ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಡುಪಿ

Spoorthi Shetty: ಮಿಸ್ ಯೂನಿವರ್ಸ್ ಇಂಡಿಯಾ 2026 ಅಂತಿಮ ಸುತ್ತಿಗೆ ಉಡುಪಿಯ ಸ್ಫೂರ್ತಿ ಶೆಟ್ಟಿ ಅಯ್ಕೆ

ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿಗೆ ಸ್ಫೂರ್ತಿ ಶೆಟ್ಟಿ ಆಯ್ಕೆ

Miss Universe India 2026: ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಫೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 23ರಂದು ನವದೆಹಲಿಯಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಫೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

ಕೊಲ್ಲೂರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೊಲ್ಲೂರಿನಲ್ಲಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ರಾತ್ರಿಯೇ ದೇವಾಲಯಕ್ಕೆ ಆಗಮಿಸಿದ್ದ ಅವರು ಶನಿವಾರ ಬೆಳಗ್ಗೆ ಗಣಹೋಮದಲ್ಲಿ ಭಾಗಿಯಾದರು. ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

Udupi News: ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲದಲ್ಲಿ ಶಾಲಾ ಬಸ್‌ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

ಇಂದು ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಬಿರುಸಿನ ಮಳೆ ಸಾಧ್ಯತೆ!

Weather Report: ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್‌ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯಲ್ಲಿ ಟ್ರಾಯ್‌ನಿಂದ ಮೊಬೈಲ್ ನೆಟ್‌ವರ್ಕ್ ಕ್ವಾಲಿಟಿ ಟೆಸ್ಟ್‌; ಸಿಗ್ನಲ್‌ ಕವರೇಜ್‌ನಲ್ಲಿ ಏರ್‌ಟೆಲ್‌, ಡೇಟಾ ಸ್ಪೀಡ್‌ನಲ್ಲಿ ಜಿಯೋ ಮುಂದು

ಉಡುಪಿಯಲ್ಲಿ ಮೊಬೈಲ್ ನೆಟ್‌ವರ್ಕ್ ಗುಣಮಟ್ಟ ಮೌಲ್ಯಮಾಪನ

Mobile Network Quality: ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿ) ಒದಗಿಸುವ ಮೊಬೈಲ್ ನೆಟ್‌ವರ್ಕ್ ಸೇವೆಗಳ (ಧ್ವನಿ ಮತ್ತು ಡೇಟಾ ಎರಡೂ) ನೈಜ ಸಮಯದ ಗುಣಮಟ್ಟವನ್ನು ನಿರ್ಣಯಿಸುವುದು ಮತ್ತು ಪರಿಶೀಲಿಸುವುದು‌ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ದ ಇಂಡಿಪೆಂಡೆಂಟ್ ಡ್ರೈವ್ ಟೆಸ್ಟ್ ಉದ್ದೇಶವಾಗಿದೆ.

ಕೊಲ್ಲೂರಿನ ವಿಶೇಷ ಪೂಜೆ, ಉಡುಪಿ ಮಠದಲ್ಲಿ  ಪರ್ಯಾಯ ಪೀಠಾಧೀಶರಿಂದ ಆಶೀರ್ವಾದ ಪಡೆದ ಅನಂತ್ ಅಂಬಾನಿ

ಕೊಲ್ಲೂರು, ಉಡುಪಿ ಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ

ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಅವರು ಭಾನುವಾರ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಮತ್ತು ರಾತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

Kapu MLA Gurme Suresh Shetty: ಬಡತನದ ಬೇಗೆಯಿಂದ ವಿಧಾನಸೌಧದ ಮೆಟ್ಟಿಲವರೆಗೆ: ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಯಶೋಗಾಥೆ

ಗುರ್ಮೆ ಸುರೇಶ್ ಶೆಟ್ಟಿ ಅವರ ಆರಂಭಿಕ ಜೀವನ ಕಷ್ಟದಾಯಕವಾಗಿತ್ತು. ಊರಿನಲ್ಲೊಂದು ಸಣ್ಣ ಹುಲ್ಲಿನ ಮನೆ. ಮನೆಯಲ್ಲಿ ನಾಲ್ಕು ಜನ ಅಕ್ಕ-ತಂಗಿಯರು ಹಾಗೂ ತಾಯಿ. ತಂದೆಯ ನೆರಳಿಲ್ಲದ ಆ ಕುಟುಂಬಕ್ಕೆ ಇವರೇ ದೊಡ್ಡ ಮಗ. ಕಾಲೇಜಿಗೆ ಸೇರಲು ಕೇವಲ 130 ರುಪಾಯಿ ಫೀಸ್ ಕಟ್ಟಲಾ ಗದೆ, ಕೇವಲ ಒಂದು ಜತೆ ಬಟ್ಟೆಯನ್ನು ಕೈಯಲ್ಲಿ ಹಿಡಿದು ಬದುಕನ್ನು ಹುಡುಕುತ್ತಾ ದೂರದ ಬಳ್ಳಾರಿಗೆ ರೈಲು ಹತ್ತಿದವರು ಸುರೇಶ್ ಶೆಟ್ಟಿ.

Tamil Nadu CM Vijay: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌; 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌

Kollur Mookambika Temple: ತಮಿಳುನಾಡು ಸಿಎಂ ವಿಜಯ್ ಅವರ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇಗುಲದ ಸುತ್ತಮುತ್ತ ಹಾಗೂ ಅವರು ತೆರಳು ಮಾರ್ಗದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ದೇವಿಯ ದರ್ಶನದ ಬಳಿಕ ಅವರು ಚೆನ್ನೈಗೆ ನಿರ್ಗಮಿಸಿದರು.

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ: ಶೋಕದಲ್ಲಿ ಮುಳುಗಿದ ಗ್ರಾಮಸ್ಥರು

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ

toddler dies after coconut falls: ತೆಂಗಿನಕಾಯಿ ತಲೆ ಮೇಲೆ ಬಿದ್ದು ಪುಟ್ಟ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ತಾಯಿ ಸುಚಿತ್ರಾ ತಮ್ಮ ಹಿರಿಯ ಪುತ್ರಿಯನ್ನು ಶಾಲೆಗೆ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ನಿನ್ನನ್ನು ಮುಗಿಸುವ ಸಮಯ ಬಂದಿದೆ”: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಉಡುಪಿ ವ್ಯಕ್ತಿಯ ಬಂಧನ

ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಉಡುಪಿ ವ್ಯಕ್ತಿಯ ಬಂಧನ

Man Arrested for Threatening Home Minister: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೊಲೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿ ಫೇಸ್‌ಬುಕ್ ಕಾಮೆಂಟ್ ಹಾಕಿದ್ದ 48 ವರ್ಷದ ವ್ಯಕ್ತಿಯೊಬ್ಬನನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಈ ಪೋಸ್ಟ್ ಅನ್ನು ಗಮನಿಸಿ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ!

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಇನ್ನು ಜೂನ್‌ 9ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಾಪು ಮಾರಿ ಗುಡಿ: ಬ್ರಹ್ಮ ಕಲಶೋತ್ಸವದ ಹಿಂದಿನ ಶಕ್ತಿ ಡಾ. ಪ್ರಕಾಶ್‌ ಶೆಟ್ಟಿ

ಕಾಪು ಮಾರಿ ಗುಡಿ: ಬ್ರಹ್ಮ ಕಲಶೋತ್ಸವದ ಹಿಂದಿನ ಶಕ್ತಿ ಡಾ. ಪ್ರಕಾಶ್‌ ಶೆಟ್ಟಿ

ಕಾಪು ಹೊಸ ಮಾರಿಗುಡಿಯ ಬೇರುಗಳು 17ನೆಯ ಶತಮಾನಕ್ಕೆ ಕರೆದೊಯ್ಯುತ್ತವೆ. ವಿಜಯನಗರ ಸಾಮ್ರಾಜ್ಯದ ಅಂಗವಾಗಿದ್ದ ಕೇಳಾಡಿ ನಾಯಕ ಮನೆತನದ ಅರಸ ಬಸಪ್ಪ ನಾಯಕ ಕ್ರಿ.ಶ. 1743ರಲ್ಲಿ ಕಾಪು ಸಮುದ್ರ ತೀರದಲ್ಲಿ ಮನೋಹರಗಢ ಎಂಬ ಕೋಟೆ ಮತ್ತು ಮಳ್ಳೂರಿನಲ್ಲಿ ಸೇನಾ ಕೋಟೆ ನಿರ್ಮಿಸಿದ. ಈ ಸೇನೆಯ ಜತೆ ಮಾರಿ ದೇವಿ ಕಾಪುವಿಗೆ ಬಂದಳೆಂಬ ನಂಬಿಕೆ ಇರುವುದರಿಂದ ಆಕೆ ದಂಡಿನ ಮಾರಿ ಎಂದೇ ಪ್ರಸಿದ್ಧಿ.

Pravasi Prapancha: ಜಗಮಗಿಸುತಿಹುದು ಕಾಪು ಶ್ರೀ ಮಾರಿ ಗುಡಿ

ಭಕ್ತರ ಕೈ ಬೀಸಿ ಕರೆಯುತ್ತಿದೆ ಕಾಪು ಶ್ರೀ ಮಾರಿ ಗುಡಿ

Kaup Mari Gudi: ಕರ್ನಾಟಕದ ಕರಾವಳಿಯಲ್ಲಿ ದೇವಾಲಯಗಳ ಕೊರತೆಯಿಲ್ಲ. ಆದರೆ ಕೆಲವೊಮ್ಮೆ ಒಂದು ದೇವಾಲಯ ಕೇವಲ ಆರಾಧನೆಯ ಕೇಂದ್ರವಾಗಿ ಉಳಿಯದೆ, ಒಂದು ಸಮುದಾಯದ ಒಗ್ಗಟ್ಟು, ಭಕ್ತಿ, ಸಂಘಟನಾ ಶಕ್ತಿ ಮತ್ತು ನಾಯಕತ್ವದ ಪ್ರತೀಕವಾಗಿ ರೂಪುಗೊಳ್ಳುತ್ತದೆ. ಕಾಪು ಶ್ರೀ ಹೊಸ ಮಾರಿಗುಡಿ ಅಂಥ ಒಂದು ಅಪರೂಪದ ಉದಾಹರಣೆ. ಐದು ಶತಮಾನಗಳ ಸಂಪ್ರದಾಯವನ್ನು ಹೊತ್ತ ಈ ಪವಿತ್ರ ಕ್ಷೇತ್ರ ಇಂದು ₹99 ಕೋಟಿ ವೆಚ್ಚದ ಭವ್ಯ ಶಿಲಾಮಂದಿರವಾಗಿ ಪುನರ್ಜನ್ಮ ಪಡೆದಿದೆ. ಕಳೆದ ವರ್ಷ ಇಲ್ಲಿ ಜರುಗಿದ ಬ್ರಹ್ಮಕಲಶೋತ್ಸವ ಮಹಾಕಾರ್ಯದ ಹಿಂದಿರುವ ಶಕ್ತಿ ಸಾವಿರಾರು ಭಕ್ತರ ಭಕ್ತಿಯಾಗಿದ್ದರೆ, ಅದಕ್ಕೆ ದಿಕ್ಕು ನೀಡಿದ ನಾಯಕತ್ವ ಡಾ. ಪ್ರಕಾಶ್ ಶೆಟ್ಟಿ ಬಂಜಾರ ಅವರದು.

World Environment Day: ಪರಿಸರ ದಿನದ ಅಪೂರ್ವ ಕೊಡುಗೆ: ಕುಂದಾಪುರದಲ್ಲಿ ಲೋಕಾರ್ಪಣೆಗೊಂಡಿತು 250ಕ್ಕೂ ಹೆಚ್ಚು ಪ್ರಬೇಧಗಳ ಚಿತ್ರಕೂಟ ಔಷಧಿ ವನ

ಗಿಡಮೂಲಿಕೆಗಳ ಸಂರಕ್ಷಣೆಗೆ ಡಾ. ರಾಜೇಶ್ ಬಾಯರಿ ತಂಡದ ಶ್ಲಾಘನೀಯ ಹೆಜ್ಜೆ

ಪರಿಸರಕ್ಕೆ ವಿಶೇಷ ಕೊಡುಗೆ ನೀಡುವ ಹಾಗೂ ಮುಂದಿನ ಪೀಳಿಗೆಗೆ ಆಯುರ್ವೇದ ಪರಂಪರೆ ಯನ್ನು ದಾಟಿಸುವ ಉದಾತ್ತ ಉದ್ದೇಶದಿಂದ ನಿರ್ಮಿಸಲಾದ, 250ಕ್ಕೂ ಹೆಚ್ಚು ಅಪರೂಪದ ಪ್ರಬೇಧದ ಗಿಡಮೂಲಿಕೆಗಳನ್ನೊಳಗೊಂಡ ಚಿತ್ರಕೂಟ ಔಷಧೀಯ ಸಸ್ಯಗಳ ಉದ್ಯಾನವನ ಕುಂದಾಪುರ ಸಮೀಪ ಇರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಯಶಸ್ವಿಯಾಗಿ ಲೋಕಾರ್ಪಣೆಗೊಂಡಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ; ಹಿಂದು ಮಹಿಳೆ ಪರ ನೆರವು ಕೋರಿದ್ದು ಮತಾಂತರಗೊಂಡ ಮಗಳೇ!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ!

Udupi News: ಉಡುಪಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಿಂದೂ ಮಹಿಳೆಗಾಗಿ ನೆರವು ಕೋರಲು ಬಂದಾಗ ಪ್ರತಿಕ್ರಿಯಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು, ಇದರಿಂದ ಉಡುಪಿಯ ಬಿಜೆಪಿಯವರು ಕಲಿಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

ಮಧುಮೇಹದಿಂದಾಗಿ ಪಾದಗಳಲ್ಲಿ ಉಂಟಾಗುವ ನರಗಳ ಸಂವೇದನೆ ಕುಂಠಿತವಾಗುವುದು, ರಕ್ತ ಪ್ರವಾಹದ ಅಡಚಣೆ ಹಾಗೂ ಪಾದದ ಮೇಲಿನ ಅಸಾಮಾನ್ಯ ಒತ್ತಡದಿಂದ ಹುಣ್ಣುಗಳು ಉಂಟಾಗು ವಂತಹ ಸಮಸ್ಯೆಗಳು ಅನೇಕ ಬಾರಿ ಗಂಭೀರ ಸ್ಥಿತಿಗೆ ತಲುಪುತ್ತವೆ. ಇವುಗಳನ್ನು ಸಮಯೋಚಿತ ತಪಾಸಣೆಯ ಮೂಲಕ ತಡೆಗಟ್ಟಬಹುದಾಗಿದೆ.

Kollur Accident: ಕೊಲ್ಲೂರು ಬಳಿ ಮೀನು ಸಾಗಣೆ ವಾಹನ-ಜೀಪ್ ಡಿಕ್ಕಿ; ಕೇರಳ ಮೂಲದ ಇಬ್ಬರು ಪ್ರವಾಸಿಗರ ಸಾವು

ಕೊಲ್ಲೂರು ಬಳಿ ಭೀಕರ ಅಪಘಾತ; ಕೇರಳ ಮೂಲದ ಇಬ್ಬರ ಸಾವು

Udupi News: ಉಡುಪಿ ಜಿಲ್ಲೆ ಕೊಲ್ಲೂರಿನ ಕೊಡಚಾದ್ರಿಯ ದಳಿ ಎಂಬಲ್ಲಿ ಭೀಕರ ಅಪಘಾತ ನಡೆದಿದೆ. ಮೀನು ಸಾಗಾಟದ ವಾಹನ ಹಾಗೂ ಜೀಪ್ ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಬಡ ಹಿಂದು ಮಹಿಳೆಗಾಗಿ ಸಚಿವೆ ಹೆಬ್ಬಾಳ್ಕರ್‌ ಬಳಿ ನೆರವು ಯಾಚಿಸಿದ ಮುಸ್ಲಿಂ ಮಹಿಳೆಯರು; ಸಾಮರಸ್ಯಕ್ಕೆ ಸಾಕ್ಷಿಯಾದ ಉಡುಪಿ

ಬಡ ಹಿಂದು ಮಹಿಳೆಗಾಗಿ ಸಚಿವೆ ಬಳಿ ನೆರವು ಯಾಚಿಸಿದ ಮುಸ್ಲಿಂ ಮಹಿಳೆಯರು

Laxmi Hebbalkar: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ.

ವಿಶೇಷಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ‘ಸಾಮರ್ಥ್ಯ ವನ ಪಾರ್ಕ್ʼ ನಿರ್ಮಾಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಿಲಾನ್ಯಾಸ

ವಿಶೇಷಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ‘ಸಾಮರ್ಥ್ಯ ವನ ಪಾರ್ಕ್ʼ

ವಿಶೇಷಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.

Udupi Bus Accident: ಉಡುಪಿಯಲ್ಲಿ ಭೀಕರ ಅಪಘಾತ; ಪೆಟ್ರೋಲ್‌ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್‌ ಡಿಕ್ಕಿಯಾಗಿ ಇಬ್ಬರ ಸಾವು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ನಡೆದಿದೆ. ಹೆದ್ದಾರಿ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.

Loading...