ಬೆಂಗಳೂರು, ಜೂ. 5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Karnataka CM DK Shivakumar) ಬೆಂಗಳೂರಿನ ಪ್ರಸಿದ್ಧ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಮೆಜೆಸ್ಟಿಕ್ನಲ್ಲಿರುವ ಬೆಂಗಳೂರಿನ ನಗರದೇವತೆ ಅಣ್ಣಮ್ಮ ದೇವಿಗೆ ಶುಕ್ರವಾರ (ಜೂನ್ 5) ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರಾದ ದಿನೇಶ್ ಗುಂಡೂರಾವ್, ಶ್ರೀನಿವಾಸ್ ಮಾನೆ ಜತೆಗಿದ್ದರು. ಪೂಜೆಯ ನಂತರ ಅರ್ಚಕರು ಡಿಕೆಶಿ ಅವರಿಗೆ ತೀರ್ಥ ಪ್ರಸಾದ ನೀಡಿ, ಸಾಂಪ್ರದಾಯಿಕವಾಗಿ ಶಾಲು ಹೊದಿಸಿ ಹೂವಿನ ಹಾರ ಹಾಕಿ ಗೌರವಿಸಿದರು.