ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಿಜಯಪುರ

Dr. Vijaya Sankeshwar: ನಾವು ಎಷ್ಟೇ ದೊಡ್ಡವರಾದರೂ ತಂದೆ ತಾಯಿ ಋಣ ತೀರಿಸಲು ಅಸಾಧ್ಯ: ಡಾ.ವಿಜಯ ಸಂಕೇಶ್ವರ

ಸನಾತನ ಧರ್ಮ ಉಳಿಯಬೇಕು

ಮನುಷ್ಯ ಪ್ರತಿಯೊಂದನ್ನೂ ಕಷ್ಟಪಟ್ಟು ಪಡೆದುಕೊಂಡಾಗ ಮಾತ್ರ ಅದರ ಬೆಲೆ ಅವನಿಗೆ ತಿಳಿಯುತ್ತದೆ. ಬಿಟ್ಟಿ ಅಥವಾ ಉಚಿತವಾಗಿ ಪಡೆದುಕೊಂಡರೆ ಅದರ ಮೌಲ್ಯ ಅವನಿಗೆ ಗೊತ್ತಾ ಗಲ್ಲ. ಉಚಿತವಾಗಿ ಸಿಗುವ ಎಲ್ಲದ್ದರಿಂದ ಮನುಷ್ಯ ಉದ್ಧಾರವಾಗಲ್ಲ ಬದಲಾಗಿ ದುಷ್ಠನಾಗು ತ್ತಾನೆ, ದೇಶದ್ರೋಹಿಯಾಗುತ್ತಾನೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಾರ್ಮಿಕರಿಗೆ ಕಾರ್ಖಾನೆ ನಿಗದಿಪಡಿಸಿದ ದರ ನೀಡುತ್ತದೆ. ಆದರೆ ಈಗ ಕಾರ್ಖಾನೆ ನೀಡುವ ಕಟಾವು ದರದ ಜೊತೆಗೆ ರೈತರಿಗೆ ಎಕರೆಗೆ 3 ರಿಂದ 4 ಸಾವಿರ ಹೆಚ್ಚುವರಿ ಹಣವನ್ನು ಏಜೆಂಟರ್‌ ಮೂಲಕ ಕೇಳುತ್ತಾರೆ. ಬೇಗ ಬರಲು ಚಿಕನ್ ಮಟನ್ ಗೆ ಹಣ ನೀಡಬೇಕು ಎಂದು ಕಬ್ಬು ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈಗ ಎಷ್ಟು ಅಲೆದರೂ ಕಬ್ಬು ಕಡಿಯುವವರು ಸಿಗುತ್ತಿಲ್ಲ.

ಸಿದ್ದೇಶ್ವರ ಸನ್ನಿಧಿಯಲ್ಲಿ ಜಟ್ಟಿಗಳ ಶಕ್ತಿ ಪ್ರದರ್ಶನ

ಸಿದ್ದೇಶ್ವರ ಸನ್ನಿಧಿಯಲ್ಲಿ ಜಟ್ಟಿಗಳ ಶಕ್ತಿ ಪ್ರದರ್ಶನ

ಪೈಗಂಬರ ಮಮದಾಪೂರ ಎಂಬ ಜಟ್ಟಿ 80ಕ್ಕೂ ಹೆಚ್ಚು ಕಿಲೋ ಭಾರದ ಸಂಗ್ರಾಣಿ ಕಲ್ಲನ್ನು ಸರಳವಾಗಿ ಎತ್ತಿ ಸಾಹಸ ಪ್ರದರ್ಶಿಸಿದರೆ, ಶಂಕ್ರಪ್ಪ ಭಾವಿ ತನ್ನ ಮೀಸೆ ಯಿಂದ 75 ಕೆಜಿ ಭಾರತದ ಕಲ್ಲನ್ನು ಎತ್ತಿದ, ಜೈ ಹನುಮಾನ ಪಾದಗಟ್ಟಿ 300 ಕೆಜಿಯಷ್ಟು ಉಸುಕಿನ ಚೀಲವನ್ನು ಹತ್ತಾರು ಬಾರಿ ಎತ್ತಿದೆ, ರಮೇಶ ಪಾಟೀಲ 50 ಕೆಜಿ ಭಾರದ ಸಂಗ್ರಾಣಿ ಕಲ್ಲನ್ನು ಹಲ್ಲಿನಿಂದ ಎತ್ತಿದರು, ಕಾಂತಪ್ಪ ಯರಗಲ್ 75 ಕೆಜಿ ಸಂಗ್ರಾಣಿ ಕಲ್ಲನ್ನು ಗಡ್ಡಕ್ಕೆ ಹಗ್ಗ ಕಟ್ಟಿಕೊಂಡು ಎಳೆದದ್ದು ನೋಡುಗರನ್ನು ರೋಮಾಂಚನವಾಗಿಸಿತು.

Indi News: ವಿಮೆ ಪರಿಹಾರ ಜಮೆ ಮಾಡಿ: ಬಿಜೆಪಿ ಆಗ್ರಹ

ವಿಮೆ ಪರಿಹಾರ ಜಮೆ ಮಾಡಿ: ಬಿಜೆಪಿ ಆಗ್ರಹ

ಬೆಳೆ ವಿಮೆ ತುಂಬಿದ ರೈತರಿಗೆ ಇದುವರೆಗೂ ಪರಿಹಾರ ಮೊತ್ತ ಜಮಾ ಆಗಿಲ್ಲ. ಅಕಾಲಿಕ ಮಳೆ ಯಿಂದಾಗಿ ಜಿಲ್ಲಾದ್ಯಂತ ರೈತರ ಎಲ್ಲ ಬೆಳೆಗಳು ಸಂಪರ‍್ಣ ಹಾಳಾಗಿ ಹೋಗಿದ್ದು, ಈ ಕೂಡಲೇ ವಿಮಾ ಮೊತ್ತ ಜಮಾ ಮಾಡಲು ಸರ್ಕಾರ ಮುಂದಾಗಬೇಕು. ಇಲ್ಲವಾದರೆ 15 ದಿನಗಳ ನಂತರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ

Indi News: ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಚ್ಛತಾ ಶ್ರಮದಾನ ಮುಖ್ಯ: ಉಪನ್ಯಾಸಕಿ ಶಾಹಿನಾ ಪಾಟೀಲ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಚ್ಛತಾ ಶ್ರಮದಾನ ಮುಖ್ಯ

ವಿದ್ಯಾರ್ಥಿಗಳು ಡಾ.ಅಬ್ದುಲ್ ಕಲಾಂ ರವರ ವಾಣಿ ಯಂತೆ ಹೊಲದಲ್ಲಿ ಬೆಳೆಯುವ ಬೇಳೆಗಳು ಬೆಳೆಯುವ ವ್ಯಕ್ತಿ ಕಳೆ ಇಟ್ಟುಕೊಂಡರೆ ಬುದ್ಧಿಮಾಂದ್ಯ ವ್ಯಕ್ತಿಯಾಗಿರುತ್ತಾನೆ. ಅದಕ್ಕೆ ಶಿಕ್ಷಕ ಯಾವ ರೀತಿಯ ಮಾರ್ಗದರ್ಶನ ಜ್ಞಾನ ನೀಡಿ ಕಳೆಯನ್ನು ತೆಗೆದು ವಿಶ್ವಜ್ಞಾನಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ರಂತಹ ವಿಶ್ವರತ್ನ ಪಡೆದುಕೊಂಡಿದ್ದೇವೆ

Indi News: ಶಿಕ್ಷಣ ಪ್ರವಾಹವಿದ್ದಂತೆ: ಗುರುಮಾತೆ ಚೆನ್ನಮ್ಮಾ ಝಳಕಿ ಅಭಿಮತ

ಶಿಕ್ಷಣ ಪ್ರವಾಹವಿದ್ದಂತೆ: ಗುರುಮಾತೆ ಚೆನ್ನಮ್ಮಾ ಝಳಕಿ ಅಭಿಮತ

ಭಾರತ ಹಳ್ಳಿಗಳ ದೇಶ ಭಾರತದ ದೇಶದ ಸಂಸ್ಕೃತಿ ,ಪರಂಪರೆ ಗ್ರಾಮೀಣ ಭಾಗಗಳಲ್ಲಿ ಸಿಗುತ್ತದೆ. ಗ್ರಾಮೀಣ ಬದಕಿನಲ್ಲಿ ಹಾಡು, ಕತೆ ,ಕವನ, ಜಾನಪದ , ಬಿಸುಕಲ್ಲಿನ ಹಾಡು, ಹಂತಿ ಹಾಡು, ಸೋಬಾನೆ ಇತ್ಯಾದಿ ಕಲೆಗಳು ಸಾಕಷ್ಟು, ಇಂತಹ ವಿಭಿನ್ನ ಸೊಗಡನ್ನು ಮಕ್ಕಳಿಂದ ಅರಳಿಸಬೇಕು . ಶಿಕ್ಷಣ ಎಂದರೆ ಮಗುವಿನಲ್ಲಿ ಅಡಗಿರುವ ಸುಪ್ತ ಶಕ್ತಿ ಹೊರ ತೆಗೆಯುವುದೇ ಶಿಕ್ಷಣ ಕಲಿಕಾ ಹಬ್ಬದ ಉದ್ದೇಶ ಕೂಡಾ ಮಗುವಿಗೆ ಪ್ರತಿ ಹಂತದಲ್ಲಿ ಒತ್ತಡಗಳನ್ನು ಕಡಿಮೆ ಮಾಡಿ ಬೇರೆ ಮಾರ್ಗದಲ್ಲಿ ತೊಡಗಿಸುವ ಕೌಶಲ್ಯವಾಗಿದೆ

ಬಸವನವಾಗೇವಾಡಿ ಪುರಸಭೆಯಿಂದ ಸಾವಿನ ಗುಂಡಿಗೆ ಸ್ವಾಗತ !

ಬಸವನವಾಗೇವಾಡಿ ಪುರಸಭೆಯಿಂದ ಸಾವಿನ ಗುಂಡಿಗೆ ಸ್ವಾಗತ !

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತ ಜಾವೀಧ್, ಊಟ ತಯಾರಿದೆ ಎಂದು ಖಾನಾವಳಿ ಮುಂಭಾಗದಲ್ಲಿ ನಿಲ್ಲಿಸುವ ಬೋರ್ಡ ಮಾದರಿಯಲ್ಲಿ ಪುರಸಭೆ ಯಿಂದ ಸಾವಿನ ಗುಂಡಿಗೆ ಸ್ವಾಗತ, ನಿಧಾನವಾಗಿ ಚಲಿಸಿ ಎಂಬ ಬರಹದೊಂದಿಗೆ ಬೋರ್ಡ್ ನಿಲ್ಲಿಸಿ ಆಕ್ರೋಶ ಹೊರ ಹಾಕಿದ್ದಾನೆ. ನಂತರ ಮಧ್ಯಾಹ್ನದ ಹೊತ್ತಿಗೆ ಪುರಸಭೆ ಅಧಿಕಾರಿಗಳು ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಪ್ರಯತ್ನ ಮಾಡಿದ್ದಾರೆ.

ಮಹಿಳೆ-ಪುರುಷ ಸಮಾನರು ಎಂಬುದು ಭಾಷಣಕ್ಕಷ್ಟೇ ಸೀಮಿತವಾಗಬಾರದು: ಆಶಾ ಪಾಟೀಲ್‌

ಮಹಿಳೆ-ಪುರುಷ ಸಮಾನರು: ಆಶಾ ಪಾಟೀಲ್‌

ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆಯರ ಪಾತ್ರವಿರುತ್ತದೆ ಎಂಬ ಮಾತು ನೂರಕ್ಕೆ ನೂರರಷ್ಟು ನಿಜ. ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿರುವ ಮಲ್ಲನಗೌಡ ಬಸನಗೌಡ ಪಾಟೀಲ್, ಚಿಕ್ಕ-ಚೊಕ್ಕವಾಗಿ ಹೇಳುವುದಾದರೆ ಎಂ.ಬಿ. ಪಾಟೀಲ್ ಇಂದು ರಾಜಕಾರಣದಲ್ಲಿ ಸಾಕಷ್ಟು ಸಾಧನೆಗಳಿಗೆ ನಾಂದಿ ಹಾಡಿದವರು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ನಗರಗಳಿಗಷ್ಟೇ ಅಲ್ಲದೇ ಹಳ್ಳಿಗಾಡಿನ ಜನರಗೂ ಕುಡಿಯುವ ನೀರನ್ನು ಕಲ್ಪಿಸಿಕೊಟ್ಟವರು. ಹೀಗೆ ಅನೇಕ ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಸಚಿವ ಎಂ.ಬಿ. ಪಾಟೀಲ್ ಅವರ ಸಾಧನೆಗಳ ಹಿಂದಿರುವ ಸ್ಫೂರ್ತಿ ಪತ್ನಿ ಆಶಾ ಪಾಟೀಲ್. ಅವರ ಸಂದರ್ಶನ ಇಲ್ಲಿದೆ.

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಭರವಸೆ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಭರವಸೆ

CM Siddaramaiah: ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ; ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ ಎಂದ ಡಿಸಿಎಂ

ಯುಕೆಪಿ ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

ವಿಜಯಪುರ ಭಾಗದ ನಮ್ಮ ಶಾಸಕರ ಒತ್ತಡದ ಮೇರೆಗೆ ನಾನು ಹಾಗೂ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಯುಕೆಪಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದೇವೆ. ಯುಕೆಪಿ ಯೋಜನೆಯಿಂದ 1,33,867 ಎಕರೆ ಮುಳುಗಡೆಯಾಗಲಿದ್ದು, ನಮ್ಮ ಸರ್ಕಾರ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Sainik School Recruitment: ವಿಜಯಪುರ ಸೈನಿಕ ಶಾಲೆಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ

ಸೈನಿಕ ವಸತಿ ಸ್ಕೂಲ್‌ನಲ್ಲಿದೆ ಉದ್ಯೋಗಾವಕಾಶ

ನೀವು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ 10ನೇ ತರಗತಿ ಉತ್ತೀರ್ಣರಾಗಿದ್ದು, ಆಕರ್ಷಕ ಸಂಬಳದ ಉದ್ಯೋಗಾವಕಾಶಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಸುವರ್ಣವಾಕಾಶ. ವಿಜಯಪುರ ಸೈನಿಕ ವಸತಿ ಶಾಲೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ, ಸ್ಕ್ರೀನಿಂಗ್ ಟೆಸ್ಟ್‌ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16.

ಕಾಲುವೆಗಳಲ್ಲಿ ತುಂಬಿದ ಹೂಳು, ಕೇಳುವವರಿಲ್ಲ ರೈತರ ಗೋಳು

ಕಾಲುವೆಗಳಲ್ಲಿ ತುಂಬಿದ ಹೂಳು, ಕೇಳುವವರಿಲ್ಲ ರೈತರ ಗೋಳು

ಕೆರೆ ನಿರ್ಮಾಣವಾದ ಬಳಿಕ ಇದುವರೆಗೆ ಹೊಳು ತೆಗೆದು ಸ್ವಚ್ಛಗೊಳಿಸುವ ಕೆಲಸವಾಗಿಲ್ಲ. ಸರಕಾರ ದಿಂದ ನಿರ್ವಹಣೆಗೆ ಬರುವ ಅನುದಾನ ಎಲ್ಲಿ ಹೋಯಿತು ಎಂಬುದರ ಬಗ್ಗೆ ತನಿಖೆ ನಡೆಸಬೇಕೆಂದು ರೈತರು ಒತ್ತಾಯಿಸಿದ್ದಾರೆ. ಬಡ ಹಾಗೂ ಸಣ್ಣ ರೈತರು ತಮ್ಮ ಖರ್ಚಿನಲ್ಲಿ ಹೊಳು ತೆಗೆದು ನೀರು ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ದೃಶ್ಯಂ ಸ್ಟೈಲ್​ ಮರ್ಡರ್‌; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

Vijayapur News: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನ್ನಟ್ಟಿ ಪಿ.ಎ ಗ್ರಾಮದಲ್ಲಿ ಹತ್ಯೆ ನಡೆದಿತ್ತು. ಕೊಲೆ ಬಳಿಕ ಅಮಾಯಕರಂತೆ ಓಡಾಡುತ್ತಿದ್ದ ಹಂತಕರು ಕೊನೆಗೂ ಬಂಧನವಾಗಿದ್ದಾರೆ. ಪ್ರಕರಣ ನಡೆದ 6 ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Pralhad Joshi: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಪ್ರಲ್ಹಾದ್‌ ಜೋಶಿ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಜೋಶಿ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Weather: ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ ದಾಖಲಾಯ್ತು 7 ಡಿಗ್ರಿ ತಾಪಮಾನ

ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ 7 ಡಿಗ್ರಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru weather) ಸಂಜೆ, ರಾತ್ರಿ ಹಾಗೂ ಮುಂಜಾನೆ ತಾಪಮಾನ ಎಂದಿಗಿಂತ ಕಡಿಮೆ ಪ್ರಮಾಣದಲ್ಲಿರಲಿದೆ. ಹಿರಿಯ ನಾಗರಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Indi News: ಇನ್ನೊಬ್ಬರಿಗೆ ನೋವಾಗದಂತೆ ಬದುಕಿ: ಮುತ್ತಪ್ಪ ಪೋತೆ ಕಿವಿ ಮಾತು

Indi News: ಇನ್ನೊಬ್ಬರಿಗೆ ನೋವಾಗದಂತೆ ಬದುಕಿ: ಮುತ್ತಪ್ಪ ಪೋತೆ ಕಿವಿ ಮಾತು

ಡಾ.ಬಿ.ಆರ್ ಅಂಬೇಡ್ಕರವರು ನಡೆದಾಡಿದ ಈ ಪುಣ್ಯಭೂಮಿ ಯಲ್ಲಿ ಒಳ್ಳೆತನದಿಂದ ಇರಬೇಕು. ಇಂಡಿ ಗಡಿ ಭಾಗದಲ್ಲಿ ಶರಣರು, ಸಂತ- ಮಹಾಂತರು, ಸಾಹಿತಿ ಗಳು ಬುದ್ದೀಜೀವಿಗಳು ಈ ಭಾಗದ ಜನರಿಗೆ ಸಂಸ್ಕಾರ ನೀಡಿದ್ದಾರೆ. ನಾನು ಯಾವುದೇ ವ್ಯಕ್ತಿ, ರಾಜ ಕಾರಣಕ್ಕೆ ಸೀಮಿತನಾಗಿ ಮಾತನಾಡುತ್ತಿಲ್ಲ

Karnataka Weather: ರಾಜ್ಯದಲ್ಲಿ ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಿದ್ದು, ಹಗಲಲ್ಲೂ ಮೈ ನಡುಗುವ ವಾತಾವರಣವಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Vijayapura Airport: ವಿಜಯಪುರ ಏರ್‌ಪೋರ್ಟ್‌ಗಿದ್ದ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ. ಪಾಟೀಲ್‌ ಸ್ವಾಗತ

ವಿಜಯಪುರ ಏರ್‌ಪೋರ್ಟ್‌ಗಿದ್ದ ಅಡ್ಡಿ ನಿವಾರಣೆ

MB Patil: ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದರೆ, ಸುಪ್ರೀಂಕೋರ್ಟಿನಲ್ಲಿದ್ದ ಪರಿಸರ ಸಂಬಂಧಿ ಪ್ರಕರಣದಿಂದಾಗಿ ಏನೂ ಮಾಡುವಂತಿರಲಿಲ್ಲ. ಸುಪ್ರೀಂಕೋರ್ಟಿನ ನಿರ್ಧಾರದಿಂದ ಈಗ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಈ ವಿಚಾರ ಈಗಲೂ ನ್ಯಾಯಾಂಗದ ವಿಚಾರಣೆಯಲ್ಲಿದೆ ಎನ್ನುವ ಅರಿವಿದೆ. ಆದರೂ ಇವತ್ತಿನ ನಿಲುವು ನಮ್ಮ ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

MB Patil: 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಪತ್ರ ಬರೆದ ಎಂ.ಬಿ. ಪಾಟೀಲ್‌

4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಎಂ.ಬಿ. ಪಾಟೀಲ್‌ ಪತ್ರ

ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

Vijayapura news: ಎಡದಂಡೆ ಕಾಲುವೆಯಲ್ಲಿ ಒಂದೇ ಕುಟುಂಬದ ಮೂವರು ನೀರುಪಾಲು

ಎಡದಂಡೆ ಕಾಲುವೆಯಲ್ಲಿ ಒಂದೇ ಕುಟುಂಬದ ಮೂವರು ನೀರುಪಾಲು

vijayapura news: ಸುಡುಗಾಡು ಸಿದ್ದ ಸಮುದಾಯಕ್ಕೆ ಸೇರಿದ ಬಸಮ್ಮ ಕೊಣ್ಣೂರು, ಸಂತೋಷ, ರವಿ ನಿನ್ನೆ (ನವೆಂಬರ್ 11) ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗ ದೌಡಾಯಿಸಿ ನಾಪತ್ತೆಯಾದವರ ಪತ್ತೆಗೆ ಶೋಧ ನಡೆಸಿದ್ದಾರೆ. ನೀರುಪಾಲಾಗಿರುವ ಮೂವರು ಮೇಲೆ ಬಂದಿಲ್ಲ. ನಾಪತ್ತೆಯಾದ ಸ್ಥಳದಲ್ಲೂ ಕೆಳದಂಡೆಯ ಉದ್ದಕ್ಕೂ ಶೋಧ ನಡೆಸಲಾಗುತ್ತಿದೆ.

Vijayapura News: ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ: ಎಂ.ಬಿ. ಪಾಟೀಲ್‌

ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ: ಎಂ.ಬಿ. ಪಾಟೀಲ

M B Patil: ವೃಕ್ಷೋಥಾನ್-2025 ಕಾರ್ಯಕ್ರಮವು ಈ ಬಾರಿ ಡಿ.7ರ ಭಾನುವಾರ ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇದರಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ, ಸೇನಾ ಸಿಬ್ಬಂದಿ, ವಿಜಯಪುರ ಸೈಕ್ಲಿಂಗ್ ಗ್ರೂಪ್, ಅರಣ್ಯ ಇಲಾಖೆ, 50ಕ್ಕೂ ಹೆಚ್ಚು ಸಂಘಸಂಸ್ಥೆಗಳು ಸಕ್ರಿಯವಾಗಿ ತೊಡಗಿಕೊಳ್ಳಲಿವೆ. ಇದರಲ್ಲಿ ಒಟ್ಟು 10 ಲಕ್ಷ ರೂ. ಮೊತ್ತದ ಬಹುಮಾನ ನೀಡಲಾಗುವುದು.

Loading...