ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಜಯನಗರ

Hospet News: ವಿಶೇಷ ಚೇತನರೊಂದಿಗೆ ಯುವ ಮುಖಂಡ ಹಫೀಜ್ ಶೇಖ್ ರವರ ಹುಟ್ಟುಹಬ್ಬ ಆಚರಣೆ

ವಿಶೇಷ ಚೇತನರೊಂದಿಗೆ ಯುವ ಮುಖಂಡರ ಹುಟ್ಟುಹಬ್ಬ ಆಚರಣೆ

ಸಮಾಜದಲ್ಲಿ ಲಕ್ಷಾಂತರು ರೂಪಾಯಿಗಳನ್ನ ಖರ್ಚು ಮಾಡಿ ಆಡಂಬರದ ಆಚರಣೆಗಳನ್ನು ಮಾಡಿ ಕೊಳ್ಳುವುದು ಪ್ರಸ್ತುತ ದಿನಮಾನಗಳಲ್ಲಿ ಸರ್ವೆಸಾಮಾನ್ಯವಾಗಿದೆ. ಇಂತಹ ದಿನಗಳಲ್ಲಿ 130ಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳ ಮತ್ತು ಬುದ್ಧಿಮಾಂದ್ಯ ಮಕ್ಕಳ ಜೊತೆಗೆ ಆಚರಣೆ ಮಾಡಿಕೊಳ್ಳುವುದು ಸಮಾಜ ದಲ್ಲಿ ವಿಶೇಷವಾಗಿದೆ ಎಂದರು

Harapanahalli News: ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಯರೂರು

ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶ

ನಗರದ ಹೊರವಲಯದಲ್ಲಿರುವ ಗೋಸಾಯಿ ಗುಡ್ಡ ಮೇಲೆ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಕಟ್ಟಡ ಸ್ಥಳಕ್ಕೆ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ರಾದ ಪ್ರದೀಪ್ ಸಿಂಗ್ ಯರೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸುಪರ್ದಿನಲ್ಲಿ ನಡೆಯುತ್ತಿದ್ದು ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆ ಇಂಜಿನಿಯರ್‌ಗಳ ಜತೆ ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

Harapanahalli News: ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ : ಶ್ರೀ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು

ಶಿಕ್ಷಕರು ರಾಷ್ಟ್ರದ ನಿರ್ಮಾಪಕರು ಇದ್ದಂತೆ

ಹರಪನಹಳ್ಳಿ ತೆಗ್ಗಿನ ಮಠದ ಟಿ.ಎಂ.ಎ.ಇ ಸಂಸ್ಥೆಯಲ್ಲಿ ಅತಿ ಹೆಚ್ಚು ಟಿ.ಸಿ.ಹೆಚ್.ಶಿಕ್ಷಣ ಪಡೆದು ಶಿಕ್ಷಕರಾಗಿ ವೃತ್ತಿಜೀವನ ನಡೆಸುತ್ತಿರುವವರು ಬಹಳ ಜನ ಶಿಕ್ಷಕರು ಇದ್ದಾರೆ. ಅವರನ್ನೂ ನೋಡಿದ್ದು ಬಹಳ ಸಂತೋಷವಾಗಿದೆ. ಸಮಾಜದ ಬದಲಾವಣೆಯ ತರುವ ಏಕೈಕ ವೃತ್ತಿ ಯಾವುದಾರೂ ಇದ್ದರೆ ಆದು ಶಿಕ್ಷಕ ವೃತ್ತಿ ಆ ವೃತ್ತಿಯನ್ನು ಗೌರವಾಯುತವಾಗಿ ನಡೆದುಕೊಳ್ಳುವುದು ಎಲ್ಲರ ಆದ್ಯಕರ್ತವ್ಯ

Hospet News: ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಮಾಮ್ ನಿಯಾಜಿ ನೇಮಿಸಲು ಮನವಿ

ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿಯಾಜಿ ನೇಮಿಸಲು ಮನವಿ

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

Hospet News: 25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.25ರಂದು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ರಸ್ತೆಯ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Sandur News: ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್: ಕುಮಾರ್ ಎಸ್.ನಾನಾವಟೆ

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್

​ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ತಮ್ಮ ಹೆಸರು 'ಆಜಾದ್' (ಸ್ವಾತಂತ್ರ್ಯ), ತಂದೆಯ ಹೆಸರು 'ಸ್ವಾತಂತ್ರ್ಯ' ಮತ್ತು ವಿಳಾಸ 'ಜೈಲು' ಎಂದು ಉತ್ತರಿಸಿ ಬ್ರಿಟಿಷ್ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದ್ದರು. ಈ ದಿಟ್ಟತನಕ್ಕಾಗಿ ಅವರಿಗೆ 14 ಚಾಟಿಯೇಟಿನ ಶಿಕ್ಷೆ ವಿಧಿಸಲಾಯಿತು. ಅದೇ ಸಂದರ್ಭದಲ್ಲಿ 'ತಾನು ಎಂದಿಗೂ ಬ್ರಿಟಿಷರಿಗೆ ಜೀವಂತವಾಗಿ ಬಂಧಿಯಾಗುವುದಿಲ್ಲ' ಎಂದು ಪ್ರತಿಜ್ಞೆ ಮಾಡಿದ್ದರು," ಎಂದು ನಾನಾವಟೆ ಸ್ಮರಿಸಿದರು.

Vijayanagara News: ಹೊಸಪೇಟೆಯಲ್ಲಿ ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆ ಉದ್ಘಾಟನೆ

ಹೊಸಪೇಟೆಯಲ್ಲಿ ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆ ಉದ್ಘಾಟನೆ

ಹೊಸಪೇಟೆ ನಗರದ ರಾಣಿಪೇಟೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಜಯಶ್ರೀ ಚೈಲ್ಡ್ ಕೇರ್ ಮಕ್ಕಳ ಹಾಗೂ ನವಜಾತ ಶಿಶುಗಳ ಆರೈಕೆ ಆಸ್ಪತ್ರೆ ಉದ್ಘಾಟನೆಯಾಗಿದೆ. ಆಸ್ಪತ್ರೆಯನ್ನು ಜಿಪಂ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ, ಬಲ್ಡೋಟಾ ಗ್ರೂಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿದೇರ್ಶಕ ನರೇಂದ್ರ ಬಲ್ಡೋಟಾ ಉದ್ಘಾಟಿಸಿದರು.

Hospet News: ವಿಜಯಶ್ರೀ ಚೈಲ್ಡ್ ಕೇರ್' ಆಸ್ಪತ್ರೆ ಉದ್ಘಾಟನೆ

ವಿಜಯಶ್ರೀ ಚೈಲ್ಡ್ ಕೇರ್' ಆಸ್ಪತ್ರೆ ಉದ್ಘಾಟನೆ

ವಿಜಯಶ್ರೀ ಚೈಲ್ಡ್ ಕೇರ್ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಅನುಭವಿ ಮಕ್ಕಳ ತಜ್ಞರು ಹಾಗೂ ನುರಿತ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಮಕ್ಕಳಿಗೆ ಸುರಕ್ಷಿತ, ಗುಣಮಟ್ಟದ ಮತ್ತು ಕರುಣಾಮಯ ಆರೋಗ್ಯ ಸೇವೆಗಳನ್ನು ನೀಡಲು ಬದ್ಧವಾಗಿದೆ ಎಂದು ಡಾ. ಹರ್ಷಿತಾ ಜೈನ್ ತಿಳಿಸಿದರು.

ಪ್ರವಾಸಕ್ಕೆ ತೆರಳಿದ್ದಾಗ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು

ಪ್ರವಾಸಕ್ಕೆ ತೆರಳಿದ್ದಾಗ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು

Vijayanagara News: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಘಟನೆ ನಡೆದಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hospet News: ಜು.12ರಂದು ರೋಟರಿ ಹಾಗೂ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

ಜು.12ರಂದು ರೋಟರಿ ಹಾಗೂ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

ಹೊಸಪೇಟೆ ರೋಟರಿ ಕ್ಲಬ್ ಸಾಮಾಜಿಕ ಸೇವೆಯಲ್ಲಿ ವಿಶ್ವಾಸಾರ್ಹತೆಯನ್ನು ಪಡೆದಿದ್ದು ಈಗಾಗಲೇ ರೋಟರಿ ಬ್ಲಡ್ ಬ್ಯಾಂಕ್ ಡಯಾಲಿಸಿಸ್ ಸೆಂಟರ್ ಫಿಸಿಯೋಥೆರಪಿ ಪ್ಯಾಥಲಾಜಿ ಲ್ಯಾಬ್, ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವಾರು ಶಾಶ್ವತ ಯೋಜನೆಗಳನ್ನು ಅತ್ಯಂತ ಹೆಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿದ್ದೇವೆ

ಹಂಪಿ, ಮೈಸೂರು, ಲಕ್ಕುಂಡಿಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ಯೋಜನೆ: ಕೆ.ಜೆ. ಜಾರ್ಜ್

ವಾಯು-ರೈಲು ಸಂಪರ್ಕದೊಂದಿಗೆ ರಾಜ್ಯದ 50 ಪ್ರವಾಸಿ ತಾಣಗಳಿಗೆ ಕಾಯಕಲ್ಪ

Vijayanagara News: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 50 ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಐತಿಹಾಸಿಕ ತಾಣಗಳಾದ ಹಂಪಿ, ಮೈಸೂರು ಮತ್ತು ಲಕ್ಕುಂಡಿ ಕ್ಷೇತ್ರಗಳನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀವ್ರ ಸಿದ್ಧತೆ ನಡೆಸಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

Hospet News: ಭೋವಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಪಿ.ಬಾಬು ನೇಮಕ

Hospet News: ಭೋವಿ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಪಿ.ಬಾಬು ನೇಮಕ

ಕರ್ನಾಟಕ ಭೋವಿ (ವಡ್ಡರ) ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯದಂತೆ, ವಿಜಯನಗರ ಜಿಲ್ಲೆಯಲ್ಲಿ ಮಹಾಸಭಾದ ಸಂಘಟನೆಯನ್ನು ಬಲಪಡಿಸುವುದು. ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವುದು. ರಾಜ್ಯ ಸಮಿತಿಯ ನಿರ್ದೇಶನಗಳನ್ನು ಪಾಲಿಸಿ, ಜಿಲ್ಲಾ ಮಟ್ಟದ ಕಾರ್ಯ ಕ್ರಮಗಳನ್ನು ಆಯೋಜಿಸಬೇಕು

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ; ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ

CM DK Shivakumar: ತುಂಗಭದ್ರಾ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

National Aryabhata Award: ಧರ್ಮನಗೌಡಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಧರ್ಮನಗೌಡಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುವುದರಿಂದ ಹಿಡಿದು ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾಸ್ಕ್ ವಿತರಣೆ ಕಾರ್ಯ ಗಳಲ್ಲಿ ಅವರು ಮುಂಚೂಣಿಯಲ್ಲಿ ಕಾಣಿಸಿಕೊಂಡರು. ಸಮಾಜ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆ ಯಲ್ಲಿಯೂ ಧರ್ಮನಗೌಡ ಅವರು ಗಮನಾರ್ಹ ಕೆಲಸ ಮಾಡಿದ್ದಾರೆ.

Hospet News: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್ ವತಿಯಿಂದ 2070ನೇ ಮದ್ಯವರ್ಜನ 8 ದಿನಗಳ ಶಿಬಿರಕ್ಕೆ ಚಾಲನೆ

2070ನೇ ಮದ್ಯವರ್ಜನ 8 ದಿನಗಳ ಶಿಬಿರಕ್ಕೆ ಚಾಲನೆ

ಶಿಬಿರದಲ್ಲಿ ನಿತ್ಯ ಬೆಳಿಗ್ಗೆಯಿಂದ ರಾತ್ರಿವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಪ್ರಮುಖ ವಾಗಿ ಯೋಗ, ವ್ಯಾಯಾಮ,ಸ್ವಚ್ಛತೆ, ಶ್ರಮದಾನ, ಆಪ್ತ ಸಲಹೆ, ಪ್ರಮುಖರಿಂದ ಮಾರ್ಗದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವ ರಿಗೆ ಮಾಹಿತಿ ನೀಡಲಾಯಿತು.

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಿ; ಸಂಸದ ಈ. ತುಕಾರಾಂಗೆ ಮನವಿ

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಮನವಿ

Vijayanagara News: ಹೊಸಪೇಟೆಗೆ ನೂತನ ಇಎಸ್ಐ (ESI) ಆಸ್ಪತ್ರೆ ಸ್ಥಾಪಿಸಲು ಸಂಸದ ಈ. ತುಕಾರಾಂ ಅವರಿಗೆ ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಜಮೀರ್ ಅಹ್ಮದ್‌ಗೆ ಡಿಸಿಎಂ ಸ್ಥಾನ ನೀಡಿ; ಮುಸ್ಲಿಂ ಮುಖಂಡರ ಆಗ್ರಹ

ಜಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಸ್ಥಾನ ನೀಡಿ; ಮುಸ್ಲಿಂ ಮುಖಂಡರ ಆಗ್ರಹ

Vijayanagara News: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ನಾಯಕ ಜಮೀರ್ ಅಹ್ಮದ್ ಖಾನ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಕೊತ್ವಾಲ್ ಮಹಮ್ಮದ್ ಸೇರಿದಂತೆ ಇತರೆ ಮುಖಂಡರು, ಜಮೀರ್ ಅಹ್ಮದ್ ಖಾನ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಏ.30 ರಿಂದ ಮೇ 5ರವರೆಗೆ ಹೊಸಪೇಟೆಯಲ್ಲಿ ಶ್ರೀ ಕಾಳಿಕಾದೇವಿ ದೇವಸ್ಥಾನದ ನೂತನ ಗರ್ಭಗುಡಿ ಆಲಯ ಸಮರ್ಪಣೆ, ವಿವಿಧ ಧಾರ್ಮಿಕ ಕಾರ್ಯಕ್ರಮ

ಹೊಸಪೇಟೆಯಲ್ಲಿ ಏ.30 ರಿಂದ ಶ್ರೀ ಕಾಳಿಕಾದೇವಿ ದೇವಸ್ಥಾನ ಪ್ರತಿಷ್ಠಾಪನೆ

Vijayanagara News: ಹೊಸಪೇಟೆ ತಾಲೂಕು ವಿಶ್ವಕರ್ಮ ಸಮಾಜದಿಂದ ಏ.30 ರಿಂದ ಮೇ 5 ರವರೆಗೆ ಹೊಸಪೇಟೆ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕಂಚುಗಾರಪೇಟೆಯಲ್ಲಿರುವ ನೂತನ ಗರ್ಭಗುಡಿ ಆಲಯ ಸಮರ್ಪಣೆ ಹಾಗೂ ಶ್ರೀ ಕಾಳಿಕಾದೇವಿ ಕಮಟೇಶ್ವರ ದೇವರ ಹಾಗೂ ಪರಿವಾರ ದೇವರ ಅಷ್ಟಬಂಧ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ ಹಾಗೂ ನವಚಂಡಿಕಾ ಯಾಗ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಜಿಲ್ಲಾಧ್ಯಕ್ಷ ಕೆ.ವಿ. ಪತ್ತಾರ್ ಹಾಗೂ ವಿ. ಶಂಕರಾಚಾರ್ಯ ತಿಳಿಸಿದ್ದಾರೆ.

Road Accident: ವಧು ನೋಡಲು ಹೋಗುತ್ತಿದ್ದ ಗಂಡು, ಅಪ್ಪ- ಅಮ್ಮ ಅಪಘಾತದಲ್ಲಿ ದುರ್ಮರಣ

ವಧು ನೋಡಲು ಹೋಗುತ್ತಿದ್ದ ಗಂಡು, ಅಪ್ಪ- ಅಮ್ಮ ಅಪಘಾತದಲ್ಲಿ ದುರ್ಮರಣ

ಹಗರಿಬೊಮ್ಮನಹಳ್ಳಿ ತಾಲೂಕಿನ ಕಿತ್ನೂರು ಗ್ರಾಮದ ಕೊಟ್ರೇಶ್‌ಗೆ ಮದ್ವೆ ಮಾಡೋದಕ್ಕೆ ಮನೆಯವರು ಮುಂದಾಗಿದ್ದರು. ಕನ್ಯೆ ನೋಡುವ ಶಾಸ್ತ್ರವನ್ನೂ ಏರ್ಪಡಿಸಿದ್ದರು. ಕೊಟ್ರೇಶ್ ಬೈಕ್‌ನಲ್ಲಿ ತಂದೆ ತಾಯಿಯನ್ನು ಕೂರಿಸಿಕೊಂಡು ಹೆಣ್ಣಿನ ಮನೆಗೆ ತೆರಳುತ್ತಿದ್ದರು. ಇನ್ನೇನು ಸ್ವಲ್ಪವೇ ದೂರ ಹೋದರೆ ಹೆಣ್ಣಿನ ಮನೆ ಎಂಬಷ್ಟರಲ್ಲಿ ಜವರಾಯ ಬಂದೆರಗಿದ್ದಾನೆ.

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಬೈಕ್‌ಗೆ ಬೊಲೆರೋ ಡಿಕ್ಕಿ, ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸಾವು

ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬೊಲೆರೋ ಡಿಕ್ಕಿಯಾಗಿದೆ. ಸದ್ಯ ಗೂಡ್ಸ್ ವಾಹನ ಹಿಡಿದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಳೆ ಹಂಪಿ ಕನ್ನಡ ವಿಶ್ವವಿದ್ಯಾಲಯದ 34ನೇ ನುಡಿ ಹಬ್ಬ; ಲೇಖಕ ಡಾ. ಜಿ.ರಾಮಕೃಷ್ಣ ಸೇರಿ ಮೂವರಿಗೆ ನಾಡೋಜ ಗೌರವ

ನಾಳೆ ಹಂಪಿ ಕನ್ನಡ ವಿವಿ 34ನೇ ನುಡಿ ಹಬ್ಬ; ಮೂವರಿಗೆ ನಾಡೋಜ ಗೌರವ

ಈ ಬಾರಿ ಬೆಂಗಳೂರಿನ ವಿದ್ವಾಂಸ ಮತ್ತು ಲೇಖಕ ಡಾ. ಜಿ.ರಾಮಕೃಷ್ಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಸಿ.ಮಹಾದೇವಪ್ಪ, ವಿಶ್ರಾಂತ ಆಡಳಿತಾಧಿಕಾರಿ ಡಾ.ಎಚ್‌.ಸಿ.ಸತ್ಯನ್‌ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆಯಾಗಿದ್ದಾರೆ. ಇನ್ನು 107 ಮಂದಿಗೆ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪ್ರದಾನ ಮಾಡಲಾಗುತ್ತದೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಯುವಕನ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

2025ರ ಮಾರ್ಚ್‌ನಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪುರ ಬಳಿ ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಜತೆಗಿದ್ದ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

ಹಂಪಿಯಲ್ಲಿ ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ

ಹಂಪಿ ಉತ್ಸವದಲ್ಲಿ ತಾಯಿ‌ ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ

Hampi Utsav 2026: ಹಂಪಿ ಉತ್ಸದ ಕೊನೆಯ ದಿನ ಭಾನುವಾರ ನಡೆದ ಜಾನಪದ ವಾಹಿನಿ ಮೆರವಣಿಗೆಯಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡು, ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಕರ್ನಾಟಕಕ್ಕೆ ಬಂಪರ್ ಕೊಡುಗೆ; ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಅಸ್ತು

ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಅಸ್ತು

Pralhad Joshi: ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡುವ ಮೂಲಕ ರಾಜ್ಯ ಪ್ರವಾಸೋದ್ಯಮಕ್ಕೆ ಮಹತ್ತರ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಶನಿವಾರ, ಈ ಯೋಜನೆಗೆ ಅಸ್ತು ಎಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

Loading...