ಹೈದರಾಬಾದ್, ಫೆ. 3: ಕುಡಿದ ಅಮಲಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ತನ್ನ ಪತ್ನಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಪತ್ನಿ ತನ್ನ ಚಿಕ್ಕ ಮಗುವನ್ನು ಹಿಡಿದುಕೊಂಡಿದ್ದಾಗ ಇಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ಆತಂಕಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (viral video) ಆಗಿದೆ. ಈ ಘಟನೆ ಹೈದರಾಬಾದ್ನಲ್ಲಿ (Hyderabad) ಭಾನುವಾರ (ಫೆಬ್ರವರಿ 1) ರಾತ್ರಿ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ವೈರಲ್ ಆಗಿರುವ ಈ ವಿಡಿಯೊದಲ್ಲಿ, ಶರ್ಟ್ ಧರಿಸದ ರವಿಪ್ರಸಾದ್ ಎಂಬ ವ್ಯಕ್ತಿ ಅತಿಯಾಗಿ ಕುಡಿದು ಒಳ ಉಡುಪು ಮಾತ್ರ ಧರಿಸಿ, ತನ್ನ ಪತ್ನಿ ಶಿರಿಷಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿರುವುದನ್ನು ತೋರಿಸಲಾಗಿದೆ. ಆ ಮಹಿಳೆ ತನ್ನನ್ನು ಮತ್ತು ಮಗುವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅಳುತ್ತಿರುವುದು ಕಂಡುಬಂದಿದೆ. ಆಕೆಯ ಪ್ರಯತ್ನಗಳ ಹೊರತಾಗಿಯೂ, ಆ ವ್ಯಕ್ತಿ ಪದೇ ಪದೇ ಅವಳನ್ನು ಹೊಡೆಯುವುದು, ತಳ್ಳುವುದು ಕಂಡುಬಂದಿದೆ. ಮಗು ಕೂಡ ಜೋರಾಗಿ ಅಳುತ್ತಿರುವುದನ್ನು ಕೇಳಬಹುದು.
ವಿಡಿಯೊ ವೀಕ್ಷಿಸಿ:
ಹಲ್ಲೆಯ ಸಮಯದಲ್ಲಿ ಜಾತಿ ಆಧಾರಿತ ನಿಂದನೆಗಳನ್ನು ಬಳಸಿ ಪತ್ನಿಯನ್ನು ನಿಂದಿಸಿದ್ದಾನೆ ಎಂಬ ಆರೋಪವಿದೆ. ಹೀಗಾಗಿ ಕಾನ್ಸ್ಟೇಬಲ್ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚುವರಿ ಸೆಕ್ಷನ್ಗಳನ್ನು ಸಹ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯ ನಂತರ ಶಿರಿಷಾ ತನ್ನ ಪತಿಯ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ಭಾಗವಾಗಿ ಅಧಿಕಾರಿಗಳು ವೈರಲ್ ವಿಡಿಯೊವನ್ನು ಪರಿಶೀಲಿಸುತ್ತಿದ್ದಾರೆ. ಘಟನೆಯ ನಂತರ ರವಿಪ್ರಸಾದ್ ತನ್ನ ಪತ್ನಿ ಮತ್ತು ಅವರ ಮೂರು ವರ್ಷದ ಮಗಳನ್ನು ಮನೆಯೊಳಗೆ ಪ್ರವೇಶಿಸದಂತೆ ತಡೆದು, ತಡರಾತ್ರಿ ಅವರನ್ನು ಬಲವಂತವಾಗಿ ಹೊರಗೆ ಹಾಕಿದ್ದಾನೆ ಎಂದು ಹೇಳಲಾಗಿದೆ.
ಸ್ಮಶಾನಕ್ಕೆ ಬಿರಿಯಾನಿ ಆರ್ಡರ್ ಮಾಡಿದ ಮಹಿಳೆ; ಲೊಕೇಶನ್ ಕಂಡು ಬೆಚ್ಚಿಬಿದ್ದ ಡೆಲಿವರಿ ಬಾಯ್!
ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಚಾರಣೆಯ ಸಮಯದಲ್ಲಿ ದಾಖಲಾಗಿರುವ ಸಾಕ್ಷ್ಯಗಳು ಮತ್ತು ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೀಲ್ಸ್ ಮಾಡಲು ನಿರಾಕರಿಸಿದ್ದಕ್ಕೆ ಕೊಲೆ
ರೀಲ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯೊಬ್ಬಳು ತನ್ನ ಪತಿಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ. ಕೊಲೆಗೆ ಮೊದಲು, ಹೆಂಡತಿ ಯೂಟ್ಯೂಬ್ನಲ್ಲಿ ಕೊಲೆಯ ವಿಧಾನವನ್ನು ಸಹ ಹುಡುಕಿದ್ದಳು. ಪ್ರಸ್ತುತ, ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
25 ವರ್ಷದ ಕೈಲಾಶ್ ಕೊಲೆಯಾದ ದುರ್ದೈವಿ. ಆತನ ದೇಹದಲ್ಲಿ ಯಾವುದೇ ಗಾಯದ ಲಕ್ಷಣಗಳಿರಲಿಲ್ಲ, ರಕ್ತವೂ ಇರಲಿಲ್ಲ. ಆತನ ಪತ್ನಿ ಶವದ ಬಳಿ ಶೋಕಿಸುತ್ತಿದ್ದಳು. ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿತು. ತಡರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಕೈಲಾಶ್ ಅವರ ಪತ್ನಿಯೇ ಆತನನ್ನು ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ದೂರಿನ ಆಧಾರದ ಮೇಲೆ, ಪೊಲೀಸ್ ತಂಡ ಪ್ರಕರಣದ ತನಿಖೆ ಆರಂಭಿಸಿತು.