ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

‌Viral Video: ಶ್ವಾನದ ಪ್ರಾಣ ಉಳಿಸಲು ತನ್ನ ಜೀವದ ಹಂಗು ತೊರೆದು ನೀರಿಗೆ ಜಿಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೊ ವೈರಲ್

ಮಣಿಪುರದ ವ್ಯಕ್ತಿಯೊಬ್ಬ ನೀರಿನ ಪ್ರವಾಹಕ್ಕೆ ಸಿಲುಕಿ ಹೊಳೆಯಲ್ಲಿ ಕೊಚ್ಚಿಹೋಗುತ್ತಿದ್ದ ನಾಯಿಯನ್ನು ರಕ್ಷಿಸಲು ತನ್ನ ಜೀವದ ಹಂಗು ತೊರೆದು ಪ್ರವಾಹದ ನೀರಿಗೆ ಜಿಗಿದು ಆ ನಾಯಿಯನ್ನು ರಕ್ಷಿಸಿದ್ದಾನೆ. ಈ ಹೃದಯಸ್ಪರ್ಶಿ ಕ್ಷಣ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ನೆಟ್ಟಿಗರ ಮನಗೆದ್ದಿದೆ.

ನೀರಿಗೆ ಬಿದ್ದ ಶ್ವಾನದ ಜೀವ ಉಳಿಸಿದ ವ್ಯಕ್ತಿ; ನೆಟ್ಟಿಗರು ಹೇಳಿದ್ದೇನು?

Profile pavithra Jun 2, 2025 4:28 PM

ಇಂಫಾಲ್: ಬೀದಿ ನಾಯಿಗಳನ್ನು ಹೊಡೆದುಕೊಂದ ಸಾಕಷ್ಟು ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿರುತ್ತವೆ. ಆದರೆ ಮಣಿಪುರದ ವ್ಯಕ್ತಿಯೊಬ್ಬ ನೀರಿನ ಪ್ರವಾಹಕ್ಕೆ ಸಿಲುಕಿ ಹೊಳೆಯಲ್ಲಿ ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಲು ಪ್ರವಾಹದ ನೀರಿಗೆ ಜಿಗಿದ ಹೃದಯಸ್ಪರ್ಶಿ ಕ್ಷಣ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ನೆಟ್ಟಿಗರ ಮನಗೆದ್ದಿದೆ. ನಾಯಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗುವಾಗ ಆ ವ್ಯಕ್ತಿ ಧೈರ್ಯದಿಂದ ನೀರಿಗೆ ಜಿಗಿದು ನಾಯಿಯನ್ನು ಹಿಡಿದು ರಕ್ಷಿಸಿದ್ದಾನೆ ಎನ್ನಲಾಗಿದೆ. ನೆಟ್ಟಿಗರು ಈತನ ಶ್ವಾನ ಪ್ರೇಮ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌(Viral Video) ಆಗಿದೆ.

ವೈರಲ್ ಆದ ವಿಡಿಯೊದಲ್ಲಿ ವ್ಯಕ್ತಿ ತನ್ನ ಜೀವದ ಹಂಗು ತೊರೆದು ನಾಯಿಯನ್ನು ರಕ್ಷಿಸಲು ಉಕ್ಕಿ ಹರಿಯುತ್ತಿದ್ದ ನೀರಿಗೆ ಹಾರುವುದು ಸೆರೆಯಾಗಿದೆ. ಅವನು ನೀರಿನಲ್ಲಿ ಬಿದ್ದು, ಹೆದರಿದ್ದ ನಾಯಿಯನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಸುರಕ್ಷಿತವಾಗಿ ಕರೆದುಕೊಂಡು ಬಂದು ದಡ ಸೇರಿದ್ದಾನೆ.

ವಿಡಿಯೊ ಇಲ್ಲಿದೆ ನೋಡಿ...



ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಕೂಡ ಈತನ ಧೈರ್ಯವನ್ನು ಮೆಚ್ಚಿ ಕಾಮೆಂಟ್‌ ಮಾಡಿದ್ದಾರೆ “ನಿಜಕ್ಕೂ ಈತ ನಾಯಿಯ ಆತ್ಮೀಯ ಸ್ನೇಹಿತ” ಎಂದು ಕರೆದಿದ್ದಾರೆ. ಮಣಿಪುರದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಕಳೆದ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಪ್ರವಾಹ ಮತ್ತು ಭೂಕುಸಿತದಿಂದ 3,802 ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮತ್ತು 883 ಮನೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:‌Viral Video: ಸಫಾರಿ ಹೋದವರಿಗೆ ಕಾದಿತ್ತು ಬಿಗ್‌ ಶಾಕ್‌! ಹೀಗಾಗುತ್ತೆ ಅಂತ ಯಾರೂ ಊಹಿಸಿರ್ಲಿಕ್ಕಿಲ್ಲ

ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಮಿಜೋರಾಂ, ಅಸ್ಸಾಂ, ಮಣಿಪುರ, ತ್ರಿಪುರ ಮತ್ತು ಅರುಣಾಚಲ ಪ್ರದೇಶಗಳು ಹೆಚ್ಚು ಹಾನಿಗೊಳಗಾಗಿದ್ದು, ರಸ್ತೆಗಳು ಕೊಚ್ಚಿಹೋಗಿವೆ. ಮನೆಗಳು ನಾಶವಾಗಿವೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.ಭಾರತ ಹವಾಮಾನ ಇಲಾಖೆ (ಐಎಂಡಿ) ಹಲವಾರು ಈಶಾನ್ಯ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.