ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿಧಾನಸಭೆ ಕಲಾಪದಲ್ಲಿ ಡಿಕೆಶಿ-ಮುನಿರತ್ನ ನಡುವೆ ತೀವ್ರ ವಾಗ್ವಾದ; ಹೇ ರೇ*ಸ್ಟ್ ಕುಳಿತುಕೋ ಎಂದ ಡಿಸಿಎಂ

Clash Erupts Between DKS-Munirathna: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ (ಮಾ. 26) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಮುನಿರತ್ನ ನಡುವೆ ತೀವ್ರ ವಾಗ್ವಾದ ನಡೆದಿದೆ. ವೈಯಕ್ತಿಕ ನಿಂದನೆ, ಆರೋಪ-ಪ್ರತ್ಯಾರೋಪಕ್ಕೆ ತಿರುಗಿತು. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ್ ತಾಳ್ಮೆ ಕಳೆದುಕೊಂಡು ಮುನಿರತ್ನ ಅವರನ್ನು ʼʼಹೇ ರೇಪಿಸ್ಟ್, ಕುಳಿತುಕೋʼʼ ಎಂದು ಕಿಡಿಕಾರಿದರು.

ಡಿಕೆಶಿ-ಮುನಿರತ್ನ ನಡುವೆ ತೀವ್ರ ವಾಗ್ವಾದ

ಬೆಂಗಳೂರು, ಮಾ. 26: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ (ಮಾರ್ಚ್‌ 26) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ಮತ್ತು ಬಿಜೆಪಿ ಶಾಸಕ ಮುನಿರತ್ನ (Munirathna) ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರು ನಗರದ ಚರ್ಚೆಯ ವೇಳೆ ಇಬ್ಬರು ನಾಯಕರ ಮಧ್ಯೆ ಜಟಾಪಟಿ ನಡೆದಿದೆ. ಇದು ವೈಯಕ್ತಿಕ ನಿಂದನೆ, ಆರೋಪ-ಪ್ರತ್ಯಾರೋಪಕ್ಕೆ ತಿರುಗಿತು. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ್ ಅಸಹನೆಯಿಂದ ಮುನಿರತ್ನ ಅವರನ್ನು ಹೇ ರೇಪಿಸ್ಟ್, ಕುಳಿತುಕೋ ಎಂದು ಕಿಡಿಕಾರಿದರು. ಈ ವೇಳೆ ವೈಯಕ್ತಿಕ ನಿಂದನೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದರು.