ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

Weather Report: ರಾಜ್ಯದಲ್ಲಿ ಇಂದೂ ಮಳೆ ಮುಂದುವರಿಯಲಿದೆ. ಜು. 6ರವರೆಗೆ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್‌ ನೀಡಿದೆ. ಅದರಲ್ಲಿಯೂ ಕರಾವಳಿ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಉತ್ತಮ ಮಳೆ ಸುರಿಯಲಿದೆ.

ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆ

ಸಾಂದರ್ಭಿಕ ಚಿತ್ರ.

Profile Ramesh B Jul 4, 2025 6:00 AM

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಗುರುವಾರ ಮಳೆಯಾಗಿದ್ದು, ಇಂದೂ (ಶುಕ್ರವಾರ) ಮುಂದುವರಿಯಲಿದೆ. ಜು. 6ರವರೆಗೆ ವ್ಯಾಪಕ ಮಳೆ (Karnataka Weather) ಸುರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅಲರ್ಟ್‌ ನೀಡಿದೆ (Weather Report). ಅದರಲ್ಲಿಯೂ ಕರಾವಳಿ ಭಾಗಗಳಲ್ಲಿ ಇಂದು ಭಾರಿ ಗಾಳಿಯೊಂದಿಗೆ ಉತ್ತಮ ಮಳೆ ಸುರಿಯಲಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗಾಳಿಯು 40-50 ಕಿ.ಮೀ. ವೇಗದಲ್ಲಿ ನಿರಂತರವಾಗಿ ಬೀಸುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಮತ್ತು 29°C ಇರಲಿದೆ.

ಶುಕ್ರವಾರ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ವರ್ಷಧಾರೆಯಾಗಲಿದೆ. ಸದ್ಯ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.

ಈ ಸುದ್ದಿಯನ್ನೂ ಓದಿ: Toll hike: ಬೆಂಗಳೂರು- ನೆಲಮಂಗಲ ಟೋಲ್‌ಗೂ ದರ ಏರಿಕೆ, ನೈಸ್‌ ರಸ್ತೆಯೂ ದುಬಾರಿ

ಉಳಿದ ಕಡೆ ವಾತಾವರಣ ಹೇಗಿರಲಿದೆ?

ಇನ್ನು ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ 1 ಅಥವಾ 2 ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ.) ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್‌, ಬಾಗಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ದಕಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ 1 ಅಥವಾ 2 ಸ್ತಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಸುರಿಯಲಿದೆ. ಬಳದಳಾರಿ, ಬೆಂಗಳೂರು (ನಗೆ, ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪರಿಣಾಮಗಳೇನು?

  • ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗಬಹುದು.
  • ರಸ್ತೆಗಳಲ್ಲಿ ನೀರು ನಿಲ್ಲುವ ಜತೆಗೆ ವಿದ್ಯುತ್‌ ಕಂಬ, ಮರ ರಸ್ತೆ ಮೇಲೆ ಉರುಳುವ ಸಾಧ್ಯತೆ ಇದೆ.
  • ಹಠಾತ್‌ ಪ್ರವಾಹ ಉಂಟಾಗಲಿದೆ.
  • ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಲಿದೆ.
  • ಭೂಕುಸಿತ/ಗುಡ್ಡ ಕುಸಿತ ಸಾಧ್ಯತೆ ಇದೆ.

ಜು. 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.