ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ವಿಜಯಪುರ
Krishna Byre Gowda: ಸಾಮಾನ್ಯರಂತೆ ಸಾರಿಗೆ ಬಸ್‌ನಲ್ಲೇ ವಿಜಯಪುರಕ್ಕೆ ಪ್ರಯಾಣಿಸಿದ ಕೃಷ್ಣ ಬೈರೇಗೌಡ; ಸಚಿವರ ಸರಳತೆಗೆ ಭಾರಿ ಮೆಚ್ಚುಗೆ

ಸಾರಿಗೆ ಬಸ್‌ನಲ್ಲೇ ವಿಜಯಪುರಕ್ಕೆ ಪ್ರಯಾಣಿಸಿದ ಸಚಿವ ಕೃಷ್ಣ ಬೈರೇಗೌಡ!

Minister Krishna Byre Gowda: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಬೆಂಗಳೂರಿನಿಂದ ವಿಜಯಪುರಕ್ಕೆ ಸಾರಿಗೆ ಬಸ್‌ನಲ್ಲಿ ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿ ಸಚಿವರು ಸುದ್ದಿಯಾಗಿದ್ದರು.

Basanagouda Patil Yatnal: ಯತ್ನಾಳ್‌ ಹತ್ಯೆಗೆ ಸಂಚು; ಆಡಿಯೋ ಬೆನ್ನಲ್ಲೇ ಮತ್ತೊಂದು ಸ್ಫೋಟಕ ವಿಡಿಯೋ ವೈರಲ್‌!

ಯತ್ನಾಳ್‌ ಹತ್ಯೆಗೆ ಸಂಚು; ಮತ್ತೊಂದು ಸ್ಫೋಟಕ ವಿಡಿಯೋ ವೈರಲ್‌!

Murder conspiracy: ವಿಜಯಪುರ ನಗರದ ಸೊಹೇಲ್ ಜರ್ತಾರ್ ಎಂಬಾತ ವಿಡಿಯೋ ಮಾಡಿದ್ದು, ಬಿಜಾಪುರ ಫೌಂಡೇಶನ್ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿದ್ದಾನೆ. ನಮ್ಮ ಪ್ರವಾದಿಯನ್ನು ಟೀಕಿಸಿರುವುದನ್ನು ನಾವು ಸಹಿಸಿಕೊಳ್ಳಬಾರದು. ಎಲ್ಲ ಮುಸ್ಲಿಮರು ಒಗ್ಗಟ್ಟಾಗಬೇಕು. ಧರ್ಮಕ್ಕಾಗಿ ಎಲ್ಲರೂ ಒಂದಾಗಬೇಕು ವಿಡಿಯೋದಲ್ಲಿ ಯುವಕ ಹೇಳಿದ್ದಾನೆ.

Basangouda Patil Yatnal: ಶಾಸಕ ಯತ್ನಾಳ ಹತ್ಯೆಗೆ ಭಾರೀ ಸಂಚು...! ಸ್ಫೋಟಕ ಆಡಿಯೋದಲ್ಲೇನಿದೆ?

ಶಾಸಕ ಯತ್ನಾಳ ಹತ್ಯೆಗೆ ಭಾರೀ ಸಂಚು...!

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಮುಸ್ಲಿಂ ಯುವಕನೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಮಹಮ್ಮದ್​ ಪೈಗಂಬರ್​ ವಿರುದ್ದ ಮಾತನಾಡಿದ್ದ ಯತ್ನಾಳ್‌ ಕುರಿತು ಕಿಡಿಗೇಡಿ ಯುವಕನೊಬ್ಬ ಆಡಿಯೋ ಹರಿಬಿಟ್ಟಿದ್ದು. “ಈ ಬಾರಿ ಯತ್ನಾಳ್​ಗೆ ಫೈನಲ್ ಡೇ, ಆತ ಅರೆಸ್ಟ್​ ಆಗಬೇಕು ಅಥವಾ ಆತನ ತಲೆಯನ್ನು ಕತ್ತರಿಸಬೇಕು ಎಂಬ ಪ್ರಚೋದನಕಾರಿ ಆಡಿಯೋವೊಂದನ್ನು ಹರಿಬಿಟ್ಟಿದ್ದಾನೆ.

Basanagouda Patil Yatnal: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್‌ಐಆರ್‌

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್‌ಐಆರ್‌

Basanagouda Patil Yatnal: ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ದೂರು ಸಲ್ಲಿಸಿದ್ದಾರೆ. ಹೀಗಾಗಿ ವಿಜಯಪುರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಶಾಸಕ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Self Harming: ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ

ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ

Self Harming: ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Vijayapura ( indi) News: ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ

ಬಸವನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಹಿಂಪಡೆಯಬೇಕು

ತಾಲೂಕಿನ ಸಾತಲಗಾಂವ್ ಪಿ.ಆಯ್ ಗ್ರಾಮದಲ್ಲಿ ಬಸವನಗೌಡ ಪಾಟೀಲ ಯತ್ನಾಳ ಇವರನ್ನು ಪಕ್ಷ ದಿಂದ ಉಚ್ಛಾಟಿಸಿರುವ ಕ್ರಮ ಖಂಡಿಸಿ ನೂರಾರು ಹಿಂದೂಪರ ಸಂಘನೆಯ ಮುಖಂಡರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜಾಧ್ಯಾಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ ಮಾಡಿದರು.

Basanagouda Patil Yatnal:‌ ಹಿಂದುಗಳ ರಕ್ಷಣೆಗಾಗಿ ಹೊಸ ರಾಜಕೀಯ ಪಕ್ಷ ಕಟ್ಟುತ್ತೇವೆ: ಶಾಸಕ ಯತ್ನಾಳ್‌

ಹಿಂದುಗಳ ರಕ್ಷಣೆಗಾಗಿ ಹೊಸ ರಾಜಕೀಯ ಪಕ್ಷ ಕಟ್ಟುತ್ತೇವೆ: ಶಾಸಕ ಯತ್ನಾಳ್‌

Basanagouda Patil Yatnal:‌ ವಿಜಯಪುರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಹಿಂದುಗಳ ರಕ್ಷಣೆ ಆಗಲ್ಲ. ಆದ್ದರಿಂದ ಹಿಂದುಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

MB Patil: 3,500.86 ಕೋಟಿ ರೂ. ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ: ಎಂ.ಬಿ.ಪಾಟೀಲ್‌

3,500.86 ಕೋಟಿ ರೂ. ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ

MB Patil: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ, ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.

Basanagouda Patil Yatnal: ಬಿಎಸ್‌ವೈ ಕುಟುಂಬದ ವಿರುದ್ಧ ಹೋರಾಟ ಮುಂದುವರಿಸುವೆ: ಗುಡುಗಿದ ಯತ್ನಾಳ್‌

ಬಿಎಸ್‌ವೈ ಕುಟುಂಬದ ವಿರುದ್ಧ ಹೋರಾಟ ಮುಂದುವರಿಸುವೆ: ಗುಡುಗಿದ ಯತ್ನಾಳ್‌

ಬೇರೆ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ ನನ್ನನ್ನು ವಾಪಸ್‌ ಕರೆಸಿಕೊಳ್ಳುತ್ತಾರೆ. ಬಿಎಸ್‌ ಯಡಿಯೂರಪ್ಪ ಕುಟುಂಬದ ವಿರುದ್ಧ ಹೋರಾಟ ನಿಲ್ಲಿಸುವುದಿಲ್ಲ. ನಾಳೆಯಿಂದ ಆ ಕುಟುಂಬದ ಅಂತ್ಯದ ಆರಂಭ ಎಂದು ಉಚ್ಚಾಟಿತ ಬಿಜೆಪಿ ನಾಯಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಅಪಘಾತದಲ್ಲಿ ಸಾವು

ಬಸನಗೌಡ ಪಾಟೀಲ್‌ ಯತ್ನಾಳ ಉಚ್ಛಾಟನೆಗೆ ವಿರೋಧ

ಬಿಜೆಪಿಯ ಪ್ರಮುಖ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಬುಧವಾರ ರಾಜೀನಾಮೆ ನೀಡಿದ್ದ ಪದಾಧಿಕಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರ. ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿ ಈ ಘಟನೆ ನಡೆದಿದೆ.

Basangouda Patil Yatnal: ಯತ್ನಾಳ್ ಉಚ್ಛಾಟನೆ ವಿರೋಧಿಸಿ ಲಿಂಗಾಯತ ಶಾಸಕರು ಬಿಜೆಪಿಯಿಂದ ಹೊರಬರಲು ಮಠಾಧೀಶರ ಕರೆ

ಯತ್ನಾಳ್ ಉಚ್ಛಾಟನೆ ವಿರೋಧಿಸಿ ಲಿಂಗಾಯತ ಶಾಸಕರು ಬಿಜೆಪಿಯಿಂದ ಹೊರಬರಲು ಕರೆ

ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲಾ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

Basanagouda Patil Yatnal: ಬಿಜೆಪಿಯಿಂದ ಯತ್ನಾಳ್‌ ಉಚ್ಚಾಟನೆಗೆ ಇದೇ ಕಾರಣ!

ಬಿಜೆಪಿಯಿಂದ ಯತ್ನಾಳ್‌ ಉಚ್ಚಾಟನೆಗೆ ಇದೇ ಕಾರಣ!

ನಿರಂತರವಾಗಿ ಬಿಎಸ್‌ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ, ಬಿಜೆಪಿಯಲ್ಲೇ ಪ್ರತ್ಯೇಕ ಬಣ ರಚಿಸಲು ಯತ್ನ, ಹೈಕಮಾಂಡ್‌ ಹಲವು ಬಾರಿ ನೋಟೀಸ್‌ ನೀಡಿದ್ದರೂ ಉಡಾಫೆ ತೋರಿಸಿದ್ದು ಇವು ಯತ್ನಾಳ್‌ ಅವರಿಗೆ ಮುಳುವಾಗಿವೆ.

Basangouda Patil Yatnal: ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ

Basangouda Patil Yatnal: ಶಾಸಕ ಯತ್ನಾಳ್ ಉಚ್ಚಾಟನೆ ಖಂಡಿಸಿ, ಬಿಜೆಪಿಗೆ ತಕ್ಕ ಪಾಠ ಕಲಿಸಲು ಶಾಸಕ ಬಸನಗೌಡ ಯತ್ನಾಳ್ ಅವರ ಬೆಂಬಲಿಗರು ಹೋರಾಟಕ್ಕೆ ಕರೆ ನೀಡಿದ್ದಾರೆ. ಷಢ್ಯಂತ್ರ ರೂಪಿಸಿರುವ ವೈರಿಗಳಿಗೆ ನಮ್ಮ ತಾಕತ್ತು ಏನೆಂದು ಸಾಬೀತು ಮಾಡೋಣ. ಎಲ್ಲರೂ ಒಂದಾಗಿ ರಾಜ್ಯವ್ಯಾಪಿ ಹೋರಾಟ ಶುರು ಮಾಡಬೇಕು ಎಂದು ಬೆಂಬಲಿಗರು ಕರೆ ನೀಡಿದ್ದಾರೆ.

Road Accident: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ, ಒಬ್ಬ ಸಾವು, ಮೂವರಿಗೆ ಗಾಯ

ಲಾರಿ ಡಿಕ್ಕಿ, ಒಬ್ಬ ಸಾವು, 3 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗಾಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತೆಲಂಗಾಣ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರಾದ ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Car Accident: ವಿಜಯಪುರದಲ್ಲಿ ಭೀಕರ ಅಪಘಾತ; ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ದುರ್ಮರಣ

Car Accident: ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಸ್ವಿಫ್ಟ್ ಡಿಸೈರ್ ಕಾರು ಅಪಘಾತಕ್ಕೀಡಾಗಿದೆ. ಕಾರು ಮರಕ್ಕೆ ಡಿಕ್ಕಿಯಾದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Vijayapura News: ನೀರು ಕುಡಿಯಲು ಹೋಗಿ ಬಾವಿಗೆ ಬಿದ್ದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

ಬಾವಿಯಲ್ಲಿ ಮುಳುಗಿದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

Vijayapura News: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ಘಟನೆ ನಡೆದಿದೆ. ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಜಾರಿ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಅಜ್ಜಿ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

Upper Krishna Project: ರೈತರಿಗೆ ಸಿಹಿಸುದ್ದಿ; ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

Upper Krishna Project: ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2024-25ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ಸೇರಿ ಪ್ರತಿ ದಿನ 0.8ಂಟಿ.ಎಂ.ಸಿ ದರದಂತೆ ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Vishwavani Impact: ವಿಶ್ವವಾಣಿ ವರದಿಯಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ: ಯಂತ್ರೋಪಕರಣ ಬಾಡಿಗೆ ಬಾಕಿ ಚುಕ್ತಾ

ಕೊಳಬೆ ಬಾವಿಗೆ ಬಿದ್ದ ಮಗು ರಕ್ಷಣೆ: ಬಿಲ್‌ ಪಾವತಿ

2024ರ ಏಪ್ರಿಲ್ 3ರಂದು ಲಚ್ಯಾಣ ಗ್ರಾಮದಲ್ಲಿ ಕೊಳೆಬಾವಿಗೆ ಬಿದ್ದಿದ್ದ ಮಗು ಸಾತ್ವಿಕ ಗುಜ ಗೊಂಡನನ್ನು ಸ್ಥಳೀಯರ ಜೆಸಿಬಿ, ಹಿಟ್ಯಾಚಿ, ಟ್ರ್ಯಾಕ್ಟರ್ ಬ್ರೇಕರ್ಸ್, ಬೋರ್‌ವೆಲ್ ಕ್ಯಾಮೆರಾ ಹೀಗೆ ವಿವಿಧ ಯಂತ್ರೋಪಕರಣಗಳನ್ನು ಬಳಸಿಕೊಂಡು ರಕ್ಷಣಾ ತಂಡವು ಸತತ 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಲಕ ಸಾತ್ವಿಕನನ್ನು ಸಾವಿನ ದವಡೆಯಿಂದ ಪಾರುಮಾಡಿ ಹೊರಗೆ ತರುವಲ್ಲಿ ಯಶಸ್ವಿ ಯಾಗಿತ್ತು.

ಒಂದು ವರ್ಷವಾದರೂ ಯಂತ್ರೋಪಕರಣ ಬಿಲ್‌ ಬಾಕಿ

ಒಂದು ವರ್ಷವಾದರೂ ಯಂತ್ರೋಪಕರಣ ಬಿಲ್‌ ಬಾಕಿ

ಮಗುವಿನ ರಕ್ಷಣೆಗೆ ಯಂತ್ರೋಪಕರಣ ಪೂರೈಸಿ ಸತತ 22 ತಾಸು ಕೆಲಸ ಮಾಡಿ ಕಾರ್ಯಾಚರಣೆ ಯಶಸ್ವಿಗೊಳಿಸುವಲ್ಲಿ ನೆರವಾಗಿದ್ದೇವೆ. ಆದರೆ ನಮ್ಮ ಕೂಲಿ ಹಾಗೂ ಯಂತ್ರೋಪಕರಣಗಳ ಬಾಡಿಗೆ 3 ಲಕ್ಷದಷ್ಟು ಇನ್ನೂ ಪಾವತಿಯಾಗಿಲ್ಲ. ಬಿಲ್ ಮೊತ್ತ ಕ್ಕಾಗಿ ಗ್ರಾಪಂ ಪಿಡಿಓ ಅವರಿಂದ ಹಿಡಿದು, ತಹಸೀ ಲ್ದಾರ್, ಎಸಿ, ಡಿಸಿವರೆಗೂ ಭೇಟಿಯಾಗಿ ಕೇಳುತ್ತಲೇ ಬಂದಿದ್ದರೂ ವರ್ಷವಾದರೂ ಬಿಲ್ ಪಾವತಿ ಯಾಗಿಲ್ಲ

Godambi Kaka: ಹಾಸ್ಯ ಕಲಾವಿದ, ಸೋಶಿಯಲ್ ಮೀಡಿಯಾ ಸ್ಟಾರ್ ಗೋಡಂಬಿ ಕಾಕಾ ಇನ್ನಿಲ್ಲ

Godambi Kaka: ಸೋಶಿಯಲ್ ಮೀಡಿಯಾ ಸ್ಟಾರ್ ಗೋಡಂಬಿ ಕಾಕಾ ಇನ್ನಿಲ್ಲ

Godambi Kaka: ಬಾಗೇವಾಡಿ ಸಮೀಪದ ನಾಗೂರ ಗ್ರಾಮದ ರಂಗಭೂಮಿ ಕಲಾವಿದನಾಗಿದ್ದ ಬಸಲಿಂಗಯ್ಯ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ʼಗೊಡಂಬಿ ಕಾಕಾʼ ಎಂಬ ಹೆಸರಿನಿಂದಲೇ ಚಿರಪರಿಚಿತನಾಗಿದ್ದರು. ಯೂಟ್ಯೂಬ್‌ನಲ್ಲಿ ಒಂದು ಲಕ್ಷಕ್ಕೂ ಅಧಿಕ ಪಾಲೋವರ್ಸ, ಇನ್ಸ್ಟಾಗ್ರಾಂನಲ್ಲಿ ಎರಡು ಲಕ್ಷ ಪಾಲೋವರ್ಸ ಹೊಂದಿರುವ ಗೊಡಂಬಿ ಕಾಕಾನ ಕಾಮಿಡಿ ವಿಡಿಯೋಗಳು 1 ಕೋಟಿಗೂ ಅಧಿಕ ವೀಕ್ಷಣೆ ಕಂಡಿವೆ

Vijayapura Breaking: ಆದಾಯ ಮೀರಿ ಆಸ್ತಿ ಗಳಿಕೆ: ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿಗೆ ಲೋಕಾಯುಕ್ತ ಬಿಸಿ

ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿಗೆ ಲೋಕಾಯುಕ್ತ ಬಿಸಿ

ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರೋ ನಿವಾಸ ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ದಾಖಲೆಗಳ ಪರಿಶೀಲನೆ ಮಾಡು ತ್ತಿರುವ ಅಧಿಕಾರಿಗಳು ಲೋಕಾಯುಕ್ತ ಎಸ್ಪಿ ಡಿ ಮಲ್ಲೇಶ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ, ಸಿಬ್ಬಂದಿಗಳಿಂದ ದಾಳಿ ನಡೆಸಿದರು.

Vijayapura News: ಕೌಟುಂಬಿಕ ಕಲಹ- ಮೊಬೈಲ್ ಟವರ್ ಏರಿ ಕುಳಿತ ಯುವಕ!

ಕೌಟುಂಬಿಕ ಕಲಹ-ಮೊಬೈಲ್ ಟವರ್ ಏರಿ ಕುಳಿತ ಯುವಕ!

Vijayapura News: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಯುವಕನೋರ್ವ ಮೊಬೈಲ್ ಟವರ್ ಏರಿದ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳದಲ್ಲಿ ಜರುಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲಿ ಗಲಾಟೆ ಮಾಡಿಕೊಂಡ ಯುವಕ ಟವರ್ ಮೇಲೆ ಕುಳಿತು ಗೊಂದಲ ಸೃಷ್ಟಿಸಿದ್ದಾನೆ.

Vijayapura (Indi) News: ಕೈಬಾಯಿ ಪರಿಶುದ್ದವಾಗಿರಿಸಿಕೊಂಡು ನಿವೃತ್ತಿ ಹೊಂದುತ್ತಿರುವ ಸುಭಾಷ ರುದ್ರವಾಡಿ ಜನಮಾನಸದಲ್ಲಿದ್ದಾರೆ

ಸುಭಾಷ ರುದ್ರವಾಡಿ ಪರಿಶುದ್ದ ಅಧಿಕಾರಿ: ಎಂ.ಆರ್ ಪಾಟೀಲ

ಸುಭಾಷ ರುದ್ರವಾಡಿ ಅಧ್ಯಾತ್ಮಿಕ ಜೀವಿ ದೇವರ ಬಗ್ಗೆ ನಂಬಿಕೆ ಇರುವ ಒಳ್ಳೆಯ ಸಜ್ಜನ ಅಧಿಕಾರಿ ಕಳೆದ 35 ವರ್ಷಗಳ ಸುದೀರ್ಘ ಒಂದೇ ತಾಲೂಕಿನಲ್ಲಿ ನೌಕರಿ ಮಾಡುತ್ತಿರುವುದು ಅವರ ಒಳ್ಳೇತನವೇ ಕಾರಣ ಅನೇಕ ಶಾಸಕರು, ಸಂಸದರು ಜನಪ್ರತಿನಿಧಿಗಳು ಬಂದಿದ್ದಾರೆ ಹೋಗಿದ್ದಾರೆ ಆದರೆ ಯಾರ ಕಣ್ಣಿನಲ್ಲಿಯೂ ವಕ್ರದೃಷ್ಠಿಯಿಂದ ಇವರನ್ನು ಕಂಡಿಲ್ಲ ಬಂದವ ರೆಲ್ಲರೂ ರುದ್ರವಾಡಿಯನ್ನು ಗೌರವದಿಂದ ಕಂಡಿದ್ದಾರೆ

ದೇವಾನು ದೇವತೆಗಳಿಗೆ ಕ್ಷೀರಾಭಿಷೇಕ, ನೀರಾಭಿಶೇಕ, ಹಣ್ಣುಗಳ ಅಭಿಷೇಕ ಮಾಡುವುದನ್ನು ನೋಡಿದ್ದೇವೆ..!

ಇಲ್ಲೊಂದು ದೇವರಿಗೆ ಮದ್ಯವನ್ನೇ (ಸಾರಾಯಿ) ಅಭಿಷೇಕ ಮಾಡಲಾಗುತ್ತದೆ

ಇಂಡಿ ನಗರದಿಂದ ಸುಮಾರು 6 ಕಿ.ಮೀ ದೂರದಲ್ಲಿರುವ ಈ ಗ್ರಾಮ ದಲ್ಲಿ ಮರುಳಸಿಧ್ಧೇಶ್ವರ ಹಾಗೂ ನಿಜಲಿಂಗ ತಾಯಿ ಎಂಬ ದೇವತೆಗಳಿವೆ. ಈ ದೇವತೆಗಳ ಜಾತ್ರೆ ಪ್ರತಿ ವರ್ಷ ಶಿವರಾತ್ರಿ ಅಮವಾಸ್ಯೆಯಾದ ಮೊದಲ ಸೋಮವಾರ ಧರ್ಮರ ದೇವರ ಜಾತ್ರೆ, ಅಮವಾಸ್ಯೆಯಾದ ಮೊದಲ ಗುರುವಾರರಂದು ನಿಜಲಿಂಗತಾಯಿ (ಸೀತಮ್ಮ) ದೇವರ ಜಾತ್ರೆ ನಡೆಯುತ್ತದೆ