ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Weather Forecast: ನಾಳೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ, ಉತ್ತರ ಒಳನಾಡಿಗೆ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಾಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 8, 2026 4:21 PM

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಚಳಿಯ ತೀವ್ರತೆ ಮತ್ತೆ ಹೆಚ್ಚಳವಾಗಿದೆ. ವಿಜಯಪುರ, ಕಲಬುರಗಿ, ಬೀದರ್‌ನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜ.9ರಂದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ನಾಳೆ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ (Karnataka Weather Forecast) ಇರಲಿದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ. ಮುಂದಿನ ಎರಡು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಯಿಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆ. ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ 2-3 ಡಿಗ್ರಿ ಸೆ. ಹೆಚ್ಚಳವಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 15°C ಇರುವ ಸಾಧ್ಯತೆ ಇದೆ.

ಮುಂದಿನ 6 ದಿನಗಳ ಹವಾಮಾನ ವರದಿ

ಜ.9ರಂದು ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣ ಹವೆ ಇರಲಿದೆ.

ಜ.10ರಂದು ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಜ.11ರಂದು ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೋ ಎರಡೋ ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

Health Tips: ಚಳಿಗಾಲದ ಕೀಲುನೋವಿಗೆ ಅಡುಗೆ ಮನೆಯಲ್ಲಿದ್ದ ಈ ಮದ್ದುಗಳೇ ಪರಿಹಾರ!

ಇನ್ನು ಜ.12ರಿಂದ 14ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.