Karnataka Weather: ಇಂದು ಕೂಡ ರಾಜ್ಯದಲ್ಲಿ ಮುಂದುವರಿದ ಒಣ ಹವೆ; ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ
ಉತ್ತರ ಒಳನಾಡಿನಲ್ಲಿ ಮುಂದಿನ 2-3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ನಂತರದ 2 ದಿನಗಳವರೆಗೆ 2-3 ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿರುವುದಿಲ್ಲ. ಇದೇ ರೀತಿಯ ವಾತಾವರಣ ಮಾ.11ರವರೆಗೆ ಮುಂದುವರಿಯಲಿದೆ.


ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಒಣ ಹವೆಯ ವಾತಾವರಣ (Karnataka weather) ಇತ್ತು. ಅದೇ ರೀತಿ ಇಂದು (ಮಾ.7) ಕೂಡ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇನ್ನು ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ವಾತಾವರಣ ಮಾ.11ರವರೆಗೆ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಮುಂದಿನ 2-3 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ನಂತರದ 2 ದಿನಗಳವರೆಗೆ 2-3 ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿರುವುದಿಲ್ಲ.
ತಾಪಮಾನ ಸಾರಾಂಶ:
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಗುರುವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 38.2ಡಿ.ಸೆ ದಾಖಲಾಗಿದೆ. ಇನ್ನು ಮೈಸೂರಿನಲ್ಲಿ ಅತೀ ಕಡಿಮೆ ಉಷ್ಣಾಂಶ 15.5 ಡಿ.ಸೆ. ದಾಖಲಾಗಿದೆ. ಕನಿಷ್ಠ ತಾಪಮಾನವು ಕರಾವಳಿಯಲ್ಲಿ 25 ಡಿ.ಸೆ. ವ್ಯಾಪ್ತಿಯಲ್ಲಿತ್ತು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ 20-21 ಡಿ.ಕೆ. ಮತ್ತು ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ 21-24 ಡಿ.ಸೆ., ದಕ್ಷಿಣ ಒಳನಾಡಿನ ಆಗುಂಬೆ, ಚಿಕ್ಕಮಗಳೂರು, ಹಾಸನ, ದಾವಂಗೆರೆ, ಮಂಡ್ಯ, ಮಡಿಕೇರಿ ಮತ್ತು ಶಿವಮೊಗ್ಗದಲ್ಲಿ 15-18 ಡಿ.ಸೆ., ದಕ್ಷಿಣ ಒಳನಾಡಿನ ಬೆಂಗಳೂರು, ಚಿಂತಾಮಣಿ ಮತ್ತು ಚಿತ್ರದುರ್ಗದ ಮೇಲೆ 19-22 ಡಿ.ಸೆ. ಇತ್ತು.
ಉತ್ತರ ಒಳನಾಡಿನ ಬೀದರ್ ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನ (+2.7°C) ಮತ್ತು ಕಲಬುರಗಿ ಮತ್ತು ಕೊಪ್ಪಳದಲ್ಲಿ (+2.2°C) ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿಯಲ್ಲಿ (+4.0°C) ಗಮನಾರ್ಹ ಏರಿಕೆಯಾಗಿದೆ. ಉತ್ತರ ಒಳನಾಡಿನ ಧಾರವಾಡ (-2.9 ಡಿ.ಸೆ.) ಮತ್ತು ದಕ್ಷಿಣ ಒಳನಾಡಿನ ಆಗುಂಬೆ (-3.9 °C), ಮೈಸೂರು (-3.5 ಡಿ.ಸೆ.), ಚಾಮರಾಜನಗರ ( 3.0 ಡಿ.ಸೆ.) ) ಮತ್ತು ಮಡಿಕೇರಿಯಲ್ಲಿ (-2.3 ಡಿ.ಸೆ.) ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಗಮನಿಸಲಾಗಿದೆ. ರಾಜ್ಯದ ಉಳಿದ ಭಾಗಗಳಿಗಿಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಈ ಸುದ್ದಿಯನ್ನೂ ಓದಿ: Karnataka Budget 2025: ನಾಳೆ ರಾಜ್ಯ ಬಜೆಟ್ ಮಂಡನೆ: ಗಾತ್ರ ರೂ.4 ಲಕ್ಷ ಕೋಟಿ ಸಾಧ್ಯತೆ
ದಕ್ಷಿಣ ಒಳನಾಡಿನ ಚಿಂತಾಮಣಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಿದೆ, ಕರಾವಳಿಯ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಪಣಂಬೂರು, ಉತ್ತರ ಒಳನಾಡಿನ ಬೆಳಗಾವಿ ನಗರ, ಕಲಬುರ್ಗಿ ಮತ್ತು ಕೊಪ್ಪಳ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರಿನ ಮೇಲೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಉತ್ತರ ಒಳನಾಡಿನ ಧಾರವಾಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಮಂಡ್ಯದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು.
ಇನ್ನು ಗರಿಷ್ಠ ತಾಪಮಾನವು ಕರಾವಳಿಯಲ್ಲಿ 33-35 ಡಿ.ಸೆ. ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ ಮತ್ತು ಹಾವೇರಿಯಲ್ಲಿ 33-35 ಡಿ.ಸೆ. ಮತ್ತು ಗದಗ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರುಗಳಲ್ಲಿ 37-38 ಡಿ.ಸೆ., ದಕ್ಷಿಣ ಒಳನಾಡಿನ ಆಗುಂಬೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಚಿಂತಾಮಣಿ ಮತ್ತು ಮಡಿಕೇರಿಯಲ್ಲಿ 32-34 ಡಿ.ಸೆ., ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗದಲ್ಲಿ 35-36 ಡಿ.ಸೆ. ದಾಖಲಾಗಿದೆ.