ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉತ್ತರ ಕನ್ನಡ

ಕಾರವಾರದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, ಮೂವರಿಗೆ ಗಂಭೀರ ಗಾಯ

ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, 3 ಮಂದಿಗೆ ಗಾಯ

Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಭೀಕರ ಅಪಘಾತ ನಡೆದಿದೆ. ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bhatkal Hindu Sangama: ಹಿಂದೂಗಳ ಒಗ್ಗಟ್ಟನ್ನು ಒಡೆಯಲು ಅನ್ಯ ಧರ್ಮದವರ ಯತ್ನ: ಅನಂತ ಕುಮಾರ ಹೆಗಡೆ

ಹಿಂದೂಗಳ ಒಗ್ಗಟ್ಟನ್ನು ಒಡೆಯಲು ಅನ್ಯ ಧರ್ಮದವರು ಪ್ರಯತ್ನಿಸುತ್ತಿದ್ದಾರೆ

ಜಗತ್ತು ನಮ್ಮನ್ನು ಮುಗಿಸುವ ಹುನ್ನಾರ ನಡೆಸುತ್ತಿದ್ದರೂ ಇಲ್ಲಿನ ಹಿಂದುತ್ವದ ಶಕ್ತಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಸ್ವಾತಂತ್ರ್ಯಾ ನಂತರದ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿ ಮತ್ತು ವಿಜ್ಞಾನದ ಸಾಧನೆಗಳನ್ನು ಮರೆಮಾಚುವ ಕೆಲಸ ನಡೆದಿದೆ ಎಂದು ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆ ಅಸಮಾಧಾನ ಹೊರಹಾಕಿದ್ದಾರೆ.

Karnataka Budget 2026: ಕಾರವಾರಕ್ಕೆ ಹೈಟೆಕ್ ಸ್ಪರ್ಶ: ಕೊನೆಗೂ ಈಡೇರಿತು 'ಸೂಪರ್ ಸ್ಪೆಷಾಲಿಟಿ' ಕನಸು

ಕೊನೆಗೂ ಈಡೇರಿತು 'ಸೂಪರ್ ಸ್ಪೆಷಾಲಿಟಿ' ಕನಸು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ತುರ್ತು ಚಿಕಿತ್ಸಾ ಸೌಲಭ್ಯವಿಲ್ಲದ ಕಾರಣ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳು ಮಣಿಪಾಲ, ಮಂಗಳೂರು ಅಥವಾ ಹುಬ್ಬಳ್ಳಿಯಂತಹ ನಗರಗಳಿಗೆ 150-200 ಕಿ.ಮೀ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಹಾದಿ ಯಲ್ಲೇ ಅನೇಕ ಜೀವಗಳು ಬಲಿಯಾಗಿದ್ದವು.

Murder Case: ರುಂಡವಿಲ್ಲದ ಮಹಿಳೆಯ ಶವದ ರಹಸ್ಯ ಬಯಲು: ಬಂಗಾರದ ಆಸೆಗಾಗಿ ಕೊಂದ ಪಾಪಿ!

ರುಂಡವಿಲ್ಲದ ಮಹಿಳೆಯ ಶವದ ರಹಸ್ಯ ಬಯಲು: ಬಂಗಾರದ ಆಸೆಗಾಗಿ ಕೊಂದ ಪಾಪಿ!

ಮುಂಡಗೋಡು ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಅರಣ್ಯದಲ್ಲಿ ಕಂಡುಬಂದ ರುಂಡ ಇಲ್ಲದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೊಲೆಯಾದವರು ಗೂಡಂಗಡಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ 75 ವರ್ಷದ ವೃದ್ಧೆ ಶಿವಕ್ಕ ಪಾಟೀಲ್‌.

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌; ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ, ʼನೋ ಸ್ಟಾಕ್‌ʼ!

ಬೆಲೆ ಏರಿಕೆ ಭೀತಿ; ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

Iran-Israel war: ಇರಾನ್‌-ಇಸ್ರೇಲ್‌ ಯುದ್ಧದಿಂದ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಹೆಚ್ಚುವರಿ ಪೆಟ್ರೋಲ್, ಡೀಸೆಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದರಿಂದ ಭಟ್ಕಳಲ್ಲಿ ಪೆಟ್ರೋಲ್‌ ಬಂಕ್‌ಗಳ ಮುಂದೆ ವಾಹನ ಸವಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ.

Nuclear power plant: ಕೈಗಾ 5&6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5&6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕಾರವಾರ ತಾಲೂಕಿನ ಕೈಗಾದಲ್ಲಿ 2000 ರಲ್ಲಿ ಕೈಗಾ ಅಣು ವಿದ್ಯುತ್ ಉತ್ಪಾದನೆ ಕೇಂದ್ರ ಪ್ರಾರಂಭಗೊಂಡಿತ್ತು.ಪ್ರಸ್ತುತ 220 ಮೆಗಾವ್ಯಾಟ್ ಸಾಮರ್ಥ್ಯದ 4 ಅಣು ಘಟಕಗಳು ವಿದ್ಯುತ್ ಉತ್ಪಾದನೆ ನಡೆಸುತ್ತಿದೆ. ಈ ನಾಲ್ಕು ಘಟಕದಿಂದ 2,280 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ನಡೆಸುತ್ತಿದೆ.ವಿದ್ಯುತ್ ಉತ್ಪಾದನೆ ಬೇಡಿಕೆ ಹಿನ್ನಲೆಯಲ್ಲಿ ತಲಾ 700 ಮ್ಯಾಗಾ ವ್ಯಾಟ್ ನ ಗುರಿಯೊಂದಿಗೆ 2025 ರಲ್ಲಿ 5 ಮತ್ತು 6 ನೇ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿತ್ತು

Sirsi News: 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

​ಕಂಪನಿಯು ಈ ಬಾರಿ ಅತ್ಯಂತ ಜನಪ್ರಿಯ ಹಾಗೂ ವಿಭಿನ್ನ ಶೀರ್ಷಿಕೆಯ 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಎಂಬ ಸಾಮಾಜಿಕ ನಾಟಕವನ್ನು ವೇದಿಕೆಗೆ ತಂದಿದೆ. ಹಾಸ್ಯ, ಭಾವನಾತ್ಮಕ ಸನ್ನಿವೇಶಗಳು ಮತ್ತು ಅದ್ಭುತ ಸಂಭಾಷಣೆಗಳನ್ನು ಒಳಗೊಂಡ ಈ ನಾಟಕವು ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ.

ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್;  ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ 8 ಅಂತಾರಾಜ್ಯ ದರೋಡೆಕೋರರ ಸೆರೆ

ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್; 8 ಅಂತಾರಾಜ್ಯ ದರೋಡೆಕೋರರ ಸೆರೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ 8 ಮಂದಿ ಅಂತರ್‌ರಾಜ್ಯ ದರೋಡೆಕೋರರ ತಂಡವನ್ನು ಯಲ್ಲಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಖತರ್ನಾಕ್ ಗ್ಯಾಂಗ್‌ನ ಹಿನ್ನೆಲೆ ಮತ್ತು ಕೃತ್ಯದ ಶೈಲಿ: ಮಹಾರಾಷ್ಟ್ರದ ಕೈಕಡಿ ಸಮುದಾಯಕ್ಕೆ ಸೇರಿದ ಈ ಗ್ಯಾಂಗ್, ಕಳೆದ 3-4 ವರ್ಷಗಳಿಂದ ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳು, ಪ್ರವಾಸಿ ತಾಣಗಳು ಮತ್ತು ಜಾತ್ರೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿತ್ತು.

ಶಿರಸಿಯಲ್ಲಿ ಅದ್ಧೂರಿಯಾಗಿ ನೆರವೇರಿದ  ಶ್ರೀ ಮಾರಿಕಾಂಬಾ ದೇವಿ ರಥೋತ್ಸವ

ಶಿರಸಿಯಲ್ಲಿ ಅದ್ಧೂರಿಯಾಗಿ ನಡೆದ ಶ್ರೀ ಮಾರಿಕಾಂಬಾ ದೇವಿ ರಥೋತ್ಸವ

Sirsi News: ಶಿರಸಿಯ ಅಧಿದೇವತೆ ಶ್ರೀ ಮಾರಿಕಾಂಬಾ ದೇವಿಯ ದ್ವೈವಾರ್ಷಿಕ ಮಾರಿಹಬ್ಬ ಬುಧವಾರ ಅತ್ಯಂತ ಸಡಗರ-ಸಂಭ್ರಮದಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರ ಹರ್ಷೋದ್ಗಾರಗಳ ನಡುವೆ ಅದ್ಧೂರಿ ರಥೋತ್ಸವ ಜರುಗಿತು. ಇಂದಿನಿಂದ ಆರಂಭಗೊಂಡು ಮುಂದಿನ ಒಂಬತ್ತು ದಿನಗಳ ಕಾಲ ದೇವಿಯು ಗದ್ದುಗೆಯ ಮೇಲೆ ವಿರಾಜಮಾನಳಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

Sirsi Marikamba Jatre 2026: ಶಿರಸಿ ಮಾರಿಕಾಂಬಾ ಜಾತ್ರೆ ಹಿನ್ನೆಲೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು; ಇಲ್ಲಿದೆ ವೇಳಾಪಟ್ಟಿ

ಶಿರಸಿ ಜಾತ್ರೆ ಹಿನ್ನೆಲೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು

ಯಶವಂತಪುರ ಮತ್ತು ತಾಳಗುಪ್ಪ ನಡುವೆ ಸಂಚರಿಸುವ ಈ ವಿಶೇಷ ರೈಲು (06587) ಫೆ.27ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ. ಅದೇ ರೀತಿ ರೈಲು (06588) ಫೆ.28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

Sirsi News: ಶಿರಸಿ ಮಾರಿಕಾಂಬಾ ಜಾತ್ರೆಗೆ ಸಕಲ ಸಿದ್ಧತೆ: ನಗರಸಭೆ ಮಾಹಿತಿ

ಶಿರಸಿ ಮಾರಿಕಾಂಬಾ ಜಾತ್ರೆಗೆ ಸಕಲ ಸಿದ್ಧತೆ: ನಗರಸಭೆ ಮಾಹಿತಿ

ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಹತ್ತಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ನಗರದಾದ್ಯಂತ ಬೆಳಕಿನ ವ್ಯವಸ್ಥೆ ಹಾಗೂ ಸಿಸಿ ಕ್ಯಾಮರಾ ಕಣ್ಗಾವಲಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ​​

​ಶಿರಸಿ: ಮಾರಿಕಾಂಬಾ ಜಾತ್ರಾ ಮಹೋತ್ಸವ: ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘ'ದಿಂದ ನಾಟಕ ಪ್ರದರ್ಶನ

ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘ'ದಿಂದ ನಾಟಕ ಪ್ರದರ್ಶನ

ಕಳೆದ ಬಾರಿ 'ಗಂಡನಿಗೆ ತಕ್ಕ ಹೆಂಡತಿ' ನಾಟಕದ ಮೂಲಕ ಜನಮನ ಗೆದ್ದಿದ್ದ ಈ ಸಂಸ್ಥೆಯು, ಈ ವರ್ಷ ವಿಕಾಸ ಆಶ್ರಮದ ಮೈದಾನದಲ್ಲಿ ನಿರ್ಮಿಸಲಾದ ಸುಸಜ್ಜಿತ ರಂಗಮಂದಿರದಲ್ಲಿ ತನ್ನ ಪ್ರದರ್ಶನಗಳನ್ನು ನೀಡಲಿದೆ ಎಂದು ನಾಟಕ ಸಂಘದ ಮಾಲೀಕ ಪಾಪು ಕಲ್ಲೂರ್ ಹಾಗೂ ವ್ಯವಸ್ಥಾಪಕ ಶರತ್ ತಿಳಿಸಿದರು.

Kamalakar Bhat Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಮತ್ತೊಂದು ಕೇಸ್‌!

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಕಮಲಾಕರ ಭಟ್ ವಿರುದ್ಧ ಮತ್ತೊಂದು ಕೇಸ್‌!

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ ಭಟ್, ಸುಚಿತ್ರಾ ಸೇರಿ ಐವರು ಜೈಲು ಸೇರಿದ್ದರು. ಈ ನಡುವೆ ಜ್ಯೋತಿಷಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

Body found: ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ರುಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸುತ್ತಮುತ್ತಲಿನ ಪೊಲೀಸ್‌ ಠಾಣೆಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಈ ಅರಣ್ಯ ಪ್ರದೇಶಕ್ಕೆ ಬರುವ ದಾರಿಗಳಲ್ಲಿರುವ ಮನೆಗಳ ಸಿಸಿಟಿವಿ ಕ್ಯಾಮೆರಾ ಫೂಟೇಜ್‌ಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.

Raju Adakalli Book Release: 21 ರಂದು ಅಡಕಳ್ಳಿಯವರ ಕೃತಿ ಬಿಡುಗಡೆ

21 ರಂದು ಅಡಕಳ್ಳಿಯವರ ಕೃತಿ ಬಿಡುಗಡೆ

ಮನುವಿಕಾಸ ಸಂಸ್ಥೆಯ ಮುಖ್ಯಸ್ಥ ಗಣಪತಿ ಭಟ್ ಕರ್ಜಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಸತೀಶ ಯಲ್ಲಾಪುರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸ ಲಾಗುವುದು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನುವಿಕಾಸ ಸಂಸ್ಥೆಯು ಕೋರಿದೆ

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಸ ರಿ ಗ ಮ ಪ ಲಿಟಲ್ ಚಾಂಪ್ಸ್ ಆಡಿಷನ್ ಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ನಡೆಯಲಿದೆ. ಚೆನ್ನಾಗಿ ಹಾಡುವ ಮಕ್ಕಳು 3 ರಿಂದ 15 ವರ್ಷದ ಒಳಗಿದ್ದರೆ 3 ವಿಭಿನವಾದ ಹಾಡುಗಳನ್ನು ಕಲಿತು ಆಡಿಷನ್ ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್ ನಲ್ಲಿ ಭಾಗವ ಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ ಜೆರಾಕ್ಸ್ ಕಡ್ಡಾಯ.

ಭಾಜಪ ಹೇಳಿಕೆಗೆ ತೀವ್ರ ಆಕ್ಷೇಪ: ದೀಪಕ ದೊಡ್ಡೋರ್

ಭಾಜಪ ಹೇಳಿಕೆಗೆ ತೀವ್ರ ಆಕ್ಷೇಪ: ದೀಪಕ ದೊಡ್ಡೋರ್

ಕಳೆದ ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಆರ್.ವಿ.ದೇಶಪಾಂಡೆ ಅವರು, ನಿರಂತರವಾಗಿ ಆಯ್ಕೆಯಾಗುತ್ತಿರುವುದು ಜನ ಅವರಲ್ಲಿ ಇಟ್ಟಿರುವ ವಿಶ್ವಾಸವನ್ನು ಸೂಚಿಸು ತ್ತದೆ. ರಾಮಕೃಷ್ಣ ಹೆಗಡೆಯವರಂತ ಮುತ್ಸದ್ದಿ ನೇತಾರರು ಹೆಮ್ಮೆ ಪಡುವಂತೆ ಜಿಲ್ಲೆ ಹಾಗೂ ರಾಜ್ಯದ ಸೇವೆಯನ್ನು ಮಾಡುತ್ತಾ ಬಂದಿರುವ ಘನತೆ ದೇಶಪಾಂಡೆ ಅವರದು.

MLA Shivaram Hebbar: ಆಡಳಿತ ಮಂಡಳಿಗೆ ಅವಿರೋಧ ಆಯ್ಕೆಯು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ: ಶಿವರಾಮ ಹೆಬ್ಬಾರ್

ಅವಿರೋಧ ಆಯ್ಕೆಯು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ

ಪಕ್ಷಭೇದ ಮರೆತು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಹೊಸ ವೇಗ ನೀಡುವ ಮೂಲಕ ಬ್ಯಾಂಕನ್ನು ಪ್ರಗತಿಯತ್ತ ಮುನ್ನಡೆಸುವುದಾಗಿ ಭರವಸೆ ನೀಡಿದರು. ಮಾರ್ಚ್ ಅಂತ್ಯ ಸಮೀಪಿಸುತ್ತಿದ್ದು, ಕೈಲಿಯಲ್ಲಿ ಕೇವಲ 45 ದಿನಗಳ ಕಾಲಾವಕಾಶವಿದೆ. ಈ ಅಲ್ಪ ಅವಧಿಯಲ್ಲಿ ಬ್ಯಾಂಕಿನ ಅಭಿವೃದ್ಧಿಯ ಮುನ್ನೋಟವನ್ನು ಜನರ ಮುಂದಿಡುವುದು ಮತ್ತು ಠೇವಣಿದಾರರಲ್ಲಿ ವಿಶ್ವಾಸ ಮೂಡಿಸಿ ಸಾಲಗಾರರಿಗೆ ನ್ಯಾಯ ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ

ಶಿವರಾತ್ರಿಯಂದು ಗೋಕರ್ಣ ಆತ್ಮಲಿಂಗ ದರ್ಶನ ಪಡೆದ ಕೆಲವೇ ಹೊತ್ತಲ್ಲಿ ಭಕ್ತ ನಿಧನ

ಗೋಕರ್ಣ ಆತ್ಮಲಿಂಗ ದರ್ಶನ ಪಡೆದ ಕೆಲವೇ ಹೊತ್ತಲ್ಲಿ ಭಕ್ತ ನಿಧನ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ ಪಡೆದು ಕೆಲ‌ ನಿಮಿಷಗಳಲ್ಲಿ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಗೋವಾದ ರತ್ನಾಕರ (76) ಎಂದು ಗುರುತಿಸಲಾಗಿದೆ. ಆತ್ಮಲಿಂಗದ ದರ್ಶನ ಪಡೆದು ದೇವಸ್ಥಾನದಿಂದ ಹೊರಕ್ಕೆ ಹೋದ ಬಳಿಕ ಅವರಿಗೆ ಹೃದಯಾಘಾತವಾಯಿತು.

ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ನ್ಯಾಯಾಂಗ ಬಂಧನ ವಿಸ್ತರಣೆ; ಫೆ.21ರವರೆಗೆ ಜೈಲೇ ಗತಿ

ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ನ್ಯಾಯಾಂಗ ಬಂಧನ ವಿಸ್ತರಣೆ

Kamalakar Bhat Case: ಸಿದ್ದಾಪುರದ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಸೇರಿ ಇತರ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನ ವಿಸ್ತರಿಸಿದೆ.

ಸುಚಿತ್ರಾ ತಾಳಕ್ಕೆ ತಕ್ಕಂತೆ ಕುಣಿದ ಜ್ಯೋತಿಷಿ ಕಮಲಾಕರ್‌ ಭಟ್‌; ಯಕ್ಷಗಾನ ನೃತ್ಯದ ವಿಡಿಯೊ ವೈರಲ್‌

ಸುಚಿತ್ರಾ ಮುಂದೆ ಜ್ಯೋತಿಷಿ ಕಮಲಾಕರ್‌ ಭಟ್‌ ಡ್ಯಾನ್ಸ್‌; ವಿಡಿಯೊ ವೈರಲ್‌

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗುತ್ತಿದ್ದಂತೆಯೇ ಸುಚಿತ್ರಾ, ಕಮಲಾಕರ್‌ ಭಟ್‌ ಆಡಿಯೊ, ವಿಡಿಯೊಗಳು ಒಂದೊಂದೆ ಹೊರಬರುತ್ತಿವೆ. ಅದರಲ್ಲೂ ಸುಚಿತ್ರಾ ಮುಂದೆ ಕಮಲಾಕರ್ ಭಟ್ ನೃತ್ಯ ಮಾಡಿರುವುದು ಇದೀಗ ವೈರಲ್‌ ಆಗಿದೆ. ತನ್ನ ಮೈಮಾಟದಿಂದ ಜ್ಯೋತಿಷಿಯನ್ನು ಬುಟ್ಟಿಗೆ ಹಾಕಿಕೊಂಡಿದ್ದ ಸುಚಿತ್ರಾ, ತನ್ನ ತಾಳಕ್ಕೆ ತಕ್ಕಂತೆ ಕುಣಿಸಿದ್ದಾಳೆ.

Computer Cleanup Day: ಇಂದು ಕಂಪ್ಯೂಟರ್‌ ಸ್ವಚ್ಛತಾ ದಿನ

ಇಂದು ಕಂಪ್ಯೂಟರ್‌ ಸ್ವಚ್ಛತಾ ದಿನ

ದಿನವಿಡೀ ನಮ್ಮ ಕೆಲಸದ ಅವಿಭಾಜ್ಯ ಅಂಗವಾಗಿರುವ ಕಂಪ್ಯೂಟರ್‌ ಅಥವಾ ಲ್ಯಾಪ್‌ ಟಾಪ್‌ಗಳ ಸ್ವಚ್ಛತೆಯ ಬಗ್ಗೆ ಎಷ್ಟು ಗಮನ ಹರಿಸುತ್ತೇವೆ? ಈ ಪ್ರಶ್ನೆಯನ್ನು ನೆನಪಿಸಲು ಮತ್ತು ಡಿಜಿಟಲ್ ಶಿಸ್ತನ್ನು ಮೈಗೂಡಿಸಿಕೊಳ್ಳಲು ಪ್ರತಿ ವರ್ಷ ಫೆಬ್ರವರಿ ತಿಂಗಳ 2ನೇ ಸೋಮವಾರದಂದು (ಫೆ.9)‘ರಾಷ್ಟ್ರೀಯ ಕಂಪ್ಯೂ ಟರ್ ಸ್ವಚ್ಛತಾ ದಿನ’ವನ್ನು ಆಚರಿಸಲಾಗುತ್ತದೆ.

ಜ್ಯೋತಿಷಿ ಕಮಲಾಕರ್ ಭಟ್‌ಗಿಂತ ಮೊದಲು ಜಮೀನ್ದಾರನ ಜತೆ ಸುಚಿತ್ರಾ ಲವ್ವಿ ಡವ್ವಿ; ಫೋಟೊಗಳು ವೈರಲ್‌!

ಜ್ಯೋತಿಷಿಗಿಂತ ಮೊದಲು ಜಮೀನ್ದಾರನ ಜತೆ ಸುಚಿತ್ರಾ ಲವ್ವಿ ಡವ್ವಿ!

Siddapur Murder Case: ಕಲಬುರಗಿಯ ಜಮೀನ್ದಾರನ ಜತೆ ಮೂರು ವರ್ಷ ಲಿವ್-ಇನ್‌ನಲ್ಲಿದ್ದ ಸುಚಿತ್ರಾ, ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು. ಪತ್ನಿಯ ಲಿವ್‌-ಇನ್‌ ರಿಲೇಷನ್‌ಗೆ ಬೇಸತ್ತು ಗಂಡ ದೂರವಾಗಿದ್ದ. ಇದೀಗ ಪ್ರಿಯಕರನ ಜತೆಗಿನ ಖಾಸಗಿ ಕ್ಷಣದ ಫೋಟೊಗಳು ವೈರಲ್‌ ಆಗುತ್ತಿವೆ.

ಅವನಿಗೆ ಹೆಂಡ್ತಿಯೂ ನಾನೇ, ಪ್ರೇಯಸಿಯೂ ನಾನೇ; ಸುಚಿತ್ರಾ-ಜ್ಯೋತಿಷಿ ಕಮಲಾಕರ್‌‌ ಭಟ್‌‌ ಲವ್ವಿ ಡವ್ವಿ ಆಡಿಯೊ ವೈರಲ್‌!

ಜ್ಯೋತಿಷಿ ಕಮಲಾಕರ್‌‌ ಭಟ್‌‌-ಸುಚಿತ್ರಾ ಲವ್ವಿ-ಡವ್ವಿ ಆಡಿಯೊ ವೈರಲ್‌!

ಜ್ಯೋತಿಷಿ ಕಮಲಾಕರ ಭಟ್‌ ಮತ್ತು ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಸದ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ಆಡಿಯೊದಲ್ಲಿ ಅಸಭ್ಯಕರವಾಗಿ ಇಬ್ಬರ ಸಂಭಾಷಣೆ ಇದೆ. ಇಬ್ಬರ ನಡುವಿನ ಸಂಬಂಧದ ಬಗ್ಗೆ ಮಹಿಳೆಯೊಬ್ಬರು ಪ್ರಶ್ನಿಸಿದಾಗ ಆರೋಪಿಗಳು ಮಾತನಾಡಿರುವ ಆಡಿಯೊ ಇದಾಗಿದೆ.

Loading...