾಗಿ ಎಸ್. ನಿರ್ವಾಣಯ್ಯ ಅವಿರೋಧ ಆಯ್ಕೆ

ಸಂಘದ ಸದಸ್ಯರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹಾಗೂ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ನೂತನ ಉಪಾಧ್ಯಕ್ಷ ಸಿ. ಜಿ. ರೇವಣ್ಣ ಮಾತನಾಡಿ, ಇಡೀ ನಿರ್ದೇಶಕ ಮಂಡಳಿಯನ್ನು ವಿಶ್ವಾಸಕ್ಕೆ ಪಡೆದು ಸಂಸ್ಥೆಯನ್ನು ಆರ್ಥಿಕವಾಗಿ ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಹೇಳಿದರು

ಪತ್ರಕರ್ತರಿಗೆ ಗಿಗ್ ಸ್ಟಾರ್ ಖಾತೆ ತೆರೆಯುವ ಅಭಿಯಾನ: ಕೆನರಾ ಬ್ಯಾಂಕಿನ ಯೋಜನೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ

ಪತ್ರಕರ್ತರಿಗೆ ಗಿಗ್ ಸ್ಟಾರ್ ಖಾತೆ ತೆರೆಯುವ ಅಭಿಯಾನ

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ನಂಂತಹ ಕನಿಷ್ಟ ದಾಖಲಾತಿಗಳನ್ನು ಸಲ್ಲಿಸಿ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯಬಹುದು. ಇಎಸ್‌ಐ, ಪಿಎಫ್ ಹೊಂದಿಲ್ಲದ ಪತ್ರಕರ್ತ ರೂ ಈ ಸೌಲಭ್ಯ ಪಡೆಯಬಹುದು. ತಾಲ್ಲೂಕು ಪತ್ರಕರ್ತರೂ ಇದರ ಪ್ರಯೋಜನ ಪಡೆಯಬೇಕು

"ಮಗನ ಸಾವಿನ ಹಿಂದೆ ಅಡಗಿದೆ ಸಾವಿರ ಸತ್ಯ";  ಬಿಜೆಪಿ ಕಾರ್ಯಕರ್ತೆ ಶಕುಂತಲಾ ಹಂಚಿಕೊಂಡ ಪೋಸ್ಟ್‌ನಲ್ಲೇನಿದೆ?

ಮಗನ ಸಾವಿನ ಕುರಿತು ಬಿಜೆಪಿ ಕಾರ್ಯಕರ್ತೆ ಶೇರ್‌ ಪೋಸ್ಟ್‌ನಲ್ಲೇನಿದೆ?

ಕಳೆದ ವರ್ಷ ಆತ್ಮಹತ್ಯೆಗೆ ಶರಣಾಗಿದ್ದ ಪುತ್ರ ತ್ರಿಶಾಲ್ ರಾಜ್ (13) ನೆನೆದು ನಗರದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರು ನಿನ್ನೆ (ಗುರುವಾರ) ಭಾವುಕ ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ತಮ್ಮ ಮಗನ ಕುರಿತು ಮತ್ತೊಂದು ಬರಹವನ್ನು ಹಂಚಿಕೊಂಡಿದ್ದಾರೆ.

8 ಕೋಟಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಗುರಿ: ಸದ್ಗುರು ಶ್ರೀ ಮಧುಸೂದನ ಸಾಯಿ

8 ಕೋಟಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಗುರಿ

Sadhguru Shri Madhusudan Sai: ಮುಂದಿನ ದಿನಗಳಲ್ಲಿ ಆರರಿಂದ ಎಂಟು ಕೋಟಿ ಮಕ್ಕಳಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಪ್ರತಿಯೊಬ್ಬ ತಂದೆ ತಾಯಂದಿರು ಮಕ್ಕಳಿಗೆ ವಿಷಮುಕ್ತ ಆಹಾರವನ್ನು ನೀಡಲು ಪ್ರತಿಜ್ಞೆ ಮಾಡೋಣ ಎಂದು ಶ್ರೀ ಸತ್ಯಸಾಯಿ ಆಶ್ರಮದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ತಿಳಿಸಿದ್ದಾರೆ.

ನನ್ನ ಮಗನ ಮೇಲೆ ಆತನ ಕಣ್ಣು ಏಕೆ ಬಿತ್ತೋ ಅರ್ಥವಾಗಿಲ್ಲ: ತ್ರಿಶಾಲ್‌ ಆತ್ಮಹತ್ಯೆ ಬಗ್ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಭಾವುಕ ಪೋಸ್ಟ್‌

ಮಗನ ಆತ್ಮಹತ್ಯೆ ಬಗ್ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಭಾವುಕ ಪೋಸ್ಟ್‌

ಡೆತ್‌ನೋಟ್‌ನಲ್ಲಿ "ನನ್ನನ್ನು ಕ್ಷಮಿಸು ಅಮ್ಮ ನಾನು ಸಾಯ್ತಾ ಇದ್ದೀನಿ, ನನಗೆ ತುಂಬಾ ಚಿತ್ರಹಿಂಸೆ ಮಾಡಿದ್ದಾರೆ, ನನ್ನ ಕನಸುಗಳೆಲ್ಲ ನುಚ್ಚುನೂರಾಗಿವೆ, ಆ ಇಬ್ಬರೇ ನನ್ನ ಸಾವಿಗೆ ಕಾರಣ. ಅವರನ್ನು ಬಿಡಬೇಡ ಜೈಲಿಗೆ ಹಾಕಿಸು ಎಂದು ತಮ್ಮ ಮಗ ತ್ರಿಶಾಲ್‌ ಡೆತ್‌ನೋಟ್‌ನಲ್ಲಿ ಬರೆದಿದ್ದ ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ತಿಳಿಸಿದ್ದಾರೆ.

Gubbi News: ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ದೇವಾಲಯ ಸೇರಿದಂತೆ ಸುತ್ತಲಿನ ಆವರಣ ದೀಪಾಲಂಕಾರ ಎಲ್ಲರನ್ನೂ ಸೆಳೆದಿತ್ತು. ಮಕ್ಕಳ ಆಟಿಕೆ, ವಿವಿಧ ತಿಂಡಿ ತಿನಿಸು, ಸ್ಥಳೀಯ ಕಲಾವಿದರಿಂದ ನಾಟಕ ಪ್ರದರ್ಶನ ಜೊತೆಗೆ ಯಳವಯ್ಯ ತೋಟದ ಯುವಕರು ಆಯೋಜಿಸಿದ್ದ ಗುಬ್ಬಿ ಉತ್ಸವ ಕಾರ್ಯಕ್ರಮ ಅದ್ದೂರಿ ಯಾಗಿ ನಡೆಯಿತು

ಮಧುಗಿರಿಯ ಶ್ರೀ ದಂಡಿನ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಎಸಿ ಗೋಟೂರು ಶಿವಪ್ಪ ಚಾಲನೆ

ಮಧುಗಿರಿ ಶ್ರೀ ದಂಡಿನ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ

Madhugiri News: ಮಧುಗಿರಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮನವರ-2026ನೇ ಸಾಲಿನ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ

Loading...