ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಜಯಪುರ

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಸ್ಥಳೀಯರು ಹಾಗೂ ಸಾರ್ವಜನಿಕ ಸಂಘಟನೆಗಳ ಪ್ರಕಾರ, ಟ್ರಾಮಾ ಸೆಂಟರ್‌ನಲ್ಲಿ ಅಗತ್ಯ ವೈದ್ಯರು, ತಜ್ಞ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು ಹಾಗೂ ಆಡಳಿತಾತ್ಮಕ ವ್ಯವಸ್ಥೆ ಇನ್ನೂ ಪೂರ್ಣ ಪ್ರಮಾಣ ದಲ್ಲಿ ಸಿದ್ಧವಾಗಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಟ್ರಾಮಾ ಸೆಂಟರ್ ಅನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

Almatti Dam : ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಕೃಷ್ಣಾ ನದಿಯನ್ನೇ ಅವಲಂಬಿಸಿದೆ. ಕಲಬುರಗಿ ನಗರದ ಸರಡಗಿ ಬ್ಯಾರೇಜ್ ಸೇರಿದಂತೆ ಇಂಡಿ, ಸಿಂದಗಿ, ತಾಳಿಕೋಟೆ ಭಾಗಗಳಿಗೆ ನಾರಾಯಣಪುರ ಜಲಾಶಯದಿಂದ ಸುಮಾರು 150 ಕಿ.ಮೀ. ದೂರದವರೆಗೆ ನೀರು ಹರಿಸ ಬೇಕಾಗುತ್ತದೆ.

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ಕನಸಿನ ಮನೆಗೆ ಎಂ.ಬಿ.ಪಾಟೀಲ್ ಹೆಸರಿಟ್ಟ ರೈತ

ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಕುಟುಂಬದ ಸಿದ್ದಯ್ಯ, ಸಾತಯ್ಯ, ಮಲ್ಲಯ್ಯ, ಬಸಯ್ಯ ಹಾಗೂ ಚಂದ್ರವ್ವ ಎಂಬ 30ಕ್ಕೂ ಹೆಚ್ಚು ಜನ ಇರುವ ಅವಿಭಕ್ತ ಕುಟುಂಬವು ವಿಜಯಪುರದ ರಾಜಕುಮಾರ್ ಬಡಾವಣೆಯಲ್ಲಿ ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸ್ವಂತ ಮನೆಗೆ ಸಚಿವ ಎಂ.ಬಿ.ಪಾಟೀಲರ ಹೆಸರನ್ನು ಇಡುವ ಮೂಲಕ ತಮ್ಮ ಭೂಮಿಗೆ ನೀರುಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Indi News: ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ಜು.13-14ರವರೆಗೆ ಶ್ರೀಮಾತಾ ದುರ್ಗಾದೇವಿಯ ಜಾತ್ರೆ ಅದ್ದೂರಿ ಆಚರಣೆ

ನವಮಿ ಮಂಗಲ ಕಾರ್ಯಾಲಯದ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜು.13ರಂದು ರಾತ್ರಿ ಮರಾಠಿ ಕಲಾಪತ್ರ ಕೋಲ್ಹಾಪೂರ ಇವರಿಂದ ಮನಂರಜಾ ಕಾರ್ಯ ಕ್ರಮ ಮತ್ತು ಜು.14 ರಂದು ಬೆಳಿಗ್ಗೆ 5 ಗಂಟೆಗೆ ಶ್ರೀದುರ್ಗಾಮಾತೆಗೆ ಮಹಾ ಮಂಗಳಾರತಿ , ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಧ್ಯಪ್ರದೇಶ, ರಾಜಸ್ಥಾನ, ಅಂತರಾಷ್ಟ್ರೀಯ ಕಲಾವಿದ ರಿಂದ ಹಾಗೂ ಕರ್ನಾಟಕ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಗಳು ಜರುಗುವವು,

Vijayapura Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ಅಪಘಾತ ನಡೆದಿದೆ. ದುರ್ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಆಲಮಟ್ಟಿ ಜಲಾಶಯದಲ್ಲಿ ನಾಲ್ಕು ದಿನಗಳಲ್ಲಿ 40 ಟಿಎಂಸಿ ನೀರು ಸಂಗ್ರಹ

ಶುಕ್ರವಾರದಿಂದ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿದೆ ಎಂದು ಮಹಾರಾಷ್ಟ್ರ ದ ಜಲ ಸಂಪನ್ಮೂಲ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಕೃಷ್ಣಾ ನದಿಯ ಮುಖ್ಯ ಹರವಿನಲ್ಲಿ ಒಳಬರುವ ನೀರಿನ ಪ್ರಮಾಣದಲ್ಲಿ ಯಾವದೆ ಕ್ಷಣದಲ್ಲಿ ಕಡಿಮೆಯಾಗಲಿದೆ ಎಂಬ ಆತಂಕ ಮೂಡಿದೆ.

ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

ನಕಲಿ ಡಿಎಸ್‌ಪಿ ಹೆಡೆಮುರಿ ಕಟ್ಟಿದ ವಿಜಯಪುರ ಖಾಕಿ

Vijayapura News: ತಾನು ಡಿಎಸ್‌ಪಿ ಎಂದು ನಂಬಿಸಿ, ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

Indi MLA Yashwant Rayagouda Patil Interview: ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಹ್ಯಾಟ್ರಿಕ್‌ ಗೆಲುವಿನ ಅಭಿವೃದ್ಧಿ ಪವರ್‌ ಸಚಿವ ಸ್ಥಾನದ ವಿಶ್ವಾಸ

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕ ಹಾಗೂ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇಂಡಿ ಶಾಸಕ ಯಶವಂತ್ ರಾಯಗೌಡ ಪಾಟೀಲ್, ವಿಜಯಪುರ ಜಿಲ್ಲೆಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಕೃಷ್ಣಾ ನದಿಯ ನೀರಿನ ಹರವಿನಲ್ಲಿ ಚೇತರಿಕೆ

ಕೃಷ್ಣಾ ನದಿಯ ನೀರಿನ ಹರವಿನಲ್ಲಿ ಚೇತರಿಕೆ

ಭಾನುವಾರ ಬೆಳಗ್ಗೆ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆಯು ವರದಿ ಪ್ರಕಾರ, ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಮಳೆ ಬಿದ್ದ ಪ್ರಮಾಣದ ಅಂಕಿಅಂಶಗಳ ಅನ್ವಯ ಕೊಯಿನಾದಲ್ಲಿ 116 ಎಮ್.ಎಮ್.. ನವಜಾದಲ್ಲಿ 161 ಎಂ.ಎಂ ಕೃಷ್ಣಾ ನದಿಯ ಉಗಮ ಸ್ಥಾನವಾದ ಮಹಾಬಲೇಶ್ವರ ದಲ್ಲಿ 179 ಎಂ.ಎಂ ಮಳೆಯಾಗಿದೆ.

Indi News: ದೇಶ ಸೇವೆ ಮಾಡುವುದು ಪವಿತ್ರವಾದ ಕಾರ್ಯ

ದೇಶ ಸೇವೆ ಮಾಡುವುದು ಪವಿತ್ರವಾದ ಕಾರ್ಯ

ದೇಶ ಸೇವೆಗೆ ಗಂಡು ಹೆಣ್ಣು ಬೇಧವಿಲ್ಲ ವಿದ್ಯಾರ್ಥಿ ದೆಸೆಯಿಂದಲೇ ದೇಶ ಸೇವೆ ಮಾಡುವ ಗುರಿ ಇಟ್ಟುಕೊಂಡು ಪ್ರಯತ್ನಿಸ ಬೇಕು. ಒಬ್ಬ ರೈತ ಹಾಗೂ ಒಬ್ಬ ಸೈನಿಕ ಈ ದೇಶಕ್ಕೆ ದೊಡ್ಡ ಶಕ್ತಿ ಇವರಿಬ್ಬರ ನಿಸ್ವಾರ್ಥ ಸೇವೆ ಯಿಂದ ನಾವೆಲ್ಲ ಸಮೃದ್ಧಿ ಜೀವನ ನಡೆಸಲು ಸಾಧ್ಯವಾಗಿದೆ ತಾವುಗಳು ನಿಷ್ಠೆಯಿಂದ ದೇಶಕ್ಕಾಗಿ ದುಡಿಯಬೇಕು ಎಂದು ಯೋಧರಿಗೆ ಕರೆ ನೀಡಿದರು

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂ.ಬಿ. ಪಾಟೀಲ್‌ ಆರೋಪ

ಬಿಡದಿ ಟೌನ್‌ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ

MB Patil: ವಿಜಯಪುರದಲ್ಲಿ ಬಿಡದಿ ಟೌನ್‌ಶಿಪ್ ವಿಚಾರ ಕುರಿತು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್‌ಶಿಪ್ ಘೋಷಣೆಯಾಗಿತ್ತು. ಅವರು ಆಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಆಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

Indi News: ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಮಾನವ ಕುಲದ ಅಮೂಲ್ಯ ಸಂಪತ್ತು ಯೋಗ

ಯೋಗ ಮಾನವ ಕುಲದ ಅಮೂಲ್ಯ ಸಂಪತ್ತು. ಅದು ಆರೋಗ್ಯಕರ ಮತ್ತು ಸಂತೋಷಕರ ಬದುಕಿಗೆ ಮಾರ್ಗದರ್ಶಿ, ಹಳ್ಳಿ ಹಳ್ಳಿಗಳಲ್ಲಿ ಯೋಗದ ಪ್ರಚಾರ ಆಗಬೇಕು. ಅಬಾಲವೃದ್ದಿಯಾಗಿ ಎಲ್ಲರೂ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡರೆ ಆರೋಗ್ಯವಂತ ವ್ಯಕ್ತಿಗಳು ಸದೃಡ ಕುಟುಂಬಗಳು ಹಾಗೂ ಸುಸ್ಥಿರ ಸಮಾಜ ತನ್ನಿಂದ ತಾನೇ ನಿರ್ಮಾಣವಾಗುವದು

ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ; ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ಬಿ.ಎಲ್.ಡಿ.ಇ ಸಂಸ್ಥೆಯ 94 ವಿದ್ಯಾರ್ಥಿಗಳು ನೈಡೆಕ್ ಕಂಪನಿಗೆ ಆಯ್ಕೆ

MB Patil: ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ.

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಹುಬ್ಬಳ್ಳಿ- ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ

MB Patil: ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್‌ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

Vijayapur Accident: ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Vijayapur News: ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

Vijayapur pan shop Blast: ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಈ ಸ್ಫೋಟವು ಅಂಗಡಿಯ ಒಳಗಿನ ತಾಂತ್ರಿಕ ದೋಷದಿಂದ ಆಗಿರದೆ, ಹೊರಗಡೆಯಿಂದಲೇ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಇರಬಹುದೇ ಅಥವಾ ಬೇರೆನಾದರೂ ಸ್ಫೋಟಕ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಕೆಬಿಜೆಎನ್ ಎಲ್ ವ್ಯಾಪ್ತಿಯಲ್ಲಿ ನಡೆದಿದ್ದ ಕಾಮಗಾರಿಯೊಂದಕ್ಕೆ ಸಂಬಂದಿಸಿದಂತೆ ಬಾಕಿ ಇದ್ದ 3 ಲಕ್ಷ 71 ಸಾವಿರ ರೂ ಬಿಲ್ ಬಿಡುಗಡೆಗೆ ಈ ಅಧಿಕಾರಿಗಳು ಒಟ್ಟು 18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಕೆಬಿಜೆಎನ್ ಎಲ್ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವುಲಾಲ ಚವ್ಹಾಣ ತಮ್ಮ ಪಾಲಿನ ಹತ್ತು ಸಾವಿರ ಹಾಗೂ ಮತ್ತೊಂದು ವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೋಡಗಿ ಎಂಟು ಸಾವಿರ ಲಂಚದ ಹಣವನ್ನು ಪಡೆಯು ತ್ತಿದ್ದರು.

ಸರಕಾರಿ ಸಾರ್ವಜನಿಕ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬವನ್ನು ಸ್ಮರಿಸುತ್ತಾರೆ

ಸರಕಾರಿ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬವನ್ನು ಸ್ಮರಿಸುತ್ತಾರೆ

ಸರಕಾರಿ ಸಾರ್ವಜನಿಕ ಆಸ್ಪತ್ರೆ ಎಂದಾಕ್ಷಣ ಕೋಳೇಕರ್ ಕುಟುಂಬ ಎಲ್ಲರೂ ಸ್ಮರಿಸುತ್ತಾರೆ. ಇವರ ಸೇವಾ ಮನೋಭಾವ ಸಾರ್ವಜನಿಕ ಬದುಕಿನಲ್ಲಿ ಹೊಂದಿರುವ ಸಂಬಂಧ ಅಷ್ಟಿಷ್ಟಲ್ಲ. ಡಾ.ರಾಜಶೇಖರ ಕೋಳೇಕರ್ ಸದಾ ಹಸನ್ಮುಖಿ ಎಂದಿಗೂ ಸಿಟ್ಟಿನಿಂದ ಸಾರ್ವಜನಿಕರಿಗೆ ರೋಗಿಗಳಿಗೆ ಕಿಂಚಿತ್ ನೋವನ್ನುಂಟು ಮಾಡದೆ ಸಾರ್ವಜನಿಕರ ಸೇವೆ ದೇವರ ಸೇವೆ ಎಂದು ಕರ್ತವ್ಯದಿಂದ ಮೆರೆದಿದ್ದಾರೆ.

Indi News: ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅನುಭವಿ: ಮರೇಪ್ಪ ಗಿರಣಿವಡ್ಡರ್

ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅನುಭವಿ: ಮರೇಪ್ಪ ಗಿರಣಿವಡ್ಡರ್

ಮಲ್ಲಿಕಾರ್ಜುನ ಯಂಡಿಗೇರಿಯವರು ಜನತಾದಳದ ಮೂಲ ಕಾರ್ಯಕರ್ತರು , ಸಂಘಟನಾ ಚತುರರು ಹೌದು ಹೋರಾಟದ ಹಿನ್ನಲೆಯಿಂದ ಬಂದವರು. ಮಲ್ಲಿಕಾರ್ಜುನ ಯಂಡಿಗೇರಿ ರಾಜಕೀಯ ಅಪಾರ ಅನುಭವ ಹೊಂದಿದ ದೊಡ್ಡ ಶಕ್ತಿ. ಇವರು ಗೋಕಾಕ ಚಳುವಳಿಯಲ್ಲಿ ಭಾಗವಹಿಸಿದ ಇತಿಹಾಸವಿದೆ. 3 ಬಾರಿ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷರಾಗಿ ಸಾಹಿತ್ಯ ಸಂಸ್ಕೃತಿಯನ್ನು ನಾಡಿನಾದ್ಯೆಂತ ಪಸರಿಸಿದ್ದಾರೆ

Medical Negligency: ತಾಲೂಕು ಆಸ್ಪತ್ರೆಯಲ್ಲಿ ಒಂದೇ ಸಿರೆಂಜಿನಲ್ಲಿ ಹಲವಾರು ಜನರಿಗೆ ಚುಚ್ಚುಮದ್ದು : ವೈದ್ಯಕೀಯ ಲೋಪ ಎಸಗಿದ ಸಿಬ್ಬಂದಿ !

ವೈದ್ಯಕೀಯ ಲೋಪ ಎಸಗಿದ ಸಿಬ್ಬಂದಿ !

ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ, ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕ ಮತ್ತು ಹೊಸ ಸಿರಿಂಜ್ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಕಾನೂನು ಇದೆ ಆದರೆ ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಮಲ್ಲಿಕಾರ್ಜುನ ಎಂಬ ಯುವಕ ಸಣ್ಣಪುಟ್ಟ ಗಾಯಗಳಾ ಗಿದ್ದು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಹೋಗಿದ್ದಾನೆ ಈ ವೇಳೆ ಕರ್ತವ್ಯದಲ್ಲಿದ್ದ ಸ್ಟಾಪ್ ನರ್ಸ್ ಕೇವಲ ಸೂಜಿ ಬದಲಿಸಿ ಹಳೆಯ ಸಿರೇಂಜ್ ಬಳಸಿ ಚುಚ್ಚುಮದ್ದು ನೀಡಿದ್ದಾನೆ.

ಯಶವಂತಪುರ-ವಿಜಯಪುರ ದ್ವೈಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

ಜೂನ್ 1ರಿಂದ 'ಯಶವಂತಪುರ-ವಿಜಯಪುರ' ದ್ವೈಸಾಪ್ತಾಹಿಕ ವಿಶೇಷ ರೈಲು ಸಂಚಾರ

Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ, ಪ್ರಸ್ತಾವನೆ ಮೇರೆಗೆ ʼಯಶವಂತಪುರ-ವಿಜಯಪುರʼ ನಡುವೆ ಇದೇ ಜೂನ್ 1ರಿಂದಲೇ ದ್ವೈಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಅನುಮೋದಿಸಿದೆ.

Vijayapur Murder Case: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಜಮೀನು ವಿಚಾರಕ್ಕೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ!

ವಿಜಯಪುರದಲ್ಲಿ ಜಮೀನು ವಿಚಾರಕ್ಕೆ 6 ಮಂದಿಯ ಭೀಕರ ಕೊಲೆ!

ವಿಜಯಪುರ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಭೀಕರ ಘಟನೆ ನಡೆದಿದೆ. ಗೊಳಗಿ ಮತ್ತು ನಿರಾಳೆ ಕುಟುಂಬಗಳ ನಡುವೆ ಜಮೀನು ವಿವಾದವಿತ್ತು. ಇದಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಗೊಳಗಿ ಕುಟುಂಬದವರು, ಆರು ಮಂದಿಯನ್ನು ಭೀಕರವಾಗಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ.

GI Tag for Dry Grapes: ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ

ಜಿಲ್ಲೆಯ ಇಂಡಿ ಭಾಗದಲ್ಲಿ ಬೆಳೆಯುವ ಲಿಂಬೆಗೆ ಜಿಐ ಟ್ಯಾಗ್ ದೊರಕಿದೆ. ಇನ್ನೂ ಅನೇಕ ದೇಶಗಳಿಗೆ ರಫ್ತಾಗುವ ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ. ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾದ ಒಣದ್ರಾಕ್ಷಿಗೆ ಜಿಐ ಟ್ಯಾಗ್ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಶರವೇಗದಿಂದ ನಡೆಯುತ್ತಿದ್ದು, ಜಿಐ ಟ್ಯಾಗ್ ದೊರಕಿದರೆ ರೈತರ ಸಂತಸ ಮತ್ತಷ್ಟು ಹೆಚ್ಚಾಗಲಿದೆ.

ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಯತ್ನಾಳ್ ಕರೆ

ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ಯತ್ನಾಳ್

ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ. ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು? ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್‌ ಕಿಡಿಕಾರಿದ್ದಾರೆ.

Loading...