ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಯಾದಗಿರಿ

Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ

ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Assault Case: ಅಮಾನವೀಯ ಕೃತ್ಯ, ಅನೈತಿಕ ಸಂಬಂಧ ಆರೋಪಿಸಿ ಮಹಿಳೆಯ ನಗ್ನಗೊಳಿಸಿ, ತಲೆ ಬೋಳಿಸಿ ಹಲ್ಲೆ

ಅನೈತಿಕ ಸಂಬಂಧ ಆರೋಪಿಸಿ ಮಹಿಳೆಯ ನಗ್ನಗೊಳಿಸಿ, ತಲೆ ಬೋಳಿಸಿ ಹಲ್ಲೆ

Yadagiri News: ಚಾಮನಾಳ ತಾಂಡಾ ನಿವಾಸಿ, 35ರ ಮಹಿಳೆ ದೌರ್ಜನ್ಯಕ್ಕೊಳಗಾದವರು. ಮಹಿಳೆಯು ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯಲ್ಲಿ ಇರುವ ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದರು. ಅಳಿಯನ ಜೊತೆಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದೀಯಾ ಎಂದು ಆರೋಪಿಗಳು ಅಪಾದಿಸಿ ಆಕೆಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.

Break for RSS procession: ಇಂದು ನಡೆಯಬೇಕಾಗಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಬ್ರೇಕ್: ಅನುಮತಿ ನಿರಾಕರಿಸಿರುವ ಜಿಲ್ಲಾಡಳಿತ

ಇಂದು ನಡೆಯಬೇಕಾಗಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಬ್ರೇಕ್

ಜಿಲ್ಲೆಯ ಗುರಮಠಕಲ್ ಪಟ್ಟಣದಲ್ಲಿ ಇಂದು‌ ನಡೆಯಬೇಕಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ಆರ್ ಎಸ್ ಎಸ್ ಪಥ ಸಂಚಲನ ಕಾರ್ಯಕ್ರಮಕ್ಕೆ ಅನುಮತಿಯನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ತಿರಸ್ಕರಿಸಿದ್ದಾರೆ. *ಪಥ ಸಂಚಲನ ಕಾರ್ಯಕ್ರಮಕ್ಕೆ 3 ದಿನ ಮೊದಲು ಅರ್ಜಿ ಸಲ್ಲಿಸಬೇಕೆಂದ ಡಿಸಿ ಹರ್ಷಲ್ ವಿವರಣೆ ನೀಡಿ ಅನುಮತಿಯನ್ನು ಕೊಡಲಾಗುವುದಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

Murder Case: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಕೊಲೆಗೈದ ಪತಿ!

Yadgir News: ಯಾದಗಿರಿ ಜಿಲ್ಲೆಯ ಸುರಪುರ ನಗರದ ಡೋಣಿಗೇರಾದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಪತಿ, ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ತವರು ಮನೆಯಿಂದ ಬರಲು ಒಪ್ಪದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Bigg Boss kannada 12: ಗಾರೆ ಕೆಲಸದಿಂದ, ದೊಡ್ಮನೆವರೆಗೂ...; ಬಿಗ್ ಬಾಸ್‌ಗೆ ಉತ್ತರ ಕರ್ನಾಟಕದ ಪ್ರತಿಭೆ ಮಲ್ಲಮ್ಮ ಎಂಟ್ರಿ!

ಬಿಗ್ ಬಾಸ್‌ನಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರತಿಭೆ ಮಲ್ಲಮ್ಮ!

Mallamma Manappa: ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ರೀಲ್ಸ್‌ಗಳಿಂದ ಸಖತ್‌ ವೈರಲ್‌ ಮೂಲಕ ಕನ್ನಗಡಿರ ಮನ ಗೆದ್ದಿರುವ ಮಲ್ಲಮ್ಮ ಅವರು, ಇದೀಗ ಕನ್ನಡದ ಅತ್ಯಂತ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಅಗ್ರಪಂಕ್ತಿಯಲ್ಲಿರುವ ಬಿಗ್ ಬಾಸ್ ಸ್ಪರ್ಧೆ ಆಗಿರುವುದು ಅವರ ಗ್ರಾಮದ ಜನರಲ್ಲಿ ಸಂತಸ ಹೆಚ್ಚಿಸಿದೆ.

Bhima River Floods: ಭೀಮಾ ನದಿ ಪ್ರವಾಹ ಹೆಚ್ಚಳ; ಯಾದಗಿರಿ ಜಿಲ್ಲೆಗೆ ರೆಡ್‌ ಅಲರ್ಟ್‌

ಭೀಮಾ ನದಿ ಪ್ರವಾಹ ಹೆಚ್ಚಳ; ಯಾದಗಿರಿ ಜಿಲ್ಲೆಗೆ ರೆಡ್‌ ಅಲರ್ಟ್‌

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.

Bhima River Floods: ಭೀಮಾ ನದಿ ಪ್ರವಾಹಕ್ಕೆ ಗಿರಿನಾಡು ಯಾದಗಿರಿ ತತ್ತರ; ಹಲವು ಬಡಾವಣೆಗಳ ಮನೆಗಳಿಗೆ ನುಗ್ಗಿದ ನೀರು!

ಭೀಮಾ ನದಿ ಪ್ರವಾಹಕ್ಕೆ ಗಿರಿನಾಡು ಯಾದಗಿರಿ ತತ್ತರ

Yadgir Rains: ಭೀಮಾ ನದಿಯ ಜಲಪ್ರಳಯದಿಂದ ಯಾದಗಿರಿ ನಗರದ ಗ್ರೀನ್ ಸಿಟಿ, ವಿಶ್ವರಾಧ್ಯ ಬಡಾವಣೆಗೆ ನೀರು ನುಗ್ಗಿದು,ಜಿಲ್ಲಾ ಕ್ರೀಡಾಂಗಣ, ಬಿಜೆಪಿ ಕಚೇರಿ ಸೇರಿದಂತೆ ಹಲವು ಪ್ರದೇಶ ಮುಳುಗಡೆಯಾಗಿವೆ. ನೀರು ನುಗ್ಗಿರುವುದರಿಂದ ನಗರದ ನಿವಾಸಿಗಳು ಮನೆಗಳಲ್ಲಿ ಸಿಲುಕಿದ್ದಾರೆ.

Yadgir Rains: ಯಾದಗಿರಿಯಲ್ಲಿ ಮಳೆ ಅವಾಂತರ; ನೀರಿನ ರಭಸಕ್ಕೆ ಸೇತುವೆಯಿಂದ ಕೊಚ್ಚಿ ಹೋದ ಕಾರು, ಇಬ್ಬರು ಪಾರು

ಯಾದಗಿರಿಯಲ್ಲಿ ಮಳೆ ಅವಾಂತರ; ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು

Karnataka Rains: ಕಿರು ಸೇತುವೆ ದಾಟಲು ಹೋಗಿ ಕಾರು ನೀರು ಪಾಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ ಕೆ ಗ್ರಾಮದಲ್ಲಿ ನಡೆದಿದೆ. ಸದಾ ಬಿಸಿಲು ಕಾಣುತ್ತಿದ್ದ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲಾ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಗಿರಿನಾಡು ಮಲೆನಾಡಂತಾಗಿದೆ.

Murder case: ಪತ್ನಿಯ ಶೀಲದ ಬಗ್ಗೆ ಶಂಕೆ, ಕೊಡಲಿಯಿಂದ ಕೊಚ್ಚಿ ಮಕ್ಕಳನ್ನು ಕೊಂದ ಪಾಪಿ ತಂದೆ

ಪತ್ನಿಯ ಶೀಲದ ಬಗ್ಗೆ ಶಂಕೆ, ಕೊಡಲಿಯಿಂದ ಕೊಚ್ಚಿ ಮಕ್ಕಳನ್ನು ಕೊಂದ ಪಾಪಿ ತಂದೆ

Yadagiri: ಕಳೆದ ಕೆಲವು ದಿನಗಳಿಂದ ದಂಪತಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಈತ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಜಗಳವಾಡುತ್ತಿದ್ದ. ಇದರಿಂದ ಪ್ರತಿದಿನ ಇಬ್ಬರ ಮಧ್ಯೆ ಜಗಳವಾಗುತ್ತಿದ್ದು, ಜಗಳದಿಂದ ಮನನೊಂದ ಪತ್ನಿ ಮಕ್ಕಳ ಸಮೇತ ತವರು ಮನೆ ಸೇರಿದ್ದಳು.

Yadgir News: ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ; ಐವರ ವಿರುದ್ಧ ಎಫ್‌ಐಆರ್‌

ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ

Jal Jeevan Mission scam: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎಂ ಅವ್ಯವಹಾರ ನಡೆದಿದೆ. ನೀರಿನ ದಾಹ ನಿಗಿಸಬೇಕಾದ ಅಧಿಕಾರಿಗಳಿಂದಲೇ ಹಣ ಗುಳುಂ ಆಗಿದೆ. ಹೀಗಾಗಿ ಆರ್‌ಡಬ್ಲ್ಯುಎಸ್‌ ಇಇ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

Raju Gowda: ''ಸರಿಯಾದ ತನಿಖೆಯಾದರೆ ರಾಜ್ಯ ಸರ್ಕಾರದ ಶೇ. 80ರಷ್ಟು ಜನಪ್ರತಿನಿಧಿಗಳು ಜೈಲಿಗೆ ಹೋಗ್ತಾರೆʼʼ: ರಾಜು ಗೌಡ

ರಾಜ್ಯ ಸರ್ಕಾರದ ವಿರುದ್ಧ ರಾಜು ಗೌಡ ವಾಗ್ದಾಳಿ

ʼʼಒಂದು ದಿನ ವಿಧಾನಸೌಧವನ್ನೇ ಜೈಲು ಮಾಡುವ ಕಾಲ ಬರುತ್ತದೆ. ಈ ಸರ್ಕಾರದಲ್ಲಿ ಒಬ್ರು, ಇಬ್ರು ಜೈಲಿಗೆ ಹೋಗುವ ಪರಿಸ್ಥಿತಿ ಇಲ್ಲ. ಸರಿಯಾದ ತನಿಖೆಯಾದರೆ ಈ ಸರ್ಕಾರದಲ್ಲಿ ಶೇ. 80ರಷ್ಟು ಜನಪ್ರತಿನಿಧಿಗಳು ಜೈಲಿಗೆ ಹೋಗ್ತಾರೆʼʼ ಎಂದು ಮಾಜಿ ಸಚಿವ ರಾಜು ಗೌಡ ವಾಗ್ದಾಳಿ ನಡೆಸಿದರು.

Heart Attack: ಕೆಂಭಾವಿಯಲ್ಲಿ ಘೋರ ಘಟನೆ; ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

ಕೆಂಭಾವಿಯಲ್ಲಿ ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

Kembhavi News: ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಒಂದೇ ಮನೆಯಲ್ಲಿ ಒಂದು ಗಂಟೆ ಅಂತರದಲ್ಲಿ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಇಬ್ಬರಿಗೆ ಒಂದೇ ದಿನ ಹೃದಯಾಘಾತವಾಗಿದ್ದರಿಂದ ಪಟ್ಟಣದ ಜನರೂ ಆತಂಕಗೊಂಡಿದ್ದಾರೆ.

Yadgir Rains: ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ; ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ 200ಕ್ಕೂ ಹೆಚ್ಚು ಕುರಿಗಳು!

ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ 200ಕ್ಕೂ ಹೆಚ್ಚು ಕುರಿಗಳು!

Yadgir Rains: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮೇಲಿನಗಡ್ಡಿ ಬಳಿ ಘಟನೆ ನಡೆದಿದೆ. ಬಸವಸಾಗರ ಡ್ಯಾಂನಿಂದ ನೀರು ಬಿಟ್ಟಿದ್ದರಿಂದ ನಡುಗಡ್ಡೆಯಲ್ಲಿದ್ದ ಕುರಿಗಳು ಕೊಚ್ಚಿ ಹೋಗಿವೆ. ಸ್ಥಳಕ್ಕೆ ಕಂದಾಯ ಹಾಗೂ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Yadgir News: ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ!

Shahapur: ಈ ಘಟನೆ ಶಾಲೆ, ಊರು ಹಾಗೂ ಕುಟುಂಬದಲ್ಲಿ ಅಚ್ಚರಿ ಮೂಡಿಸಿದೆ. ಬಾಲಕಿಯ ಮೇಲೆ ಅತ್ಯಾಚಾರವಾಗಿದೆಯೇ, ಈ ಮಗುವಿನ ತಂದೆ ಯಾರು ಎಂಬ ಕುತೂಹಲವೂ ಮೂಡಿದೆ. ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ.

ರಾಜ್ಯ ಹೆದ್ದಾರಿಯಲ್ಲಿ ಮುಳುಗುವ ಸೇತುವೆ

ಯಾದಗಿರಿಯ ಮುಳುಗುವ ಕೊಳ್ಳೂರ (ಎಂ) ಸೇತುವೆಗೆ ಬೇಕಿದೆ ಕಾಯಕಲ್ಪ

ಪ್ರತಿ ಬಾರಿ ಮಳೆಗಾಲ ಬಂದಾಗೊಮ್ಮೆ ಸೇತುವೆ ಮುಳುಗಡೆಯಾಗುವುದು ಕೃಷ್ಣೆಯ ಶಾಪವಾಗಿದೆ. ಇದ ರಿಂದ ಜನ, ವಾಹನಗಳ ಸಂಚಾರ ಆಯೋಮಯವಾಗುವುದು ಕಾಯಂ ಗೋಳಾಗಿದೆ. ಹೊಸ ಸೇತುವೆ ನಿರ್ಮಿಸಿ ಇಲ್ಲವೇ ಬಲಪಡಿಸಿ ಎಂಬ ಸ್ಥಳೀಯರ ಆಗ್ರಹಗಳು ಇನ್ನೂ ಕೂಡಾ ಸರಕಾರಕ್ಕೆ ಮುಟ್ಟಿಲ್ಲ.

Yadgir News: ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ; ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ

Yadgir News: ಅತ್ಯುತ್ತಮ ಆಸ್ಪತ್ರೆ ನಿರ್ವಹಣೆಗಾಗಿ ರಾಷ್ಟೀಯ ಮಟ್ಟದಲ್ಲಿ ನೀಡಲಾಗುವ ನ್ಯಾಷನಲ್ ಕ್ವಾಲಿಟಿ ಅಶ್ಶುರೆನ್ಸ್ ಸ್ಟ್ಯಾಂಡರ್ಡ್ಸ್ (ಎನ್‌ಕ್ಯೂಎಎಸ್‌)ಗೆ ರಾಜ್ಯದಿಂದ ಆಯ್ಕೆಯಾಗಿರುವ ನಾಲ್ಕು ಆಸ್ಪತ್ರೆಗಳ ಪೈಕಿ ಜಿಲ್ಲೆಯ ಕೆಂಭಾವಿ ಸಮುದಾಯ ಆಸ್ಪತ್ರೆ ಎರಡನೇಯ ಸ್ಥಾನ ಪಡೆಯುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ.

Yadgir News: ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

Yadgir News: ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದೂರ್ ಗ್ರಾಮದ ಕೇಂದ್ರ-1 ರಲ್ಲಿ‌ ಜರುಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Electric Shock: ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

Yadgir news: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Yadgir Case: ಗಂಡನನ್ನು ನದಿಗೆ ತಳ್ಳಿದ ಆರೋಪ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

ಗಂಡನನ್ನು ನದಿಗೆ ತಳ್ಳಿದ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

Yadgir Case: ಗಂಡನನ್ನು ಪತ್ನಿಯೇ ನದಿಗೆ ತಳ್ಳಿದ ಆರೋಪ ಪ್ರಕರಣದಲ್ಲಿ ತನನ್ನು ಸಾಯಿಸಲು ಯತ್ನಿಸಿದ್ದಾಳೆಂದು ಪತ್ನಿ ಗದ್ದೆಮ್ಮ ಮೇಲೆ ಪತಿ ತಾತಪ್ಪ ಆರೋಪ ಮಾಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪತಿ ತಾತಪ್ಪ, ಗದ್ದೆಮ್ಮನಿಂದ ವಿಚ್ಛೇದನ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Atrocity Case: ಜಾತಿ ನಿಂದನೆ ಕೇಸ್‌ಗೆ ಹೆದರಿ ಮಗ ಆತ್ಮಹತ್ಯೆ, ತಂದೆ ಹೃದಯಾಘಾತದಿಂದ ಸಾವು

ಜಾತಿ ನಿಂದನೆ ಕೇಸ್‌ಗೆ ಹೆದರಿ ಮಗ ಆತ್ಮಹತ್ಯೆ, ತಂದೆ ಹೃದಯಾಘಾತದಿಂದ ಸಾವು

Atrocity Case: ಬೇರೆ ಊರಿಂದ‌ ಬಂದ ದಲಿತ ಮುಖಂಡನೊಬ್ಬ, ಜಾತಿ‌ ನಿಂದನೆ ಕೇಸ್ ದಾಖಲು ಮಾಡಿ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮೆಹಬೂಬ್​ಗೆ ಬೆದರಿಕೆ ಹಾಕಿದ್ದರು. ಇದರಿಂದ ಅಂಜಿಕೊಂಡಿದ್ದ ಮೆಹಬೂಬ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Yadgir News: ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್‌ ಹರ್ಷಲ್ ನೇಮಕ

Yadgir News: ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಭೋಯರ್‌ ಹರ್ಷಲ್ ನಾರಾಯಣರಾವ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ. ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕೆಕೆಆರ್‌ಟಿಸಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

contaminated water: ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

Contaminated Water: 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Yadgir News: ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು!

ನೀರು ಕುಡಿಯಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು

Yadgir News: ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ್ ಗ್ರಾಮದಲ್ಲಿ ಘಟನೆ ನಡೆದಿದೆ. ಜಾನುವಾರು ಮೇಯಿಸುವ ವೇಳೆ ನದಿಯಲ್ಲಿ ನೀರು ಕುಡಿಯಲು ಯುವಕರು ಹೋಗಿದ್ದಾಗ ಅವಘಡ ನಡೆದಿದೆ. ಸ್ಥಳದಲ್ಲಿ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Yadagiri News: ಕನಸಿನಲ್ಲಿ ಬಂದ ಹನುಮ, ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

ಕನಸಿನಲ್ಲಿ ಬಂದ ಹನುಮ, ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

Yadagiri News: ತಮ್ಮ ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದಾನೆ. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

Loading...