ದಿಸ್ಪುರ, ಏ. 7: ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿದ್ದು, ಬಾರ್ಪೇಟಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಕಳೆದ ದಶಕದಲ್ಲಿ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಕೆಲಸವನ್ನು ನರೇಂದ್ರ ಮೋದಿ ಉಲ್ಲೇಖಿಸಿದರು. ಮುಂದಿನ ಹಂತದಲ್ಲಿ ರಾಜ್ಯವನ್ನು ಸ್ವಾವಲಂಬಿಯನ್ನಾಗಿ ಮಾಡುವತ್ತ ಗಮನಹರಿಸುವುದಾಗಿ ತಿಳಿಸಿದರು. ಕಳೆದ 10 ವರ್ಷಗಳು ಶಾಂತಿ, ಸ್ಥಿರತೆ ಮತ್ತು ಅಸ್ಸಾಂನ ಗುರುತನ್ನು ಕಾಪಾಡುವ ಗುರಿಯನ್ನು ಹೊಂದಿತ್ತು. ಮುಂಬರುವ ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆ ಮತ್ತು ರಾಜ್ಯವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಶ್ರಮಿಸಲಾಗುವುದು ಎಂದರು.