ಬಸನಗೌಡ ಪಾಟೀಲ್ ಸಾವಿನಲ್ಲಿ ರಾಜಕಾರಣ
ಬ್ಯಾಂಕ್ನಲ್ಲಿ ಹಣ ದುರ್ಬಳಕೆಯಾಗಿರುವ ಆರೋಪದ ಹಿನ್ನೆಲೆ ಏಪ್ರಿಲ್ 13ರಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಕಚೇರಿಯ ನಿರ್ದೇಶನದ ಮೇರೆಗೆ ಆಡಿಟ್ ವರದಿ ಪಡೆದು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆಡಿಟ್ ವರದಿಯ ಆಧಾರದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಲಾಗಿದ್ದು, ಸರಕಾರ ಅದಕ್ಕೆ ಅನುಮೋದನೆ ನೀಡಿದೆ