ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಯಾದಗಿರಿ
Road Accident:  ಯಾದಗಿರಿಯಲ್ಲಿ ಬೊಲೆರೋ-ಸಾರಿಗೆ ಬಸ್ ಡಿಕ್ಕಿ ; ಒಂದೇ ಕುಟುಂಬದ ನಾಲ್ವರು ಸಾವು

ಯಾದಗಿರಿಯಲ್ಲಿ ಬೊಲೆರೋ-ಸಾರಿಗೆ ಬಸ್ ಡಿಕ್ಕಿ; ನಾಲ್ವರ ಸಾವು

ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

POCSO Case: ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆಯ ಕಾನ್ಸ್‌ಟೇಬಲ್ ಬಲರಾಮನ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಈತ ಪ್ರೀತಿಯ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

MGNREGA: ಹೀಗೊಂದು ವಂಚನೆ; ಗಂಡಸರಿಗೆ ಸೀರೆ ಉಡಿಸಿ ನರೇಗಾ ಹಣ ಲಪಟಾಯಿಸಲು ಸಂಚು

ಗಂಡಸರಿಗೆ ಸೀರೆ ಉಡಿಸಿ ನರೇಗಾ ಹಣ ಲಪಟಾಯಿಸಲು ಸಂಚು

Yadagiri News: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ವಿವರ ಬಹಿರಂಗವಾಗಿದೆ. ಈ ವಿಚಿತ್ರ ಘಟನೆ ನಡೆದಿದ್ದು ಯಾದಗಿರಿಯಲ್ಲಿ.

DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

DK Shivakumar: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು.

Yadagiri News: ಲವ್‌, ಸೆಕ್ಸ್‌ & ದೋಖಾ; ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಿಧವೆಗೆ ವಂಚನೆ

ಮದುವೆಯಾಗುವುದಾಗಿ ನಂಬಿಸಿ ವಿಧವೆಗೆ ವಂಚನೆ

ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ವಿಧವೆಯ ಜತೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯ ಲಕ್ಷಾಂತರ ರೂ. ಬೆಲೆ ಬಾಳುವ ಜಮೀನು ಮಾರಿ ಹಣ ಪಡೆದು ವಂಚಿಸಿದ ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಯಾದಗಿರಿ ತಾಲೂಕಿನ ಬಸಂತಪುರ ಗ್ರಾಮದ ಸುವರ್ಣಾ ವಂಚನೆಗೊಳಗಾದ ವಿಧವೆ ಮಹಿಳೆ. ತಡಿಬಿಡಿ ಗ್ರಾಮದ ಮಾಳಪ್ಪ ಹತ್ತಕುಣಿ ಎಂಬುವನು ಸುವರ್ಣಾಗೆ ವಂಚಿಸಿದಾತ.

Murder Case: ಹಳೇ ವೈಷಮ್ಯ; ದಲಿತ ಮುಖಂಡ ಸೇರಿ ಇಬ್ಬರ ಬರ್ಬರ ಕೊಲೆ

ಹಳೇ ವೈಷಮ್ಯ; ದಲಿತ ಮುಖಂಡ ಸೇರಿ ಇಬ್ಬರ ಬರ್ಬರ ಕೊಲೆ

Murder Case: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರದ ಬಳಿ ಭಾನುವಾರ ಬೆಳಗ್ಗೆ ಜೋಡಿ ಕೊಲೆ ನಡೆದಿದೆ. ತರಕಾರಿ ತರಲು ಊರಿನಿಂದ ಬೈಕ್‌ನಲ್ಲಿ ಹೊರಟ್ಟಿದ್ದ ಇಬ್ಬರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Self Harming: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Self Harming: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂದಧಿಕರು ಆರೋಪ ಮಾಡಿದ್ದಾರೆ.

Drowned: ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಮುಳುಗುತ್ತಿರುವ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವಿಗೀಡಾಗಿದ್ದಾಳೆ. ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Murder Case: ಬೈಕ್‌ ಖರೀದಿಗೆ ಹಣ ನೀಡದ ತಂದೆಯನ್ನೇ ಕೊಂದ ಮಗ

ಬೈಕ್‌ ಖರೀದಿಗೆ ಹಣ ನೀಡದ ತಂದೆಯನ್ನೇ ಕೊಂದ ಮಗ

ಬೈಕ್ ಖರೀದಿಸಲು ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಗ ಶೇಖರ್ ಎಂಬಾತ ತನ್ನ ತಂದೆ ಚೆನ್ನಾರೆಡ್ಡಿ ರಾಠೋಡ್ (50) ಅವರ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೇಸು ದಾಖಲಿಸಿಕೊಂಡಿದ್ದಾರೆ.

Kodi Mutt Swamiji: ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸುವುದು ಅಷ್ಟು ಸುಲಭವಲ್ಲ: ಕೋಡಿಮಠ ಶ್ರೀ ಭವಿಷ್ಯ

ಸಿದ್ದರಾಮಯ್ಯರನ್ನು ಅಧಿಕಾರದಿಂದ ಇಳಿಸುವುದು ಅಷ್ಟು ಸುಲಭವಲ್ಲ: ಕೋಡಿಮಠ ಶ್ರೀ

Kodi Mutt Swamiji: ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಅವರ ಕೈಯಿಂದ ಅಧಿಕಾರ ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಸಿಎಂ ಸಿದ್ದರಾಮಯ್ಯ ಅವರು ಅವರಾಗಿಯೇ ಸಿಎಂ ಸ್ಥಾನ ಬಿಡಬೇಕು ಹೊರತು ಯಾರಿಂದಲೂ ಅವರನ್ನು ಇಳಿಸುವುದಕ್ಕೆ ಆಗುವುದಿಲ್ಲ ಎಂದು ಕೋಡಿಮಠದ ಶ್ರೀಗಳು ತಿಳಿಸಿದ್ದಾರೆ.

Yadgiri News: ಯುವಕನಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪಿಎಸ್‌ಐ

ಯುವಕನಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪಿಎಸ್‌ಐ

Yadgiri News: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಳಿ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಯುವಕನನ್ನು ಪಿಎಸ್‌ಐ ಓರ್ವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Yadagiri news: ಗಬ್ಬು ನಾರುವ ಚರಂಡಿ ಮಕ್ಕಳಿಂದ ಕ್ಲೀನ್‌ ಮಾಡಿಸಿದ ಹೆಡ್‌ಮಾಸ್ಟರ್‌!

ಗಬ್ಬು ನಾರುವ ಚರಂಡಿ ಮಕ್ಕಳಿಂದ ಕ್ಲೀನ್‌ ಮಾಡಿಸಿದ ಹೆಡ್‌ಮಾಸ್ಟರ್‌!

ಈ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ಆವರಣದ ಬೋರ್ ವೆಲ್ ಬಳಿ ಪಾಚಿಗಟ್ಟಿ ನಾರುತ್ತಿದ್ದ ಚರಂಡಿಯನ್ನು ಮಕ್ಕಳ ಮೂಲಕ ಮುಖ್ಯ ಶಿಕ್ಷಕ ಸ್ವಚ್ಛಗೊಳಿಸಿದ್ದಾರೆ.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Road Accident: ಸುರಪುರದಲ್ಲಿ ಬಸ್-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ಸಾವು

ಸುರಪುರದಲ್ಲಿ ಬಸ್-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ಸಾವು

Road Accident: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ಭೀಕರ ಅಪಘಾತ ನಡೆದಿದೆ. ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.