ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯನಗರ
Rahul Gandhi: ಹಕ್ಕು ಪತ್ರ ವಿತರಣೆ ಮೂಲಕ 6ನೇ ಗ್ಯಾರಂಟಿ ಜಾರಿ: ರಾಹುಲ್‌ ಗಾಂಧಿ

ಹಕ್ಕು ಪತ್ರ ವಿತರಣೆ ಮೂಲಕ 6ನೇ ಗ್ಯಾರಂಟಿ ಜಾರಿ: ರಾಹುಲ್‌ ಗಾಂಧಿ

Sadhana Samavesha: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷಗಳ ಆಡಳಿತ ಪೂರೈಸಿದೆ. ಚುನಾವಣೆಯ ವೇಳೆಯಲ್ಲಿ ತಮಗೆ 5 ಗ್ಯಾರಂಟಿಗಳನ್ನು ಕೊಡುವ ಆಶ್ವಾಸನೆ ನೀಡಿದ್ದೆವು. ಈ ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಪ್ರಧಾನಮಂತ್ರಿಗಳು ಇದನ್ನೇ ಪುನರುಚ್ಚರಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಕರ್ನಾಟಕದ ಜನರು ಅನುಭವಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

Laxmi Hebbalkar: ಹೊಸಪೇಟೆಯಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಸಮರ್ಪಣೆ ಸಂಕಲ್ಪ ಸಮಾವೇಶ: ಹಕ್ಕು ಪತ್ರ ವಿತರಿಸಿದ ಹೆಬ್ಬಾಳ್ಕರ್

Laxmi Hebbalkar: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.

Sadhana Samavesha: ಒಂದೇ ದಿನ 1,11,111 ಕುಟುಂಬಕ್ಕೆ ಹಕ್ಕುಪತ್ರ ವಿತರಿಸಿದ ಸಿಎಂ

ಒಂದೇ ದಿನ 1,11,111 ಕುಟುಂಬಕ್ಕೆ ಹಕ್ಕುಪತ್ರ ವಿತರಿಸಿದ ಸಿಎಂ

Sadhana Samavesha: ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾನು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಆದರೆ, ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Sadhana Samavesha: ನಾಳೆ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಹೊಸಪೇಟೆ ಸಜ್ಜು

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ಬಿಂಬಿಸುವ 'ಸಮರ್ಪಣೆ ಸಂಕಲ್ಪ ಸಮಾವೇಶʼಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ನಿರ್ಮಾಣ ಪೂರ್ಣಗೊಂಡಿದ್ದು ಐತಿಹಾಸಿ ಸಮಾವೇಶದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕುರಿತ ವಿವರ ಇಲ್ಲಿದೆ.

Hospet News: ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ

ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ

Hospet News: ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕರ ಚಾಲನೆ ನೀಡಲಿದ್ದಾರೆ.

Karnataka Rains: ವಿಜಯನಗರ, ರಾಯಚೂರಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

ರಾಜ್ಯದಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

Karnataka Rains: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕಾರ್ಮಿಕ ಹಾಗೂ ಆಕಳು ಮೃತಪಟ್ಟಿದೆ. ಅದೇ ರೀತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Vijayanagar News: ಕಾಶ್ಮೀರದ ಪಲ್ಗಾಮ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ವ್ಯಕ್ತಿಗಳ ಆತ್ಮಕ್ಕೆ ಶ್ರದ್ದಾಂಜಲಿ

ಉಗ್ರರಿಂದ ಹತರಾದ ವ್ಯಕ್ತಿಗಳ ಆತ್ಮಕ್ಕೆ ಶ್ರದ್ದಾಂಜಲಿ

ಭಯೋತ್ಪಾದಕರಿಂದ ಹತರಾದ ಮಂಜುನಾಥರಾವ್,ಭರತ ಭೂಷಣ, ಮಧುಸೂದನರಾವ್ ಅವರುಗಳ ಭಾವಚಿತ್ರ ಹಿಡಿದು ಹಾಗೂ ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಅಮಾಯಕ ಪ್ರವಾಸಿಗರನ್ನು ಉಗ್ರರು ಕೊಲೆ ಮಾಡಿದ್ದು ಅತ್ಯಂತ ಖಂಡನೀಯ , ಕೇಂದ್ರ ಸರ್ಕಾರ ಉಗ್ರರನ್ನು ಸದೆಬಡಿಯಬೇಕು ಎಂದು ಒತ್ತಾಯಿಸಿದರು

Tractor Accident: ಟ್ರ್ಯಾಕ್ಟರ್‌ ಅಡಿಯಲ್ಲಿ ಸಿಲುಕಿ 5 ವರ್ಷದ ಬಾಲಕ ದಾರುಣ ಸಾವು

ಟ್ರ್ಯಾಕ್ಟರ್‌ ಅಡಿಯಲ್ಲಿ ಸಿಲುಕಿ ಬಾಲಕಿ ಸಾವು

ಟ್ರ್ಯಾಕ್ಟರ್‌ ನಡಿ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೊಟೆಯಲ್ಲಿ ನಡೆದಿದೆ. ಮೃತಪಟ್ಟಿರುವ ಬಾಲಕನನ್ನು 5 ವರ್ಷದ ನವದೀಪ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಕೆಳಗಳಹಟ್ಟಿಯ ಓಬಣ್ಣ ಹಾಗೂ ದೀಪಾ ದಂಪತಿ ಮಗ ಮೃತಪಟ್ಟಿದ್ದಾನೆ

2nd PUC Results 2025: ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

ದ್ವಿತೀಯ ಪಿಯುಸಿಯಲ್ಲಿ ಈ ಬಾರಿ ರಾಜ್ಯದ ಟಾಪರ್ಸ್‌ ಇವರೇ ನೋಡಿ

2nd PUC Results 2025: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಹಾಗೂ ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

2nd PUC Results 2025: ಲಾರಿ ಚಾಲಕನ ಮಗಳು ರಾಜ್ಯಕ್ಕೇ ಟಾಪರ್‌; ವಿಜಯನಗರ ಜಿಲ್ಲೆ ವಿದ್ಯಾರ್ಥಿನಿಯರಿಗೆ ಮೊದಲೆರಡು ಸ್ಥಾನ

ಲಾರಿ ಚಾಲಕನ ಮಗಳು ರಾಜ್ಯಕ್ಕೇ ಟಾಪರ್‌; ವಿಜಯನಗರಕ್ಕೆ ಮೊದಲೆರಡು ಸ್ಥಾನ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಗುಂಡಾ ಗ್ರಾಮದ ಲಾರಿ ಚಾಲಕ ರಾಮಾನಾಯ್ಕ್ ಹಾಗೂ ಕಾವೇರಿ ಬಾಯಿ ದಂಪತಿ ಪುತ್ರಿ ಸಂಜನಾ ಬಾಯಿ, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾಳೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ: ಥಾವರ್ ಚಂದ್ ಗೆಹ್ಲೋಟ್

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ: ಗೆಹ್ಲೋಟ್

ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಮತ್ತು ಇತಿಹಾಸವನ್ನು ಸಂರಕ್ಷಿಸುವ ಮತ್ತು ಪ್ರಚಾರ ಮಾಡುವಲ್ಲಿ ಮತ್ತು ಸಂಶೋಧನೆ ಮತ್ತು ಶಿಕ್ಷಣವನ್ನು ಉತ್ತೇಜಿಸುವಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಹಂಪಿ ವಿವಿ 33ನೇ ನುಡಿಹಬ್ಬ; ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ಗೆ ನಾಡೋಜ ಪದವಿ ಪ್ರದಾನ

ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ಗೆ ನಾಡೋಜ ಪ್ರದಾನ

ಹಂಪಿ ವಿಶ್ವವಿದ್ಯಾಲಯದಿಂದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಶಿವರಾಜ್ ವಿ.ಪಾಟೀಲ್, ಖ್ಯಾತ ಬರಹಗಾರ, ಚಿಂತಕ ಕುಂ.ವೀರಭದ್ರಪ್ಪ (ಕುಂ.ವೀ), ಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪ್ರದಾನ ಮಾಡಲಾಯಿತು.

Sugriva's Cave: ಹಂಪಿಯ ಐತಿಹಾಸಿಕ ʼಸುಗ್ರೀವ ಗುಹೆʼ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

ಹಂಪಿಯ ಐತಿಹಾಸಿಕ ʼಸುಗ್ರೀವ ಗುಹೆʼ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್

Sugriva's Cave: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ ವೇಳೆ ಅವರೊಂದಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಇದ್ದರು. ಇಂದಿನ ಹಂಪಿಯ ಸುಗ್ರೀವ ಗುಹೆಯಲ್ಲೇ ಶ್ರೀರಾಮನು ಹನುಮ೦ತ ಮತ್ತು ಸುಗ್ರೀವನನ್ನು ಭೇಟಿಯಾದ ಎ೦ದು ಹೇಳಲಾಗಿದೆ.

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ; ಏ. 4ಕ್ಕೆ ಪ್ರಶಸ್ತಿ ಪ್ರದಾನ

ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್‌ ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜ ಗೌರವಕ್ಕೆ ಆಯ್ಕೆಯಾಗಿದ್ದಾರೆ.

Self Harming: ಹಂಪಿ ಪ್ರವಾಸದಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

ಹಂಪಿ ಪ್ರವಾಸದಲ್ಲಿ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

Self Harming: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದವರಿಗೆ ಹೊಸಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸೂಕ್ತ ಕ್ರಮ: ಡಿ.ಕೆ.ಶಿವಕುಮಾರ್

ತುಂಗಭದ್ರಾ ಡ್ಯಾಂ ನೀರು ಸದ್ಬಳಕೆಗೆ ಸೂಕ್ತ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

DK Shivakumar: ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಆಂಧ್ರ, ತೆಲಂಗಾಣಗಳ ಜತೆ ಚರ್ಚೆ: ಡಿಕೆಶಿ

ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆಗೆ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Hampi Horror: ಹಂಪಿ ಗ್ಯಾಂಗ್‌ರೇಪ್ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಹಂಪಿ ಪಾತಕಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಇವರೇ ಆ ಪಾಪಿಗಳು!

ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿಯ ಮೇಲೆ ಮೂವರನ್ನೂ ಬಂಧಿಸಿದ್ದರು. ಇವರಲ್ಲಿ ಒಬ್ಬಾತ ತಮಿಳುನಾಡಿಗೆ ಪರಾರಿಯಾಗಿದ್ದ. ಆತನನ್ನು ಹಿಡಿತರಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

Hampi Utsav 2025: ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಿ: ಶಾಸಕ ಗವಿಯಪ್ಪ ಕರೆ

ವಾರಕ್ಕೊಮ್ಮೆ ಹಂಪಿ ಇತಿಹಾಸದ ಬಗ್ಗೆ ಕಾರ್ಯಾಗಾರ ಆಯೋಜಿಸಲು ಕರೆ

ಹಂಪಿ ಉತ್ಸವ 2025ರ ಅಂಗವಾಗಿ ಹಂಪಿಯ ಲೋಟಸ್ ಮಹಲ್ ಹತ್ತಿರವಿರುವ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ʼ2 ದಿನಗಳ ವಿಜಯನಗರ ಅಧ್ಯಯನ ಕುರಿತು ವಿಚಾರ ಸಂಕಿರಣಕ್ಕೆ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ ನೀಡಿದರು.

Hampi Utsav 2025: ತುಂಗಭದ್ರೆಗೆ ತುಂಗಾರತಿ ನೆರವೇರಿಸಿದ ಸಚಿವ ಜಮೀರ್‌ ಅಹ್ಮದ್

ತುಂಗಭದ್ರೆಗೆ ತುಂಗಾರತಿ ನೆರವೇರಿಸಿದ ಸಚಿವ ಜಮೀರ್‌ ಅಹ್ಮದ್

Hampi Utsav 2025: ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿ ಗಣ್ಯಮಾನ್ಯರು ತುಂಗಾಭದ್ರ ನದಿಗೆ ತುಂಗಾರತಿ ನೆರವೇರಿಸಿ ಹೂವು, ಕ್ಷೀರ, ತುಪ್ಪ, ಮರದ ಬಾಗಿನ ಸಮರ್ಪಿಸಿದ್ದಾರೆ. ನಾಡಿನಾದ್ಯಂತ ಉತ್ತಮ ಮಳೆಯಾಗಿ, ಎಲ್ಲ ನದಿಗಳು ತುಂಬಿ ಹರಿಯಲಿ, ಜಲಾಶಯಗಳು ಭರ್ತಿಯಾಗಿ, ರೈತರು ಉತ್ತಮ ಬೆಳೆ ಬೆಳೆದು ನಾಡು ಸುಭೀಕ್ಷವಾಗಲಿ ಎಂದು ಹಂಪಿ ವಿರೂಪಾಕ್ಷ ಸೇರಿದಂತೆ ಸಮಸ್ತ ದೇವತೆಗಳಲ್ಲಿ ಪ್ರಾರ್ಥಿಸಲಾಗಿದೆ.

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ: ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪ ಬಿಂಬಿಸುವ ಪ್ರಧಾನ ವೇದಿಕೆ

Hampi Utsav 2025: ಹಂಪಿ ಉತ್ಸವ-2025 ಅಂತಿಮ ಸಿದ್ಧತೆ ಪೂರ್ಣ

Hampi Utsav 2025: ಹಂಪಿ ಉತ್ಸವ-2025 ಆಚರಣೆಯ ಅಂತಿಮ ಸಿದ್ದತೆಗಳು ಪೂರ್ಣಗೊಂಡಿದ್ದು, ಗಾಯತ್ರಿ ಪೀಠದ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರಧಾನ ವೇದಿಕೆ ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪದ ವೈಭವವನ್ನು ಬಿಂಬಿಸುತ್ತಿದೆ. ಹಂಪಿ ಪ್ರಮುಖ ಸ್ಮಾರಕಗಳ ಸಮ್ಮಿಶ್ರಣದಲ್ಲಿ ವೇದಿಕೆ ರಚನೆಯಲ್ಲಿ ಮೂಡಿಬಂದಿದೆ. ಈ ಕುರಿತ ವಿವರ ಇಲ್ಲಿದೆ.

Hampi Utsav 2025: ಹಂಪಿ ಉತ್ಸವ ನಾಡ ಹಬ್ಬವಿದ್ದಂತೆ: ಜಮೀರ್ ಅಹ್ಮದ್ ಖಾನ್

ಹಂಪಿ ಉತ್ಸವಕ್ಕೆ ಸಿದ್ಧತೆ; ಸಚಿವ ಜಮೀರ್ ಅಹ್ಮದ್ ಖಾನ್ ಸಭೆ

ಹಂಪಿ ಉತ್ಸವಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಲಾ 7 ಕೋಟಿ ರೂ. ಅನ್ನು ಈಗಾಗಲೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಕಳೆದ ಬಾರಿ ಉತ್ಸವಕ್ಕೆ 14 ಕೋಟಿ ರೂ. ಅನುದಾನ ನೀಡಲಾಗಿತ್ತು. ಈ ಬಾರಿ 15 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Hampi Utsav 2025: ಹಂಪಿ ಉತ್ಸವಕ್ಕೆ ದಿನಗಣನೆ; ಫೆ.28 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಹಂಪಿ ಉತ್ಸವಕ್ಕೆ ದಿನಗಣನೆ; ಫೆ.28 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

Hampi Utsav 2025: ಫೆ.28 ಹಾಗೂ ಮಾರ್ಚ್ 1 ಮತ್ತು 2 ರಂದು ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ ಜರುಗಲಿದೆ. ಫೆ.28 ರಂದು ಶುಕ್ರವಾರ ಸಂಜೆ 6 ಗಂಟೆಗೆ ಗಾಯತ್ರಿ ಪೀಠದ ಬಳಿ ನಿರ್ಮಿಸಲಾಗಿರುವ ಎಂ.ಪಿ. ಪ್ರಕಾಶ್ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.