ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಯಾದಗಿರಿ

Raju Gowda: ''ಸರಿಯಾದ ತನಿಖೆಯಾದರೆ ರಾಜ್ಯ ಸರ್ಕಾರದ ಶೇ. 80ರಷ್ಟು ಜನಪ್ರತಿನಿಧಿಗಳು ಜೈಲಿಗೆ ಹೋಗ್ತಾರೆʼʼ: ರಾಜು ಗೌಡ

ರಾಜ್ಯ ಸರ್ಕಾರದ ವಿರುದ್ಧ ರಾಜು ಗೌಡ ವಾಗ್ದಾಳಿ

ʼʼಒಂದು ದಿನ ವಿಧಾನಸೌಧವನ್ನೇ ಜೈಲು ಮಾಡುವ ಕಾಲ ಬರುತ್ತದೆ. ಈ ಸರ್ಕಾರದಲ್ಲಿ ಒಬ್ರು, ಇಬ್ರು ಜೈಲಿಗೆ ಹೋಗುವ ಪರಿಸ್ಥಿತಿ ಇಲ್ಲ. ಸರಿಯಾದ ತನಿಖೆಯಾದರೆ ಈ ಸರ್ಕಾರದಲ್ಲಿ ಶೇ. 80ರಷ್ಟು ಜನಪ್ರತಿನಿಧಿಗಳು ಜೈಲಿಗೆ ಹೋಗ್ತಾರೆʼʼ ಎಂದು ಮಾಜಿ ಸಚಿವ ರಾಜು ಗೌಡ ವಾಗ್ದಾಳಿ ನಡೆಸಿದರು.

Heart Attack: ಕೆಂಭಾವಿಯಲ್ಲಿ ಘೋರ ಘಟನೆ; ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

ಕೆಂಭಾವಿಯಲ್ಲಿ ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

Kembhavi News: ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಒಂದೇ ಮನೆಯಲ್ಲಿ ಒಂದು ಗಂಟೆ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಇಬ್ಬರಿಗೆ ಒಂದೇ ದಿನ ಹೃದಯಾಘಾತವಾಗಿದ್ದರಿಂದ ಪಟ್ಟಣದ ಜನರೂ ಆತಂಕಗೊಂಡಿದ್ದಾರೆ.

Yadgir Rains: ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ; ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ 200ಕ್ಕೂ ಹೆಚ್ಚು ಕುರಿಗಳು!

ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ 200ಕ್ಕೂ ಹೆಚ್ಚು ಕುರಿಗಳು!

Yadgir Rains: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮೇಲಿನಗಡ್ಡಿ ಬಳಿ ಘಟನೆ ನಡೆದಿದೆ. ಬಸವಸಾಗರ ಡ್ಯಾಂನಿಂದ ನೀರು ಬಿಟ್ಟಿದ್ದರಿಂದ ನಡುಗಡ್ಡೆಯಲ್ಲಿದ್ದ ಕುರಿಗಳು ಕೊಚ್ಚಿ ಹೋಗಿವೆ. ಸ್ಥಳಕ್ಕೆ ಕಂದಾಯ ಹಾಗೂ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Yadgir News: ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

Shahapur: ಈ ಘಟನೆ ಶಾಲೆ, ಊರು ಹಾಗೂ ಕುಟುಂಬದಲ್ಲಿ ಅಚ್ಚರಿ ಮೂಡಿಸಿದೆ. ಬಾಲಕಿಯ ಮೇಲೆ ಅತ್ಯಾಚಾರವಾಗಿದೆಯೇ, ಈ ಮಗುವಿನ ತಂದೆ ಯಾರು ಎಂಬ ಕುತೂಹಲವೂ ಮೂಡಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ.

ರಾಜ್ಯ ಹೆದ್ದಾರಿಯಲ್ಲಿ ಮುಳುಗುವ ಸೇತುವೆ

ಯಾದಗಿರಿಯ ಮುಳುಗುವ ಕೊಳ್ಳೂರ (ಎಂ) ಸೇತುವೆಗೆ ಬೇಕಿದೆ ಕಾಯಕಲ್ಪ

ಪ್ರತಿ ಬಾರಿ ಮಳೆಗಾಲ ಬಂದಾಗೊಮ್ಮೆ ಸೇತುವೆ ಮುಳುಗಡೆಯಾಗುವುದು ಕೃಷ್ಣೆಯ ಶಾಪವಾಗಿದೆ. ಇದ ರಿಂದ ಜನ, ವಾಹನಗಳ ಸಂಚಾರ ಆಯೋಮಯವಾಗುವುದು ಕಾಯಂ ಗೋಳಾಗಿದೆ. ಹೊಸ ಸೇತುವೆ ನಿರ್ಮಿಸಿ ಇಲ್ಲವೇ ಬಲಪಡಿಸಿ ಎಂಬ ಸ್ಥಳೀಯರ ಆಗ್ರಹಗಳು ಇನ್ನೂ ಕೂಡಾ ಸರಕಾರಕ್ಕೆ ಮುಟ್ಟಿಲ್ಲ.

Yadgir News: ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ; ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ

Yadgir News: ಅತ್ಯುತ್ತಮ ಆಸ್ಪತ್ರೆ ನಿರ್ವಹಣೆಗಾಗಿ ರಾಷ್ಟೀಯ ಮಟ್ಟದಲ್ಲಿ ನೀಡಲಾಗುವ ನ್ಯಾಷನಲ್ ಕ್ವಾಲಿಟಿ ಅಶ್ಶುರೆನ್ಸ್ ಸ್ಟ್ಯಾಂಡರ್ಡ್ಸ್ (ಎನ್‌ಕ್ಯೂಎಎಸ್‌)ಗೆ ರಾಜ್ಯದಿಂದ ಆಯ್ಕೆಯಾಗಿರುವ ನಾಲ್ಕು ಆಸ್ಪತ್ರೆಗಳ ಪೈಕಿ ಜಿಲ್ಲೆಯ ಕೆಂಭಾವಿ ಸಮುದಾಯ ಆಸ್ಪತ್ರೆ ಎರಡನೇಯ ಸ್ಥಾನ ಪಡೆಯುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ.

Yadgir News: ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

Yadgir News: ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದೂರ್ ಗ್ರಾಮದ ಕೇಂದ್ರ-1 ರಲ್ಲಿ‌ ಜರುಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Electric Shock: ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

Yadgir news: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Yadgir Case: ಗಂಡನನ್ನು ನದಿಗೆ ತಳ್ಳಿದ ಆರೋಪ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

ಗಂಡನನ್ನು ನದಿಗೆ ತಳ್ಳಿದ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

Yadgir Case: ಗಂಡನನ್ನು ಪತ್ನಿಯೇ ನದಿಗೆ ತಳ್ಳಿದ ಆರೋಪ ಪ್ರಕರಣದಲ್ಲಿ ತನನ್ನು ಸಾಯಿಸಲು ಯತ್ನಿಸಿದ್ದಾಳೆಂದು ಪತ್ನಿ ಗದ್ದೆಮ್ಮ ಮೇಲೆ ಪತಿ ತಾತಪ್ಪ ಆರೋಪ ಮಾಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪತಿ ತಾತಪ್ಪ, ಗದ್ದೆಮ್ಮನಿಂದ ವಿಚ್ಛೇದನ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Atrocity Case: ಜಾತಿ ನಿಂದನೆ ಕೇಸ್‌ಗೆ ಹೆದರಿ ಮಗ ಆತ್ಮಹತ್ಯೆ, ತಂದೆ ಹೃದಯಾಘಾತದಿಂದ ಸಾವು

ಜಾತಿ ನಿಂದನೆ ಕೇಸ್‌ಗೆ ಹೆದರಿ ಮಗ ಆತ್ಮಹತ್ಯೆ, ತಂದೆ ಹೃದಯಾಘಾತದಿಂದ ಸಾವು

Atrocity Case: ಬೇರೆ ಊರಿಂದ‌ ಬಂದ ದಲಿತ ಮುಖಂಡನೊಬ್ಬ, ಜಾತಿ‌ ನಿಂದನೆ ಕೇಸ್ ದಾಖಲು ಮಾಡಿ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮೆಹಬೂಬ್​ಗೆ ಬೆದರಿಕೆ ಹಾಕಿದ್ದರು. ಇದರಿಂದ ಅಂಜಿಕೊಂಡಿದ್ದ ಮೆಹಬೂಬ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Yadgir News: ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

Yadgir News: ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಭೋಯರ್‌ ಹರ್ಷಲ್ ನಾರಾಯಣರಾವ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ. ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕೆಕೆಆರ್‌ಟಿಸಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

contaminated water: ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

Contaminated Water: 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Yadgir News: ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು!

ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು

Yadgir News: ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ಜಾನುವಾರು ಮೇಯಿಸುವ ವೇಳೆ ನದಿಯಲ್ಲಿ ನೀರು ಕುಡಿಯಲು ಯುವಕರು ಹೋಗಿದ್ದಾಗ ಅವಘಡ ನಡೆದಿದೆ. ಸ್ಥಳದಲ್ಲಿ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Yadagiri News: ಕನಸಿನಲ್ಲಿ ಬಂದ ಹನುಮ, ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

ಕನಸಿನಲ್ಲಿ ಬಂದ ಹನುಮ, ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

Yadagiri News: ತಮ್ಮ ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದಾನೆ. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

Religious conversion: ಕನಸಿನಲ್ಲಿ ಬಂದ ಆಂಜನೇಯ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ!

ಕನಸಿನಲ್ಲಿ ಹನುಮ; ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

Religious conversion: ಯಾದಗಿರಿಯಲ್ಲಿ ವೆಂಕಟೇಶ್‌ ಎಂಬುವವರ ಕುಟುಂಬ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದೆ. ಹಿಂದೂ ಧರ್ಮಕ್ಕೆ ಮರಳಿ ಬಂದ ವೆಂಕಟೇಶ್ ಹಾಗೂ ಪತ್ನಿ, ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

DK Shivakumar: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನೆ: ಡಿ.ಕೆ.ಶಿವಕುಮಾರ್

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನೆ: ಡಿಕೆಶಿ

DK Shivakumar: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನಿಸಲಾಗಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಗ್ರಾಮೀಣಾಭಿವೃದ್ಧಿ, ಉದ್ಯೋಗ ಸೇರಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಇಂದು ಆರೋಗ್ಯ ಕ್ಷೇತ್ರದಲ್ಲಿ ರೂ.416 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Yadgiri News: ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಕರಕಲಾಯ್ತು ಪೀಠೋಪಕರಣ

ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Crime News: ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸೋಫಾ, ಎಸಿ ಸುಟ್ಟು ಭಸ್ಮವಾಗಿದ್ದು, ಪೊಲೀಸರು, ಬೆರಳಚ್ಚು ತಜ್ಞರು ಸ್ಥಳಕ್ಕೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

Jain Diksha: 100 ಕೋಟಿ ರೂ. ಆಸ್ತಿ ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದ ಯಾದಗಿರಿ ಉದ್ಯಮಿ!

100 ಕೋಟಿ ರೂ. ಆಸ್ತಿ ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದ ಯಾದಗಿರಿ ಉದ್ಯಮಿ!

Jain Diksha: ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದ ನಿವಾಸಿ, ಉದ್ಯಮಿ ದಿಲೀಪ್ ಕುಮಾರ್ ದೋಖಾ ಎಂಬುವವರು ಜೈನ್ ದೀಕ್ಷೆ ಪಡೆದಿದ್ದಾರೆ. ಇವರು ಜೈನ ದೀಕ್ಷೆ ಪಡೆದಿದ್ದಕ್ಕೆ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೊನೆಯದಾಗಿ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಬೀಳ್ಕೊಡುಗೆ ನೀಡಲಾಗಿದೆ.

Drowned: ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಈಜಲು ನೀರಿಗೆ ಇಳಿದ ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಈಜಲಾಗದೆ (Drowned) ಮುಳುಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Yadgir News: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

Yadgir News: ಯಾದಗಿರಿ ಜಿಲ್ಲೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಟ್ಟೆ ತೊಳೆಯಲು ಬಾವಿ ಬಳಿ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳೀಯರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Drowned: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಕೆರೆಗೆ ಬಿದ್ದು ಸಾವು

ನೀರು ಕುಡಿಯಲು ಕೆರೆಗೆ ಹೋಗಿದ್ದ ಮೂವರು ಬಾಲಕರು ಸಾವು

Yadagiri News: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ನೀರಿನ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ ಧಾರುಣ ಘಟನೆ ಜಿಲ್ಲೆಯಲ್ಲಿ ಭಾನುವಾರ (ಮೇ 4) ನಡೆದಿದೆ. ಮೃತರನ್ನು ಅಚ್ಚೊಲಾ ತಾಂಡಾದ ನಿವಾಸಿಗಳಾದ ಅಮರ್ (12) ಜಯ ರಾಠೋಡ (14) ಕೃಷ್ಣ ರಾಠೋಡ್(10) ಎಂದು ಗುರುತಿಸಲಾಗಿದೆ.

Bribery case: ಯಾದಗಿರಿ ಪಿಡಬ್ಲ್ಯುಡಿಯಲ್ಲಿ ಭಾರಿ ಭ್ರಷ್ಟಾಚಾರ; 17 ಲಕ್ಷ ಬಿಲ್ ಪಾವತಿಗೆ 4.80 ಲಕ್ಷ ಲಂಚ ಪಡೆದ ಅಧಿಕಾರಿಗಳು!

17 ಲಕ್ಷ ಬಿಲ್ ಪಾವತಿಗೆ 4.80 ಲಕ್ಷ ಲಂಚ ಪಡೆದ ಅಧಿಕಾರಿಗಳು!

Bribery case: ಯಾದಗಿರಿ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಬಟಾಬಯಲಾಗಿದೆ. ಅಧಿಕಾರಿಗಳ ಲಂಚಾವತಾರದ ಆಡಿಯೋ ಲಭ್ಯವಾಗಿದೆ. ಜಿಲ್ಲಾ‌ ಮಟ್ಟದ ಅಧಿಕಾರಿಗಳು ಸೇರಿ ಐದಾರು ಅಧಿಕಾರಿಗಳಿಂದ ಹಣ ವಸೂಲಿ ನಡೆದಿದೆ.

ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

ಪ್ರವಾಸಿಗರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿ ಹಾಗೂ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟದಲ್ಲಿರುವವರ ಮಾಹಿತಿ ತಿಳಿಸುವಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾಡಳಿತ ಮನವಿ ಮಾಡಿದೆ.

Pahalgam Terror Attack: ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್; ಕೂದಲೆಳೆ ಅಂತರದಲ್ಲಿ ಪಾರಾದ ಯಾದಗಿರಿ ಕುಟುಂಬ!

ಕೊಪ್ಪಳದ 19 ಮಂದಿ ಶ್ರೀನಗರದಲ್ಲಿ ಸೇಫ್!

Pahalgam Terror Attack: ಕರ್ನಾಟಕ ರಾಜ್ಯದಿಂದ ಕೂಡ ಹಲವು ಪ್ರವಾಸಿಗರು ಕಾಶ್ಮೀರಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಇದೀಗ ಕೊಪ್ಪಳದ 4 ಕುಟುಂಬಗಳ 19 ಸದಸ್ಯರು ಹಾಗೂ ಯಾದಗಿರಿಯ ಕುಟುಂಬ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ.

Loading...