ವಿಜಯಪುರ ಏರ್ಪೋರ್ಟ್ಗಿದ್ದ ಅಡ್ಡಿ ನಿವಾರಣೆ
MB Patil: ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದರೆ, ಸುಪ್ರೀಂಕೋರ್ಟಿನಲ್ಲಿದ್ದ ಪರಿಸರ ಸಂಬಂಧಿ ಪ್ರಕರಣದಿಂದಾಗಿ ಏನೂ ಮಾಡುವಂತಿರಲಿಲ್ಲ. ಸುಪ್ರೀಂಕೋರ್ಟಿನ ನಿರ್ಧಾರದಿಂದ ಈಗ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಈ ವಿಚಾರ ಈಗಲೂ ನ್ಯಾಯಾಂಗದ ವಿಚಾರಣೆಯಲ್ಲಿದೆ ಎನ್ನುವ ಅರಿವಿದೆ. ಆದರೂ ಇವತ್ತಿನ ನಿಲುವು ನಮ್ಮ ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.