Puri Jagannath: ಪುರಿ ಜಗನ್ನಾಥ ರಥೋತ್ಸವದಲ್ಲಿ ಕಾಲ್ತುಳಿತ; ವೈರಲ್ ಆಯ್ತು ಪೊಲೀಸ್ ಅಧಿಕಾರಿ ನೀಡಿದ ಆದೇಶ!
ಒಡಿಶಾದ ಪುರಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ 50 ಜನರು ಗಾಯಗೊಂಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಮನೆಯ ಹೊರಗೆ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸರಿಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಸೂಚನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.


ಭುವನೇಶ್ವರ: ಒಡಿಶಾದ ಪುರಿಯ (Puri Jagannath) ಗುಂಡಿಚಾ ದೇವಸ್ಥಾನದ ಬಳಿ ನಡೆಯುತ್ತಿರುವ ರಥಯಾತ್ರೆ ಸಂದರ್ಭದಲ್ಲಿ ನಡೆದ ಕಾಲ್ತುಳಿತದ (Stampede Case) ಪ್ರಕರಣದಲ್ಲಿ ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಈ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮನೆಯ ಹೊರಗೆ ಭದ್ರತೆಗಾಗಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಆದೇಶ ಸೋಶಿಯಲ್ ಮೀಡಿಯಗಳಲ್ಲಿ ವೈರಲ್ (Viral News) ಆಗಿದೆ.
ಇತ್ತೀಚೆಗೆ ಪುರಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ 50 ಜನರು ಗಾಯಗೊಂಡಿದ್ದರು. ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಮನೆಯ ಹೊರಗೆ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ನಿಯೋಜನೆಯ ಮೇಲ್ವಿಚಾರಣೆ ನಡೆಸಿದ ಅಧಿಕಾರಿಗಳಲ್ಲಿ ಭುವನೇಶ್ವರ ಹೆಚ್ಚುವರಿ ಪೊಲೀಸ್ ಆಯುಕ್ತ (ಎಸಿಪಿ) ನರಸಿಂಗ ಭೋಲ್ ಒಬ್ಬರು.
ವಿಡಿಯೊ ಇಲ್ಲಿದೆ ನೋಡಿ...
IS THIS DEMOCRACY?@IYCOdisha went to gherao the CM’s residence, demanding accountability for the chaos and mismanagement during the recent Puri Rath Yatra incident. But instead of answers, @odisha_police squads, acting like government goons, tried to crush the voice of youth.… pic.twitter.com/vlTSSof3hx
— Manas choudhury (@ManasCOfficial) June 29, 2025
ವೈರಲ್ ಆದ ವಿಡಿಯೊದಲ್ಲಿ, ಭೋಲ್ ಅವರು ಪೊಲೀಸ್ ಸಿಬ್ಬಂದಿಯೊಬ್ಬರಿಗೆ "ಯಾರಾದರೂ ಇಲ್ಲಿಗೆ ಬಂದರೆ, ಅವರನ್ನು ಹಿಡಿಯಬೇಡಿ ಅವರ ಕಾಲು ಮುರಿಯಿರಿ. ಯಾರು ಕಾಲು ಮುರಿದರೂ, ನನ್ನ ಬಳಿಗೆ ಬಂದು ಬಹುಮಾನ ತೆಗೆದುಕೊಳ್ಳಿ" ಎಂದಿದ್ದಾರೆ.
ಪುರಿ ಕಾಲ್ತುಳಿತದ ಬಗ್ಗೆ ಒಡಿಶಾ ಸರ್ಕಾರ ಆಡಳಿತಾತ್ಮಕ ತನಿಖೆಯನ್ನು ಶುರುಮಾಡಿದೆ. ಅಭಿವೃದ್ಧಿ ಆಯುಕ್ತ ಅನು ಗರ್ಗ್ 30 ದಿನಗಳಲ್ಲಿ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಿದ್ದಾರೆ. ʼʼಈ ದುರಂತ ಘಟನೆಗೆ ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ" ಎಂದು ರಾಜ್ಯ ಕಾನೂನು ಸಚಿವ ಪೃಥಿವಿರಾಜ್ ಹರಿಚಂದನ್ ಹೇಳಿದ್ದಾರೆ. ಎಲ್ಲ ಗಾಯಾಳುಗಳನ್ನು ಸರ್ಕಾರಿ ಆರೋಗ್ಯ ಸೌಲಭ್ಯದಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪುರಿಯ ಮುಖ್ಯ ಜಿಲ್ಲಾ ವೈದ್ಯಾಧಿಕಾರಿ ಕಿಶೋರ್ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ನವಿಲುಗರಿಯಲ್ಲಿ ಮೂಡಿಬಂದ ಪುರಿ ಜಗನ್ನಾಥ ಸ್ವಾಮಿ; ಕಲಾವಿದೆಯ ಕೈಚಳಕಕ್ಕೆ ನೆಟ್ಟಿಗರು ಫುಲ್ ಫಿದಾ
ರಥಯಾತ್ರೆಯ ವೇಳೆ ಕಾಲ್ತುಳಿತ; ಮೂವರು ಸಾವು
ಒಡಿಶಾದ ಪುರಿಯಲ್ಲಿ ರಥಯಾತ್ರೆಯ ಸಮಯದಲ್ಲಿ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ. ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರ ವ್ಯವಸ್ಥೆ ಅಸಮರ್ಪಕವಾಗಿತ್ತು. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.