ಲಖನೌ, ಏ.23: ಮದುವೆ ಸಮಾರಂಭದ ವೇಳೆ ವಧುವಿನ ಬೀಳ್ಕೊಡುಗೆ ಸಮಾರಂಭದ ವೇಳೆ ಬೀದಿ ನಾಯಿಯೊಂದು ಕಚ್ಚಿದ (stray street dog bit) ಪರಿಣಾಮ ಅತಿಥಿಗಳು ಮತ್ತು ಕುಟುಂಬ ಸದಸ್ಯರು ಸೇರಿದಂತೆ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ (Uttar Pradesh) ಬುಡೌನ್ನ ಔತಣಕೂಟದ ಸಭಾಂಗಣದಲ್ಲಿ ಘಟನೆ ನಡೆದಿದೆ. ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ಅಭಿನಂದನ್ ಬ್ಯಾಂಕ್ವೆಟ್ ಹಾಲ್ನಲ್ಲಿ ಈ ಘಟನೆ ನಡೆದಿದ್ದು, ಆವರಣಕ್ಕೆ ನುಗ್ಗಿದ ನಾಯಿ ಜನರ ಮೇಲೆ ಮನಬಂದಂತೆ ದಾಳಿ ಮಾಡಲು ಪ್ರಾರಂಭಿಸಿತು.
ಹಠಾತ್ ದಾಳಿಯಿಂದಾಗಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ, ಮಹಿಳೆಯರು ಮತ್ತು ಮಕ್ಕಳು ಕಿರುಚುತ್ತಾ ಸುರಕ್ಷತೆಗಾಗಿ ಓಡಿ ಹೋಗಿದ್ದಾರೆ. ಕೆಲವರು ಆತುರದಲ್ಲಿ ಬಿದ್ದು ಗಾಯಗೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಂತರ ನಾಯಿ ರಸ್ತೆಗೆ ಹಾರಿ ದಾರಿಹೋಕರು ಮತ್ತು ಅಂಗಡಿಯವರ ಮೇಲೆ ದಾಳಿ ಮಾಡಿ ಹತ್ತಿರದ ಹಳ್ಳಿಯ ಕಡೆಗೆ ಓಡಿಹೋಯಿತು. ಅಲ್ಲಿ ಅದು ದನಗಳನ್ನು ಕಚ್ಚಿದೆ ಎಂದು ಹೇಳಲಾಗಿದೆ.
ಗಾಯಗೊಂಡವರಲ್ಲಿ ಮನಿಷಾ (9), ಪೂಜಾ (12), ವಿಜಯ್ ಪ್ರತಾಪ್ (15), ಕಾಂಚನ್ (16), ಪಿಂಕಿ (26), ರಮೇಶ್ (50), ಮದನ್ ಲಾಲ್ (66), ಸುನಿತಾ (35) ಮತ್ತು ಚಂದ್ರಾವತಿ (40) ಸೇರಿದಂತೆ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಬಿಸೌಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್ಸಿ) ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ರೇಬೀಸ್ ವಿರೋಧಿ ಚುಚ್ಚುಮದ್ದನ್ನು ನೀಡಲಾಯಿತು. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬೀದಿ ನಾಯಿ ಕಡಿತದಿಂದ ಸಾವಾದರೆ, ಗಾಯವಾದರೆ ಭಾರಿ ದಂಡ: ಸುಪ್ರೀಂ ಕೋರ್ಟ್ ಎಚ್ಚರಿಕೆ
ಸೋಮವಾರ 109 ಜನರು ರೇಬೀಸ್ ವಿರೋಧಿ ಚಿಕಿತ್ಸೆಗಾಗಿ ನೋಂದಾಯಿಸಿಕೊಂಡಿದ್ದು, ಅವರಲ್ಲಿ ಸುಮಾರು 60 ಜನರು ಬ್ಯಾಂಕ್ವೆಟ್ ಹಾಲ್ ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಸಿಎಚ್ಸಿಯ ವೈದ್ಯಾಧಿಕಾರಿ ಅರವಿಂದ್ ವರ್ಮಾ ತಿಳಿಸಿದ್ದಾರೆ.
ಬೀದಿ ನಾಯಿಗಳ ನಿರ್ವಹಣೆಗೆ ಹಣ ಖರ್ಚು ಮಾಡಿದರೂ, ನಾಯಿ ಇನ್ನೂ ಮುಕ್ತವಾಗಿ ಓಡಾಡುತ್ತಿರುವುದರಿಂದ ತಕ್ಷಣದ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಮಾತನಾಡಿ, ಬಿಸೌಲಿ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆಗಳನ್ನು ನೀಡಲಾಗಿದೆ.
ಬೀದಿನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ
ಮಹಾರಾಷ್ಟ್ರದ ಮುಂಬೈಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ದೇಶವೇ ಬೆಚ್ಚಿ ಬಿದ್ದಿದೆ. ನಾಯಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಮುಂಬೈಯ ವರ್ಸೋವಾದಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಹೇಯ ಕೃತ್ಯ ಎಸಗುತ್ತಿದ್ದಾಗಲೇ ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೆ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ ಆತನನ್ನು ಥಳಿಸಿ ಪಾಠ ಕಲಿಸಿದ್ದಾರೆ.