ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಡುಪಿ

Udupi Vitla Pindi Utsav: ವಿಟ್ಲಪಿಂಡಿ ಉತ್ಸವದಲ್ಲಿ ಅವಘಡ; ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ!

ವಿಟ್ಲಪಿಂಡಿ ಉತ್ಸವದ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ. ಚಾತುರ್ಮಾಸದ ಹಿನ್ನೆಲೆ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥೋತ್ಸವದ ಬಳಿಕ ಇಳಿಸುವಾಗ ಆಕಸ್ಮಿಕವಾಗಿ ಸ್ವಾಮೀಜಿಗಳ ಕೈಯಿಂದ ಜಾರಿ ಕೆಳಗೆ ಬಿದ್ದು, ಭಗ್ನವಾಗಿದೆ.

ಕೃಷ್ಣ ನಗರಿಯಲ್ಲಿ ನಾಳೆ ವಿಟ್ಲ ಪಿಂಡಿ ಉತ್ಸವ; ಉಡುಪಿಯಲ್ಲಿ ನಂದಗೋಕುಲ ವೈಭವ

ಉಡುಪಿ ವಿಟ್ಲ ಪಿಂಡಿ ಉತ್ಸವ ವಿಶೇಷ

Udupi krishna janmashtami: ಎಲ್ಲೆಲ್ಲೋ ಪುಟ್ಟ ಪುಟ್ಟ ಬಾಲ ಕೃಷ್ಣರು, ಅಲ್ಲಲ್ಲಿ ವಿವಿಧ ರೀತಿಯ ವೇಷಧಾರಿಗಳು, ಕೃಷ್ಣನ ಬಾಲ ಲೀಲೆಗಳನ್ನು ನೆನಪಿಸುವ ವಿವಿಧ ಕಲಾ ಪ್ರದರ್ಶನಗಳು... ಕೃಷ್ಣ ಜನ್ಮಾಷ್ಟಮಿ ವೇಳೆ ಎರಡು ದಿನಗಳ ಕಾಲ ಸಂಪೂರ್ಣ ಉಡುಪಿ ನಗರಿಯೇ ನಂದ ಗೋಕುಲವಾಗುವುದು. ಸರಿಸುಮಾರು ಸಾವಿರ ವರ್ಷಗಳಿಂದ ನಡೆಯುತ್ತಿರುವ ಈ ಆಚರಣೆಯ ವೈಭವ ಪ್ರತಿ ವರ್ಷ ಹೆಚ್ಚುತ್ತಲೇ ಇದೆ. ಇಲ್ಲಿದೆ ಇದರ ಹಿನ್ನೆಲೆ, ವೈಭವದ ದರ್ಶನ.

ಕರಾವಳಿಯ ಗಂಡುಕಲೆ ಕಂಡು ಮಂತ್ರಮುಗ್ಧರಾದ ಕಲಬುರಗಿ ಜನ: ‘ಕಾಂತಾರ ಮಣಿ’ಯಲ್ಲಿ ದೈವ–ಮಾನವ ಸಂಬಂಧದ ರೋಚಕ ಅನಾವರಣ

ಕರಾವಳಿಯ ಗಂಡುಕಲೆ ಕಂಡು ಮಂತ್ರಮುಗ್ಧರಾದ ಕಲಬುರಗಿ ಜನ

ದಕ್ಷಿಣ ಕನ್ನಡ ಸಂಘ, ಹೋಟೆಲ್, ಬೇಕರಿ ಹಾಗೂ ವಸತಿಗೃಹ ಮಾಲೀಕರ ಸಂಘದ ಸಹಯೋಗಲ್ಲಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಶಿವಾನುಭವ ಮಂಟಪದಲ್ಲಿ ಯಕ್ಷಗಾನ ಆಯೋಜಿಸಲಾಗಿತ್ತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಪ್ರದರ್ಶನದಲ್ಲಿ ಕರಾವಳಿಯ ಗಂಡುಕಲೆಯ ವೈಭವವನ್ನು ಕಲಬುರಗಿ ಜನ ಕಣ್ತುಂಬಿಕೊಂಡರು.

ಬಾಳೆಹಣ್ಣಿಗೂ ವಿಷ! ಉಡುಪಿಯಲ್ಲಿ ಅಕ್ರಮ ಬಾಳೆಹಣ್ಣು ಮಾಗಿಸುವ ಘಟಕಗಳ ಮೇಲೆ ಅಧಿಕಾರಿಗಳಿಂದ ದಾಳಿ

ಅಕ್ರಮ ಬಾಳೆಹಣ್ಣು ಮಾಗಿಸುವ ಘಟಕಗಳ ಮೇಲೆ ಅಧಿಕಾರಿಗಳಿಂದ ದಾಳಿ

illegal banana ripening units: ಕಾನೂನುಬಾಹಿರವಾಗಿ ರಾಸಾಯನಿಕ ಬಳಸಿ ಬಾಳೆಹಣ್ಣು ಹಣ್ಣು ಮಾಡುವ ಜಾಲ ಸಕ್ರಿಯವಾಗಿರುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದಲ್ಲಿ ಹಲವು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ, ಅಧಿಕಾರಿಗಳು ರೂ. 4 ಲಕ್ಷ ಮೌಲ್ಯದ 5,000 ಕೆಜಿ ಹಸಿ ಬಾಳೆ ಗೊಂಚಲುಗಳನ್ನು ವಶಪಡಿಸಿಕೊಂಡರು.

ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ: ಉಡುಪಿ ಉದ್ಯಮಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನ ಕಾಲಿಗೆ ಗುಂಡು, ಬಂಧನ

ಮುದರಂಗಡಿ ಶೂಟೌಟ್ ಪ್ರಕರಣ: ಆರೋಪಿಯೊಬ್ಬನ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳಲ್ಲಿ ಓರ್ವನನ್ನು ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ತಂಡವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ ಪಿಎಸ್ಐ ಅವರಿಗೂ ಗುಂಡೇಟು ತಗಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಕೊಲೆ!

Udupi News: ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ನೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Kundapur Murder: ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ ಜಿಲ್ಲೆಯ ಕುಂದಾಪುರ ನಗರದ ಹೋಲಿ ರೋಸರಿ ಚರ್ಚ್‌ ಎದುರು ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರದ ವಿಚಾರದಲ್ಲಿದ್ದ ಮನಸ್ತಾಪ ಕಾರಣವೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spoorthi Shetty: ಮಿಸ್ ಯೂನಿವರ್ಸ್ ಇಂಡಿಯಾ 2026 ಅಂತಿಮ ಸುತ್ತಿಗೆ ಉಡುಪಿಯ ಸ್ಫೂರ್ತಿ ಶೆಟ್ಟಿ ಅಯ್ಕೆ

ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿಗೆ ಸ್ಫೂರ್ತಿ ಶೆಟ್ಟಿ ಆಯ್ಕೆ

Miss Universe India 2026: ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಫೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 23ರಂದು ನವದೆಹಲಿಯಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಫೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

ಕೊಲ್ಲೂರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೊಲ್ಲೂರಿನಲ್ಲಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ರಾತ್ರಿಯೇ ದೇವಾಲಯಕ್ಕೆ ಆಗಮಿಸಿದ್ದ ಅವರು ಶನಿವಾರ ಬೆಳಗ್ಗೆ ಗಣಹೋಮದಲ್ಲಿ ಭಾಗಿಯಾದರು. ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

Udupi News: ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

Weather Report: ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯಲ್ಲಿ ಟ್ರಾಯ್‌ನಿಂದ ಮೊಬೈಲ್ ನೆಟ್‌ವರ್ಕ್ ಕ್ವಾಲಿಟಿ ಟೆಸ್ಟ್‌; ಸಿಗ್ನಲ್‌ ಕವರೇಜ್‌ನಲ್ಲಿ ಏರ್‌ಟೆಲ್‌, ಡೇಟಾ ಸ್ಪೀಡ್‌ನಲ್ಲಿ ಜಿಯೋ ಮುಂದು

ಉಡುಪಿಯಲ್ಲಿ ಮೊಬೈಲ್ ನೆಟ್‌ವರ್ಕ್ ಗುಣಮಟ್ಟ ಮೌಲ್ಯಮಾಪನ

Mobile Network Quality: ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿ) ಒದಗಿಸುವ ಮೊಬೈಲ್ ನೆಟ್‌ವರ್ಕ್ ಸೇವೆಗಳ (ಧ್ವನಿ ಮತ್ತು ಡೇಟಾ ಎರಡೂ) ನೈಜ ಸಮಯದ ಗುಣಮಟ್ಟವನ್ನು ನಿರ್ಣಯಿಸುವುದು ಮತ್ತು ಪರಿಶೀಲಿಸುವುದು‌ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ದ ಇಂಡಿಪೆಂಡೆಂಟ್ ಡ್ರೈವ್ ಟೆಸ್ಟ್ ಉದ್ದೇಶವಾಗಿದೆ.

ಕೊಲ್ಲೂರಿನ ವಿಶೇಷ ಪೂಜೆ, ಉಡುಪಿ ಮಠದಲ್ಲಿ  ಪರ್ಯಾಯ ಪೀಠಾಧೀಶರಿಂದ ಆಶೀರ್ವಾದ ಪಡೆದ ಅನಂತ್ ಅಂಬಾನಿ

ಕೊಲ್ಲೂರು, ಉಡುಪಿ ಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ

ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಅವರು ಭಾನುವಾರ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಮತ್ತು ರಾತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

Kapu MLA Gurme Suresh Shetty: ಬಡತನದ ಬೇಗೆಯಿಂದ ವಿಧಾನಸೌಧದ ಮೆಟ್ಟಿಲವರೆಗೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಗುರ್ಮೆ ಸುರೇಶ್ ಶೆಟ್ಟಿ ಅವರ ಆರಂಭಿಕ ಜೀವನ ಕಷ್ಟದಾಯಕವಾಗಿತ್ತು. ಊರಿನಲ್ಲೊಂದು ಸಣ್ಣ ಹುಲ್ಲಿನ ಮನೆ. ಮನೆಯಲ್ಲಿ ನಾಲ್ಕು ಜನ ಅಕ್ಕ-ತಂಗಿಯರು ಹಾಗೂ ತಾಯಿ. ತಂದೆಯ ನೆರಳಿಲ್ಲದ ಆ ಕುಟುಂಬಕ್ಕೆ ಇವರೇ ದೊಡ್ಡ ಮಗ. ಕಾಲೇಜಿಗೆ ಸೇರಲು ಕೇವಲ 130 ರುಪಾಯಿ ಫೀಸ್ ಕಟ್ಟಲಾ ಗದೆ, ಕೇವಲ ಒಂದು ಜತೆ ಬಟ್ಟೆಯನ್ನು ಕೈಯಲ್ಲಿ ಹಿಡಿದು ಬದುಕನ್ನು ಹುಡುಕುತ್ತಾ ದೂರದ ಬಳ್ಳಾರಿಗೆ ರೈಲು ಹತ್ತಿದವರು ಸುರೇಶ್ ಶೆಟ್ಟಿ.

Tamil Nadu CM Vijay: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌; 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌

Kollur Mookambika Temple: ತಮಿಳುನಾಡು ಸಿಎಂ ವಿಜಯ್ ಅವರ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇಗುಲದ ಸುತ್ತಮುತ್ತ ಹಾಗೂ ಅವರು ತೆರಳು ಮಾರ್ಗದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ದೇವಿಯ ದರ್ಶನದ ಬಳಿಕ ಅವರು ಚೆನ್ನೈಗೆ ನಿರ್ಗಮಿಸಿದರು.

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ: ಶೋಕದಲ್ಲಿ ಮುಳುಗಿದ ಗ್ರಾಮಸ್ಥರು

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ

toddler dies after coconut falls: ತೆಂಗಿನಕಾಯಿ ತಲೆ ಮೇಲೆ ಬಿದ್ದು ಪುಟ್ಟ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ತಾಯಿ ಸುಚಿತ್ರಾ ತಮ್ಮ ಹಿರಿಯ ಪುತ್ರಿಯನ್ನು ಶಾಲೆಗೆ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ನಿನ್ನನ್ನು ಮುಗಿಸುವ ಸಮಯ ಬಂದಿದೆ”: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಉಡುಪಿ ವ್ಯಕ್ತಿಯ ಬಂಧನ

ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಉಡುಪಿ ವ್ಯಕ್ತಿಯ ಬಂಧನ

Man Arrested for Threatening Home Minister: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿ ಫೇಸ್‌ಬುಕ್ ಕಾಮೆಂಟ್ ಹಾಕಿದ್ದ 48 ವರ್ಷದ ವ್ಯಕ್ತಿಯೊಬ್ಬನನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಈ ಪೋಸ್ಟ್ ಅನ್ನು ಗಮನಿಸಿ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ!

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಇನ್ನು ಜೂನ್‌ 9ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಾಪು ಮಾರಿ ಗುಡಿ: ಬ್ರಹ್ಮ ಕಲಶೋತ್ಸವದ ಹಿಂದಿನ ಶಕ್ತಿ ಡಾ. ಪ್ರಕಾಶ್‌ ಶೆಟ್ಟಿ

ಕಾಪು ಮಾರಿ ಗುಡಿ: ಬ್ರಹ್ಮ ಕಲಶೋತ್ಸವದ ಹಿಂದಿನ ಶಕ್ತಿ ಡಾ. ಪ್ರಕಾಶ್‌ ಶೆಟ್ಟಿ

ಕಾಪು ಹೊಸ ಮಾರಿಗುಡಿಯ ಬೇರುಗಳು 17ನೆಯ ಶತಮಾನಕ್ಕೆ ಕರೆದೊಯ್ಯುತ್ತವೆ. ವಿಜಯನಗರ ಸಾಮ್ರಾಜ್ಯದ ಅಂಗವಾಗಿದ್ದ ಕೇಳಾಡಿ ನಾಯಕ ಮನೆತನದ ಅರಸ ಬಸಪ್ಪ ನಾಯಕ ಕ್ರಿ.ಶ. 1743ರಲ್ಲಿ ಕಾಪು ಸಮುದ್ರ ತೀರದಲ್ಲಿ ಮನೋಹರಗಢ ಎಂಬ ಕೋಟೆ ಮತ್ತು ಮಳ್ಳೂರಿನಲ್ಲಿ ಸೇನಾ ಕೋಟೆ ನಿರ್ಮಿಸಿದ. ಈ ಸೇನೆಯ ಜತೆ ಮಾರಿ ದೇವಿ ಕಾಪುವಿಗೆ ಬಂದಳೆಂಬ ನಂಬಿಕೆ ಇರುವುದರಿಂದ ಆಕೆ ದಂಡಿನ ಮಾರಿ ಎಂದೇ ಪ್ರಸಿದ್ಧಿ.

Pravasi Prapancha: ಜಗಮಗಿಸುತಿಹುದು ಕಾಪು ಶ್ರೀ ಮಾರಿ ಗುಡಿ

ಭಕ್ತರ ಕೈ ಬೀಸಿ ಕರೆಯುತ್ತಿದೆ ಕಾಪು ಶ್ರೀ ಮಾರಿ ಗುಡಿ

Kaup Mari Gudi: ಕರ್ನಾಟಕದ ಕರಾವಳಿಯಲ್ಲಿ ದೇವಾಲಯಗಳ ಕೊರತೆಯಿಲ್ಲ. ಆದರೆ ಕೆಲವೊಮ್ಮೆ ಒಂದು ದೇವಾಲಯ ಕೇವಲ ಆರಾಧನೆಯ ಕೇಂದ್ರವಾಗಿ ಉಳಿಯದೆ, ಒಂದು ಸಮುದಾಯದ ಒಗ್ಗಟ್ಟು, ಭಕ್ತಿ, ಸಂಘಟನಾ ಶಕ್ತಿ ಮತ್ತು ನಾಯಕತ್ವದ ಪ್ರತೀಕವಾಗಿ ರೂಪುಗೊಳ್ಳುತ್ತದೆ. ಕಾಪು ಶ್ರೀ ಹೊಸ ಮಾರಿಗುಡಿ ಅಂಥ ಒಂದು ಅಪರೂಪದ ಉದಾಹರಣೆ. ಐದು ಶತಮಾನಗಳ ಸಂಪ್ರದಾಯವನ್ನು ಹೊತ್ತ ಈ ಪವಿತ್ರ ಕ್ಷೇತ್ರ ಇಂದು ₹99 ಕೋಟಿ ವೆಚ್ಚದ ಭವ್ಯ ಶಿಲಾಮಂದಿರವಾಗಿ ಪುನರ್ಜನ್ಮ ಪಡೆದಿದೆ. ಕಳೆದ ವರ್ಷ ಇಲ್ಲಿ ಜರುಗಿದ ಬ್ರಹ್ಮಕಲಶೋತ್ಸವ ಮಹಾಕಾರ್ಯದ ಹಿಂದಿರುವ ಶಕ್ತಿ ಸಾವಿರಾರು ಭಕ್ತರ ಭಕ್ತಿಯಾಗಿದ್ದರೆ, ಅದಕ್ಕೆ ದಿಕ್ಕು ನೀಡಿದ ನಾಯಕತ್ವ ಡಾ. ಪ್ರಕಾಶ್ ಶೆಟ್ಟಿ ಬಂಜಾರ ಅವರದು.

World Environment Day: ಪರಿಸರ ದಿನದ ಅಪೂರ್ವ ಕೊಡುಗೆ: ಕುಂದಾಪುರದಲ್ಲಿ ಲೋಕಾರ್ಪಣೆಗೊಂಡಿತು 250ಕ್ಕೂ ಹೆಚ್ಚು ಪ್ರಬೇಧಗಳ ಚಿತ್ರಕೂಟ ಔಷಧಿ ವನ

ಗಿಡಮೂಲಿಕೆಗಳ ಸಂರಕ್ಷಣೆಗೆ ಡಾ. ರಾಜೇಶ್ ಬಾಯರಿ ತಂಡದ ಶ್ಲಾಘನೀಯ ಹೆಜ್ಜೆ

ಪರಿಸರಕ್ಕೆ ವಿಶೇಷ ಕೊಡುಗೆ ನೀಡುವ ಹಾಗೂ ಮುಂದಿನ ಪೀಳಿಗೆಗೆ ಆಯುರ್ವೇದ ಪರಂಪರೆ ಯನ್ನು ದಾಟಿಸುವ ಉದಾತ್ತ ಉದ್ದೇಶದಿಂದ ನಿರ್ಮಿಸಲಾದ, 250ಕ್ಕೂ ಹೆಚ್ಚು ಅಪರೂಪದ ಪ್ರಬೇಧದ ಗಿಡಮೂಲಿಕೆಗಳನ್ನೊಳಗೊಂಡ ಚಿತ್ರಕೂಟ ಔಷಧೀಯ ಸಸ್ಯಗಳ ಉದ್ಯಾನವನ ಕುಂದಾಪುರ ಸಮೀಪ ಇರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಯಶಸ್ವಿಯಾಗಿ ಲೋಕಾರ್ಪಣೆಗೊಂಡಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Loading...