ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತುಮಕೂರು

Muralidhar Halappa: ​ಪತ್ರಕರ್ತರ ಪ್ರಶ್ನೆಗೆ ಹಾಲಪ್ಪ ಸ್ಪಷ್ಟನೆ; ಜ. 4ಕ್ಕೆ ಬೃಹತ್ ‘ಜನಧ್ವನಿ’ ಪ್ರತಿಭಟನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ಮುರಳೀಧರ ಹಾಲಪ್ಪ ಆಕ್ರೋಶ

ರಾಜ್ಯ ಸರ್ಕಾರವೇ ಅರಣ್ಯ ನಿಯಮ ಉಲ್ಲಂಘಿಸಿರುವುದು ಮತ್ತು ಭೈರಗೊಂಡ್ಲು ಜಲಾಶಯ ನಿರ್ಮಿ ಸಲು ರೈತರ ಮನ ವೊಲಿಸುವಲ್ಲಿ ವಿಫಲವಾಗಿರುವುದು ವಿಳಂಬಕ್ಕೆ ಕಾರಣವಲ್ಲವೇ?" ಎಂದು ಪ್ರಶ್ನಿಸಿ ದರು. ಇದಕ್ಕೆ ಉತ್ತರಿಸಿದ ಹಾಲಪ್ಪ, "ಬೃಹತ್ ಯೋಜನೆಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ಬದಲಾವಣೆ ಸಹಜ. ಅರಣ್ಯ ನಿಯಮ ಉಲ್ಲಂಘನೆ ಎಂಬುದು ಕೇಂದ್ರದ ನೆಪವಷ್ಟೇ. ಈಗಾಗಲೇ 111 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲಾಗಿದೆ

ಚಿಕ್ಕನಾಯಕನಹಳ್ಳಿಯಲ್ಲಿ ಒತ್ತುವರಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ; ಕ್ರಮಕ್ಕೆ ಆಗ್ರಹ

ಚಿಕ್ಕನಾಯಕನಹಳ್ಳಿಯಲ್ಲಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಅಂಚೆ ಕಚೇರಿ ಪಕ್ಕದ ಜಾಗವು ಸರ್ಕಾರಿ ಸ್ವತ್ತಾಗಿದ್ದು, ಅದನ್ನು ಒತ್ತುವರಿ ಮಾಡಿ ಮಳಿಗೆ ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಟ್ರೇಡ್ ಲೈಸನ್ಸ್ ಅಥವಾ ಅಧಿಕೃತ ದಾಖಲೆಗಳಿಲ್ಲ. ಹೀಗಿದ್ದರೂ ಬೆಸ್ಕಾಂ ಅಧಿಕಾರಿಗಳು ಯಾವ ಆಧಾರದ ಮೇಲೆ ಮೀಟರ್ ಅಳವಡಿಸಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಆರೋಪಿಸಿದ್ದಾರೆ.

MLC Ramesh Babu: ​ಬೆಂಗಳೂರಿನಲ್ಲಿ ಸ್ಪರ್ಧೆಗೆ ಕ್ಷೇತ್ರ ಹುಡುಕಾಟ: ರಾಜಕೀಯ ಭವಿಷ್ಯ ಬಿಚ್ಚಿಟ್ಟ ಎಂಎಲ್‌ಸಿ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ,"

Chikkanayakanahalli News: ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಬೆಸ್ಕಾಂ ಎಇಇ ಗವಿರಂಗಯ್ಯ ಪ್ರತಿಕ್ರಿಯಿಸಿ ನಮಗೆ ಜಾಗ ಒತ್ತುವರಿಯಾಗಿದೆಯೇ ಎಂದು ಪರಿಶೀಲಿಸುವ ಅಧಿಕಾರವಿಲ್ಲ. ಕಂದಾಯ ಇಲಾಖೆ ಅಥವಾ ಪುರಸಭೆ ಪತ್ರ ನೀಡಿದರೆ ತಕ್ಷಣ ಸಂಪರ್ಕ ಕಡಿತಗೊಳಿಸು ತ್ತೇವೆ ಎಂದು ಹಾರಿಕೆ ಉತ್ತರ ನೀಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಶೇಖರ್ ಅಕ್ರಮ ಸಂಪರ್ಕಗಳನ್ನು ಕೂಡಲೇ ಕಡಿತಗೊಳಿಸುವಂತೆ ಎಚ್ಚರಿಕೆ ನೀಡಿದರು.

MLC Ramesh Babu: ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ಎಂಎಲ್‌ಸಿ ರಮೇಶಬಾಬು ಆಗ್ರಹ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

Chikkanayakanahalli News: ಚಿಕ್ಕನಾಯಕನಹಳ್ಳಿ, ತಾಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Yettinahole project: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ: ಮುರುಳೀಧರ ಹಾಲಪ್ಪ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ

2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ವಿನಿಯೋಗಿಸಿ ಶೇ.90ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ನೇರ ಆರೋಪ ಮಾಡಿದರು

Chikkanayakanahalli News: ಅಂಬೇಡ್ಕರ್ ಸೇವಾ ಸಮಿತಿ ‘ಲೆಟರ್ ಹೆಡ್‌’ಗೆ ಸೀಮಿತವಲ್ಲ; ಮೂಲ ಆಶಯದಂತೆ ಸಕ್ರಿಯ ಹೋರಾಟ: ಯಗಚೀಹಳ್ಳಿ ರಾಘವೇಂದ್ರ

ಅಂಬೇಡ್ಕರ್ ಸೇವಾ ಸಮಿತಿ ‘ಲೆಟರ್ ಹೆಡ್‌’ಗೆ ಸೀಮಿತವಲ್ಲ

ಸಂವಿಧಾನದ ಆಶಯಗಳನ್ನು ಮನೆಮನೆಗೆ ತಲುಪಿಸುವುದು ಮತ್ತು ಶೈಕ್ಷಣಿಕ, ಸಾಮಾಜಿಕವಾಗಿ ಹಿಂದು ಳಿದವರಿಗೆ ನ್ಯಾಯ ಕೊಡಿಸುವುದು ಸಮಿತಿಯ ಮೊದಲ ಆದ್ಯತೆಯಾಗಿದೆ. ಸಮಿತಿಯನ್ನು ಬಲಪಡಿ ಸುವ ನಿಟ್ಟಿನಲ್ಲಿ ಅಗಸರಹಳ್ಳಿ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯು ಬಲಿಷ್ಠವಾಗಿ ಬೆಳೆಯಲಿದೆ

Pavagada Crime: ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ: ಸಂತೆಗೆ ಬಂದ ಜನರಲ್ಲಿ ಆತಂಕ

ಪಾವಗಡ ಆರ್‌ಎಂಸಿ ಯಾರ್ಡ್‌ನಲ್ಲಿ ಅನಾಮಿಕ ವ್ಯಕ್ತಿಯ ಶವ ಪತ್ತೆ

ಶವವು ಸುಮಾರು ಎರಡು–ಮೂರು ದಿನಗಳ ಹಿಂದೆ ಮೃತಪಟ್ಟಿರು ವಂತೆ ಶಂಕಿಸಲಾಗಿದ್ದು, ಮೃತನ ಕುತ್ತಿಗೆ ಭಾಗದಲ್ಲಿ ಬಲವಾದ ಪೆಟ್ಟು ಬಿದ್ದಿರುವ ಗುರುತುಗಳು ಕಂಡುಬರುತ್ತಿವೆ. ಇದರಿಂದ ಯಾರೋ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿ ಶವವನ್ನು ಇಲ್ಲಿ ತಂದು ಎಸೆದು ಹೋಗಿರಬಹುದೆಂಬ ಅನುಮಾನಗಳು ವ್ಯಕ್ತವಾಗಿವೆ.

Vaikuntha Ekadashi: ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ. ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆ ಸಂಭ್ರಮ

​ಇಂದಿರಾ ಗಾಂಧಿಯವರ ಹಸಿರು ಕ್ರಾಂತಿ, ಉಳುವವನಿಗೆ ಭೂಮಿ ಯೋಜನೆ, ಬಾಂಗ್ಲಾ ವಿಮೋಚನೆ ಮತ್ತು ರಾಜೀವ್ ಗಾಂಧಿಯವರ ಮಾಹಿತಿ ತಂತ್ರಜ್ಞಾನ ಕ್ರಾಂತಿ ಹಾಗೂ 18 ವರ್ಷಕ್ಕೆ ಮತದಾನದ ಹಕ್ಕು ನೀಡಿದ ಸುಧಾರಣೆಗಳನ್ನು ವರದಿಯಲ್ಲಿ ಶ್ಲಾಘಿಸಲಾಯಿತು. ಹಾಗೆಯೇ ಪಿ.ವಿ. ನರಸಿಂಹ ರಾವ್ ಮತ್ತು ಡಾ. ಮನಮೋಹನ್ ಸಿಂಗ್ ಅವರ ಆರ್ಥಿಕ ಸುಧಾರಣೆಗಳು ಭಾರತವನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಸುಭದ್ರಗೊಳಿಸಿವೆ

Chikkanayakanahalli News: ​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಬಿಂಬಿಸಿಕೊಳ್ಳಬೇಕು. ಹೆಣ್ಣು ಮತ್ತು ಗಂಡು ಎಂಬ ಭೇದ ಭಾವ ಮಾಡದೆ, ಮನೆಯ ಗಂಡು ಮಕ್ಕಳಿಗೆ ನೀಡುವ ಗೌರವ ಹಾಗೂ ಸ್ಥಾನಮಾನಗಳನ್ನು ಹೆಣ್ಣು ಮಕ್ಕಳಿಗೂ ನೀಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು

G Parameshwar: ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

Tumkur News: ತುಮಕೂರು ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಆಯೋಜಿಸಿದ್ದ ತಲ್ಲಣಿಸದಿರುವ ಮನವೇ ಸಂಸ್ಕೃತಿ-ಚಿಂತನ- ಚಾರಣ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.

ಡಿ. 29, 30ರಂದು ತುಮಕೂರಿನಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ

ಡಿ. 29, 30ರಂದು ತುಮಕೂರಿನಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Tumkur Kannada sahitya sammelana: 17ನೇ ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ.ಕರೀಗೌಡ ಬೀಚನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ.

Halemane Shivananjappa: ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) ಅವರು ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Tumkur News: ಬಾಳಿಗೊಂದು ಗುರಿ ಇರಲಿ: ಶ್ರೀ ರಂಭಾಪುರಿ ಜಗದ್ಗುರು

ಬಾಳಿಗೊಂದು ಗುರಿ ಇರಲಿ: ಶ್ರೀ ರಂಭಾಪುರಿ ಜಗದ್ಗುರು

ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೆ ಇವೆ. ದೈಹಿಕವಾಗಿ ನಾವೆಷ್ಟೇ ಸದೃಢವಾಗಿದ್ದರೂ ಮನಸ್ಸು ದೃಢವಾಗಿರದಿದ್ದರೆ ಯಾವ ಪ್ರಯೋಜನವು ಇಲ್ಲ. ಬೆಳೆಯುವ ಯುವ ಜನಾಂಗದಲ್ಲಿ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರುವ ಅವಶ್ಯಕತೆಯಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.

Tumkur News: ಡಿ.27ಕ್ಕೆ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮ

Tumkur News: ಡಿ.27ಕ್ಕೆ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮ

ತಲ್ಲಣದಲ್ಲಿರುವ ಯುವ ಮನಸ್ಸುಗಳಿಗೆ ತಿಳಿ ಹೇಳುವ ನಿಟ್ಟಿನಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಲ್ಲಣಿಸದಿರುವ ಮನವೇ ಕಾರ್ಯಕ್ರಮ ಬಹಳ ಮೆಚ್ಚುಗೆ ಪಡೆದಿದೆ. ಇದುವರೆಗೂ ನಾಲ್ಕು ಕಾರ್ಯಕ್ರಮಗಳ ಜರುಗಿದ್ದು, ಶ್ರೀದೇವಿ ಮೆಡಿಕಲ್‌ ಕಾಲೇಜು ಸಭಾಂಗಣದಲ್ಲಿ ಡಿ.27ರ ಶನಿವಾರ ನಡೆಯುವುದು 5ನೇ ಕಾರ್ಯಕ್ರಮವಾಗಿದೆ

Chikkanayakanahalli News: ಪೂರ್ವಜರ ಮಾದರಿಯ ಸಾವಯವ ಕೃಷಿಗೆ ಶಾಸಕ ಸಿ.ಬಿ.ಸುರೇಶಬಾಬು ಕರೆ

ಪೂರ್ವಜರ ಮಾದರಿಯ ಸಾವಯವ ಕೃಷಿಗೆ ಶಾಸಕ ಸಿ.ಬಿ.ಸುರೇಶಬಾಬು ಕರೆ

ರೈತ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ. ಅಂತಹ ರೈತರಿಗೆ ಅಗತ್ಯವಾದ ನೀರು ಮತ್ತು ವಿದ್ಯುತ್ ಸೌಲಭ್ಯ ನೀಡಿದರೆ ಅವರು ಸ್ವಾವಲಂಬಿಯಾಗಿ ಗೌರವಯುತ ಬದುಕು ನಡೆಸುತ್ತಾರೆ. ಇಂದಿನ ರೈತರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಕೇವಲ ಇಳುವರಿ ಹೆಚ್ಚಿಸಿಕೊಳ್ಳಲು ರಾಸಾಯನಿಕ ಬಳಸಿ ಮಣ್ಣಿನ ಫಲವತ್ತತೆ ಹಾಳು ಮಾಡುತ್ತಿದ್ದೇವೆ.

Tumkur News: ಕಾರ್ಯ ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ

ಕಾರ್ಯ ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ

ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿ ರುವ ಸಂಪಾದಕರು ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸ ಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(Pradesh Congress Committee Vice President Muralidhar Halappa) ಹೇಳಿದರು

Siddalinga Swamiji: ಹಳೆಯ ವಿದ್ಯಾರ್ಥಿಗಳೇ ಮಠದ  ನಿಧಿ: ಸಿದ್ಧಲಿಂಗ ಸ್ವಾಮೀಜಿ

ಹಳೆಯ ವಿದ್ಯಾರ್ಥಿಗಳೇ ಮಠದ ನಿಧಿ: ಸಿದ್ಧಲಿಂಗ ಸ್ವಾಮೀಜಿ

ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ, ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ ಹಜಾರೆ ಟ್ರೋಫಿ ಪಂದ್ಯಗಳಿಗೆ ಅನುಮತಿ ನೀಡಲು ಸಚಿವ ಪರಮೇಶ್ವರ್‌ಗೆ ವೆಂಕಟೇಶ್‌ ಪ್ರಸಾದ್‌ ಮನವಿ

ಸಚಿವ ಪರಮೇಶ್ವರ್ ಭೇಟಿಯಾದ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌

ಡಿ.24 ಮತ್ತು 26ರಂದು ಬೆಂಗಳೂರಿನಲ್ಲಿ ನಿಗದಿಯಾಗಿರುವ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಪಂದ್ಯಗಳಲ್ಲಿ ದೆಹಲಿ ತಂಡದ ಪರವಾಗಿ ವಿರಾಟ್‌ ಕೊಹ್ಲಿ ಕಣಕ್ಕಿಳಿಯುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್ ಮನವಿ ಮಾಡಿದ್ದಾರೆ.

Sixth Kannada Literary Conference: ಕನ್ನಡ ಮಾಧ್ಯಮಕ್ಕೆ ಉದ್ಯೋಗ ಮೀಸಲಾತಿ ಸಿಗಲಿ : ಸಮ್ಮೇಳನಾಧ್ಯಕ್ಷ ಡಾ.ಬಿ.ನಂಜುಂಡಸ್ವಾಮಿ

ಕನ್ನಡ ಮಾಧ್ಯಮಕ್ಕೆ ಉದ್ಯೋಗ ಮೀಸಲಾತಿ ಸಿಗಲಿ

ಗ್ರಂಥಾಲಯಗಳು ಸಹ ಓದುಗರ ಕೊರತೆ ಎದುರಿಸಿದೆ. ಸರ್ಕಾರ ಪುಸ್ತಕಗಳ ಖರೀದಿ ಮಾಡಬೇಕಿದೆ. ಪಟ್ಟಣ ನಗರದಲ್ಲಿ ಪ್ರತಿ ಪ್ರಜೆಯಿಂದ ಲೈಬ್ರರಿ ಸೆಸ್ ವಸೂಲಿ ಮಾಡಲಾಗುತ್ತಿದೆ. ಆದರೆ ಗ್ರಂಥಾ ಲಯಕ್ಕೆ ಪುಸ್ತಕಗಳು ಖರೀದಿ ಆಗುತ್ತಿಲ್ಲ. ಅಂತೂ ಇಂತೂ ಖರೀದಿ ನಡೆದರೆ ಅದರ ಹಣ ಬರಲು ಮೂರು ನಾಲ್ಕು ವರ್ಷ ಬೇಕಿದೆ. ಈ ಜೊತೆಗೆ ಪ್ರಕಾಶಕರ ಸ್ಥಿತಿ ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರ ಪುಸ್ತಕೋದ್ಯಮ ರಕ್ಷಿಸಬೇಕಿದೆ. ಈ ಕಾಯಕ ಎಲ್ಲಾ ಕನ್ನಡಿಗರ ಕರ್ತವ್ಯ

Women's Kannada Rajyotsava: ಡಿ.23 ರಂದು ಮಹಿಳಾ ಕನ್ನಡ ರಾಜ್ಯೋತ್ಸವ

ಡಿ.23 ರಂದು ಮಹಿಳಾ ಕನ್ನಡ ರಾಜ್ಯೋತ್ಸವ

ಈ ಬಾರಿ ಮಹಿಳೆಯರೇ ಒಗ್ಗೂಡಿ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ವಿಶೇಷ ಪ್ರಯತ್ನ ಮಾಡು ತ್ತಿದ್ದೇವೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯ ರಿಂದ ಬೈಕ್ ರ‍್ಯಾಲಿ ನಡೆಯಲಿದೆ ಎಂದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಶಾಸಕ ಸುರೇಶಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.

Kannada Sahitya Sammelan: ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ಹಬ್ಬಕ್ಕೆ ಸಜ್ಜುಗೊಳಿಸಿದ ಪರಿಷತ್ತು

ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಿಗ್ಗೆ 7.30 ಕ್ಕೆ ತಹಶೀಲ್ದಾರ್ ಆರತಿ.ಬಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾಪಂ ಆಡಳಿತಾಧಿಕಾರಿ ಬಿ.ಎಲ್.ಕೃಷ್ಣಪ್ಪ ನಾಡ ಧ್ವಜಾರೋಹಣ ನಡೆಸಲಿದ್ದಾರೆ. ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 8.30 ಕ್ಕೆ ಸಮ್ಮೇಳನಾಧ್ಯಕ್ಷ ನಂಜುಂಡಸ್ವಾಮಿ ಅವರನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆ ಮೂಲಕ ವೇದಿಕೆಗೆ ಬರ ಮಾಡಿಕೊಳ್ಳಲಾಗುವುದು.

ಪೌರಾಯುಕ್ತ ಪಟ್ಟ ಒಂದೇ ದಿನ; ವಿಶ್ವವಾಣಿ ವರದಿ ಉಲ್ಲೇಖಿಸಿ ವಿಧಾನ ಪರಿಷತ್‌ನಲ್ಲಿ ರಮೇಶಬಾಬು ಕಿಡಿ

ಪೌರಾಯುಕ್ತ ಪಟ್ಟ ಒಂದೇ ದಿನ; ವಿಶ್ವವಾಣಿ ವರದಿ ಉಲ್ಲೇಖಿಸಿ ರಮೇಶಬಾಬು ಕಿಡಿ

ಚಿಕ್ಕನಾಯಕನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಮಂಜಮ್ಮ ಅವರು ಪೌರಾಯುಕ್ತರಾಗಿ ಪದೋನ್ನತಿ ಪಡೆದಿದ್ದರು. ನಿಯಮದಂತೆ ಅವರು ಹೊಸ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಬೇಕಿತ್ತು. ಆದರೆ, ಕೇವಲ ಒಂದು ದಿನ ಪೌರಾಯುಕ್ತರಾಗಿ, ಮರುದಿನವೇ ತಮಗೆ ಲಾಭದಾಯಕವಾಗಿರುವ ಹಳೆಯ ಹುದ್ದೆಗೆ ವಾಪಸ್ ಬಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಎಂಎಲ್‌ಸಿ ರಮೇಶಬಾಬು ಆಕ್ರೋಶ ಹೊರಹಾಕಿದ್ದಾರೆ.

Loading...