ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಉಡುಪಿ
Kundapra Kannada Habba 2025: ಬೆಂಗಳೂರಿನಲ್ಲಿ ಜುಲೈ 26, 27ರಂದು ʼಕುಂದಾಪ್ರ ಕನ್ನಡ ಹಬ್ಬʼ:  ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ

ಬೆಂಗಳೂರಲ್ಲಿ ಜುಲೈ 26, 27ರಂದು ʼಕುಂದಾಪ್ರ ಕನ್ನಡ ಹಬ್ಬʼ

Kundapra Kannada Habba 2025: ಕುಂದಾಪ್ರ ಕನ್ನಡ ಪ್ರತಿಷ್ಠಾನವು ಆಯೋಜಿಸಿರುವ ʼಕುಂದಾಪ್ರ ಕನ್ನಡ ಹಬ್ಬʼ ಜುಲೈ 26 ಮತ್ತು 27ರಂದು ಬೆಂಗಳೂರಿನ ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ ಬಳಿ ಇರುವ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

Self Harming: ಮೊಬೈಲ್‌ ನೋಡಬೇಡ ಎಂದದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಮೊಬೈಲ್‌ ನೋಡಬೇಡ ಎಂದದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Self Harming: ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರತಿದಿನ ಮೊಬೈಲ್ ನೋಡುತ್ತಾ ಕಾಲ ಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತ್ತಿದ್ದರು.

ಮಣಿಪಾಲ ದಂತ ಸಮ್ಮೇಳನ 4.0-2025 ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ

ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ

ವಿದ್ಯಾರ್ಥಿಗಳೇ ನೇತೃತ್ವ ವಹಿಸುವ ಈ ಸಮ್ಮೇಳನದಲ್ಲಿ ಆರು ರಾಜ್ಯಗಳ 25 ದಂತ ವೈದ್ಯಕೀಯ ಕಾಲೇಜುಗಳಿಂದ ಬಂದ 350 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದರು. ಶೈಕ್ಷಣಿಕ ಮತ್ತು ಪ್ರಾಯೋ ಗಿಕ ಜ್ಞಾನವನ್ನು ಸಮಗ್ರವಾಗಿ ಒದಗಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಗಮನ ಸೆಳೆಯಿತು. ಭಾರೀ ಮಳೆಯ ನಡುವೆಯೂ, ವೈಜ್ಞಾನಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಭಾಗವಹಿಸುವವರು ಉತ್ಸಾಹದಿಂದ ಮಣಿಪಾಲ ಕ್ಯಾಂಪಸ್ಸಿಗೆ ಆಗಮಿಸಿದರು.

Drowned: ಕಡಲಿನಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು

ಕಡಲಿನಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು

Drowned: ಮೀನುಗಾರಿಕೆಗೆ ಈ ಮೂವರು ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ಕಡಲಬ್ಬರ ಕಂಡು ಮೀನುಗಾರರು ವಾಪಸ್ ಆಗುತ್ತಿದ್ದರು. ಈ ವೇಳೆ ಓರ್ವ ಮೀನುಗಾರ ಅಲೆಗಳ ಅಬ್ಬರಕ್ಕೆ ಸಮುದ್ರಕ್ಕೆ ಬಿದ್ದಿದ್ದಾನೆ. ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಇನ್ನಿಬ್ಬರು ಮುಂದಾಗಿದ್ದಾರೆ. ಈ ವೇಳೆ ಮೂವರೂ ಸಮುದ್ರ ಪಾಲಾಗಿದ್ದಾರೆ.

Parashurama statue: ಪರಶುರಾಮ ಪ್ರತಿಮೆ ಫೈಬರ್‌ದಲ್ಲ, ಹಿತ್ತಾಳೆಯದು; ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

ಪರಶುರಾಮ ಪ್ರತಿಮೆ ಫೈಬರ್‌ದಲ್ಲ, ಹಿತ್ತಾಳೆಯದು; ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

Parashurama statue: ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು‌‌ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

UVA Meridian Bay: ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಕುಂದಾಪುರ ತಾಲೂಕಿನ ಪ್ರಮುಖ ಆಕರ್ಷಣೆ ಏನು ಅಂತ ಯಾರೇ ಕೇಳಿದರೂ ಅದಕ್ಕೆ ಉತ್ತರವಾಗಿ ಸಿಗುವುದು ಈಗ ಒಂದೇ ತಾಣ. ಅದು ಯುವ ಮೆರಿಡಿಯನ್ ಬೇ ಎಂಬ ಆತಿಥ್ಯ ತಾಣ. ಇದು ಆತಿಥ್ಯ ತಾಣ ಎಂದಷ್ಟೇ ಹೇಳಿದರೆ ಬಹಳ ಸೀಮಿತಗೊಳಿಸಿದಂತಾಗಿಬಿಡುತ್ತದೆ. ಇದೊಂದು ಅಕ್ಷರಶಃ ಮಾಯಾ ಲೋಕ. ಬೇರೆಯದೇ ಪ್ರಪಂಚ.

Udupi News: ತಂದೆ ಜತೆ ದೇಶ ಸುತ್ತಿದ ಉಡುಪಿ ಯುವಕನಿಗೆ 14 ಲಕ್ಷ ಬೆಲೆಯ ಬೈಕ್‌ ಗಿಫ್ಟ್‌ ಕೊಟ್ಟ ಹೀರೋ ಕಂಪನಿ!

ಉಡುಪಿ ಯುವಕನಿಗೆ 14 ಲಕ್ಷ ಬೆಲೆಯ ಬೈಕ್‌ ಗಿಫ್ಟ್‌ ಕೊಟ್ಟ ಹೀರೋ ಕಂಪನಿ!

Udupi News: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ರಾಜೇಂದ್ರ ಶೆಣೈ ಹಾಗೂ ಪುತ್ರ ಪ್ರಜ್ವಲ್ ಶೆಣೈ ಅವರ ಸಾಹಸಗಾಥೆಯ ಮಾಹಿತಿ ಪಡೆದ ಹೀರೋ ಕಂಪನಿ, ಅವರಿಗೆ ತನ್ನ ಮಾಸ್ಟರ್‌ಪೀಸ್ ಎಂದು ಕರೆಯುವ ಸೆಂಟಿನಿಯಲ್ ಸಿಇ- 100 ಬೈಕನ್ನು ನೀಡಿ ಗೌರವಿಸಿದೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Bomb Threats: ಸಹೋದ್ಯೋಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ 11 ರಾಜ್ಯಗಳ ಶಾಲೆ, ಆಸ್ಪತ್ರೆ, ಏರ್‌ಪೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ; ಯುವತಿ ಅರೆಸ್ಟ್!

ಶಾಲೆ, ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಯುವತಿ ಬಂಧನ

Bomb Threats: ಆರೋಪಿ ಯುವತಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್​ಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Mangaluru Airport: ಇರಾನ್‌ ದಾಳಿ: ಮಂಗಳೂರು- ಗಲ್ಫ್‌ ದೇಶಗಳ ವಿಮಾನ ಹಾರಾಟದಲ್ಲಿ ವ್ಯತ್ಯಾಸ

ಇರಾನ್‌ ದಾಳಿ: ಮಂಗಳೂರು- ಗಲ್ಫ್‌ ದೇಶಗಳ ವಿಮಾನ ಹಾರಾಟದಲ್ಲಿ ವ್ಯತ್ಯಾಸ

ಇರಾನ್ ಕ್ಷಿಪಣಿ ದಾಳಿ ಮಾಡಿದ ಕಾರಣ ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್ ಮಾಡಿವೆ. ಅಲ್ಲಿನ ವಿಮಾನಯಾನ ವಲಯ ಮುಚ್ಚಲ್ಪಟ್ಟ ಕಾರಣ ವಿಮಾನಗಳು ಮಂಗಳೂರಿಗೆ (Mangaluru Airport) ವಾಪಸಾಗಿವೆ. ಮಂಗಳೂರಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಬಗ್ಗೆ ಏರ್​ಪೋರ್ಟ್ ಆಡಳಿತ ಮಾಹಿತಿ ನೀಡಿದೆ.

False Medical Report: ತಪ್ಪು ವೈದ್ಯಕೀಯ ವರದಿಯಿಂದ ತಪ್ಪಿತು ಸೌದಿ ಕಂಪನಿ ಕೆಲಸ; ಉಡುಪಿ ನರ್ಸ್‌ಗೆ 13.49 ಲಕ್ಷ ಪರಿಹಾರ

ತಪ್ಪು ವೈದ್ಯಕೀಯ ವರದಿಯಿಂದ ತಪ್ಪಿದ ಕೆಲಸ; ನರ್ಸ್‌ಗೆ 13.49 ಲಕ್ಷ ಪರಿಹಾರ

Medical Report: ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಹಿರಿಯ ಸ್ಟಾಫ್ ನರ್ಸ್ ಆಗಿದ್ದ ವ್ಯಕ್ತಿಯೊಬ್ಬರು ತಪ್ಪು ವೈದ್ಯಕೀಯ ವರದಿಯಿಂದ, ಸೌದಿ ಅರೇಬಿಯಾ ಕಂಪನಿಯ ಕೆಲಸ ಕಳೆದುಕೊಂಡಿದ್ದರು. ಹೀಗಾಗಿ ನ್ಯಾಯಕ್ಕಾಗಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಮೊರೆ ಹೋಗಿದ್ದರು. ಪ್ರಕರಣ ವಿಚಾರಣೆ ನಡೆಸಿರುವ ಕೋರ್ಟ್‌, ನರ್ಸ್‌ಗೆ ಪರಿಹಾರ ನೀಡುವಂತೆ ಡಯಾಗ್ನೋಸ್ಟಿಕ್ ಸೆಂಟರ್‌ಗೆ ಸೂಚಿಸಿದೆ.

Laxmi Hebbalkar: ಉಡುಪಿ ಜಿಲ್ಲಾ ಉಸ್ತುವಾರಿ ನನಗೆ ಸಿಕ್ಕಿದ್ದು, ಶ್ರೀಕೃಷ್ಣನ ಆಶೀರ್ವಾದ ಸಿಕ್ಕಂತಾಯಿತು ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ- ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಉಡುಪಿ ಜಿಲ್ಲಾ ಉಸ್ತುವಾರಿ ನನಗೆ ಸಿಕ್ಕಿದ್ದು, ಶ್ರೀಕೃಷ್ಣನ ಆಶೀರ್ವಾದ ಸಿಕ್ಕಂತಾಯಿತು.ಇದು ನನ್ನ ಸೌಭಾಗ್ಯ ಎಂದು ತಿಳಿಸಿದ್ದಾರೆ.

Laxmi Hebbalkar: ಶಾಸಕ ಸುನೀಲ್ ಕುಮಾರ್ ರಿಂದ ನೈತಿಕ ಪಾಠ ಕಲಿಬೇಕಿಲ್ಲ-ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಶಾಸಕ ಸುನೀಲ್ ಕುಮಾರ್ ರಿಂದ ನೈತಿಕ ಪಾಠ ಕಲಿಬೇಕಿಲ್ಲ- ಲಕ್ಷ್ಮೀ ಹೆಬ್ಬಾಳ್ಕರ್

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಶಾಸಕ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ ಕುಮಾರ್ ಬಹಳ ಚಂದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ‌.

Tulu Language: ಗ್ರಾಮ ಪಂಚಾಯತ್‌ ಸಭೆಗಳಲ್ಲಿ ತುಳು ಭಾಷೆ ಬಳಕೆ ನಿಷೇಧ, ಸಿಡಿದೆದ್ದ ತುಳುನಾಡು

ಗ್ರಾಮ ಪಂಚಾಯತ್‌ ಸಭೆಗಳಲ್ಲಿ ತುಳು ಭಾಷೆ ಬಳಕೆ ನಿಷೇಧ, ಸಿಡಿದೆದ್ದ ತುಳುನಾಡು

Tulu Language: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಹೊರಡಿಸಿರುವ ದ.ಕ ಜಿಲ್ಲಾ ಪಂಚಾಯತ್ ಸುತ್ತೋಲೆ ಭಾರೀ ವಿವಾದವನ್ನು ಸೃಷ್ಟಿಸಿದೆ. ತುಳುನಾಡಿನಲ್ಲಿಯೇ ತುಳು ಭಾಷೆಯನ್ನು ತುಳಿಯುವ ಈ ಕ್ರಮಕ್ಕೆ ಅವಕಾಶ ನೀಡಲಾರೆವು ಎಂದು ಹೋರಾಟಗಾರರು ಹಾಗೂ ಭಾಷಾಭಿಮಾನಿಗಳು ಹೇಳಿದ್ದಾರೆ.

Gururaj Gantihole: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

Gururaj Gantihole: ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಮುಂದೆ ಜಾನುವಾರು ಅಡ್ಡ ಬಂದ ಕಾರಣ ಅವಘಡ ನಡೆದಿದೆ. ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

Laxmi Hebbalkar: ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ. ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

Laxmi Hebbalkar: ಗ್ರಾಮ ಲೆಕ್ಕಾಧಿಕಾರಿಗಳು ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಿ-ಲಕ್ಷ್ಮೀ ಹೆಬ್ಬಾಳ್ಕರ್

ಗ್ರಾಮ ಲೆಕ್ಕಾಧಿಕಾರಿಗಳು ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಿ- ಹೆಬ್ಬಾಳ್ಕರ್

Laxmi Hebbalkar: ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಮತ್ತಷ್ಟು ಚುರುಕಾಗುವ ದೃಷ್ಟಿಯಿಂದ ‌ನಮ್ಮ ಸರ್ಕಾರದ ವತಿಯಿಂದ ‌ಗ್ರಾಮ ಲೆಕ್ಕಾಧಿಕಾರಿಗಳಿಗೆ (ವಿಎ) ಲ್ಯಾಪ್‌ಟಾಪ್ ನೀಡಲಾಗಿದೆ‌. ಇದರಿಂದ ಅಧಿಕಾರಿ ವರ್ಗ ಜನ ಸಾಮಾನ್ಯರಿಗೆ ಉತ್ತಮ ಸೇವೆ ನೀಡಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Laxmi Hebbalkar: ಫೀಲ್ಡಿಗಿಳಿದು ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಾಕೀತು

ಫೀಲ್ಡಿಗಿಳಿದು ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಹೆಬ್ಬಾಳ್ಕರ್ ತಾಕೀತು

Laxmi Hebbalkar: ಉಡುಪಿ ಜಿಲ್ಲೆಯೂ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಎಂದ ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

Murder Case: ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!

ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

Murder Case: ಉಡುಪಿ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಮಾಡಿದ್ದ ಪತಿ, ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಪತ್ನಿಯನ್ನು ಸಿಟ್ಟಿನಿಂದ ಗುರುವಾರ ರಾತ್ರಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

Chakravarthy Sulibele: ಚಕ್ರವರ್ತಿ ಸೂಲಿಬೆಲೆಗೆ‌ ಪೊಲೀಸರಿಂದ ನೋಟಿಸ್; ರಾಜಕೀಯ ಮಾತನಾಡದಂತೆ ಸೂಚನೆ!

ಚಕ್ರವರ್ತಿ ಸೂಲಿಬೆಲೆಗೆ‌ ಪೊಲೀಸರಿಂದ ನೋಟಿಸ್; ರಾಜಕೀಯ ಮಾತನಾಡದಂತೆ ಸೂಚನೆ!

Chakravarthy Sulibele: ಪೊಲೀಸರು ನೊಟೀಸ್ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ಕರ್ನಾಟಕದಲ್ಲಿ ರಾಜಕೀಯ ಮಾತಾಡಬಾರದು ಎಂಬುದು ಯಾವಾಗಿನಿಂದ ಜಾರಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದು ನನ್ನನ್ನು ಅಘೋಷಿತ ಗಡಿಪಾರು ಮಾಡಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

Rakesh Poojary: ರಾಕೇಶ್‌ ಪೂಜಾರಿ ಮನೆಗೆ ರಿಷಬ್‌ ಶೆಟ್ಟಿ ಭೇಟಿ; ತಾಯಿ, ಸಹೋದರಿಗೆ ಸಾಂತ್ವನ

ರಾಕೇಶ್‌ ಪೂಜಾರಿ ಮನೆಗೆ ರಿಷಬ್‌ ಶೆಟ್ಟಿ ಭೇಟಿ

Rishab Shetty: ಕಳೆದ ತಿಂಗಳು ಮೃತಪಟ್ಟ ನಟ ರಾಕೇಶ್‌ ಪೂಜಾರಿ ಅವರು ಮನೆಗೆ ರಿಷಬ್‌ ಶೆಟ್ಟಿ ಭೇಟಿ ನೀಡಿದ್ದಾರೆ. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಜೂ. 2ರಂದು ಅಲ್ಲಿಗೆ ತೆರಳಿದ ರಿಷಬ್ ಶೆಟ್ಟಿ ದಂಪತಿ ರಾಕೇಶ್ ತಂಗಿ ಮತ್ತು ತಾಯಿಗೆ ಸಾಂತ್ವನ ಹೇಳಿದ್ದಾರೆ.

IPS Transfer: ಕಗ್ಗೊಲೆಗಳ ಹಿನ್ನೆಲೆ; ದಕ್ಷಿಣ ಕನ್ನಡ, ಉಡುಪಿಯ ಐಪಿಎಸ್‌ಗಳ ಬದಲಾವಣೆ, ಸುಧೀರ್‌ ಕುಮಾರ್‌ ರೆಡ್ಡಿ ಮಂಗಳೂರು ಡಿಜಿ, ಆಯುಕ್ತ

ಕಗ್ಗೊಲೆಗಳ ಹಿನ್ನೆಲೆ; ದಕ್ಷಿಣ ಕನ್ನಡ, ಉಡುಪಿಯ ಐಪಿಎಸ್‌ಗಳ ಬದಲಾವಣೆ

IPS Transfer: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮತೀಯ ದ್ವೇಷದ ಪ್ರಕರಣಗಳು, ನಡೆದ ಕೋಮುದ್ವೇಷದ ಕೊಲೆಗಳ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕೆಲವು ಮಹತ್ವದ ವರ್ಗಾವಣೆಗಳನ್ನು ಮಾಡಿ ಸರಕಾರ ಆದೇಶ ನೀಡಿದೆ.

Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ.

Loading...