Viral Video: ರೀಲ್ಸ್ ನೋಡ್ತಾ ಕುಳಿತ ವೈದ್ಯ- ಚಿಕಿತ್ಸೆಗೆ ಬಂದಿದ್ದ ಮಹಿಳೆ ಹೃದಯಘಾತದಿಂದ ಸಾವು
ವೈದ್ಯನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಆಸ್ಪತ್ರೆಯಲ್ಲಿ ನಡೆದಿದೆ. ಮೈನ್ಪುರಿಯ ಮಹಾರಾಜ ತೇಜ್ ಸಿಂಗ್ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ವೈದ್ಯ ಆದರ್ಶ್ ಸೆಂಗರ್, ಮಹಿಳೆಗೆ ತುರ್ತು ಚಿಕಿತ್ಸೆ ನೀಡುವ ಬದಲು ಮೊಬೈಲ್ನಲ್ಲಿ ರೀಲ್ಸ್ ನೋಡ್ತಾ ಕುಳಿತಿರುವ ವಿಡಿಯೊ ವೈರಲ್ ಆಗಿದೆ.

Viral Video

ಲಖನೌ: ವೈದ್ಯನ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಆಸ್ಪತ್ರೆಯಲ್ಲಿ ನಡೆದಿದೆ. ಇತ್ತ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದರೂ ಚಿಕಿತ್ಸೆ ನೀಡುವ ಬದಲು ವೈದ್ಯ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಿದ್ದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೊ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೊ ಬಹಳಷ್ಟು ಕಡೆ ವೈರಲ್(Viral Video) ಆಗಿದ್ದು ನೆಟ್ಟಿಗರು ವೈದ್ಯನ ಈ ರೀತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈನ್ಪುರಿಯ ಮಹಾರಾಜ ತೇಜ್ ಸಿಂಗ್ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯನನ್ನು ಆದರ್ಶ್ ಸೆಂಗರ್ ಎಂದು ಗುರುತಿಸಲಾಗಿದೆ. ಗುರುಶರಣ್ ಸಿಂಗ್ ಎನ್ನುವವರ ತಾಯಿ ಪ್ರವೇಶ್ ಕುಮಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ತುರ್ತು ಚಿಕಿತ್ಸಾ ವಿಭಾಗದಲ್ಲಿರುವ ವೈದ್ಯರಿಗೆ ಮಹಿಳೆಯನ್ನು ನೋಡುವಂತೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ವೇಳೆ ಕರ್ತವ್ಯ ನಿರತ ವೈದ್ಯ ಡಾ.ಆದರ್ಶ ಸೆಂಗರ್ ತಮ್ಮ ಕುರ್ಚಿಯ ಮೇಲೆ ಕುಳಿತು ಮೊಬೈಲ್ ನಲ್ಲಿ ರೀಲ್ಸ್ ವೀಕ್ಷಿಸುತ್ತಿದ್ದರು ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.
At the #Mainpuri district hospital in #UttarPradesh, a 60-year-old woman, #PraveshKumari, died of a heart attack while the doctor on duty, #DrAdarshSanger, allegedly watched reels on his mobile phone.
— Hate Detector 🔍 (@HateDetectors) January 29, 2025
The woman's family claims that crucial time was lost due to the doctor's… pic.twitter.com/ZGLcD5ZExg
ಆದಾಗ್ಯೂ, ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ವೈದ್ಯ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಲ್ಲಿ ರೀಲ್ಗಳನ್ನು ನೋಡುತ್ತಾ ಕುಳಿತಿದ್ದರು ಎಂದು ಗುರುಶರನ್ ಆರೋಪಿಸಿದ್ದು ಚಿಕಿತ್ಸೆ ನೀಡುವಂತೆ ನರ್ಸಿಂಗ್ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ಸಂದರ್ಭ ವೈದ್ಯರು ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಮಹಿಳೆಯ ಪುತ್ರ ವೈದ್ಯರೊಂದಿಗೆ ಗಲಾಟೆ ಮಾಡಿದ್ದಾರೆ. ಈ ವೇಳೆ ವೈದ್ಯರು ರೋಗಿಯ ಮಗನಿಗೆ ಕಪಾಳಮೋಕ್ಷ ಮಾಡಿದ್ದು ಆ ಹೊತ್ತಿಗೆ, ನನ್ನ ತಾಯಿ ಮೃತಪಟ್ಟಿದ್ದರು ಎಂದು ಮಗ ಗುರುಶರಣ್ ಆರೋಪಿಸಿದ್ದಾರೆ.
ಇದನ್ನು ಓದಿ: Viral News: ವಿಮಾನ ಟೇಕ್-ಆಫ್ ಮುಂಚೆಯೇ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆಗೆದ ವ್ಯಕ್ತಿ ಅರೆಸ್ಟ್!
ತಾಯಿ ಮೃತಪಟ್ಟ ಬೆನ್ನಲ್ಲೇ ಗುರುಶರಣ್ ಸಿಂಗ್ ಕುಟುಂಬಸ್ಥರು ಆಪ್ತರು ಆಸ್ಪತ್ರೆಗೆ ಆಗಮಿಸಿದ್ದು ಆಸ್ಪತ್ರೆ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಕಂಡ ಮುಖ್ಯ ವೈದ್ಯಕೀಯ ಅಧೀಕ್ಷಕ ಮದನ್ ಲಾಲ್ ಕೂಡ ಘಟನಾ ಸ್ಥಳಕ್ಕೆ ಆಗಮಿಸಿದರು. ಈಗಾಗಲೇ ಆಸ್ವತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು ಈ ಆರೋಪಗಳು ನಿಜವಾದರೆ ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಸ್ವತ್ರೆಯ ಸಿಎಂಒ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಈಗಾಗಲೇ ಘಟನೆಯ ತನಿಖೆ ಆರಂಭಿಸಿದ್ದಾರೆ.