ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಏರ್‌ಪೋರ್ಟ್‌ನಲ್ಲೇ ನೀರಿಲ್ಲ... ನೀರಿಲ್ಲ- ಪಾಕ್‌ ನಟಿಯ ವಿಡಿಯೊ ಫುಲ್‌ ವೈರಲ್‌!

ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹಂಚಿಕೊಂಡ ನಟಿ ಹಿನಾ, ವಿಮಾನ ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ವಿಮಾನ ನಿಲ್ದಾಣದಲ್ಲಿ ನೀರಿನ ಕೊರತೆ ಬಗ್ಗೆ ಹತಾಶೆ ವ್ಯಕ್ತಪಡಿಸಿರುವ ಅವರು, ನಮ್ಮ ದೇಶದ ಬಗ್ಗೆ ನಾವು ಹೆಮ್ಮೆಪಡಬೇಕಾದ ಸಮಯದಲ್ಲಿ, ವಿಮಾನ ನಿಲ್ದಾಣದ ಶೌಚಾಲಯಗಳಲ್ಲಿ ನೀರಿಲ್ಲ ಎಂದು ಹೇಳಿದರು.

ಏರ್‌ಪೋರ್ಟ್‌ನಲ್ಲೇ ನೀರಿಲ್ಲ...ನೀರಿಲ್ಲ- ಪಾಕ್‌ ನಟಿಯ ವಿಡಿಯೊ ವೈರಲ್‌!

ಕರಾಚಿ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Karachi’s Jinnah International Airport) ಸಾರ್ವಜನಿಕ ಶೌಚಾಲಯಗಳಲ್ಲಿ ನೀರಿನಂತಹ ಮೂಲಸೌಲಭ್ಯಗಳ ಕೊರತೆಯ ಬಗ್ಗೆ ನಟಿ (Pakistani actress) ಹಿನಾ ಖವಾಜಾ ಬಯಾತ್ (Hina Khwaja Bayat) ಹತಾಶೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ (Terror attack) ಬಳಿಕ ಭಾರತ ಸರ್ಕಾರವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಇದರಿಂದ ಎರಡು ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ನಡುವೆ ಪಾಕಿಸ್ತಾನದ ಮೂಲಸೌಕರ್ಯ ಕೊರತೆಯನ್ನು ಪಾಕಿಸ್ತಾನದ ಖ್ಯಾತ ನಟಿ ಹಿನಾ ಖವಾಜಾ ಬಯಾತ್ ಖಂಡಿಸಿದ್ದು, ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀರಿನ ಕೊರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ವಿಮಾನ ನಿಲ್ದಾಣದಿಂದ ಗುರುವಾರ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹಂಚಿಕೊಂಡ ನಟಿ ಹಿನಾ, ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ವಿಮಾನ ನಿಲ್ದಾಣದಲ್ಲಿ ನೀರಿನ ಕೊರತೆ ಬಗ್ಗೆ ಹತಾಶೆ ವ್ಯಕ್ತಪಡಿಸಿರುವ ಅವರು, ನಮ್ಮ ದೇಶದ ಬಗ್ಗೆ ನಾವು ಹೆಮ್ಮೆಪಡಬೇಕಾದ ಸಮಯದಲ್ಲಿ, ವಿಮಾನ ನಿಲ್ದಾಣದ ಶೌಚಾಲಯಗಳಲ್ಲಿ ನೀರಿಲ್ಲ ಎಂದು ಹೇಳಿದರು.

ಜನರು ವುಜು ಮಾಡಲು, ನಮಾಜ್ ಮಾಡಲು, ತಮ್ಮ ಮಕ್ಕಳಿಗೆ ಸ್ನಾನಗೃಹಗಳಲ್ಲಿ ಸಹಾಯ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೀರಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಯಾತ್ ಹೇಳಿದರು. ಸರ್ಕಾರದ ಆದ್ಯತೆಗಳ ಬಗ್ಗೆ ಪ್ರಶ್ನಿಸಿರುವ ಅವರು, ಸರ್ಕಾರವು ಭವ್ಯ ಭರವಸೆಗಳನ್ನು ಮಾತ್ರ ನೀಡುತ್ತದೆ. ಆದರೆ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು.

ಎಲ್ಲರೂ ಮೆಗಾ ಯೋಜನೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಮೂಲಭೂತ ಅಂಶಗಳನ್ನು ಯಾರು ಸರಿಪಡಿಸುತ್ತಾರೆ?. ನಮ್ಮ ವಿಮಾನ ನಿಲ್ದಾಣಗಳು ಕುಸಿಯುತ್ತಿವೆ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಅವರು ತಮ್ಮ ವಿಡಿಯೊಗೆ "ನಾವು ಒಂದು ರಾಷ್ಟ್ರವಾಗಿ ಕಳಪೆ ಸೇವೆ, ಕಳಪೆ ವ್ಯವಸ್ಥೆಗಳು, ಕಳಪೆ ನಿರ್ವಹಣೆಯನ್ನು ಏಕೆ ಸ್ವೀಕರಿಸುತ್ತಿದ್ದೇವೆ? ಎನ್ನುವ ಶೀರ್ಷಿಕೆಯನ್ನು ನೀಡಿದ್ದಾರೆ.



ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ನಾವು ಯಾವಾಗಲೂ ತಪ್ಪುಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಮತ್ತು ಸಾಮಾನ್ಯ ನಾಗರಿಕರ ದೈನಂದಿನ ಮೂಲ ಸೌಕರ್ಯಗಳ ಮೇಲೆ ಗಮನ ಕೇಂದ್ರೀಕರಿಸುವ ಬದಲು ನಿಷ್ಪ್ರಯೋಜಕ ಪ್ರಯತ್ನಗಳಿಗೆ ಆದ್ಯತೆ ನೀಡುತ್ತೇವೆ. ಆಚರಣೆಗಳನ್ನು ಘೋಷಿಸುವ ಮೊದಲು ನಾವು ಜವಾಬ್ದಾರಿಯನ್ನು ತೆಗೆದುಕೊಂಡು ವಿಷಯಗಳನ್ನು ಸರಿಪಡಿಸುವ ಸಮಯ ಇದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Banu Mushtaq Saree Love: ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಮೇಡಂ ಸೀರೆ ಪ್ರೇಮ

ಸಿಂಧೂ ಜಲ ಒಪ್ಪಂದ ರದ್ದುಗೊಂಡ ಬಳಿಕ ಇದು ಪಾಕಿಸ್ತಾನಕ್ಕೆ ಅತ್ಯಂತ ಸೂಕ್ಷ್ಮ ಸಮಯ. ಈ ಸಂದರ್ಭದಲ್ಲಿ ನಟಿಯಿಂದ ಈ ಟೀಕೆ ವ್ಯಕ್ತವಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 26 ಜನರನ್ನು ಬಲಿಪಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಸಿಂಧೂ ನದಿ ಒಪ್ಪಂದ ಸೇರಿದಂತೆ ಕೆಲವು ಸೌಲಭ್ಯಗಳನ್ನು ಪಾಕಿಸ್ತಾನಿಯರಿಗೆ ರದ್ದು ಗೊಳಿಸಿತ್ತು. ಬಳಿಕ ಮೇ 7ರಂದು ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಮತ್ತು ಪಾಕ್-ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ಕೇಂದ್ರಗಳ ಮೇಲೆ ನಿಖರ ದಾಳಿಗಳನ್ನು ನಡೆಸಿತು. ಈ ಬಳಿಕ ಪಾಕಿಸ್ತಾನದ ವಿವಿಧ ಸಮಸ್ಯೆಗಳ ಕುರಿತು ಅಲ್ಲಿನ ಜನರೇ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ.