ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಕನ್ನಡ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ: ರಾಘವೇಶ್ವರ ಭಾರತೀ ಶ್ರೀ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ: ರಾಘವೇಶ್ವರ ಶ್ರೀ

Shri Raghaveshwara Bharathi Swamiji: ಮನುಷ್ಯ ಜಾತಿಯ ಎಲ್ಲರಿಗೂ ಹೊಂದುವಂತಹ ಆಹಾರ ಎಂಬುದಾಗಿ ನೀರು - ತುಪ್ಪ - ಹಾಲು - ಅಕ್ಕಿಗಳನ್ನು ಆಯುರ್ವೇದ ಗುರುತಿಸಿದ್ದು, ಇವುಗಳನ್ನು 'ಜಾತಿ ಸಾತ್ಮ್ಯ' ಎಂಬುದಾಗಿ ಆಯುರ್ವೇದ ಗುರುತಿಸಿದೆ. ಇದು ಎಲ್ಲಾ ಪ್ರಕೃತಿಯ ಜೀವಿಗಳಿಗೂ ಒಗ್ಗುವ ಆಹಾರಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Lakshman Savadi: ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡಕ್ಕೆ ಮೂರನೇ ಸ್ಥಾನ: ಸಚಿವ ಲಕ್ಷ್ಮಣ ಸವದಿ

ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡಕ್ಕೆ ಮೂರನೇ ಸ್ಥಾನ: ಸಚಿವ ಸವದಿ

ಅಂಕೋಲಾದ ನಾಡವರ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತಿ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ತಾಯಿಯಂತೆ ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ರಾಘವೇಶ್ವರ ಭಾರತೀ ಶ್ರೀ

ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಸಿಕ್ಕಿದ್ದನ್ನು ಸಿಕ್ಕಂತೆ ತಿನ್ನುವುದು ಮನುಷ್ಯನ ಸ್ವಭಾವವಲ್ಲ. ಸೂಕ್ತವಾದ ಬೇರೆ ಬೇರೆ ಪದಾರ್ಥಗಳನ್ನು ಸೇರಿಸಿ, ಪದಾರ್ಥಗಳಲ್ಲಿನ ದೋಷಗಳನ್ನು ತೆಗೆದು, ಹಿತವಾದ ಪಾಕವನ್ನು ಮಾಡಿ ಸೇವಿಸುವುದು ಮನುಷ್ಯನ ಪ್ರವೃತ್ತಿಯಾಗಿದೆ. ಪ್ರಕೃತಿಯನ್ನು ಮಾರ್ಪಡಿಸಿಕೊಳ್ಳುವ ವಿಶೇಷ ಅವಕಾಶವನ್ನು ನಮಗೆ ದೇವರು ಕೊಟ್ಟಿದ್ದಾನೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಕತ್ತಲಲ್ಲಿ ಬೆಳಕು ಹುಡುಕುವಂತೆ ಸಾತ್ವಿಕ ಆಹಾರವನ್ನು ಅರಸಿ: ರಾಘವೇಶ್ವರ ಭಾರತೀ ಶ್ರೀ ಕರೆ

ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ದೇವರ ಸೃಷ್ಟಿಯಲ್ಲಿ ಪ್ರಾಣಿಗಳು ರಾಜಸ ಸೃಷ್ಟಿಯಾದರೆ, ಗಿಡ, ಮರ, ಜಡವಸ್ತುಗಳು ತಾಮಸ ಸೃಷ್ಟಿ ಹಾಗೂ ತಲೆಯನ್ನು ಎತ್ತರದ ಸ್ಥಾನದಲ್ಲಿ ಹೊಂದಿರುವ, ಜ್ಞಾನವೇ ಪ್ರಧಾನವಾದ ಮನುಷ್ಯ ದೇವರ ಸಾತ್ವಿಕ ಸೃಷ್ಟಿ. ಸಾತ್ವಿಕ ಸೃಷ್ಟಿಯಾದ ಮನುಷ್ಯನಿಗೆ ರಾಜಸ ಸೃಷ್ಟಿ ಹಾಗೂ ತಾಮಸ ಸೃಷ್ಟಿಗಳು ಆಹಾರವಾಗಿವೆ. ಅಂದರೆ ಸಸ್ಯಜನ್ಯ ಹಾಗೂ ಪ್ರಾಣಿಜನ್ಯಗಳು ಮನುಷ್ಯನ ಆಹಾರಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!: ರಾಘವೇಶ್ವರ ಭಾರತೀ ಶ್ರೀ

ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಎಲ್ಲಿ ತಪ್ಪಿದ್ದೇವೋ ಅಲ್ಲೇ ಸರಿಪಡಿಸಿಕೊಳ್ಳಬೇಕು ಎಂಬಂತೆ, ಅಂದಿನ ನಮ್ಮ ಪೂರ್ವಜರ ತಪ್ಪನ್ನು ಇಂದು ನಾವು ಸರಿಪಡಿಸಿಕೊಳ್ಳಬೇಕು. ಅಂದು ನಮ್ಮ ಪೂರ್ವಜರ ಅಧಃಪತನ ಊಟದ ವಿಷಯದಿಂದಲೇ ಆರಂಭವಾಯಿತು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಮೋಕ್ಷ ಸಾಧನೆಗೆ ಶರೀರ, ಶರೀರ ಉಳಿಸಲು ಆಹಾರ ಅಗತ್ಯ: ರಾಘವೇಶ್ವರ ಭಾರತೀ ಶ್ರೀ

ಮೋಕ್ಷ ಸಾಧನೆಗೆ ಶರೀರ, ಶರೀರ ಉಳಿಸಲು ಆಹಾರ ಅಗತ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರವಚನ ಅನುಗ್ರಹಿಸಿದ್ದಾರೆ.

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ: ರಾಘವೇಶ್ವರ ಭಾರತೀ ಶ್ರೀ

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಸ್ಥೂಲ ದೃಷ್ಟಿಯಲ್ಲಿ ಆಹಾರವು ಕೇವಲ ಹೊಟ್ಟೆ ತುಂಬಿಸುವ ಊಟವಾದರೆ, ಸೂಕ್ಷ್ಮ ದೃಷ್ಟಿಗೆ ಆಹಾರ ಎಂಬುದು ಪರಮಾತ್ಮನ ಸ್ವರೂಪವಾಗಿದ್ದು, ಅನ್ನಪೂರ್ಣೇಶ್ವರಿಯೇ ಆಗಿದ್ದಾಳೆ ಎಂದು ಅನ್ನದ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ವಿವರಿಸಿದ್ದಾರೆ.

Haliyal Police Station: ಲಂಚದ ಆಡಿಯೊ ವೈರಲ್‌; ಹಳಿಯಾಳ ಠಾಣೆಯ ಮೂವರು ಪಿಎಸ್‌ಐಗಳು ಅಮಾನತು

ಲಂಚದ ಆಡಿಯೊ ವೈರಲ್‌; ಮೂವರು ಪಿಎಸ್‌ಐಗಳು ಅಮಾನತು

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐಗಳ ಪೋಸ್ಟಿಂಗ್ ಹಾಗೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿ ಆಡಿಯೊ ವೈರಲ್‌ ಆಗಿತ್ತು. ಅಲ್ಲದೇ ಎಡಿಎಸ್ಪಿ ನೇತೃತ್ವದ ತನಿಖಾ ತಂಡವು ನಡೆಸಿದ ತನಿಖೆಯಲ್ಲಿ ಪಿಎಸ್‌ಐಗಳ ಅಕ್ರಮ ಮತ್ತು ಕರ್ತವ್ಯಲೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಮೂವರು ಪಿಎಸ್‌ಐಗಳನ್ನು ಸಸ್ಪೆಂಡ್‌ ಮಾಡಲಾಗಿದೆ.

Raghaveshwara Sri: ಆಹಾರವೇ ಔಷಧವಾಗದಿದ್ದರೆ ಔಷಧವೇ ಆಹಾರವಾಗುತ್ತದೆ: ರಾಘವೇಶ್ವರ ಶ್ರೀ

ನಮ್ಮನ್ನು ನಾವು ಅರಿಯಲು ಸರಿಯಾದ ಆಹಾರವೇ ದಾರಿ: ರಾಘವೇಶ್ವರ ಶ್ರೀ

ಚರಕ ಮಹರ್ಷಿಗಳು ಯಾರು ಹಿತಭೋಜನವನ್ನು ಮಾಡುತ್ತಾನೋ ಅವನು 36 ಸಾವಿರ ರಾತ್ರಿಗಳ ಕಾಲ ರೋಗ ರಹಿತವಾಗಿ ಬದುಕುತ್ತಾನೆ ಎಂದಿದ್ದು, ಸರಿಯಾಗಿ ವಿಮರ್ಶೆ ಮಾಡಿ ಸಮರ್ಪಕವಾದ ಆಹಾರ ವನ್ನು ಮಾತ್ರ ಸ್ವೀಕರಿಸಬೇಕು. ಏಕೆಂದರೆ ದೇಹವೂ ಆಹಾರದಿಂದ ಹಾಗೂ ರೋಗವೂ ಆಹಾರದಿಂದ ಎಂದು ವಿವರಿಸಿದರು

​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ

​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ

Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಮಾತನಾಡಿದ್ದು, ತಳಿ ಅಭಿವೃದ್ಧಿಯ ಹೆಸರಿನಲ್ಲಿ ಪಾರಂಪರಿಕ ಭತ್ತದ ತಳಿಗಳು ನಾಶವಾಗುತ್ತಿರುವುದಕ್ಕೆ ಬೇಸರ ಹೊರಹಾಕಿದ್ದಾರೆ.

ಅನ್ನವೇ ದೇವರು, ಓಜಸ್ಸೇ ಜೀವಾಳ: ರಾಘವೇಶ್ವರ ಭಾರತೀ ಶ್ರೀ

ಅನ್ನವೇ ದೇವರು, ಓಜಸ್ಸೇ ಜೀವಾಳ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ತಾಯಿಯ ಗರ್ಭದಲ್ಲಿ ಜೀವಿಯ ಬೆಳವಣಿಗೆ ಆರಂಭವಾಗುವಾಗ ಮೊಟ್ಟ ಮೊದಲು ಓಜಸ್ಸಿನಿಂದ ಆ ಬೆಳವಣಿಗೆ ಆರಂಭವಾಗುತ್ತದೆ ಎಂದು ಚರಕ ಮಹರ್ಷಿಗಳು ದಾಖಲಿಸಿದ್ದು, ಓಜಸ್ಸು ಜೀವಿಯ ದೇಹದಲ್ಲಿರುವ ಅಮೃತದ್ರವವಾಗಿದೆ. ನಮ್ಮ ಹೃದಯ ಭಾಗದಲ್ಲಿರುವ ಈ ಓಜಸ್ಸು ಸುಮಾರು ಅರ್ಧ ಬೊಗಸೆ ಪ್ರಮಾಣದಲ್ಲಿ ಇರುತ್ತದೆ. ಜೀವ ಶಕ್ತಿಗೆ ಓಜಸ್ಸೇ ಮೂಲವಾಗಿದ್ದು, ಓಜಸ್ಸಿನ ನಾಶದಿಂದ ದೇಹ ನಾಶವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ರಾಘವೇಶ್ವರ ಶ್ರೀಗಳು ಪ್ರವಚನ ನೀಡಿದ್ದಾರೆ. ಆಧುನಿಕತೆಯ ಭರಾಟೆಯಲ್ಲಿ ನಾವು ಯಾವುದೇ ವಿಷಯದಲ್ಲಿ ಆಳಕ್ಕೆ ಇಳಿಯುತ್ತಿಲ್ಲ. ಹಲವಾರು ವಿಷಯಗಳನ್ನು ಕೇವಲ ಸ್ಪರ್ಶಿಸುತ್ತಿದ್ದೇವೆ. ಆದರೆ ಯಾವುದರಲ್ಲಿಯೂ ತಳಸ್ಪರ್ಶಿಯಾಗುತ್ತಿಲ್ಲ. ಯಾವುದಾದರೂ ಒಂದು ವಿಷಯದಲ್ಲಿ ಸ್ಥಿರವಾದ ಗಮನವನ್ನು ನೆಲೆನಿಲ್ಲಿಸಿದಾಗ ಸಾಕ್ಷಾತ್ಕಾರ ಸಾಧ್ಯ ಎಂದು ಶ್ರೀಗಳು ತಿಳಿಸಿದ್ದಾರೆ.

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ: ರಾಘವೇಶ್ವರ ಶ್ರೀ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉಸಿರಾಟದ ಅಧ್ಯಯನಕ್ಕೆ ಸಂಬಂಧಿಸಿದ್ದನ್ನು 'ಸ್ವರಶಾಸ್ತ್ರ' ಎನ್ನಲಾಗುತ್ತದೆ. ಉಸಿರಾಟವನ್ನು ಆಧರಿಸಿಯೇ ಎಲ್ಲವನ್ನೂ ಅರಿತುಕೊಳ್ಳಬಹುದಾಗಿದ್ದು, ಗ್ರಹಗತಿಗಳನ್ನು ನೋಡದೆಯೇ, ಕೇವಲ ಉಸಿರನ್ನು ಆಧರಿಸಿ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬಹುದು. ಗ್ರಹಗಳು ಫಲಾಫಲಗಳನ್ನು ಕೊಡುವಾಗ ಅದಕ್ಕೆ ತಕ್ಕಂತಹ ಶ್ವಾಸವನ್ನು ಉಂಟುಮಾಡುತ್ತವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

Ankola News: ಅಂಕೋಲಾ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್‌ ಧ್ವಜ; ವಶಕ್ಕೆ ಪಡೆದ ಪೊಲೀಸರು

ಅಂಕೋಲಾದಲ್ಲಿ ಹಾರಾಡಿದ ಪ್ಯಾಲೆಸ್ತೀನ್‌ ಧ್ವಜ; ವಶಕ್ಕೆ ಪಡೆದ ಪೊಲೀಸರು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಘಟನೆ ನಡದಿದೆ. ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪ್ಯಾಲೆಸ್ತೀನ್‌ ಧ್ವಜವನ್ನು ಮುಸ್ಲಿಂ ಯುವಕನೊಬ್ಬ ಪ್ರದರ್ಶನ ಮಾಡಿದ್ದಾನೆ. ಇದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.ಪೊಲೀಸರು ಯುವಕನಿಂದ ಪ್ಯಾಲೆಸ್ತೀನ್‌ ಧ್ವಜ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಯೋಗಿಯ ಸಮಾಧಿಸ್ಥಿತಿಯಲ್ಲಿ ಉಸಿರಾಟವಿಲ್ಲದೆಯೂ ಬದುಕಿರಬಹುದು: ರಾಘವೇಶ್ವರ ಭಾರತೀ ಶ್ರೀ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಸರಿಯಾದ ಉಸಿರಾಟವು ಮೂಲಾಧಾರ ಚಕ್ರದವರೆಗೆ ಸಂಚರಿಸಬೇಕು. ಉಸಿರಾಡುವಾಗ ಶ್ವಾಸಕೋಶದವರೆಗೆ ಗಾಳಿರೂಪದಲ್ಲಿ ಸಂಚರಿಸಿದರೆ, ಮುಂದೆ ಮೂಲಾಧಾರ ಚಕ್ರದವರೆಗೆ ಶ್ವಾಸವು ಚೈತನ್ಯದ ರೂಪದಲ್ಲಿ ಸಂಚರಿಸುತ್ತದೆ. ಉಸಿರಾಟದ ಗತಿಯು ಹಂಸದಂತೆ ಧಾವಂತ ಇಲ್ಲದೇ ಸರಾಗವಾಗಿ ಆದಾಗ ಸಮಾಧಾನವನ್ನು ಸಾಧಿಸಿಕೊಳ್ಳಲು ಸಾಧ್ಯ. ಸಮಾಧಾನದಿಂದ ಶರೀರ, ಮನಸ್ಸು, ಜೀವನಕ್ಕೆ ಅಪಾರವಾದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದ ವಿಷವೂ ಏನೂ ಮಾಡದು: ರಾಘವೇಶ್ವರ ಭಾರತೀ ಶ್ರೀ

ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದವಿಷವೂ ಏನೂ ಮಾಡದು

Sri Raghaveshwara Bharathi Swamiji: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ರಾಘವೇಶ್ವರ ಶ್ರೀಗಳು ಪ್ರವಚನ ನೀಡಿದ್ದಾರೆ. ಯೋಗ ಸೂಕ್ಷ್ಮವಾದ ಅಮೃತಪಾನವನ್ನು ಸಿದ್ಧಿಸಿಕೊಂಡವನಿಗೆ ತಕ್ಷಕ ಸರ್ಪದ ಮಹಾವಿಷದಿಂದಲೂ ಕೂಡ ಏನೂ ಆಗದು. ಒಮ್ಮೆ ಈ ಅಮೃತವನ್ನು ಆಸ್ವಾದಿಸಲು ಕಲಿತ ಯೋಗಿಯು ಮತ್ತೆ ಮತ್ತೆ ಅದನ್ನು ಬಯಸುತ್ತಾನೆ ಎಂದು ತಿಳಿಸಿದ್ದಾರೆ.

​ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು: ರಾಘವೇಶ್ವರ ಶ್ರೀ

​ಯೋಗಸಾಧನೆಯಿಂದ ಮುಪ್ಪು-ಸಾವುಗಳನ್ನು ಮೀರಬಹುದು

Annabrahma Chaturmasya: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಪ್ರವಚನ ನೀಡಿದ್ದಾರೆ. ಆಹಾರಕ್ಕೂ ಉಪವಾಸಕ್ಕೂ ನಡುವೆ ಅಮೃತಾಹಾರ ಎನ್ನಬಹುದಾದ ಒಂದು ಯೋಗಮಾರ್ಗವಿದ್ದು, ಯೋಗಿಗಳು ಪಾನಮಾಡುವ ಈ ಅಮೃತವು ಅಂಗಡಿಯಲ್ಲಿ ಸಿಗುವಂತದ್ದಲ್ಲ ಎಂದು ತಿಳಿಸಿದ್ದಾರೆ.

ಒಬ್ಬರ ಎಂಜಲನ್ನು ಮತ್ತೊಬ್ಬರು ಏಕೆ ತಿನ್ನಬಾರದು?: ರಾಘವೇಶ್ವರ ಶ್ರೀ ಹೇಳಿದ್ದೇನು?

ಒಬ್ಬರ ಎಂಜಲನ್ನು ಮತ್ತೊಬ್ಬರು ತಿನ್ನಬಾರದು ಯಾಕೆ?

Sri Raghaveshwara Bharathi Swamiji: ಅಡುಗೆ ಮಾಡುವಾಗ ಒರಳು ಗುಂಡು ಹಾಗೂ ಸೌಟನ್ನು ಎಡದಿಂದ ಬಲಕ್ಕೆ ತಿರುಗಿಸಬೇಕು. ಇದು ಆಹಾರವನ್ನು ಸ್ವೀಕರಿಸುವವರ ಮೇಲೆ ಧನಾತ್ಮಕ ಪರಿಣಾಮವನ್ನು ಉಂಟುಮಾಡುತ್ತದೆ. ಅಪ್ರಪಕ್ಷಿಣಾಕಾರವಾಗಿ ಸೌಟನ್ನು ತಿರುಗಿಸಿ ಅಡುಗೆ ಮಾಡುವುದರಿಂದ ರಾಕ್ಷಸರಿಗೆ ಸಲ್ಲಿಕೆಯಾದಂತಾಗುತ್ತದೆ ಎಂದು ಆಪಸ್ತಂಬರ ಗೃಹ್ಯಸೂತ್ರದಲ್ಲಿ ಹೇಳಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ರಾಘವೇಶ್ವರ ಭಾರತೀ ಶ್ರೀ

ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ರಾತ್ರಿಯ ನಿದ್ದೆಯು ಮಧುರವಾಗಬೇಕಾದರೆ ಊಟ ಮಾಡಿ ಸುಮಾರು ಒಂದೂವರೆ ಗಂಟೆಗೆ ನಿದ್ರೆಯನ್ನು ಮಾಡಬೇಕು. ರಾತ್ರಿಯನ್ನು ಕಫ, ಪಿತ್ತ, ವಾತ ಎಂದು ವಿಭಾಗ ಮಾಡಲಾಗಿದ್ದು, ಕಫ ಕಾಲದಲ್ಲಿ ನಿದ್ದೆಗೆ ಹೋದಾಗ ನಿದ್ದೆಯ ಪೂರ್ಣ ಪ್ರಯೋಜನವನ್ನು ಪಡೆಯಲು ಸಾಧ್ಯ. ತಡ ರಾತ್ರಿ ಪಿತ್ತ, ವಾತ ಸಮಯಗಳಲ್ಲಿ ಮಲಗಿದರೆ ನಿದ್ದೆಯ ನಿಜವಾದ ಪ್ರಯೋಜನ ಸಿಗದು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಕಾರವಾರದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸದ್ಗುರು ಶ್ರೀ ಮಧುಸೂದನ ಸಾಯಿ ಭರವಸೆ

ನಿಸ್ವಾರ್ಥ ಸೇವೆಯೇ ನಮ್ಮ ಸಂಸ್ಥೆಯ ಮ್ಯಾಜಿಕ್: ಸದ್ಗುರು ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಎಲ್ಲಿ ನಿಸ್ವಾರ್ಥ ಪ್ರೀತಿ ಇರುತ್ತದೆಯೋ ಅಂಥ ಸಂಬಂಧಗಳು ಮಾತ್ರವೇ ಸುದೀರ್ಘ ಅವಧಿಗೆ ಉಳಿಯುತ್ತವೆ. ನಾವು ಬೇರೆಯವರಿಗೆ ಪ್ರೀತಿ ಕೊಡಲೆಂದೇ ಹುಟ್ಟಿದ್ದೇವೆ. ಉಳಿದದ್ದೆಲ್ಲ ನಂತರದ್ದು ಎಂದು ಭಗವಾನ್ ಸತ್ಯ ಸಾಯಿ ಬಾಬಾ ಹೇಳಿದ್ದರು. ಬಾಬಾ ಅವರ ಈ ಮಾತನ್ನು ನಾವು ಚಾಲ್ತಿಗೆ ತಂದಿದ್ದೇವೆ ಎಂದು ಒನ್ ವರ್ಲ್ಡ್‌ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

ತೇಗು ಬಂದಾಗ ಊಟ ನಿಲ್ಲಿಸದಿದ್ದರೆ ಮುಂದಿದೆ ಅಪಾಯ: ರಾಘವೇಶ್ವರ ಭಾರತೀ ಶ್ರೀ

ಮಹಾಪ್ರಾಣದ ಉಚ್ಚಾರಣೆಯಿಂದ ದೇಹದಲ್ಲಿ ಅಗ್ನಿ ಜಾಗೃತಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀರ್ಣಕ್ರಿಯೆಯನ್ನು ಅರಿತುಕೊಳ್ಳುವುದು ಆಹಾರವನ್ನು ಜೀರ್ಣಮಾಡಿಕೊಂಡಷ್ಟು ಸುಲಭವಲ್ಲ. ದೇಹದಲ್ಲಿರುವ ಎಲ್ಲ ಪ್ರಮುಖ 18 ಅಗ್ನಿಗಳು ಜಠರಾಗ್ನಿಯನ್ನು ಹೊಂದಿಕೊಂಡಿವೆ. ಜಠರಾಗ್ನಿಯ ಮೇಲಾಗುವ ವ್ಯತ್ಯಾಸವು ಬೇರೆಲ್ಲ ಅಗ್ನಿಗಳ ಮೇಲೂ ಪರಿಣಾಮವನ್ನು ಬೀರುತ್ತದೆ. ವಿಧಿವತ್ತಾದ ಹಿತ-ಮಿತ ಹಾಗೂ ಯುಕ್ತವಾದ ಆಹಾರ ಪಾನೀಯಗಳೇ ಇಂಧನವಾಗಿ ಜಠರಾಗ್ನಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಕಾರಣವಾಗುತ್ತದೆ. ದೇಹಕ್ಕೆ ಶಕ್ತಿ ಹಾಗೂ ಆಯುಷ್ಯ ಎರಡೂ ಜಠರಾಗ್ನಿಯಿಂದಲೇ ಸಿಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಸೃಷ್ಟಿಯ ವೈವಿಧ್ಯತೆಯೇ ಅದ್ಭುತ, ಎಲ್ಲೆಡೆ ಸಮಾನತೆ ಹುಡುಕುವುದು ಮೂರ್ಖತನ: ರಾಘವೇಶ್ವರ ಶ್ರೀ

ಹಸಿವು, ಆಹಾರವೇ ಜೀವಿಯ ಸರ್ವಸ್ವ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಎಲ್ಲ ಕಡೆಯಲ್ಲೂ ಸಮಾನತೆಯನ್ನು ಹುಡುಕುವುದು ಮೂರ್ಖತನವಾಗುತ್ತದೆ. ಸೃಷ್ಟಿಯೆಂಬುದು ವೈವಿಧ್ಯತೆಯಾಗಿದ್ದು, ಮುಕ್ತಿಯಲ್ಲಿ ಮಾತ್ರ ಏಕತೆಯನ್ನು ಕಾಣಬಹುದು. ಕೈ ಇರುವಷ್ಟು ಉದ್ದ ಮೂಗಿಲ್ಲ. ಹಾಗಾಗಿ ಎಲ್ಲೆಡೆ ಸಮಾನತೆಯನ್ನು ಹುಡುಕಲಾಗದು. ದೇಹದಲ್ಲೂ ಎಲ್ಲವೂ ಸಮಾನವಾಗಿರಲು ಸಾಧ್ಯವಿಲ್ಲ. ಆಯಾಯ ಧಾತುಗಳು ಎಷ್ಟಿರಬೇಕೋ ಅಷ್ಟಿರಬೇಕು. ಇದು ಸೃಷ್ಟಿಯ ಅದ್ಭುತ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

''ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ಡದು'': ರಾಘವೇಶ್ವರ ಭಾರತೀ ಶ್ರೀ

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ಡದು: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ವಿಷ್ಣುವಿಗೆ ದಶಾವತಾರಗಳಂತೆ ಅಗ್ನಿಗೆ ಪಂಚಾವತಾರಗಳಿದ್ದು, ನಮ್ಮ ದೇಹದಲ್ಲಿ ಅಗ್ನಿಯು ಐದು ರೂಪದಲ್ಲಿ ಅಭಿವ್ಯಕ್ತವಾಗಿವೆ. ಪಾಚಕಾಗ್ನಿಯು ನಾಭಿಯ ಸ್ಥಾನದಲ್ಲಿ ಇದ್ದರೆ, ರಂಜಕಾಗ್ನಿ ನಾಭಿಗಿಂತ ಸ್ಚಲ್ಪ ಮೇಲಿದೆ. ಸಾಧಕಾಗ್ನಿ ಹೃದಯದ ಭಾಗದಲ್ಲಿದ್ದು, ಆಲೋಚಕಾಗ್ನಿ ಕಣ್ಣಿನ ಸಮೀಪ ಇದೆ. ಭ್ರಾಜಕಾಗ್ನಿ ದೇಹವನ್ನೆಲ್ಲಾ ವ್ಯಾಪಿಸಿದೆ. ಪಾಚಕಾಗ್ನಿ ಆಹಾರವನ್ನು ಪಚನಗೊಳಿಸಿ ದೇಹಕ್ಕೆ ಶಕ್ತಿತುಂಬಿದರೆ, ರಂಜಕಾಗ್ನಿ ರಕ್ತಕ್ಕೆ ಕೆಂಪುಬಣ್ಣ ಕಾರಣ. ಸಾಧಕಾಗ್ನಿಯು ಮುಕ್ತಿಗೆ ಕಾರಣವಾದರೆ, ಆಲೋಚಕಾಗ್ನಿಯು ಜ್ನಾನನೇತ್ರವಾಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿನ ಕಾಂತಿಗೆ ಭ್ರಾಜಕಾಗ್ನಿ ಕಾರಣವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Loading...