ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರಿನ ರಸ್ತೆಬದಿಯ ಅಂಗಡಿಯಿಂದ ಮಧ್ಯರಾತ್ರಿ ಗಣೇಶ ವಿಗ್ರಹ ಕಳವು: ಸಿಸಿಟಿವಿ ದೃಶ್ಯ ವೈರಲ್

Viral News: ರಸ್ತೆಬದಿಯ ಮಳಿಗೆಯಿಂದಲೇ ಗಣೇಶ ಮೂರ್ತಿಯನ್ನು ತಡರಾತ್ರಿ ಕಳ್ಳತನ ಮಾಡಿರುವ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ ಪ್ರದೇಶದ ರಸ್ತೆ ಬದಿಯ ಅಂಗಡಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಗಣೇಶ ವಿಗ್ರಹವನ್ನು ಕಳ್ಳತನ ಮಾಡಲಾಗಿದ್ದು ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನ ರಸ್ತೆಬದಿಯ ಅಂಗಡಿಯಿಂದ ಗಣೇಶ ವಿಗ್ರಹ ಕಳವು

ಬೆಂಗಳೂರು, ಸೆ. 9: ಇನ್ನೇನು ಸ್ವಲ್ಪ ದಿನದಲ್ಲೇ ಗಣೇಶ ಹಬ್ಬ ಹತ್ತಿರ ಬರುತ್ತಿದೆ (Ganesh Chaturthi 2026). ಈ ನಡುವೆ ರಸ್ತೆ ಬದಿಯ ಅಂಗಡಿಯಿಂದ ಗಣೇಶ ಮೂರ್ತಿಯನ್ನು ತಡರಾತ್ರಿ ಕಳವು ಮಾಡಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ ಪ್ರದೇಶದ ರಸ್ತೆ ಬದಿಯ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿದ್ದ ಗಣೇಶ ವಿಗ್ರಹವನ್ನು ಖದೀಮರು ದೋಚಿದ್ದು, ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral News) ಆಗಿದೆ.

ಟಾಟಾ ಏಸ್ ವಾಹನದಲ್ಲಿ ಬೆಳಗಿನ ಜಾವ 3:51ರ ಸುಮಾರಿಗೆ ನಾಲ್ವರು ವ್ಯಕ್ತಿಗಳು ಬಂದು ವಿಗ್ರಹವನ್ನು ಎತ್ತಿಕೊಂಡು ಪರಾರಿಯಾಗುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಈ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತಿದ್ದು, ಪೊಲೀಸರು ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವುದಾಗಿ ಹೇಳಿದ್ದಾರೆ.

ವಿಡಿಯೊ ನೋಡಿ:



ಬೆಳಗ್ಗಿನ ಜಾವ ವಾಹನದಿಂದ ಕೆಳಗಿಳಿದ ವ್ಯಕ್ತಿಗಳು, ರಸ್ತೆಬದಿಯಲ್ಲಿ ಪ್ಲಾಸ್ಟಿಕ್ ಶೀಟ್‌ನಲ್ಲಿ ಮುಚ್ಚಿಡಲಾಗಿದ್ದ ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ತಮ್ಮ ವಾಹನಕ್ಕೆ ಏರಿಸಿದ್ದಾರೆ. ಬಳಿಕ ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದಾರೆ. ​ಬೆಳಗ್ಗೆ ವ್ಯಾಪಾರಿ ಬಂದು ನೋಡಿದಾಗ ಮೂರ್ತಿ ಇಲ್ಲದೆ ಇರುವುದನ್ನು ಗಮನಿಸಿದ್ದಾರೆ. ಬಳಿಕ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಳವಿನ ರಹಸ್ಯ ಬಯಲಾಗಿದೆ.

ದಕ್ಷಿಣ ಕೊರಿಯಾದಲ್ಲಿ ಭಾರತೀಯ ವಿದ್ಯಾರ್ಥಿನಿಗೆ ಕಿರುಕುಳ: ವಿಗ್ ಧರಿಸಿ ಬೆನ್ನಟ್ಟಿದ ಅಪರಿಚಿತ ವ್ಯಕ್ತಿ

ಕೃತ್ಯಕ್ಕೆ ಬಳಸಲಾದ ಟಾಟಾ ಏಸ್ ವಾಹನದ ನೋಂದಣಿ ಸಂಖ್ಯೆ ಆಧಾರದಲ್ಲಿ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ​ಗೌರಿ-ಗಣೇಶ ಹಬ್ಬದ ಸಮಯದಲ್ಲಿ ರಸ್ತೆಬದಿಯಲ್ಲಿ ತಾತ್ಕಾಲಿಕವಾಗಿ ಮೂರ್ತಿಗಳನ್ನು ಮಾರಾಟ ಮಾಡುವ ಸಣ್ಣ ವ್ಯಾಪಾರಿಗಳಲ್ಲಿ ಈ ಘಟನೆ ಆತಂಕ ಮೂಡಿಸಿದೆ.