ಈಕೆಯ ʼಸಿಗರೇಟ್ ಡ್ರೆಸ್ʼ ನೋಡಿದ್ದೀರಾ?
ಗುಡಿಯಾ ಎಂಬ ಮಹಿಳಾ ಕಂಟೆಂಟ್ ಕ್ರಿಯೇಟರ್ 100ಕ್ಕೂ ಹೆಚ್ಚು ಸಿಗರೇಟು ಬಳಸಿ ನೇಯ್ದ ವಿಶೇಷ ಉಡುಪನ್ನು ತಯಾರಿಸಿ ಧರಿಸಿದ್ದಾರೆ. ಅವರು ಈ ಚಮತ್ಕಾರಿ ಡ್ರೆಸ್ನ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ.
ಇತ್ತೀಚೆಗೆ ಗೋವಾದ ಬೀದಿಗಳಲ್ಲಿ ಓಡಾಡಿದ್ದ ಯುವಕರ ಗುಂಪೊಂದು ರಸ್ತೆ ಬದಿಯಲ್ಲಿ ಮದ್ಯ ಸೇವಿಸಿ ಬಾಟಲಿಗಳನ್ನು ರಸ್ತೆಯ ಬದಿ ಎಸೆದು ಒಡೆದಿದ್ದಾರೆ. ಇದನ್ನು ಗಮನಿಸಿದ ಗೋವಾ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡು ಬಾಟಲಿಯ ಪೀಸ್ ಅನ್ನು ಹೆಕ್ಕುವಂತೆ ಮಾಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.
ಗೀತಾಂಜಲಿ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ರೈಲ್ವೆ ಪ್ರಯಾಣಿಕನೊಬ್ಬ ನಿಗದಿಪಡಿಸಿದ ತೂಕಕ್ಕಿಂತ ಕಡಿಮೆ ಆಹಾರವನ್ನು ನೀಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ಕ್ಯಾಂಟೀನ್ ಸಿಬ್ಬಂದಿ ಅವನನ್ನು ಥಳಿಸಿ ಒತ್ತೆಯಾಳಾಗಿ ಇರಿಸಿಕೊಂಡ ಆಘಾತಕಾರಿ ಘಟನೆ ಇತ್ತೀಚೆಗೆ ನಡೆದಿದೆ. ಅವರ ವಾಗ್ವಾದದ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.
ಜಾರ್ಖಂಡ್ನ ರಾಜಧಾನಿ ರಾಂಚಿಯಿಂದ 70 ಕಿ.ಮೀ ದೂರದಲ್ಲಿರುವ ತಮಾರ್ ಬ್ಲಾಕ್ನಲ್ಲಿ ದೆವ್ವಗಳ ಮೆರವಣಿಗೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಅರೇ ಇದೇನಿದು ಎಂದು ಬೆಚ್ಚಿಬೀಳಬೇಡಿ, ಇದು ಅಲ್ಲಿನ ಜನರ ಸಂಪ್ರದಾಯವಂತೆ. ಈ ಮೆರವಣಿಗೆಯನ್ನು ಅವರ ಕುಟುಂಬದ ಸಂತೋಷಕ್ಕಾಗಿ ಮಾಡಲಾಗುತ್ತದೆಯಂತೆ.
ಹಮಾಸ್ ದಾಳಿಯು (Hamas attack) ನನ್ನನ್ನು ಮತಾಂತರಗೊಳ್ಳುವಂತೆ ಮಾಡಿತು ಎಂದು ದಾದಿ ಆಡ್ರಿಯಾನಾ ಫೆರ್ನಾಂಡಿಸ್ ಹೇಳಿಕೊಂಡಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿದೆ. ಯೆಹೂದ್ಯೇತರ ಆಗಿದ್ದಆಡ್ರಿಯಾನಾ ಫೆರ್ನಾಂಡಿಸ್ ಅವರು ಹಮಾಸ್ ದಾಳಿಯ ಬಳಿಕ ಯಹೂದಿ ಆಗಿರುವುದಾಗಿ ಹೇಳಿದ್ದಾರೆ. ಈ ಮೊದಲು ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ 'ಯೆಹೂದ್ಯೇತರ ದಾದಿ' ಎಂದು ಕರೆಯಲ್ಪಡುತ್ತಿದ್ದ ಆಡ್ರಿಯಾನಾ ಅವರು ಈಗ ತಮ್ಮ ಹೆಸರನ್ನು 'ಯಹೂದಿ ದಾದಿ' ಎಂದು ಬದಲಾಯಿಸಿಕೊಂಡಿದ್ದಾರೆ.
ಗೋಡೆಬಿದ್ದು ಗಾಯಗೊಂಡ 13 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆತರಲು ಆ್ಯಂಬುಲೆನ್ಸ್ ಸಿಗದ ಕಾರಣ ಬಾಲಕನೊಬ್ಬ ಸ್ಕ್ರ್ಯಾಪ್ ಪುಲ್ಲಿಂಗ್ ಗಾಡಿಯಲ್ಲಿ ಹಾಕಿಕೊಂಡು ಎಳೆದು ತಂದು ಆಸ್ಪತ್ರೆಗೆ ದಾಖಲಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಹೃದಯ ವಿದ್ರಾವಕ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.
Pawan Kalyan: ಸಿಂಗಾಪುರ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡ ಪುತ್ರನನ್ನು ಕರೆದುಕೊಂಡು ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಹೈದರಾಬಾದ್ ಗೆ ಆಗಮಿಸಿದ್ದಾರೆ. ಸಿಂಗಾಪುರದಿಂದ ಹಿಂದಿರುಗುವಾಗ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ತಮ್ಮ ಮಗ ಮಾರ್ಕ್ ನನ್ನು ತೋಳುಗಳಲ್ಲಿ ಎತ್ತಿಕೊಂಡು ಬರುತ್ತಿರುವುದು ಕಂಡುಬಂದಿದೆ.
ಮಧ್ಯಪ್ರದೇಶದ ಶಿವಪುರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಪಟೇಲ್ ವೇದಿಕೆಯ ಮೇಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಆ ವೇಳೆ ಅವರು ಅನುಚಿತ ಭಾಷೆಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದು, ಇದು ಈಗ ವೈರಲ್(Viral Video)ಆಗಿದೆ.
ಹರಿಯಾಣದ ಸೋನಿಪತ್ನ ಒಪಿ ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಸೂಟ್ಕೇಸ್ನಲ್ಲಿ ಬಚ್ಚಿಟ್ಟುಕೊಂಡು ಬಾಯ್ಸ್ ಹಾಸ್ಟಲ್ಗೆ ಕರೆತಂದಿದ್ದಾನೆ. ಆದರೆ ಕೊನೆ ಕ್ಷಣದಲ್ಲಿ ಆತನ ಅದೃಷ್ಟ ಕೈಕೊಟ್ಟಿದ್ದು. ಸೆಕ್ಯೂರಿಟಿ ಗಾರ್ಡ್ ಕೈಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಸ್ತೆ ಬದಿಯ ಫುಡ್ ಶಾಪ್ನಲ್ಲಿ ಕರಿದ ಆಹಾರ ಪದಾರ್ಥಗಳ ಮೇಲೆ ಇಲಿಗಳು ತೆವಳುತ್ತಿರುವ ವಿಡಿಯೊವೊಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊ ನೋಡಿದ ಹಲವರು ನೆಟ್ಟಿಗರು ನೈರ್ಮಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಡಿಯೊ ಎಐ ಬಳಸಿ ರಚಿಸಲಾಗಿದೆ ಎಂದು ತಿಳಿದು ಹಲವರು ನಿಟ್ಟುಸಿರು ಬಿಟ್ಟಿದ್ದಾರೆ.
ಗುಜರಾತ್ನ ಅಹಮದಾಬಾದ್ನ ಖೋಖ್ರಾ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ವೊಂದರ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಬೆಂಕಿಗೆ ಆಹುತಿಯಾದ ಕಟ್ಟಡದಿಂದ ಇಬ್ಬರು ಮಕ್ಕಳನ್ನು ಮಹಿಳೆಯೊಬ್ಬಳು ಬಾಲ್ಕನಿ ಮೂಲಕ ಇಬ್ಬರು ಪುರುಷರ ಸಹಾಯದಿಂದ ಕೆಳಗಿಳಿಸಿದ್ದಾಳೆ. ಈ ದೃಶ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ವಿಜಯ್ ಅಹಿರ್ವಾರ್ ಮತ್ತು ಮಂದಸೌರ್ ಜಿಲ್ಲೆಯಲ್ಲಿ ಗೋಸ್ವಾಮಿ (35) ಎಂಬಾತ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ.ಈತನ ಈ ನೀಚ ಕೃತ್ಯ ವಿಡಿಯೊದಲ್ಲಿ ರೆಕಾರ್ಡ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಪೊಲೀಸರು ಇಬ್ಬರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಯೋಧ್ಯೆಯ ರಾಜಾ ಗೆಸ್ಟ್ ಹೌಸ್ನಲ್ಲಿ ರೂಂ ಬುಕ್ ಮಾಡಿದ್ದ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ಅದನ್ನು ಅಲ್ಲಿನ ಕೆಲಸಗಾರ ಸೌರಭ್ ಎಂಬಾತ ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಈತನನ್ನು ಉತ್ತರ ಪ್ರದೇಶ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral News) ಆಗಿದೆ.
DMK Controversy: ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡಿನ ಡಿಎಂಕೆ ಹಿರಿಯ ನಾಯಕ ಮತ್ತು ಸಚಿವ ಕೆ. ಪೊನ್ಮುಡಿ ಅವರನ್ನು ಡಿಎಂಕೆ ಹುದ್ದೆಯಿಂದ ಶುಕ್ರವಾರ ವಜಾಗೊಳಿಸಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳೆಯರು, ಶೈವರು ಮತ್ತು ವೈಷ್ಣವರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ. ಪೊನ್ಮುಡಿ ಬಳಿಕ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ. ಬಳಿಕ ಪೊನ್ಮುಡಿ ಅವರನ್ನು ಪಕ್ಷದ ಹುದ್ದೆಯಿಂದಲೇ ತೆಗೆದುಹಾಕಲಾಯಿತು.
ಮಧ್ಯಪ್ರದೇಶದ ಶಿವಪುರಿಯಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಹಿಳೆಯಿಂದ ಗುಟ್ಕಾ (ತಂಬಾಕು) ಪ್ಯಾಕೆಟ್ ತೆಗೆದುಕೊಂಡು ತಂಬಾಕು ಜಗಿಯುವುದನ್ನು ನಿಲ್ಲಿಸುವಂತೆ ಸಲಹೆ ನೀಡಿದ್ದಾರೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿ ವೈರಲ್(Viral Video) ಆಗಿ ನೆಟ್ಟಿಗರ ಹೃದಯವನ್ನು ಗೆದ್ದಿದೆ.
ಸ್ಯಾನ್ ಫ್ರಾನ್ಸಿಸ್ಕೋದ ಎಂಬಾರ್ಕಾಡೆರೊ ಪ್ಲಾಜಾದಲ್ಲಿ "ಆರ್-ಎವಲ್ಯೂಷನ್" ಎಂದು ಕರೆಯಲ್ಪಡುವ 45 ಅಡಿ ಎತ್ತರದ ನಗ್ನ ಮಹಿಳೆಯ ಉಕ್ಕಿನ ಪ್ರತಿಮೆಯನ್ನು ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ. ಸುಮಾರು 32,000 ಪೌಂಡ್ ತೂಕವಿರುವ ಈ ಶಿಲ್ಪವು ನಗರದ ಫೆರ್ರಿ ಕಟ್ಟಡದ ಮುಂದೆ ಆರು ತಿಂಗಳ ಕಾಲ ನಿಲ್ಲುತ್ತದೆ ಮತ್ತು ಒಂದು ವರ್ಷದವರೆಗೆ ವಿಸ್ತರಿಸುವ ಸಾಧ್ಯತೆಯಿದೆ. ಈ ಸುದ್ದಿ ಇದೀಗ ಸಿಕ್ಕಾಪಟ್ಟೆ ವೈರಲ್(Viral News) ಆಗಿದೆ.
ಕಿಡಿಗೇಡಿಯೊಬ್ಬ ಹೃಷಿಕೇಶದ ನದಿ ತೀರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಯುರೋಪಿಯನ್ ಮಹಿಳಾ ಪ್ರವಾಸಿಗರನ್ನು ಬಿಕಿನಿಯಲ್ಲಿ ಚಿತ್ರೀಕರಿಸಿ ರೀಲ್ಸ್ ರಚಿಸಿ ಪೋಸ್ಟ್ ಮಾಡಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಮಹಿಳೆಯರಿಗೆ ತಿಳಿಯದಂತೆ ಅವರ ವಿಡಿಯೊ ಮಾಡಿದ ವ್ಯಕ್ತಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಇತ್ತೀಚೆಗೆ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಯ ಹಾಲ್ ಟಿಕೆಟ್ ಅನ್ನು ಹದ್ದೊಂದು ಕಸಿದುಕೊಂಡು ಹೋದ ಘಟನೆ ನಡೆದಿದೆ. ಕೇರಳ ಲೋಕಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆ ಬರೆಯಲು ಬಂದ ಕಾಸರಗೋಡಿನ ಅಭ್ಯರ್ಥಿಯೊಬ್ಬರಿಗೆ ಪರೀಕ್ಷೆ ಶುರುವಾಗುವ ಕೆಲವೇ ನಿಮಿಷಗಳ ಮೊದಲು ಹದ್ದು ಬಂದು ಹಾಲ್ ಟಿಕೆಟ್ ಕಸಿದುಕೊಂಡು ಹೋದ ಘಟನೆ ನಡೆದಿದೆ. ಈ ವಿಡಿಯೊ ವೈರಲ್(Viral Video) ಆಗಿದೆ.