ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಮಹಿಳೆಯರ ಜೊತೆ ಇರುವ ಅಶ್ಲೀಲ ವಿಡಿಯೋ ವೈರಲ್‌; ಢೋಂಗಿ ಬಾಬಾ ಪರಾರಿ

ಪಂಜಾಬ್‌ನ ಲುಧಿಯಾನದಲ್ಲಿರುವ ಹಳ್ಳಿಯೊಂದರ ಆಶ್ರಮ ಬಾಬಾ ಒಬ್ಬರು ಮಹಿಳೆಯ ಜೊತೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವ ವಿಡಿಯೋ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಲುಧಿಯಾನದಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ನಂತರ ಬಾಬಾ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಮಹಿಳೆಯರ ಜೊತೆ ಇರುವ ಅಶ್ಲೀಲ ವಿಡಿಯೋ ವೈರಲ್‌;  ಬಾಬಾ ಪರಾರಿ

Profile Vishakha Bhat Jun 21, 2025 11:30 AM

ಚಂಡೀಗಢ: ಪಂಜಾಬ್‌ನ ಲುಧಿಯಾನದಲ್ಲಿರುವ ಹಳ್ಳಿಯೊಂದರ ಆಶ್ರಮ (Physical Abuse) ಬಾಬಾ ಒಬ್ಬರು ಮಹಿಳೆಯ ಜೊತೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವ ವಿಡಿಯೋ ವೈರಲ್‌ (Viral Video) ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಲುಧಿಯಾನದಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ನಂತರ ಬಾಬಾ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಜಗ್ರಾಂವ್‌ನ ತಲ್ವಾಂಡಿ ಕಲಾನ್ ಗ್ರಾಮದಲ್ಲಿರುವ ಡೇರಾದ ಮುಖ್ಯಸ್ಥ ಶಂಕರಾನಂದ ಭೂರಿವಾಲಾ ಅವರ ಅಶ್ಲೀಲ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಡೇರಾ ಮುಖ್ಯಸ್ಥರು ಮಹಿಳೆಯೊಂದಿಗೆ ಆಕ್ಷೇಪಾರ್ಹ ಭಂಗಿಯಲ್ಲಿ ಕಾಣಬಹುದಾಗಿದೆ.

ಗ್ರಾಮಸ್ಥರ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಬಾಬಾ ಶಂಕರ್ ನಂದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಆರೋಪಿಯ ವಿಳಾಸ ತಿಳಿದಿಲ್ಲ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಡೇರಾ ಆಶ್ರಮದ ಬಗ್ಗೆ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಖ್ ಸಂಘಟನೆಗಳು ಒತ್ತಾಯಿಸಿವೆ. ಪೊಲೀಸರು ಈ ವಿಷಯವನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ವಿಷಯದ ಗಂಭೀರತೆಯನ್ನು ಪರಿಗಣಿಸಿ, ಸ್ಥಳೀಯ ಸಮುದಾಯವು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ವ್ಯಕ್ತಿಯೊಬ್ಬರ ದೂರಿನ ಮೇರೆಗೆ ಬಾಬಾ ವಿರುದ್ಧ ಢಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಎಸ್‌ಪಿ ಡಾ. ಅಂಕುರ್ ಗುಪ್ತಾ ತಿಳಿಸಿದ್ದಾರೆ. ವಿಡಿಯೋದಲ್ಲಿ ಕಾಣುವ ಮಹಿಳೆ ಹತ್ತಿರದ ಪ್ರದೇಶದವರು ಎಂದು ಸಂಘಟನೆಗಳು ಹೇಳುತ್ತಿವೆ. ಮಹಿಳೆಗೆ ಬೆದರಿಕೆ ಹಾಕಲಾಗುತ್ತಿದೆಯೇ ಅಥವಾ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆಯೇ ಎಂದು ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Police Firing: ದಿವ್ಯಾಂಗ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ: ಆರೋಪಿಯ ಕಾಲಿಗೆ ಗುಂಡು

ಡೇರಾದಲ್ಲಿ ವಾಸಿಸುವ ಅಥವಾ ಭೇಟಿ ನೀಡುವ ಯಾರೋ ಒಬ್ಬರು ಈ ವಿಡಿಯೋ ಮಾಡಿದ್ದಾರೆ. ಡೇರಾ ಬೆಂಬಲಿಗರು ವಿಡಿಯೋ ವೈರಲ್ ಆಗುವುದನ್ನು ತಡೆಯಲು ಪ್ರಯತ್ನಿಸಿದರು. ಸ್ವಾಮಿ ಶಂಕರಾನಂದರ ಆಪಾದಿತ ವಿಡಿಯೋ ವೈರಲ್ ಆದ ನಂತರ, ವಿಷಯದ ಗಂಭೀರತೆಯನ್ನು ಪರಿಗಣಿಸಿ, ಹರಿಯಾಣ ಡೇರಾ ಮುಖ್ಯಸ್ಥರು ಅವರನ್ನು ತಲ್ವಾಂಡಿ ಖುರ್ದ್ ಡೇರಾ ಹುದ್ದೆಯಿಂದ ತೆಗೆದುಹಾಕಿದ್ದಾರೆ ಎಂಬುದು ತಿಳಿದು ಬಂದಿದೆ.