ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ!
ಬಾಂಗ್ಲಾದೇಶದಲ್ಲಿ ಹಿಂದೂ ಯುವ ನಾಯಕನಾದ ದೀಪು ಚಂದ್ರ ದಾಸ್ ಅವರನ್ನು ಕ್ರೂರವಾಹಿ ಹತ್ಯೆ ಮಾಡಲಾಗಿದ್ದು ಅದನ್ನು ಖಂಡಿಸಿ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಹತ್ಯೆ ಬಗ್ಗೆ ಕೋಪಗೊಂಡ ಯುವಕರ ತಂಡವು ಬಾಂಗ್ಲಾದೇಶಕ್ಕೆ ಸಂಬಂಧಿಸಿದ ಪೋಸ್ಟರ್ಗಳನ್ನು ಮತ್ತು ಧ್ವಜಗಳನ್ನು ತುಳಿದ ಘಟನೆ ಛತ್ರಸಾಲ್ ಚೌಕದಲ್ಲಿ ನಡೆದಿದೆ. ಹತ್ಯೆ ಮಾಡಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯುವಕರ ತಂಡವು ಪ್ರತಿಭಟನೆ ನಡೆಸಿದೆ.