ವಿಟ್ಲಪಿಂಡಿ ಉತ್ಸವದ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ!
ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ. ಚಾತುರ್ಮಾಸದ ಹಿನ್ನೆಲೆ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥೋತ್ಸವದ ಬಳಿಕ ಇಳಿಸುವಾಗ ಆಕಸ್ಮಿಕವಾಗಿ ಸ್ವಾಮೀಜಿಗಳ ಕೈಯಿಂದ ಜಾರಿ ಕೆಳಗೆ ಬಿದ್ದು, ಭಗ್ನವಾಗಿದೆ.