ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಕನ್ನಡ

Self Harming: ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ಯುವಕನೋರ್ವ ಶೇರ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡ ಆಘಾತದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಹರ್ಷವರ್ಧನ್ (22)ನೇಣಿಗೆ ಶರಣಾದ ಯುವಕ. ಸಿದ್ದಾಪುರದ ಮನೆಯಲ್ಲೇ ಫ್ಯಾನಿಗೆ ನೇಣು ಹಾಕಿಕೊಂಡ ಯುವಕ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್ ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಶಿರಸಿಯ ಅಂಧ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಎಂದು ಉಲ್ಲೇಖ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಆತಂಕದಲ್ಲಿ ಅಂಧ ವಿದ್ಯಾರ್ಥಿನಿ

Sirsi News: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ನಡೆದ ಎಡವಟ್ಟಿನಿಂದ ಅಂಧ ವಿದ್ಯಾರ್ಥಿನಿಯೊಬ್ಬಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಿರಸಿ ನಗರದ ಯೂನಿಯನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ಆರು ವಿಷಯಗಳನ್ನೂ ಬರೆದಿದ್ದರೂ, ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ನಮೂದಿಲಾಗಿದೆ.

Sadhana Sourabha: ಏಪ್ರಿಲ್‌ 26ರಂದು ಕುಮಟಾದಲ್ಲಿ ಸಾಧನಾ ಸೌರಭ; ವಿಶ್ವೇಶ್ವರ ಭಟ್ಟರಿಗೆ ʼರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿʼ ಪ್ರದಾನ

ಏ.26ಕ್ಕೆ ಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ, ಪ್ರಶಸ್ತಿ ಪ್ರದಾನ ಸಮಾರಂಭ

ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಮಂಟಪದಲ್ಲಿ ಏಪ್ರಿಲ್‌ 26ರಂದು ಭಾನುವಾರ ಬೆಳಗ್ಗೆ 9.30 ಗಂಟೆಗೆ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ್‌ ಪ್ರಶಸ್ತಿ ಪ್ರದಾನ ಸಮಾರಂಭʼ ಹಮ್ಮಿಕೊಳ್ಳಲಾಗಿದೆ. 30 ವರ್ಷಗಳ ಇತಿಹಾಸವನ್ನು ಹೊಂದಿರುವ ಸೌರಭ, ಅಪೂರ್ವ ಸದಭಿರುಚಿಯ 'ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದ ಉತ್ತರ ಕನ್ನಡದ ಅಗ್ರಗಣ್ಯ ಸಂಸ್ಥೆಗಳಲ್ಲೊಂದಾಗಿದೆ.

Sirsi Doctor Murder Case: ಶಿರಸಿ ವೈದ್ಯನ ಕೊಲೆ ಪ್ರಕರಣದ ಆರೋಪಿ ಅರೆಸ್ಟ್: 15 ಲಕ್ಷ ರೂ.‌ ಮೌಲ್ಯದ ಚಿನ್ನಾಭರಣ, 50 ಸಾವಿರ ನಗದು ವಶಕ್ಕೆ

ಶಿರಸಿ ವೈದ್ಯನ ಕೊಲೆ ಆರೋಪಿ ಅರೆಸ್ಟ್: ಚಿನ್ನಾಭರಣ, ನಗದು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಡಾ. ರಮೇಶ್ ಎಫ್. ಕಲ್ಗುಟ್ಕರ್ (51) ಎಂಬ ಆಯುರ್ವೇದ ವೈದ್ಯನ ಕೊಲೆಯಾಗಿತ್ತು. ಭಾನುವಾರ ಸಂಜೆ ಘಟನೆ ಬೆಳಕಿಗೆ ಬಂದಿತ್ತು‌. ಬಳಿಕ ಪ್ರಕರಣ ದಾಖಲಿಸಿಕೊಂಡ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಶಂಕಿತ ಆರೋಪಿಯನ್ನು ಸೆರೆಹಿಡಿದಿದ್ದಾರೆ.

Road accident: ಮರಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಕಾರ್, ಇಬ್ಬರ ಸಾವು, ಒಬ್ಬ ಗಂಭೀರ

ಮರಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಕಾರ್, ಇಬ್ಬರ ಸಾವು, ಒಬ್ಬ ಗಂಭೀರ

ಡಿಕ್ಕಿಯ ರಭಸಕ್ಕೆ ಕಾರ್ ಎರಡು ಮರಗಳ ಮಧ್ಯೆ ಸಿಲುಕಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಾಲಕನ ಗುರುತು ಪತ್ತೆಯಾಗಿಲ್ಲ. ಕಾರ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು ಮೂರು ಜನರು ಪ್ರಯಾಣಿಸುತ್ತಿದ್ದರು.

Sirsi Doctor Murder Case: 2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಹತ್ಯೆಗೆ ಕಾರಣ ಬಹಿರಂಗ; ಸ್ನೇಹಿತನೇ ಕೊಲೆಗಾರ!

2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಕೊಲೆಗೆ ಕಾರಣ ಬಹಿರಂಗ

ಶಿರಸಿ ಕೆಎಚ್‌ಬಿ ಕಾಲೋನಿಯ ಹೊಸ ಬಡಾವಣೆಯಲ್ಲಿ ವಾಸವಿದ್ದ ಡಾ. ರಮೇಶ್ ಎಫ್. ಕಲ್ಗುಟ್ಕರ್ ಅವರು ಶನಿವಾರ ರಾತ್ರಿ ಮನೆಯಲ್ಲೇ ಕ್ರೂರವಾಗಿ ಹತ್ಯೆಗೀಡಾಗಿದ್ದರು. ಇದೀಗ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಗೆ ಕಾರಣ ಕೂಡ ಬಹಿರಂಗವಾಗಿದೆ.

Murder Case: ಹೆಂಡತಿಯ ತಂಗಿಯ ಜೊತೆ ನಾಳೆ ಮದುವೆಯಾಗಬೇಕಿದ್ದ ವ್ಯಕ್ತಿಯ ಹತ್ಯೆ

ಹೆಂಡತಿಯ ತಂಗಿಯ ಜೊತೆ ನಾಳೆ ಮದುವೆಯಾಗಬೇಕಿದ್ದ ವ್ಯಕ್ತಿಯ ಹತ್ಯೆ

ಆರು ತಿಂಗಳ ಹಿಂದಷ್ಟೆ ಅವರ ಪತ್ನಿಯ (Wife) ಸಾವು ಸಂಭವಿಸಿತ್ತು. ಈ ಹಿನ್ನೆಲೆಯಲ್ಲೇ ಅವರು ಎರಡನೇ ಮದುವೆಗೆ ತಯಾರಾಗುತ್ತಿದ್ದರು. ನಾಳೆ ಶಿರಸಿಯ ದೇವಸ್ಥಾನ ಒಂದರಲ್ಲಿ ರಮೇಶರ ಎರಡನೇ ಮದುವೆ ನಿಗದಿಯಾಗಿತ್ತು. ಮದುವೆಗೂ ಒಂದು ದಿನ ಮೊದಲೆ ವೈದ್ಯನ ಕೊಲೆಯಾಗಿದ್ದು, ಹಲವು ಅನುಮಾನಗಳಿಗೂ ಕಾರಣವಾಗಿದೆ.

ಕಾರವಾರ ಶಾಸಕ ಸತೀಶ್ ಸೈಲ್‌  ಪುತ್ರಿ  ಸಾಧ್ವಿಗೆ ಒಲಿದ ಮಿಸ್ ಇಂಡಿಯಾ ಕಿರೀಟ

ಕಾರವಾರ ಶಾಸಕ ಸತೀಶ್ ಸೈಲ್‌ ಪುತ್ರಿಗೆ ಮಿಸ್ ಇಂಡಿಯಾ ಕಿರೀಟ

Satish Sail daughter wins Miss India: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಮಿಸ್ ಇಂಡಿಯಾ ವಿಜೇತೆಯಾಗಿದ್ದಾರೆ. ಏಪ್ರಿಲ್ 18, 2026 ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ನಲ್ಲಿ ನಡೆದ 61 ನೇ ಮಿಸ್ ಇಂಡಿಯಾ ಆವೃತ್ತಿಯಲ್ಲಿ ಸಾಧ್ವಿ ಸತೀಶ್ ಸೈಲ್ ಅವರು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

Pravasi Prapancha: ಶಾಂತಿ, ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

ಶಾಂತಿ ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

Sonda Mutt: ಸೋಂದೆ ಜೈನ ಮಠದ 36ನೇ ಗುರುಗಳಾದ ಭಟ್ಟಾಕಲಂಕ ಸ್ವಾಮಿಗಳು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಕನ್ನಡ ಭಾಷೆಯ ವ್ಯಾಕರಣದ ಕುರಿತು 'ಕರ್ನಾಟಕ ಶಬ್ದಾನುಶಾಸನ' ಎಂಬ ಪ್ರಸಿದ್ಧ ಗ್ರಂಥವನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಹೊರಗಿನವರಿಗೂ ಕನ್ನಡದ ಮಹತ್ವ ತಿಳಿಯಲಿ ಎಂಬ ಉದ್ದೇಶದಿಂದ ಇದನ್ನು ಸಂಸ್ಕೃತದಲ್ಲಿ ಬರೆಯಲಾಗಿದೆ.

Bus Caught fire: ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಮುರುಡೇಶ್ವರ ದೇವಸ್ಥಾನ ರಸ್ತೆಯಲ್ಲಿ ದೂರವಾಣಿ ಕೇಂದ್ರದ ಎದುರುಗಡೆ ಸಾಗುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಬಸ್ ವಾಯುವ್ಯ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ್ದು, ಕುಮಟಾದಿಂದ ಭಟ್ಕಳ ಮಾರ್ಗವಾಗಿ ಮುರುಡೇಶ್ವರ ಬಸ್ ನಿಲ್ದಾಣದತ್ತ ಸಾಗುತ್ತಿತ್ತು.

ಗಲಾಟೆ ಕೇಸ್‌ನಲ್ಲಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್‌; ವಿಚಾರಣೆಗೆ ಹೈಕೋರ್ಟ್‌ ತಡೆ

ಅನಂತಕುಮಾರ್‌ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

Road rage case: ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಗಲಾಟೆ ಪ್ರಕರಣದಿಂದ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಮಗನ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಹೈಕೋರ್ಟ್‌ ಆದೇಶದಿಂದ ದಾಬಸ್‌ಪೇಟೆ ಬಳಿ ನಡೆದಿದ್ದ ರೋಡ್‌ ರೇಜ್‌ ಪ್ರಕರಣದಲ್ಲಿ ಅಶುತೋಷ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದಿದೆ.

Karwar News: ಧರ್ಮವೇ ಪ್ರಪಂಚಕ್ಕೆ ಆಧಾರ ನಮ್ಮದು ಮಾತ್ರ ಧರ್ಮ ಉಳಿದವು ಮತಗಳು: ಶೃಂಗೇರಿ ಶ್ರೀ

ಧರ್ಮವೇ ಪ್ರಪಂಚಕ್ಕೆ ಆಧಾರ ನಮ್ಮದು ಮಾತ್ರ ಧರ್ಮ ಉಳಿದವು ಮತಗಳು

ಹಿಂದೂ ಧರ್ಮ ಶ್ರೇಷ್ಠವಾದದ್ದು. ಧರ್ಮದ ಆಚರಣೆಯಿಂದ ಶ್ರೇಯಸ್ಸು ಆಗಲಿದೆ. ಈ ಧರ್ಮ ಜಗತ್ತಿಗೆ ಆಧಾರವಾಗಿದೆ. ಎಲ್ಲರೂ ಬಯಸುವುದು ಸುಖ. ನಾಸ್ತಿಕ ಆಸ್ತಿಕ ಇಬ್ಬರೂ ಬಯಸುವುದು ಸುಖ. ಆದರೆ ಮಾರ್ಗ ಬೇರೆ ಬೇರೆ. ಲೌಕಿಕ ಕೆಲಸದಿಂದ ತಾತ್ಕಾಲಿಕ ಸುಖ‌ ಸಿಗುತ್ತದೆ. ಅದರ ಹಿಂದೆಯೂ ಧರ್ಮ ಇದೆ. ಧರ್ಮ ಇಲ್ಲದಿದ್ದರೆ ಕಷ್ಟ ಪಟ್ಟರೂ ಫಲ ಸಿಗದು. ಧರ್ಮ ಕಣ್ಣಿಗೆ ಕಾಣದೆ ಪ್ರಪಂಚವನ್ನು ನಡೆಸುತ್ತಿದೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

State BJP Vice President Rupali Naik Interview: ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ

ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ

ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ವೇಳೆ ಅವರಿಗೆ ಮೊದಲು ಶಾಲು ಹಾಕುವ ಅವಕಾಶ ನನಗೆ ಸಿಕ್ಕಿತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ್ದಕ್ಕೆ ತುಂಬಾ ಧನ್ಯವಾದಗಳು ಎಂದು ನಾನು ಮನಸ್ಸಲ್ಲೇ ಹೇಳಿಕೊಂಡು ಕಣ್ಣೀರಿಟ್ಟೆ. ಇದನ್ನು ಕಂಡು ಮೋದಿಯವರ ಕಣ್ಣುಗಳೂ ತೇವಗೊಂಡವು.

ಜೀವನ ಶೈಲಿಗೆ ತಕ್ಕ ಆರೋಗ್ಯ ಅಗತ್ಯ

ಜೀವನ ಶೈಲಿಗೆ ತಕ್ಕ ಆರೋಗ್ಯ ಅಗತ್ಯ

ಇಂದಿನ ಯಾಂತ್ರಿಕ ಯುಗದಲ್ಲಿ ಮನುಷ್ಯ ತಾಂತ್ರಿಕವಾಗಿ ಮುಂದುವರಿದಿದ್ದರೂ, ದೈಹಿಕವಾಗಿ ದುರ್ಬಲನಾಗುತ್ತಿದ್ದಾನೆ. ಸಂಸ್ಕರಿಸಿದ ಆಹಾರ , ದೈಹಿಕ ಶ್ರಮದ ಕೊರತೆ ಮತ್ತು ಅತಿಯಾದ ಮಾನಸಿಕ ಒತ್ತಡಗಳು ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಽ ಕಾಯಿಲೆಗಳಿಗೆ ದಾರಿ ಕಲ್ಪಿಸಿ ಕೊಡುತ್ತಿವೆ.

Sirsi Bus Accident: ಶಿರಸಿ ಬಳಿ ಕೆಎಸ್‌ಆರ್‌ಟಿಸಿ- ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿರಸಿ ಬಳಿ KSRTC- ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ಅಪಘಾತ ನಡೆದಿದೆ. ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೋಕರ್ಣದಲ್ಲಿ ಜಪಾನ್‌ ಮಹಿಳೆಯ ಕೊಳಲ ನಾದಕ್ಕೆ ಭಕ್ತರು ಫಿದಾ; ವೀಸಾ ನಿಯಮದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ಕೃಷ್ಣ ವಿಗ್ರಹ ಇಟ್ಟು ಕೊಳಲು ನುಡಿಸಿದ ಜಪಾನ್‌ ಮಹಿಳೆ

Viral Video: ಗೋಕರ್ಣದಲ್ಲಿ ಜಪಾನಿನ ಪ್ರವಾಸಿಯೊಬ್ಬರು ಕೃಷ್ಣ ವಿಗ್ರಹದೊಂದಿಗೆ ಕೊಳಲು ನುಡಿಸುತ್ತ ಹಣ ಸಂಗ್ರಹಿಸುತ್ತಿರುವ ಸುದ್ದಿಯೊಂದು ಇದೀಗ ಚರ್ಚೆಗೆ ಕಾರಣವಾಗಿದೆ. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಭೇಟಿ ನೀಡಿದ ಆಕೆ ರಸ್ತೆಬದಿಯಲ್ಲಿ ಕುಳಿತು ಕೊಳಲು ನುಡಿಸುತ್ತ ಗಮನ ಸೆಳೆದಿದ್ದಾರೆ. ಭಾರತಕ್ಕೆ ಭೇಟಿ ನೀಡಿ ಹಣ ಸಂಗ್ರಹಿಸುತ್ತಿರುವುದು ಕಾನೂನು ಪ್ರಕಾರ ತಪ್ಪು ಎಂದು ಅನೇಕರು ಅಕ್ಷೇಪ ವ್ಯಕ್ತ ಪಡಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Murder Attempt: ಗೃಹ ಸಚಿವ ಪರಮೇಶ್ವರ್‌ ಆಪ್ತನ ಕೊಲೆ ಯತ್ನ, ಅಂಕೋಲಾದಲ್ಲಿ ಹಾಡಹಗಲೇ ದಾಳಿ

ಗೃಹ ಸಚಿವ ಪರಮೇಶ್ವರ್‌ ಆಪ್ತನ ಕೊಲೆ ಯತ್ನ, ಅಂಕೋಲಾದಲ್ಲಿ ಹಾಡಹಗಲೇ ದಾಳಿ

ಕಳೆದ ಬುಧವಾರ ಮಧ್ಯಾಹ್ನ ಗೋಪಾಲಕೃಷ್ಣ ನಾಯಕ್ ಅವರು ಅಂಕೋಲಾದಲ್ಲಿ ಇದ್ದಾಗ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಆರೋಪಿಗಳು ಅತ್ಯಂತ ಕ್ರೂರವಾಗಿ ನಾಯಕ್ ಅವರ ತಲೆಗೆ ಚಾಕುವಿನಿಂದ ಹಲವು ಬಾರಿ ಚುಚ್ಚಿ ಕೊಲೆಗೆ ಯತ್ನಿಸಿರುವುದು ಸೆರೆಯಾಗಿದೆ.

E-Swachhta Abhiyan: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿಂದು ಇ-ಸ್ವಚ್ಛತಾ ಅಭಿಯಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿಂದು ಇ-ಸ್ವಚ್ಛತಾ ಅಭಿಯಾನ

ಗಾಂಧೀಜಿಯವರ ಸ್ವಚ್ಛತೆಯೇ ಸೇವೆ ಮತ್ತು ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಧ್ಯೇಯವಾಕ್ಯಗಳೊಂದಿಗೆ, ಮಾನ್ಯ ಶಾಸಕರ ಸೂಚನೆಯ ಮೇರೆಗೆ ಹಳಿಯಾಳ ತಾಲೂಕಿನ ಸಂಪೂರ್ಣ ಸ್ವಾಸ್ಥ್ಯಕ್ಕಾಗಿ ಈ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಇದು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ

MP Kageri: ಶಿಕ್ಷಣ ಇಲಾಖೆಯ ಪ್ರಯೋಗ ವಿದ್ಯಾರ್ಥಿಗಳ ಭವಿಷ್ಯದ ಜೊತೆಗಿನ ಚೆಲ್ಲಾಟ: ಸಂಸದ ಕಾಗೇರಿ ಆಕ್ರೋಶ

ಶಿಕ್ಷಣ ಇಲಾಖೆಯ ಪ್ರಯೋಗ ವಿದ್ಯಾರ್ಥಿಗಳ ಭವಿಷ್ಯದ ಜೊತೆಗಿನ ಚೆಲ್ಲಾಟ

​ದಶಕಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದ ತ್ರಿಭಾಷಾ ಸೂತ್ರಕ್ಕೆ ಸಚಿವರು ಕೊಡಲಿ ಪೆಟ್ಟು ನೀಡಿದ್ದಾರೆ. ತೃತೀಯ ಭಾಷೆಯ ಅಂಕಗಳನ್ನು ಕೈಬಿಟ್ಟು, ಕೇವಲ ಗ್ರೇಡ್‌ ಪದ್ಧತಿಗೆ ಸೀಮಿತಗೊಳಿಸಿರುವುದು ಮತ್ತು ಒಟ್ಟು ಅಂಕಗಳನ್ನು 625 ರಿಂದ 525 ಕ್ಕೆ ಇಳಿಸಿ ರುವುದು ಶಿಕ್ಷಣ ಕ್ಷೇತ್ರದಲ್ಲಿ ಅರಾಜಕತೆ ಸೃಷ್ಟಿಸಲಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆತಂಕ ವ್ಯಕ್ತಪಡಿಸಿದ್ದಾರೆ.

MP Kageri Humanity: ಶಿರಸಿಯ 'ಅಮೇಜಿಂಗ್ ಪೆಟ್ ಪ್ಲಾನೆಟ್' ಕಾರ್ಯಕ್ಕೆ ಸಂಸದ ಕಾಗೇರಿ ಮೆಚ್ಚುಗೆ: ಗಿಳಿಮರಿ ರಕ್ಷಿಸಿ ಮಾನವೀಯತೆ ಮೆರೆದ ಸಂಸದ

ಗಿಳಿಮರಿ ರಕ್ಷಿಸಿ ಮಾನವೀಯತೆ ಮೆರೆದ ಸಂಸದ

ಭಾನುವಾರ ಸಂಸದರು ತಮ್ಮ ಊರಿನಿಂದ ಬರುತ್ತಿದ್ದ ಸಂದರ್ಭದಲ್ಲಿ, ರಸ್ತೆ ಬದಿಯ ಮರದ ಮೇಲಿನಿಂದ ಬಿದ್ದಿದ್ದ ಅಸ್ವಸ್ಥಗೊಂಡ ಪುಟ್ಟ ಗಿಳಿಮರಿಯನ್ನು ಗಮನಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ಆ ಗಿಳಿಮರಿಯನ್ನು ಸ್ವತಃ ತಾವೇ ಅಮೇಜಿಂಗ್ ಪೆಟ್ ಪ್ಲಾನೆಟ್ ಸಂಸ್ಥೆಗೆ ತಲುಪಿಸುವ ಮೂಲಕ ಒಂದು ಜೀವವನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಪ್ರವಾಸಿಗರಿಗೆ ಸೇವೆ ನೀಡಲು 'ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ' ಸಜ್ಜು

ಮಲೆನಾಡಿದ ಸಾಂಪ್ರದಾಯಿಕ ಆತಿಥ್ಯದೊಂದಿಗೆ ಸೇವೆ ನೀಡಲಿದೆ. ಉತ್ತರ ಕನ್ನಡದ ಹಸಿರು ಸಿರಿಯ ನಡುವೆ ನೆಲೆಸಿರುವ ಈ ತಾಣವು ಆರಾಮದಾಯಕ ಮತ್ತು ಸೊಗಸಾದ ವಾಸ್ತವ್ಯಕ್ಕೆ ಹೇಳಿ ಮಾಡಿಸಿದಂತಿದೆ. ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಬಯಸುವವರಿಗಾಗಿ ಇಲ್ಲಿ ಆಧುನಿಕ ಸೌಲಭ್ಯಗಳನ್ನು ಹೊಂದಿರುವ 40 ಐಷಾರಾಮಿ ಕೊಠಡಿಗಳು ಮತ್ತು ಸೂಟ್‌ಗಳಿವೆ.

Bhatkal News: ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಮುಸ್ಲಿಂ ಧ್ವಜ ತೆರವು: ಉದ್ರಿಕ್ತ ಪರಿಸ್ಥಿತಿ ನಿರ್ಮಾಣ

ಬಂದರ ರಸ್ತೆ ನ್ಯೂ ಇಂಗ್ಲೀಷ್ ಶಾಲೆಯ ಎದುರು ರಮ್ಜಾನ್ ಹಬ್ಬದ ಅಂಗವಾಗಿ ಸ್ಥಾಪಿಸಲಾದ ಮುಸ್ಲಿಂ ಧ್ವಜವನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಹಿನ್ನೆಲೆ ಯಲ್ಲಿ ಸ್ಥಳದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಧ್ವಜ ತೆರವುಗೊಳಿಸಿದ ಕ್ರಮ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವರು ಸ್ಥಳದಲ್ಲಿ ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಪರಿಸ್ಥಿತಿ ತೀವ್ರ ಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Loading...