ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಕನ್ನಡ

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆ!

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಇನ್ನು ಜೂನ್‌ 9ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

MLA Bhimanna Naik: ನಾನು ಯಾವುದೇ ಸಂದರ್ಭದಲ್ಲೂ ಸ್ಥಾನಕ್ಕಾಗಿ ಹಠ ಹಿಡಿದವನಲ್ಲ: ಶಾಸಕ ಭೀಮಣ್ಣ ನಾಯ್ಕ್

ನಾನು ಯಾವುದೇ ಸಂದರ್ಭದಲ್ಲೂ ಸ್ಥಾನಕ್ಕಾಗಿ ಹಠ ಹಿಡಿದವನಲ್ಲ

ಕಳೆದ ಐದು ವರ್ಷಗಳಲ್ಲಿ ಮೂರ್ನಾಲ್ಕು ಚುನಾವಣೆಗಳನ್ನು ಎದುರಿಸಿದ್ದೇವೆ. ಪ್ರತಿಯೊಂದು ಚುನಾವಣೆಯಲ್ಲೂ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಮತ್ತು ರಾಜ್ಯ ಅಧ್ಯಕ್ಷರ ಸೂಚನೆಯಂತೆ ಎಲ್ಲರೊಂದಿಗೆ ಚರ್ಚಿಸಿ, ಒಮ್ಮತದ ನಿರ್ಧಾರಗಳ ಮೂಲಕ ಕೆಲಸ ಮಾಡಲಾಗಿದೆ.

ಮೇಲ್ನೋಟಕ್ಕೆ ಪುಸ್ತಕ ಮಾರಾಟ; ಹಿಂಬಾಗಿಲಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿ: ಬೆಳಗಾವಿ, ಉತ್ತರ ಕನ್ನಡದ 13 ಶಂಕಿತರ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿ: 13 ಮಂದಿಯ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಆರೋಪದಲ್ಲಿ ಕರ್ನಾಟಕ ಪೊಲೀಸರು ಪುಸ್ತಕ ಮಾರಾಟಗಾರನೊಬ್ಬ ಸೇರಿದಂತೆ ಒಟ್ಟು 13 ಶಂಕಿತರನ್ನು ಬಂಧಿಸಿದ್ದಾರೆ. ಈ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂದೂಕು ಸರಬರಾಜು ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Ankola Bus Accident: ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು; 21 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಳಿ ಸೀಬರ್ಡ್ ಬಸ್ ಪಲ್ಟಿಯಾಗಿ ಓರ್ವ ಸಾವು

ಬಳ್ಳಾರಿಯಿಂದ ಗೋವಾ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಭಟ್ಕಳ ನದಿ ದುರಂತ; ಶಾರದಾಹೊಳೆಯಲ್ಲಿ ನೆರವೇರಿದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ

ಭಟ್ಕಳ ನದಿ ದುರಂತ; 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ

Bhatkal Tragedy: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಶಾರದಾಹೊಳೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ನಿರಂತರವಾಗಿ ಇರಲಿದೆ. ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ತ್ಯಾಗದ ನೆಲದಲ್ಲಿ ನಿರಾಶ್ರಿತರ ಕಣ್ಣೀರಿಗೆ ಕೊನೆಯೆಂದು?

ದೇಶದ ರಕ್ಷಣೆ, ರಾಜ್ಯದ ಬೆಳಕು ಮತ್ತು ರಾಷ್ಟ್ರದ ಪ್ರಗತಿಯ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ನೀಡಿದ ತ್ಯಾಗ ಅಪ್ರತಿಮ. ಆದರೆ, ಈ ‘ಅಭಿವೃದ್ಧಿ’ಯ ಮಹಾಯಾಗಕ್ಕೆ ತಮ್ಮ ಸರ್ವಸ್ವವನ್ನೂ ಆಹುತಿ ನೀಡಿದ ಇಲ್ಲಿನ ಮೂಲ ನಿವಾಸಿಗಳು ಇಂದು ಸ್ವಂತ ನೆಲದಲ್ಲೇ ನಿರಾಶ್ರಿತರಾಗಿ, ಹಕ್ಕುಪತ್ರಗಳಿಗಾಗಿ ಬೀದಿಗಿಳಿದು ಹೋರಾಡುವಂತಾಗಿರುವುದು ಜಿಲ್ಲೆಯ ಅತ್ಯಂತ ಕಟು ವಾಸ್ತವ.

Bhatkal Tragedy: ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಭಟ್ಕಳ ದುರಂತ; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

PM Narendra Modi: ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ 14 ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ. ಆತನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.

Bhatkal Tragedy: ಭಟ್ಕಳದ ತಟ್ಟಿಹಕ್ಕಲ ನದಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಭಟ್ಕಳದ ತಟ್ಟಿಹಕ್ಕಲ ನದಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದ ವೇಳೆ, ನೀರಿನಲ್ಲಿ ಮುಳುಗಿ 11 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Bhatkal News: ಭಟ್ಕಳದಲ್ಲಿ ಹಿಂದೂಗಳ ಮುರಿನಕಟ್ಟೆ ಒಡೆಯಲು ಮುಸ್ಲಿಮರ ಯತ್ನ; ತಡೆಯಲು ಬಂದ ಪೊಲೀಸರ ಮೇಲೆಯೇ ಹಲ್ಲೆ!

ಭಟ್ಕಳದಲ್ಲಿ ಹಿಂದೂಗಳ ಮುರಿನಕಟ್ಟೆ ಒಡೆಯಲು ಮುಸ್ಲಿಮರ ಯತ್ನ

ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಮುರಿನಕಟ್ಟೆ ತೆರವು ಮಾಡಲಾಗಿತ್ತು. ಹೀಗಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಮುರಿನಕಟ್ಟೆ ಮರು ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಮುಸ್ಲಿಂ ಸಂಘಟನೆ ಭಾರಿ ವಿರೋಧ ವ್ಯಕ್ತಪಡಿಸಿದೆ. ಸಂಜೆ ಏಕಾಏಕಿ ಜಮಾಯಿಸಿದ ನೂರಾರು ಮುಸ್ಲಿಮರು, ಮುರಿನ ಕಟ್ಟೆಯನ್ನು ಒಡೆಯಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭಟ್ಕಳ ನದಿ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟಿಹಕ್ಕಲ ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Bhatkal Tragedy: ಭಟ್ಕಳದಲ್ಲಿ ಘೋರ ದುರಂತ; ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 11 ಮಂದಿ ದಾರುಣ ಸಾವು

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 11 ಮಂದಿ ಜಲ ಸಮಾಧಿ

ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ 11 ಮಂದಿ ಮೃತಪಟ್ಟಿದ್ದು, ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Sirsi News: ಮುಂಗಾರು ಮಳೆ ಆರಂಭವಾಗುವ ಮುನ್ನ ನಾಗರಿಕ ಸಮಸ್ಯೆಗಳನ್ನು ಬಗೆಹರಿಸಿ: ನಗರಸಭೆ ಪೌರಾಯುಕ್ತರಿಗೆ ಮನವಿ

ರಸ್ತೆಯನ್ನು ಶೀಘ್ರವಾಗಿ ಸಂಚಾರ ಯೋಗ್ಯವನ್ನಾಗಿ ಮಾಡಲು ಆಗ್ರಹ

​ನಗರದಲ್ಲಿ ಸದ್ಯ ತಲೆದೋರಿರುವ ಹಲವು ಗಂಭೀರ ಸಮಸ್ಯೆಗಳನ್ನು ಪಟ್ಟಿ ಮಾಡಿದ ಆನಂದ ಸಾಲೇರ ನೇತೃತ್ವದ ನಿಯೋಗ, ಮಳೆಗಾಲದಲ್ಲಿ ಎದುರಾಗಬಹುದಾದ ಅನಾಹುತಗಳನ್ನು ತಪ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಎಚ್ಚರಿಸಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಅಳವಡಿಸಲಾಗಿರುವ ರಸ್ತೆ ಮತ್ತು ಮಾರ್ಗಗಳ ನಾಮಫಲಕಗಳು ಅತ್ಯಂತ ಹದಗೆಟ್ಟ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಇವುಗಳನ್ನು ಆದಷ್ಟು ಬೇಗ ದುರಸ್ತಿ ಗೊಳಿಸಬೇಕು ಅಥವಾ ಹೊಸದಾಗಿ ಅಳವಡಿಸಬೇಕು.

ಉತ್ತರ ಕನ್ನಡ ಜನತೆಗೆ ಗುಡ್‌ನ್ಯೂಸ್‌; ಕಾರವಾರದಲ್ಲಿ ನಿರ್ಮಾಣವಾಗಲಿದೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಾರವಾರದಲ್ಲಿ ನಿರ್ಮಾಣವಾಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Sidaramaiah: ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Anti-Terrorism Day: ಭಯೋತ್ಪಾದನಾ ವಿರೋಧಿ ದಿನ

Anti-Terrorism Day: ಭಯೋತ್ಪಾದನಾ ವಿರೋಧಿ ದಿನ

ಭಾರತವು ದಶಕಗಳಿಂದಲೂ ಗಡಿಯಾಚೆಗಿನ ಮತ್ತು ದೇಶದೊಳಗಿನ ಭಯೋತ್ಪಾದನೆಯಿಂದ ತತ್ತರಿಸಿದೆ. ಮುಂಬೈ ದಾಳಿ, ಸಂಸತ್ ಭವನದ ಮೇಲಿನ ದಾಳಿ, ಪುಲ್ವಾಮಾ ದಾಳಿಯಂತಹ ಘಟನೆಗಳು ನಮ್ಮ ಸೈನಿಕರ ಮತ್ತು ಅಮಾಯಕ ನಾಗರಿಕರ ರಕ್ತವನ್ನು ಹರಿಸಿವೆ. ಈ ಎಲ್ಲ ಹುತಾತ್ಮರ ತ್ಯಾಗವನ್ನು ಸ್ಮರಿಸುವ ಮತ್ತು ಅವರ ಕುಟುಂಬಗಳ ಪರವಾಗಿ ನಿಲ್ಲುವ ಕರ್ತವ್ಯವನ್ನು ಈ ದಿನ ನಮಗೆ ನೆನಪಿಸು ತ್ತದೆ.

Sirsi News: ಮಳೆ ಮಾಪನ ಕೇಂದ್ರಗಳ ವೈಫಲ್ಯ: ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ

ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾ ಗಿರುವ ತೀವ್ರ ಅವ್ಯವಸ್ಥೆ ಹಾಗೂ ಮಳೆ ಮಾಪನ ಕೇಂದ್ರಗಳ ದುರಸ್ತಿಯನ್ನು ಖಂಡಿಸಿ, ರೈತರಿಗೆ ನ್ಯಾಯಬದ್ಧ ವಿಮೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಶಿರಸಿ ಉಪವಿಭಾಗದ ಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.

ಯಕ್ಷಗಾನದ ಹಿರಿಯ ಭಾಗವತ ಕಪ್ಪೆಕರೆ ಸುಬ್ರಾಯ ಹೆಗಡೆ ನಿಧನ

ಯಕ್ಷಗಾನದ ಹಿರಿಯ ಭಾಗವತ ಕಪ್ಪೆಕರೆ ಸುಬ್ರಾಯ ಹೆಗಡೆ ನಿಧನ

ಯಕ್ಷಗಾನ ಲೋಕದ ದಿಗ್ಗಜ ಕಪ್ಪೆಕೆರೆ ಸುಬ್ರಾಯ ಹೆಗಡೆ (79) ಅವರು ಮೇ 13 ರಂದು ಬುಧವಾರ ನಿಧನರಾದರು. ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಇವರು, ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಎಂದು ಹೆಸರುವಾಸಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಎಲ್ಲ ತರಹದ ವಿದ್ಯುತ್ ತಯಾರಿಕೆಗೆ ಉತ್ತರ ಕನ್ನಡ ಜಿಲ್ಲೆಯೇ ಬೇಕೆ? ಎಂದು ಜಿಲ್ಲೆಯ ಜನರು ಅಸಮಾ ಧಾನ ವ್ಯಕ್ತಪಡಿಸಿದ್ದಿದೆ. ಅಣು ವಿದ್ಯುತ್ ಸ್ಥಾವರ, ಜಲ ವಿದ್ಯುತ್ ಸ್ಥಾವರ ಇದೀಗ ಉಷ್ಣ ವಿದ್ಯುತ್ ಸ್ಥಾವರದ ಸರದಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿ ಗ್ರಾಮದಲ್ಲಿ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸುವ ಪ್ರಸ್ತಾವನೆಗೆ ಈಗ ದೊಡ್ಡ ತಾಂತ್ರಿಕ ಅಡ್ಡಿ ಎದುರಾಗಿದೆ.

Sirsi-Haveri Road: ರಸ್ತೆ ದುರಸ್ತಿಗಾಗಿ ಬೀದಿಗಿಳಿದ ಸಾವಿರಾರು ಸಾರ್ವಜನಿಕರು; ಶಿರಸಿ-ಹಾವೇರಿ ಹೈವೆ ಬಂದ್‌: ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್‌ ಜಾಮ್‌

ರಸ್ತೆ ದುರಸ್ತಿಗಾಗಿ ಬೀದಿಗಿಳಿದ ಜನ; ಶಿರಸಿ-ಹಾವೇರಿ ಹೈವೇ ಬಂದ್‌

Sirsi News: ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಅವ್ಯಸ್ಥೆಯಿಂದ ರೋಸಿ ಹೋದ ಸಾವಿರಾರು ಮಂದಿ ಮಂಗಳವಾರ (ಮೇ 5) ಶಿರಸಿಯ ಬಿಸಲಕೊಪ್ಪದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕಿಲೋ ಮೀಟರ್‌ಗಟ್ಟಲೆ ವಾಹನಗಳ ಸಾಲು ಕಂಡು ಬಂದಿದ್ದು ಫುಲ್ ಟ್ರಾಫಿಕ್ ಜಾಮ್ ಉಂಟಾಯಿತು.

Prof R G Hegde Column: ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಓದುವವರಿಲ್ಲ ಎಂದು ಕೊರಗುವವರು ಇವರತ್ತ ನೋಡಬೇಕು

ಕನ್ನಡ ಪತ್ರಿಕೋದ್ಯಮವನ್ನು ಹಳೆಯ ಜಾಡಿನಿಂದ, ಗೂಡಿನಿಂದ ಹೊರ ತಂದು ಅದಕ್ಕೊಂದು ಹೊಸ ಜೀವ, ಹೊಸತನ ತಂದವರು ಅವರು. ಕನ್ನಡ ಪತ್ರಿಕೆಗಳನ್ನು ಜನಪ್ರಿಯವಾಗಿಸಿದವರು ಮತ್ತು ಜನಪರವಾಗಿಸಿದವರು ಅವರು. ‘ತಲೆ ಬರಹ’ ಗಳನ್ನು ಬರೆಯುವ ರೀತಿಯಲ್ಲಂತೂ ಮೂಲಭೂತ ಬದಲಾವಣೆ ತಂದವರು ಭಟ್. ‌

ಪತ್ನಿಗೆ ಅಕ್ರಮ ಸಂಬಂಧ; ಮಲೇಷ್ಯಾದಿಂದ ದಾಂಡೇಲಿಗೆ ಬಂದಿದ್ದ ಗಂಡ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ಗಂಡ ಆತ್ಮಹತ್ಯೆ

ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ತಾಯಿಯೇ ಕಾರಣ ಎಂದು ಆರೋಪಿಸಿ ಗಂಡ ಆತ್ಮಹತ್ಯೆ ಎನ್ನಲಾಗಿದೆ. ಸದ್ಯ, ಈ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರಾಘವೇಂದ್ರ ಪತ್ನಿ ಮೇಘಾ ಮತ್ತು ಆಕೆಯ ತಾಯಿಯನ್ನು ದಾಂಡೇಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಐಟಿ ನೋಟಿಸ್‌; ತೆರಿಗೆ ಮೇಲ್ಮನವಿಯಲ್ಲಿ ಜಯ

ತೆರಿಗೆ ಮೇಲ್ಮನವಿಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಜಯ

ಶ್ರೀರಾಮಚಂದ್ರಾಪುರ ಮಠವು ಸುಮಾರು 13 ವರ್ಷಗಳ ಕಾಲ ಶ್ರೀಸಂಸ್ಥಾನ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ನಿರ್ವಹಿಸಿದ್ದು, ಪ್ರತಿ ವರ್ಷ ಲೆಕ್ಕಪರಿಶೋಧನೆಯನ್ನು ನಡೆಸಿ; ಸುವ್ಯವಸ್ಥಿತವಾಗಿ ಲೆಕ್ಕಪತ್ರಗಳನ್ನು ನಿರ್ವಹಿಸಿ - ಸುಭದ್ರವಾಗಿ ದಾಖಲೀಕರಣ ಮಾಡಿದೆ. ಇದೀಗ ಮೇಲ್ಮನವಿ ಆದೇಶದನ್ವಯ ತೆರಿಗೆ ಬಾಕಿ ಶೂನ್ಯವಾಗಿರುವುದು ಭಕ್ತಾದಿಗಳ ಗೊಂದಲಗಳನ್ನು ನಿವಾರಿಸಿದೆ ಎಂದು ಶ್ರೀರಾಮಚಂದ್ರಾಪುರ ಮಠ ತಿಳಿಸಿದೆ.

Lokadhwani Awards: ʼಲೋಕಧ್ವನಿ’ ಹೆಮ್ಮೆಯ ಸಾಧಕ ಪ್ರಶಸ್ತಿ ಪುರಸ್ಕೃತ ರವೀಂದ್ರ ನಾಯ್ಕ, ಸುರೇಶ್ಚಂದ್ರ ಹೆಗಡೆಗೆ ಶಿರಸಿಯಲ್ಲಿ ಸನ್ಮಾನ

ಲೋಕಧ್ವನಿಯಿಂದ ರವೀಂದ್ರ ನಾಯ್ಕ, ಸುರೇಶ್ಚಂದ್ರ ಹೆಗಡೆಗೆ ಸನ್ಮಾನ

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ, ಕೆಎಂಎಫ್ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅವರಿಗೆ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಲೋಕಧ್ವನಿ ಹೆಮ್ಮೆಯ ಸಾಧಕರು ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಿದರು. ಶಿರಸಿಯ ಸುಪ್ರಿಯಾ ಇಂಟರ್ ನ್ಯಾಷನಲ್ ಹೊಟೇಲ್‌ನಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು.

ಬಪ್ಪುಂಡದಲ್ಲಿ ಕೊಳವೆ ಬಾವಿ ಕೊರೆಯುವಿಕೆಗೆ ವಿರೋಧ: ಸ್ಥಳೀಯರಿಂದ ಖಾಲಿ ಕೊಡಗಳ ಪ್ರದರ್ಶಿಸಿ ಪ್ರತಿಭಟನೆ

ಬಪ್ಪುಂಡದಲ್ಲಿ ಕೊಳವೆ ಬಾವಿ ಕೊರೆಯುವಿಕೆಗೆ ಸ್ಥಳೀಯರಿಂದ ವಿರೋಧ

Bhatkal News: ಶಿರಾಲಿ ನೀರಕಂಠ ಬಪ್ಪುಂಡದಲ್ಲಿ ಖಾಸಗಿ ಜಾಗದಲ್ಲಿ ಕೊಳವೆ ಬಾವಿ ತೆರೆಯುತ್ತಿರುವುದನ್ನು ವಿರೋಧಿಸಿ, ಸ್ಥಳೀಯ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಕೊಡಗಳನ್ನು ಪ್ರದರ್ಶಿಸಿ, ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Loading...