ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Viral Video: ಹಿಮದ ಕಣಿವೆಯ ನಡುವೆ ಹಾದು ಹೋದ ವಂದೇ ಭಾರತ್: ಕಾಶ್ಮೀರದ ಎದುರು ಸ್ವಿಟ್ಜರ್ಲೆಂಡ್ ಶೂನ್ಯ ಎಂದ ನೆಟ್ಟಿಗರು

ಹಿಮದಿಂದ ಆವೃತವಾದ ಹಿಮಾಲಯದ ಪರ್ವತ ಶ್ರೇಣಿಗಳ ನಡುವೆ 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲೊಂದು ಪ್ರಯಾಣ ಮಾಡುತ್ತಿರುವ ದೃಶ್ಯ ಕಣ್ಮನ ಸೆಳೆಯುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ದಟ್ಟವಾದ ಹಿಮದಿಂದ ಆವೃತವಾದ ಭೂದೃಶ್ಯದ ಮಧ್ಯೆ ವಂದೇ ಭಾರತ್ ಹಾದು ಹೋಗುತ್ತಿದೆ‌. ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಹಿಮಾಲಯದ ಭೂದೃಶ್ಯದ ನಡುವೆ ಹಾದುಹೋದ ವಂದೇ ಭಾರತ್

ಶ್ರೀನಗರ,ಜ. 25: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಹಲವಾರು ದೃಶ್ಯಗಳು ನೆಟ್ಟಿಗರ ಮನ ಸೆಳೆಯುತ್ತವೆ. ಅಂತಹ ದೃಶ್ಯಗಳಲ್ಲಿ ಈ ವಿಡಿಯೊ ಕೂಡ ಸೇರಿದೆ. ಹಿಮದಿಂದ ಆವೃತವಾದ ಹಿಮಾಲಯದ ಪರ್ವತ ಶ್ರೇಣಿಗಳ ನಡುವೆ 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲೊಂದು ಪ್ರಯಾಣ ಮಾಡುತ್ತಿರುವ ದೃಶ್ಯ ಕಣ್ಮನ ಸೆಳೆಯುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ದಟ್ಟವಾದ ಹಿಮದಿಂದ ಆವೃತವಾದ ಭೂದೃಶ್ಯದ ಮಧ್ಯೆ ವಂದೇ ಭಾರತ್ ಹಾದು ಹೋಗುತ್ತಿದೆ‌. ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ (Viral Video) ಆಗಿದೆ.

ಈ ಕ್ಲಿಪ್ ಅನ್ನು ಬನಿಹಾಲ್ ಶಾಸಕ ಸಜ್ಜದ್ ಶಾಹೀನ್ ಶೇರ್ ಮಾಡಿದ್ದಾರೆ. ಬನಿಹಾಲ್ ಭಾಗದ ಈ ದೃಶ್ಯವು ಭಾರತೀಯ ರೈಲ್ವೆಯ ತಾಂತ್ರಿಕ ಶಕ್ತಿಯನ್ನು ಇಡೀ ಜಗತ್ತಿಗೆ ಸಾರುತ್ತಿದೆ. ಹಿಮದಿಂದ ಆವೃತವಾದ ಹಳಿಗಳು, ಹೆಪ್ಪುಗಟ್ಟಿದ ಇಳಿಜಾರುಗಳು ಮತ್ತು ಎತ್ತರದ ಶಿಖರಗಳು ಕಣ್ಣು ಹಾಯಿಸಿ ದಷ್ಟು ಮನಸ್ಸಿಗೆ ಹಿತ ನೀಡುತ್ತಿವೆ. ಒಂದು ಕಾಲದಲ್ಲಿ ಗರಿಷ್ಠ ಚಳಿಗಾಲದಲ್ಲಿ ಸಂಪರ್ಕವನ್ನು ಸ್ಥಗಿತಗೊಳಿಸಿದ‌ರೈಲು ಸೇವೆಗಳು ಈಗ ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಈ ದೃಶ್ಯ ಪ್ರತಿ ಬಿಂಬಿಸಿದೆ.

ವಿಡಿಯೋ ನೋಡಿ:



ಸಾಮಾನ್ಯವಾಗಿ ಅತಿಯಾದ ಹಿಮಪಾತ ಇದ್ದಾಗ ಕಾಶ್ಮೀರದಲ್ಲಿ ರಸ್ತೆ ಸಂಚಾರ ಸ್ಥಗಿತ ಆಗುತ್ತದೆ. ಆದರೆ, ಈ ವಂದೇ ಭಾರತ್ ರೈಲನ್ನು ವಿಶೇಷವಾಗಿ ರಚನೆ ಮಾಡಲಾಗಿದೆ. ಬನಿಹಾಲ್ ಶಾಸಕ ಸಜ್ಜದ್ ಶಾಹೀನ್ ಅವರು ಶೇರ್ ಮಾಡಿರುವ ಈ ವಿಡಿಯೋ ದಲ್ಲಿ, ಸುತ್ತಲೂ ಹಿಮದ ಹೊದಿಕೆ, ಅದರ ನಡುವೆ ಹಳಿಗಳ ಮೇಲೆ ಅತಿ ವೇಗದ ವಂದೇ ಭಾರತ್ ರೈಲು ಸಾಗುತ್ತಿರುವ ದೃಶ್ಯ ನೀವು ಗಮನಿಸಬಹುದು.

Viral Video: ಇಂಡಿಗೋ ವಿಮಾನ ರದ್ದು; ಪುತ್ರನಿಗಾಗಿ 800 ಕಿ.ಮೀ ದೂರ ಕಾರು ಚಲಾಯಿಸಿದ ತಂದೆ!

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ಬಗೆಯ ಕಾಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು, "ಭಾರತದಲ್ಲಿಯೇ ಇಂತಹ ಹಿಮದಿಂದ ಆವೃತವಾದ ರೈಲು ಪ್ರಯಾಣವನ್ನು ಆನಂದಿಸಬಹುದಾದಾಗ ಸ್ವಿಟ್ಜರ್‌ಲ್ಯಾಂಡ್‌ಗೆ ಭೇಟಿ ನೀಡಲು ಲಕ್ಷಗಟ್ಟಲೆ ಖರ್ಚು ಮಾಡುವುದು ಏಕೆ?" ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು ಈ ದೃಶ್ಯ ನೋಡಲು ಸ್ವರ್ಗ ಎಂದು ಬರೆದುಕೊಂಡಿದ್ದಾರೆ.