ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನೋಡ ನೋಡುತ್ತಲೇ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ; ಭಯಾನಕ ವಿಡಿಯೋ ವೈರಲ್‌

ಉತ್ತರ ಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ಈ ವರೆಗೂ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ದೃಶ್ಯವೊಂದು ನೆಟ್ಟಿಗರನ್ನು ಬೆಚ್ಚಿ ಬೀಳಿಸುವಂತಿದೆ.

ನೋಡ ನೋಡುತ್ತಲೇ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 14, 2026 8:08 PM

ಲಖನೌ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ಈ ವರೆಗೂ 80ಕ್ಕೂ ಅಧಿಕ ಮಂದಿ (Uttara Pradesh) ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ದೃಶ್ಯವೊಂದು ನೆಟ್ಟಿಗರನ್ನು ಬೆಚ್ಚಿ ಬೀಳಿಸುವಂತಿದೆ. ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೀಸಿದ ಭೀಕರ (Viral Video) ಚಂಡಮಾರುತದ ವೇಳೆ, ಒಬ್ಬ ವ್ಯಕ್ತಿ ಟಿನ್ ಶೆಡ್ ಜೊತೆಗೆ ಸುಮಾರು 50 ಅಡಿ ಎತ್ತರಕ್ಕೆ ಎಸೆಯಲ್ಪಟ್ಟಿದ್ದಾನೆ. ಬರೇಲಿಯಲ್ಲಿ ಈ ಘಟನೆ ನಡೆದಿದೆ.

ನನ್ಹೇ ಮಿಯಾನ್ ಎಂದು ಗುರುತಿಸಲಾದ ವ್ಯಕ್ತಿ ಬರೋಬ್ಬರಿ 50 ಅಡಿ ಎತ್ತರಕ್ಕೆ ಹಾರಿ ಕೆಳಗಿ ಬಿದ್ದಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಅಥವಾ ಶೀಟ್ ಹಾರಿಹೋಗದಂತೆ ತಡೆಯಲು ಆ ವ್ಯಕ್ತಿ ಟಿನ್ ಶೆಡ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಗ, ಗಾಳಿಯ ತೀವ್ರತೆಯು ಆತನನ್ನು ಮೇಲಕ್ಕೆತ್ತಿ ದೂರಕ್ಕೆ ಎಸೆದಿದೆ. ಜೋರಾಗಿ ಗಾಳಿ ಬಿಸುತ್ತಿತ್ತು. ಈ ವೇಳೆ ಹಗ್ಗವನ್ನು ಹಿಡಿದಿದ್ದೆ. ಆದರೆ ಗಾಳಿಯ ರಭಸಕ್ಕೆ ಹಗ್ಗಾ ತುಂಡಾಯಿತು. ಈ ವೇಳೆ ಹಗ್ಗದ ಜೊತೆ ಇದ್ದ ಟಿನ್ ಶೀಟ್ ಜೊತೆಗೆ ನಾನೂ ಕೂಡ ಗಾಳಿಯಲ್ಲಿ ಹಾರಿಹೋದೆ. ಸುಮಾರು 50 ಅಡಿ ಎತ್ತರಕ್ಕೆ ಹಾರಿ ಸುಮಾರು 500 ಮೀಟರ್ ದೂರಕ್ಕೆ ಎಸೆಯಲ್ಪಟ್ಟೆ ಎಂದು ಗಾಯಾಳು ಹೇಳಿಕೊಂಡಿದ್ದಾರೆ.

ವಿಡಿಯೋ ನೋಡಿ



ಅದು ಸುಮಾರು 30-40 ಅಡಿ ಎತ್ತರದಲ್ಲಿತ್ತು. ನಾನು ಎಲ್ಲಿಗೆ ಬಿದ್ದೆ ಎಂಬುದೇ ಗೊತ್ತಾಗಲಿಲ್ಲ. ಕನಿಷ್ಠ 50 ಅಡಿ ದೂರಕ್ಕೆ ಎಸೆಯಲ್ಪಟ್ಟೆ, ಗಾಳಿ ರಭಸ ಹೆಚ್ಚಿದ್ದರಿಂದ ತಮ್ಮನ್ನು ರಕ್ಷಿಸಬಹುದು ಎಂಬ ಭರವಸೆಯಲ್ಲಿ ಹಗ್ಗವನ್ನು ಹಿಡಿದಿದ್ದೆ. ಆದರೆ ಬಲವಾದ ಗಾಳಿ ಹಗ್ಗವನ್ನು ತುಂಡುಮಾಡಿತು ಎಂದು ಅವರು ಹೇಳಿದರು. ಘಟನೆಯಲ್ಲಿ ಅವರ ಎರಡೂ ಕೈ ಹಾಗೂ ಕಾಲು ಮುರಿತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಳೆದ ಬುಧವಾರ ಉತ್ತರ ಪ್ರದೇಶದಾದ್ಯಂತ ಬಿರುಗಾಳಿ, ಸಿಡಿಲು ಮತ್ತು ಭಾರೀ ಮಳೆಯಿಂದಾಗಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ರಾಜ್ಯಾದ್ಯಂತ ಹವಾಮಾನ ವೈಪರೀತ್ಯದಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಮನೆಗಳು, ಮರಗಳು, ವಿದ್ಯುತ್ ಮೂಲಸೌಕರ್ಯ ಮತ್ತು ಕೃಷಿ ಭೂಮಿಗೆ ಹಾನಿಯಾಗಿದೆ.

Fact Check: ಬಿಜೆಪಿ ಗೆಲುವಿನ ಬಳಿಕ ಪಶ್ಚಿಮ ಬಂಗಾಳದಿಂದ ಪಲಾಯನ ಮಾಡುತ್ತಿರುವ ವಲಸಿಗರು ! ವೈರಲ್‌ ವಿಡಿಯೊದ ಸತ್ಯಾಸತ್ಯತೆ ಏನು?

ವ್ಯಾಪಕ ವಿನಾಶದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿರುಗಾಳಿ, ಮಿಂಚು ಮತ್ತು ಭಾರೀ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ತ್ವರಿತ ಪರಿಹಾರವನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೀವ, ಜಾನುವಾರು ಮತ್ತು ಆಸ್ತಿಪಾಸ್ತಿ ನಷ್ಟದ ಮೌಲ್ಯಮಾಪನಗಳನ್ನು ಪೂರ್ಣಗೊಳಿಸಿ ಪರಿಹಾರವನ್ನು 24 ಗಂಟೆಗಳ ಒಳಗೆ ವಿತರಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.