Viral Video: ಕುಡಿದ ಮತ್ತಿನಲ್ಲಿ ಕಾರು ಓಡಿಸಿ ನಡುರಸ್ತೆಯಲ್ಲಿ ಮಹಿಳೆಯ ಹೈಡ್ರಾಮಾ ಮಾಡಿದ ಮಹಿಳೆ

ಕುಡಿದ ಮತ್ತಿನಲ್ಲಿದ್ದ ರಷ್ಯಾದ ಮಹಿಳೆಯೊಬ್ಬಳು ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಕಾರನ್ನು ಜನರು ತಡೆದಿದ್ದಕ್ಕೆ ಕೋಪಗೊಂಡ ಮಹಿಳೆ ತನ್ನ ಮೊಬೈಲ್ ಕಳ್ಳತನ ಮಾಡಿದ್ದಾರೆ ಎಂದು ನಡು ರಸ್ತೆಯಲ್ಲಿ ನಿಂತು ಗಲಾಟೆ ಮಾಡಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ಆಗಿದೆ.

drunk and drive
Profile pavithra Feb 7, 2025 12:44 PM

ರಾಯ್‌ಪುರ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗಳಿಗೆ ತಾವು ಮತ್ತಿನಲ್ಲಿ ಏನು ಮಾಡುತ್ತಿದ್ದೇವೆ ಎಂಬುದೇ ತಿಳಿದಿರುವುದಿಲ್ಲ. ಕುಡಿದು ಮಾಡಿದ ಎಡವಟ್ಟು ತನ್ನ ಇದೀಗ ಅಂತಹದೊಂದು ಘಟನೆ ರಾಯ್‌ಪುರದ ವಿಐಪಿ ರಸ್ತೆಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ರಷ್ಯಾದ ಮಹಿಳೆಯೊಬ್ಬಳು ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜನರು ಕಾರನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡ ಮಹಿಳೆ ದೊಡ್ಡ ಗಲಾಟೆಯನ್ನೇ ಮಾಡಿದ್ದಾಳೆ. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಘಟನೆಯ ದೃಶ್ಯ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ಆಗಿದೆ.

ಪೊಲೀಸರು ಮಹಿಳೆ ಮತ್ತು ಆಕೆಯ ಜೊತೆಗಿದ್ದ ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.ಕಾರಿನ ಮೇಲೆ 'ಭಾರತ ಸರ್ಕಾರ' ಎಂದು ಬರೆಯಲಾಗಿತ್ತು. ಪೊಲೀಸ್ ಮಾಹಿತಿಯ ಪ್ರಕಾರ, ಕಾರು ಡಿಆರ್‌ಐ (ಕಂದಾಯ ಗುಪ್ತಚರ ನಿರ್ದೇಶನಾಲಯ) ಪಬ್ಲಿಕ್ ಪ್ರಾಸಿಕ್ಯೂಟರ್ ಭವೇಶ್ ಆಚಾರ್ಯ ಅವರಿಗೆ ಸೇರಿದೆ ಎನ್ನಲಾಗಿದೆ. ಆದರೆ ಘಟನೆಯ ಸಮಯದಲ್ಲಿ, ಕಾರನ್ನು ಆತನ ಸ್ನೇಹಿತೆ ನೊಡಿರಾ ಓಡಿಸಿದ್ದಾಳೆ ಎನ್ನಲಾಗಿದೆ.



ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಸರ್ಕಾರಿ ವಕೀಲ ಮತ್ತು ವಿದೇಶಿ ಮಹಿಳೆ ಅತಿಯಾಗಿ ಕುಡಿದಿದ್ದಳಂತೆ. ಇಬ್ಬರೂ ಪಬ್‍ನಿಂದ ಹೊರಬಂದು ಸಿಗರೇಟುಗಳನ್ನು ಖರೀದಿಸಲು ಹೋಗುವಾಗ ನೋಡಿರಾ ಕಾರನ್ನು ಅತಿ ವೇಗವಾಗಿ ಓಡಿಸಿ ಈ ಅಪಘಾತಕ್ಕೆ ಕಾರಣಳಾಗಿದ್ದಾಳಂತೆ. ವರದಿಗಳ ಪ್ರಕಾರ, ರಷ್ಯಾದ ಮಹಿಳೆ ವಕೀಲನ ತೊಡೆಯ ಮೇಲೆ ಕುಳಿತು ಕಾರನ್ನು ಓಡಿಸುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ನೀಲಕಮಲ್ ಸಾಹು, ಲಲಿತ್ ಚಂದೇಲ್ ಮತ್ತು ಅರುಣ್ ವಿಶ್ವಕರ್ಮ ಎಂಬ ಮೂವರು ಯುವಕರು ಗಂಭಿರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಘಟನೆಯ ನಂತರ, ಹತ್ತಿರದಲ್ಲಿದ್ದ ಜನರು ಕಾರನ್ನು ನಿಲ್ಲಿಸಿದ್ದಕ್ಕೆ ವಿದೇಶಿ ಮಹಿಳೆ ಸಿಕ್ಕಾಪಟ್ಟೆ ಗಲಾಟೆ ಮಾಡಿದ್ದಾಳಂತೆ. ಘಟನಾ ಸ್ಥಳದಲ್ಲಿ ತನ್ನ ಫೋನ್ ಅನ್ನು ಅಲ್ಲಿದ್ದವರು ಯಾರೋ ಕದ್ದಿದ್ದಾರೆ ಎಂದು ಆರೋಪಿಸಿದ್ದಾಳೆ.

ಈ ಸುದ್ದಿಯನ್ನೂ ಓದಿ:Road Accident: ಭೀಕರ ರಸ್ತೆ ಅಪಘಾತ; ಪಿಯುಸಿ ವಿದ್ಯಾರ್ಥಿ ಸಾವು

ಪ್ರವಾಸಿ ವೀಸಾದ ಮೂಲಕ ರಾಯ್‌ಪುರಕ್ಕೆ ಬಂದಿದ್ದಳಂತೆ. ವೈದ್ಯಕೀಯ ವರದಿಯ ನಂತರ, ಡ್ರಿಂಕ್ ಅಂಡ್ ಡ್ರೈವ್‍ಗೆ ಸಂಬಂಧಿಸಿದ ವಿಭಾಗಗಳಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಮತ್ತು ಅವರ ಕಾರನ್ನು ಕೂಡ ವಶಕ್ಕೆ ತೆಗೆದುಕೊಂಡಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?