ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉಡುಪಿ

Heart Attack: ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ಉಡುಪಿ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ.

ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡ್ತೇವೆ: ಸಿಎಂ ಭರವಸೆ

ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡ್ತೇವೆ: ಸಿಎಂ ಭರವಸೆ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಬುಧವಾರ ಆಯೋಜಿಸಿದ್ದ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಇದಕ್ಕೂ ಮುನ್ನಾ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.

ಉಡುಪಿಯ ನಡುರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ!

ಉಡುಪಿಯಲ್ಲಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ!

Udupi News: ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆತನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿ ಸೋರಿಕೆ: ಅಲಿಫ್ ಇಸ್ಲಾಂನನ್ನು ಇಡುಕ್ಕಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು

ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಂಡ ವ್ಯಕ್ತಿಯ ಬಂಧನ

Indian Navy information leak case: ಉಡುಪಿ ಪೊಲೀಸರು ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯ ಸೋರಿಕೆ ಆರೋಪ ಸಂಬಂಧ ನಾಲ್ಕನೇ ಶಂಕಿತನನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಡಿಜಿಟಲ್ ಸಾಕ್ಷ್ಯಗಳು ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆ ಮುಂದುವರಿದಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ.

ಉಡುಪಿಯಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದು ಮೈಮೇಲೆ ಹರಿದ ಕ್ರೇನ್; ಬೆಚ್ಚಿಬೀಳಿಸುವ ವಿಡಿಯೊ ಇಲ್ಲಿದೆ

ಪೆರಂಪಳ್ಳಿಯಲ್ಲಿ ಪಾದಚಾರಿಗೆ ಕ್ರೇನ್ ಡಿಕ್ಕಿ

ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕ್ರೇನ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ. ಇದರ ಭಯಾನಕ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎದುರು ಬರುತ್ತಿದ್ದ ಕಾರಿಗೆ ಕ್ರೇನ್ ಚಾಲಕ ದಾರಿ ಬಿಟ್ಟು ಕೊಡುವಾಗ ಈ ಅಪಘಾತ ಸಂಭವಿಸಿದೆ.

Udupi news: ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

Appanna Hegde no more: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬನ್ನೂರು ಅಪ್ಪಣ್ಣ ಹೆಗ್ಡೆ ಅವರು ಸಹಕಾರಿ ಕ್ಷೇತ್ರದ ಧುರೀಣರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

Abu Dhabi Big Ticket: ಉಡುಪಿ ಯುವಕನಿಗೆ ಒಲಿದ ಅದೃಷ್ಟ; ಅಬುಧಾಬಿ ಲಾಟರಿಯಲ್ಲಿ ಸಿಕ್ತು 49 ಕೋಟಿ ಬಹುಮಾನ!

ಅಬುಧಾಬಿ ಲಾಟರಿಯಲ್ಲಿ 49 ಕೋಟಿ ರೂ. ಗೆದ್ದ ಉಡುಪಿ ಯುವಕ!

Shantanu Shetty: ಉಡುಪಿ ಜಿಲ್ಲೆ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿ ಎಂಬ ಯುವಕನಿಗೆ ಅಬುಧಾಬಿ ಬಿಗ್‌ ಟಿಕೆಟ್‌ ಡ್ರಾನಲ್ಲಿ 49 ಕೋಟಿ ರೂ. ಬಹುಮಾನ ಸಿಕ್ಕಿದೆ. ಸ್ನೇಹಿತನೊಟ್ಟಿಗೆ ಟಿಕೆಟ್‌ ಖರೀದಿಸಿದ್ದರಿಂದ, ಅರ್ಧ ಹಣವಾದ 24.5 ಕೋಟಿ ರೂ.ಗಳನ್ನು ಸ್ನೇಹಿತನಿಗೆ ನೀಡುವುದಾಗಿ ಯುವಕ ತಿಳಿಸಿದ್ದಾರೆ.

Assault Case: ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಮಣಿಪಾಲದ ಹೋಟೆಲ್‌ ಒಂದರಲ್ಲಿ ಊಟಕ್ಕೆ ತೆರಳಿದ್ದ ವೇಳೆ ಹೋಟೆಲ್‌ನಲ್ಲಿ ಶರತ್ ಕುಂದರ್ ಅವರ ಕೈ ಆರೋಪಿಗಳ ಪೈಕಿ ಒಬ್ಬರ ಕೈಗೆ ತಾಗಿದ ಹಿನ್ನೆಲೆಯಲ್ಲಿ ಮಾತಿನ ವಾಗ್ವಾದ ನಡೆದಿತ್ತು. ಬಳಿಕ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ಬರುವಂತೆ ಕರೆಸಿ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದೆ.

ಉಡುಪಿಯ ಸಾಸ್ತಾನ ಟೋಲ್ ವಿವಾದ; ಸಿಬ್ಬಂದಿಯನ್ನು ಕ್ಷಮಿಸಿದ ಮಾಜಿ ಸೈನಿಕ ಶ್ಯಾಮರಾಜ್

ಟೋಲ್ ಸಿಬ್ಬಂದಿಯನ್ನು ಕ್ಷಮಿಸಿದ ಮಾಜಿ ಸೈನಿಕ ಶ್ಯಾಮರಾಜ್

ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಅಲ್ಲಿನ ಸಿಬ್ಬಂದಿ ಮಾಜಿ ಸೈನಿಕ ಶ್ಯಾಮರಾಜ್ ಅವರಿಗೆ ಅವಮಾನ ಮಾಡಿದ ಪ್ರಕರಣ ಸುಖಾಂತ್ಯ ಕಂಡಿದೆ. ಇದೀಗ ಶ್ಯಾಮರಾಜ ಅವರನ್ನು ಕ್ಷಮಿಸಿರುವುದಾಗಿ ತಿಳಿಸಿದ್ದಾರೆ. ಆ ಮೂಲಕ ವಿವಾದ ಬಗೆಹರಿದಿದೆ. ಈ ಬಗ್ಗೆ ಅವರು ವಿಡಿಯೊ ಮಾಡಿದ್ದಾರೆ.

ದೇಶ ಕಾಯುವವರಿಗೆ ಅವಮಾನ!  ವ್ಹೀಲ್ ಚೇರ್‌ನಲ್ಲಿರುವ ಮಾಜಿ ಯೋಧನಿಗೆ ಟೋಲ್ ಸಿಬ್ಬಂದಿಯಿಂದ ಕಿರುಕುಳ, ವಿಡಿಯೋ ನೋಡಿ

ವ್ಹೀಲ್ ಚೇರ್‌ನಲ್ಲಿ ಕುಳಿತ ಮಾಜಿ ಯೋಧನಿಗೆ ಟೋಲ್ ಸಿಬ್ಬಂದಿ ಕಿರುಕುಳ

toll plaza harassment: ವ್ಹೀಲ್ ಚೇರ್‌ನಲ್ಲಿ ಕುಳಿತಿದ್ದ ಮಾಜಿ ಯೋಧನಿಗೆ ಟೋಲ್ ಪ್ಲಾಜಾದ ಸಿಬ್ಬಂದಿ ಕಿರುಕುಳ ನೀಡಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಂಬಂಧಿತ ಟೋಲ್ ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ಎಲ್ಲಾ ಸಿಬ್ಬಂದಿಯನ್ನು ಪೊಲೀಸ್ ಠಾಣೆಗೆ ಕರೆಸಿ ಸೂಕ್ತ ನಡವಳಿಕೆಯ ಬಗ್ಗೆ ಅರಿವು ಮೂಡಿಸಲಾಗಿದೆ.

ಗರ್ಭಾಶಯದ ಅಸಹಜ ರಕ್ತಸ್ರಾವ ಕುರಿತು ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರ

ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇವರ ವತಿಯಿಂದ ಗರ್ಭಾಶಯದ ಆಸಹಜ ರಕ್ತಸ್ರಾವ (Abnormal Uterine Bleeding – AUB) ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗಾಗಿ ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

Laxmi Hebbalkar: ವಾರಾಹಿ ನೀರಾವರಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಲಕ್ಷ್ಮಿ ಹೆಬ್ಬಾಳ್ಕರ್

ವಾರಾಹಿ ನೀರಾವರಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ: ಲಕ್ಷ್ಮಿ ಹೆಬ್ಬಾಳ್ಕರ್

Varahi Irrigation Project: ವಾರಾಹಿ ನೀರಾವರಿ ಯೋಜನೆ ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಈ ಬಗ್ಗೆ ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ.‌ ಈ ಯೋಜನೆ ನನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯ ಕೋಡಿಬೆಂಗ್ರೆ ಬೀಚ್‌ ಬಳಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರ ಸಾವು

ಕೋಡಿಬೆಂಗ್ರೆ ಬೀಚ್‌ ಬಳಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರ ಸಾವು

Udupi Boat Tragedy: ಪ್ರವಾಸಿಗರನ್ನು ವಿಹಾರಕ್ಕೆಂದು ಮಲ್ಪೆ ಡೆಲ್ಟಾ ಬೀಚ್ ಪಾಯಿಂಟ್‌ನಿಂದ ಕರೆದೊಯ್ಯುತ್ತಿದ್ದ ದೋಣಿ ಹಂಗಾರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ಮಗುಚಿ ಬಿದ್ದಿದೆ. ಈ ವೇಳೆ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ, ಕ್ರಮ ಜರುಗಿಸಲು ಕಾಂಗ್ರೆಸ್‌ ಒತ್ತಾಯ

ಉಡುಪಿ ಕೇಸರಿ ಧ್ವಜ ವಿವಾದ: ಜಿಲ್ಲಾಧಿಕಾರಿ ಹೇಳಿದ್ದೇನು?

ಕೃಷ್ಣಮಠದ ಪರ್ಯಾಯದ ಮೆರವಣಿಗೆ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ ವಿಚಾರ ಇದೀಗ ವಿವಾದಕ್ಕೀಡಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರ್ಯಾಯ ಮಹೋತ್ಸವದಲ್ಲಿ ಮಿಂದೆದ್ದ ಉಡುಪಿ; ಸರ್ವಜ್ಞ ಪೀಠ ಏರಿದ ಶ್ರೀ ವೇದವರ್ಧನ ತೀರ್ಥರು

ಶಿರೂರು ಪರ್ಯಾಯ ಮಹೋತ್ಸವ ಸಂಭ್ರಮ

ದೇಗುಲನಗರಿ ಉಡುಪಿ ಪರ್ಯಾಯ ಸಂಭ್ರಮದಲ್ಲಿ ಮಿಂದೆದ್ದಿದೆ. ಜನವರಿ 18ರಂದು ಬೆಳಗಿನ ಜಾವ ಉಡುಪಿಯ ನೂತನ ಪರ್ಯಾಯ ಪೀಠಾಧೀಶ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞಪೀಠವನ್ನು ಏರುವ ಮೂಲಕ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಮುಂದಿನ 2 ವರ್ಷಗಳ ತನಕ ಉಡುಪಿಯಲ್ಲಿ ಶ್ರೀಕೃಷ್ಣನ ಪೂಜೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Pavan Kumar Shirva Column: ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ದೇಗುಲನಗರಿ ಉಡುಪಿಯಲ್ಲಿ 253ನೆಯ ದ್ವೈವಾರ್ಷಿಕ ಪರ್ಯಾಯ ಸಂಭ್ರಮ !

ಅಷ್ಟ ಮಠದ ಯತಿಗಳಿಗೆ ರಥ ಬೀದಿಯಲ್ಲಿ ಪ್ರತ್ಯೇಕ ಮಠಗಳನ್ನು ಕಲ್ಪಿಸಿದರು. ದ್ವೈವಾರ್ಷಿಕ ಪದ್ಧತಿ ಬಂದ ಮೇಲೆ ಮೊದಲ ಪರ್ಯಾಯವನ್ನು ಶ್ರೀ ವಾದಿರಾಜ ತೀರ್ಥರು ನೆರವೇರಿಸಿದರು. ಮೊದಲ ಪರ್ಯಾಯವು ಶ್ರೀ ಪಲಿಮಾರು ಮಠದಿಂದ ಆರಂಭವಾಗಿತ್ತು. ಈಗ 253ನೆಯ ದ್ವೈ ವಾರ್ಷಿಕ ಪರ್ಯಾಯ ನಡೆಯುತ್ತಿದೆ.

Suresh Gopi: ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ಶ್ರೀ ಸುಗುಣೇಂದ್ರ ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ ವತಿಯಿಂದ ಶ್ರೀ ಸುಗುಣೇಂದ್ರ ತೀರ್ಥರು ವಿಶೇಷ ಗೌರವ ಸಲ್ಲಿಸಿದರು.

ಉನ್ಮೀಲನಂ 2026 - ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಉನ್ಮೀಲನಂ 2026 - ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗವು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ)ಆಶ್ರಯದಲ್ಲಿ "ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮರಣಾರ್ಥ" ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ - "ಉನ್ಮೀಲನಂ 2026" ಅನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಶನಿವಾರ, 14 ಫೆಬ್ರವರಿ 2026ರಂದು ಉಡುಪಿಯ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ನಡೆಯಲಿದೆ

ಉಡುಪಿ ಪರ್ಯಾಯ ಹಿನ್ನೆಲೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್ ನಿರ್ದೇಶನ

ಉಡುಪಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್

Laxmi Hebbalkar: ಉಡುಪಿ ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

DK Shivakumar: ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಸಭೆ: ಡಿಸಿಎಂ ಡಿಕೆ ಶಿವಕುಮಾರ್

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಡಿಕೆ ಶಿವಕುಮಾರ್

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, "ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. 100- 200 ಎಕರೆಯಲ್ಲಿ ಸ್ಟೋರೇಜ್ ಪಾಯಿಂಟ್ ಮಾಡಲಾಗುತ್ತದೆ. ಅಲ್ಲಿಂದ ಪಂಪ್ ಮಾಡಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಶರಾವತಿಯಿಂದ ಈಗ ಉತ್ಪಾದನೆ ಮಾಡುತ್ತಿರುವ ಪ್ರಮಾಣದಷ್ಟೇ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯಕ್ಕೆ ದೊಡ್ಡ ಆಸ್ತಿಯಾಗುತ್ತದೆ. ಇದಕ್ಕೆ ವಿರೋಧ ಮಾಡುವ ಅವಶ್ಯಕತೆಯಿಲ್ಲ" ಎಂದರು.

ಅಯೋಧ್ಯೆ ರಾಮಮಂದಿರ ವಿದ್ಯುದೀಕರಣಗೊಳಿಸಿದ ರಾಜೇಶ್‌ ಶೆಟ್ಟರಿಗೆ ಪುತ್ತಿಗೆ ಮಠದಿಂದ ಪ್ರಶಸ್ತಿ

ರಾಮಮಂದಿರ ವಿದ್ಯುದೀಕರಣಗೊಳಿಸಿದ ರಾಜೇಶ್‌ ಶೆಟ್ಟರಿಗೆ ಪ್ರಶಸ್ತಿ

Rajesh Shetty: ಬೆಂಗಳೂರಿನ ಶಂಕರ್‌ ಎಲೆಕ್ಟ್ರಿಕಲ್ಸ್‌ ಸಂಸ್ಥೆಯ ಸ್ಥಾಪಕ ರಾಜೇಶ್‌ ಶೆಟ್ಟಿ ಅವರಿಗೆ ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಾನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪ್ರಶಸ್ತಿ ನೀಡಿದ್ದಾರೆ.

ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸೇವೆ ಆರಂಭಿಸಿ; ರೈಲ್ವೆ ಸಚಿವರಿಗೆ ಎಚ್‌.ಡಿ. ಕುಮಾರಸ್ವಾಮಿ ಪತ್ರ

ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಿಸಿ

HD Kumaraswamy: ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

ಕುಂದಾಪುರ ಎಜುಕೇಷನ್ ಸೊಸೈಟಿಗೆ 50 ವರ್ಷಗಳಾಗಿವೆ. ಸುಕುಮಾರ್ ಶೆಟ್ಟಿ ಅವರ ನೇತೃತ್ವ, ಗುರಿ, ಅವರ ದಿಟ್ಟತನದಿಂದಾಗಿ ಸಂಸ್ಥೆ ಈ ಮಟ್ಟಕ್ಕೆ ಏರಿದೆ. ಕುಂದಾಪುರ ಎಜುಕೇಷನ್ ಸೊಸೈಟಿಯ ಭಾಗವಾಗಿರುವ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಬಿ. ಉಮೇಶ್ ಶೆಟ್ಟಿ ಈ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Loading...