ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್ ಅಪ್ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಪ್ರಶ್ನಿಸಿದರು.
2028ಕ್ಕೆ ನಮ್ಮ ಬುಲ್ಡೋಜರ್ ಸರ್ಕಾರ ಬಂದ ಮೇಲೆ ವಿಧಾನಸಭೆ ಮುಂದೆ 11 ಜೆಸಿಬಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಖಚಿತ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.