ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಯಾದಗಿರಿ

Vishwavani Impact: ವಿಶ್ವವಾಣಿ ವರದಿಗೆ ಹೈಕೋರ್ಟ್ ಬಾಲ ನ್ಯಾಯ ಸಮಿತಿ ಸ್ಪಂದನೆ:  ಸಂಜೀವನಗರ ಶೌಚಾಲಯಕ್ಕೆ ಚಾಲನೆ

ಸಂಜೀವನಗರ ಶೌಚಾಲಯಕ್ಕೆ ಚಾಲನೆ

ಪಟ್ಟಣದ ಸಂಜೀವನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಕುರಿತು ಜುಲೈ 26ರಂದು ವಿಶ್ವವಾಣಿ ದಿನ ಪತ್ರಿಕೆಯಲ್ಲಿ ಪ್ರಕಟ ವಾಗಿದ್ದ ವಿಶೇಷ ವರದಿಗೆ ಕರ್ನಾಟಕ ಹೈಕೋರ್ಟ್‌ನ ಬಾಲ ನ್ಯಾಯ ಸಮಿತಿ ಸ್ಪಂದಿಸಿದೆ. ವರದಿಯ ಬೆನ್ನಲ್ಲೇ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಗಳಿಗೆ ಚಾಲನೆ ದೊರೆತಿದೆ.

ಯಾದಗಿರಿ ಜಿಲ್ಲೆಯಲ್ಲಿ ರಾತ್ರಿ 10ರವರೆಗೂ ನ್ಯಾಯಬೆಲೆ ಅಂಗಡಿ ಮುಂದೆ ಸರತಿ: ಸರ್ವರ್‌ ಇಲ್ಲ ಸರ್‌, ಏನ್‌ ಮಾಡೋದು ?

ಸರ್ವರ್‌ ಇಲ್ಲ ಸರ್‌, ಏನ್‌ ಮಾಡೋದು ?

ಕಳೆದ ನಾಲ್ಕೈದು ತಿಂಗಳಿನಿಂದ ಇಡೀ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ ಎಂಬ ಪದ ಪದೇಪದೇ ಕೇಳಿಬರುತ್ತಿದೆ. ಭೂದಾಖಲೆಗಳನ್ನು ಪಡೆದುಕೊಳ್ಳಲು, ಕೆವೈಸಿ ಮಾಡಿಸಲು, ದಾಖಲೆ ವರ್ಗಾವಣೆ ಮಾಡಲೂ ಇದೇ ಸಮಸ್ಯೆಯನ್ನು ಹೇಳಲಾಗುತ್ತಿದೆ. ಅದಕ್ಕೆ ಸರಿಯಾಗಿ ಯಾದಗಿರಿ ಜಿಲ್ಲೆಯಲ್ಲಿ ಜನ ತಡರಾತ್ರಿಯವರೆಗೆ ಕಾದರೂ ಪಡಿತರ ಚೀಟಿ ಇ-ಕೆವೈಸಿ ಮಾಡಿಸ ಲಾಗದೇ ಪರದಾಡಿದ್ದಾರೆ. ಇದಕ್ಕೆ ಕಾರಣ ಸರ್ವರ್ ಸಮಸ್ಯೆ!

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್: ಅಮಾನತು ಆದೇಶಕ್ಕೆ ತಡೆ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಅಮಾನತು ರದ್ದು

RSS Route March: ಕಳೆದ ವರ್ಷ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕೆ ಅಮಾನತುಗೊಂಡ ಇಬ್ಬರು ಶಿಕ್ಷಕರಿಗೆ ರಿಲೀಫ್‌ ಸಿಕ್ಕಿದೆ. ರಾಜ್ಯದ ಸರ್ಕಾರದ ಅಮಾನತು ಆದೇಶಕ್ಕೆ ಕಲಬುರಗಿ ಕೆಎಟಿ ತಡೆ ನೀಡಿದೆ. ಆ ಮೂಲಕ ಯಾದಗಿರಿ ಜಿಲ್ಲೆಯ ಇಬ್ಬರು ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾ ಸಾಹೇಬ್ ದೇಶಮುಖ್ ಅವರಿಗೆ ರಿಲೀಫ್‌ ಸಿಕ್ಕಿದೆ.

RTI Act: ಕಳೆದ 155 ದಿನಗಳಲ್ಲಿ 24 ಸಾವಿರ ಅರ್ಜಿಗಳ ವಿಲೇವಾರಿ : ಆರ್‌ಟಿಐ ಅರ್ಜಿ ಇತ್ಯರ್ಥ: ರಾಜ್ಯಕ್ಕೆ ಮೊದಲ ಸ್ಥಾನ

ಆರ್‌ಟಿಐ ಅರ್ಜಿ ಇತ್ಯರ್ಥ: ರಾಜ್ಯಕ್ಕೆ ಮೊದಲ ಸ್ಥಾನ

ರಾಜ್ಯದಲ್ಲಿ ಕಳೆದ 155 ದಿನಗಳ ಅವಧಿಯಲ್ಲಿ ಸುಮಾರು 52 ಸಾವಿರ ಬಾಕಿ ಅರ್ಜಿಗಳ ಪೈಕಿ 24 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪ್ರಸ್ತುತ 28,601 ಅರ್ಜಿಗಳು ಬಾಕಿ ಉಳಿದಿದ್ದು, ಉಳಿದಿರುವ ಎಲ್ಲ ಅರ್ಜಿಗಳನ್ನೂ ಶೀಘ್ರ ವಾಗಿ ವಿಲೇವಾರಿ ಮಾಡಲು ಆಯೋಗ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 1094 ಪ್ರಕರಣಗಳಿಗೆ ಸಂಬಂಧಿಸಿದಂತೆ 10.66 ಕೋಟಿ ರು. ದಂಡ ವಿಧಿಸಲಾಗಿದ್ದು, ಈ ಪೈಕಿ 3.70 ಕೋಟಿ ರು. ದಂಡ ವಸೂಲಿ ಮಾಡಲಾಗಿದೆ

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಿಕ್ಷಕರಿಬ್ಬರ ಅಮಾನತು

ಸರ್ಕಾರಿ ಶಾಲಾ ಶಿಕ್ಷಕರಿಬ್ಬರ ಅಮಾನತು

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸರ್ಕಾರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ಮತ್ತು ಸುರಪುರ ತಾಲೂಕಿನ ಶಿಕ್ಷಕರಿಬ್ಬರು ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಇವರು ಕರ್ನಾಟಕ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2021 ರ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಮಾನತುಗೊಳಿಸಲಾಗಿದೆ.

Shahapur Accident: ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿ; ಮೂವರು ಕೂಲಿ ಕಾರ್ಮಿಕರ ದುರ್ಮರಣ

ಶಹಾಪುರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿಯಾಗಿ ಮೂವರ ಸಾವು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Yadgir News: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬಾಲಕಿಗೆ ಲೈಂಗಿಕ ಕಿರುಕುಳ; ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಕೇಸ್‌

ಯಾದಗಿರಿ ಜಿಲ್ಲೆಯ ಸಕ್ರ್ಯ ನಾಯಕ ತಾಂಡಾ ನಿವಾಸಿ ಹಾಗೂ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಲಿತ ಕುಟುಂಬಕ್ಕೆ ಬಹಿಷ್ಕಾರದ ಬೆದರಿಕೆ

ದಲಿತ ಕುಟುಂಬಕ್ಕೆ ಬಹಿಷ್ಕಾರದ ಬೆದರಿಕೆ

ಸಮಾಧಿ ಅಗೆಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕುವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಖಾಪುರ ಎಸ್.ಎಚ್.ಗ್ರಾಮದಲ್ಲಿ ನಡೆದಿದೆ. ಕುಣಿ (ಸಮಾಧಿ) ಅಗೆಯಲು ನಿರಾಕರಿಸಿದ ದಲಿತ ಕುಟುಂಬ ದವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಸವರ್ಣೀಯರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

Yadgir Breaking: ಯಾದಗಿರಿ: ಬಾಡಿಯಾಳ–ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಅದರ ಪರಿಣಾಮ ಐವರು ಕಾರ್ಮಿಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಣಗುತ್ತಿರುವ ಬೆಳೆ, ಅನ್ನದಾತ ಕಂಗಾಲು

ಒಣಗುತ್ತಿರುವ ಬೆಳೆ, ಅನ್ನದಾತ ಕಂಗಾಲು

ಭೂಮಿಯನ್ನು ಹಸನುಗೊಳಿಸಿ, ಸಾಲ-ಸೋಲ ಮಾಡಿ ಬೀಜ-ಗೊಬ್ಬರ ಹಾಕಿ ಬಿತ್ತನೆ ಮಾಡಿದ ಕೃಷಿಕರು ಈಗ ಕೈಚೆಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೂನ್ ಆರಂಭದಲ್ಲಿ ಬಿದ್ದ ಅಲ್ಪ-ಸ್ವಲ್ಪ ಮಳೆಯನ್ನು ನಂಬಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತೊಗರಿ, ಹತ್ತಿ ಇತ್ಯಾದಿ ಬೀಜ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದರು.

ಬಸನಗೌಡ ಪಾಟೀಲ್‌ ಸಾವಿನಲ್ಲಿ ರಾಜಕಾರಣ

ಬಸನಗೌಡ ಪಾಟೀಲ್‌ ಸಾವಿನಲ್ಲಿ ರಾಜಕಾರಣ

ಬ್ಯಾಂಕ್‌ನಲ್ಲಿ ಹಣ ದುರ್ಬಳಕೆಯಾಗಿರುವ ಆರೋಪದ ಹಿನ್ನೆಲೆ ಏಪ್ರಿಲ್ 13ರಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಕಚೇರಿಯ ನಿರ್ದೇಶನದ ಮೇರೆಗೆ ಆಡಿಟ್ ವರದಿ ಪಡೆದು ಸರಕಾರಕ್ಕೆ ಸಲ್ಲಿಸಲಾಗಿತ್ತು. ಆಡಿಟ್ ವರದಿಯ ಆಧಾರದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಲಾಗಿದ್ದು, ಸರಕಾರ ಅದಕ್ಕೆ ಅನುಮೋದನೆ ನೀಡಿದೆ

ಶಿಕ್ಷಕರ ಸಮರ್ಪಣಾ ಮನೋಭಾವಕ್ಕೆ ಒಲಿದ ಯಶಸ್ಸು

ಶಿಕ್ಷಕರ ಸಮರ್ಪಣಾ ಮನೋಭಾವಕ್ಕೆ ಒಲಿದ ಯಶಸ್ಸು

ಶಿಕ್ಷಣ ಇಲಾಖೆಯಿಂದ ಕಾಗದದ ಮೇಲೆ ಸೌಲಭ್ಯಗಳ ಮಹಾಪೂರವೇ ಹರಿದುಬಂದರೂ, ಅವು ಪ್ರಾಯೋಗಿಕವಾಗಿ ತಳಮಟ್ಟದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬುದು ಸಾರ್ವಜನಿಕರ ಸಾರ್ವ ತ್ರಿಕ ದೂರು. ಆದರೆ, ಇಂತಹ ಕನಿಷ್ಠ ಹಾಗೂ ಸೀಮಿತ ಮೂಲಸೌಕರ್ಯಗಳ ಮಧ್ಯೆಯೂ ಸಂಜೀವ ನಗರದ ಸರಕಾರಿ ಶಾಲೆ ಗಮನ ಸೆಳೆಯುವಂತೆ ಮಾಡುವಲ್ಲಿ ಇಲ್ಲಿನ ಶಿಕ್ಷಕರ ಪಾತ್ರ ಅನನ್ಯವಾಗಿದೆ

Yadgir News: ಯಾದಗಿರಿಯಲ್ಲಿ ಕ್ವಾರಿಗೆ ಬಿದ್ದು ಇಬ್ಬರು ಬಾಲಕಿಯರು ಸೇರಿ ಮೂವರ ಸಾವು; ಬಟ್ಟೆ ತೊಳೆಯುವ ವೇಳೆ ದುರಂತ!

ಯಾದಗಿರಿಯಲ್ಲಿ ಕ್ವಾರಿಗೆ ಬಿದ್ದು ಇಬ್ಬರು ಬಾಲಕಿಯರು ಸೇರಿ ಮೂವರ ಸಾವು

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಸವನಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಗ್ರಾಮದಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಬಟ್ಟೆ ತೊಳೆಯಲು ಮರಮ್ ಕ್ವಾರಿ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ.

ಘೋರ ದುರಂತ: ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು

ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು

ಆಕಸ್ಮಿಕವಾಗಿ ಕಾರಿನ ಡಿಕ್ಕಿಯೊಳಗೆ ಸಿಲುಕಿ ಮೂರು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೊಟ್ಟೂರೇಶ್ವರ ಪೂಜ್ಯರ ಎಂಬುವವರ ಪುತ್ರ ಬಸವಪ್ರಭು (3) ಮೃತಪಟ್ಟ ದುರ್ದೈವಿ ಬಾಲಕ. ಬಸವಪ್ರಭು ಎಂದಿನಂತೆ ತನ್ನ ಸ್ನೇಹಿತರೊಂದಿಗೆ ಮನೆಯ ಮುಂಭಾಗದ ಆವರಣದಲ್ಲಿ ಆಟವಾಡುತ್ತಿದ್ದ.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್

ಇನ್ಸ್‌ಪೆಕ್ಟರ್ ಒಬ್ಬರು​ ಒಂದು ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

Weather report: ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

SSLC Result in Yadgir : ಎಸ್‌ʼಎಸ್‌ʼಎಲ್‌ʼಸಿ ಫಲಿತಾಂಶ: ತಪ್ಪಿದ ಕೊನೆಯ ಸ್ಥಾನ

ಎಸ್‌ʼಎಸ್‌ʼಎಲ್‌ʼಸಿ ಫಲಿತಾಂಶ: ತಪ್ಪಿದ ಕೊನೆಯ ಸ್ಥಾನ

ಪರೀಕ್ಷಾ ಫಲಿತಾಂಶಗಳಲ್ಲಿ ಸದಾ ಕೊನೆಯ ಸ್ಥಾನ ಪಡೆಯುತ್ತಾ ಟೀಕೆಗಳಿಗೆ ಆಹಾರವಾಗುತ್ತಿದ್ದ ಯಾದಗಿರಿ ಜಿಲ್ಲೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಯಾದಗಿರಿ ಜಿಲ್ಲೆಯು ಕಳೆದ ಎರಡು ವರ್ಷಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬದಲಾವಣೆ ಕಾಣುತ್ತಲಿದ್ದು, ಈ ವರ್ಷ 91.89 ಪ್ರತಿಶತ ಪಡೆದು 31 ಸ್ಥಾನದಲ್ಲಿ ಯಾದಗಿರಿ ಸ್ಥಾನ ಪಡೆದಿದೆ.

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸಿರವಾರ ಪಟ್ಟಣ ಪಂಚಾಯತ್ ಸದಸ್ಯನ ಕುಟುಂಬದ 6 ಮಂದಿ ಸಜೀವ ದಹನ

Yadgir accident: ಯಾದಗಿರಿ ಅಪಘಾತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದರಿಂದ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

Road Accident: ಯಾದಗಿರಿ ಬಳಿ ಭೀಕರ ಅಪಘಾತ, ಡಿಕ್ಕಿಯಾಗಿ ಹೊತ್ತಿ ಉರಿದ ಕಾರು- ಬಸ್ಸು, 7 ಮಂದಿ ದುರ್ಮರಣ

ಯಾದಗಿರಿ ಬಳಿ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು- ಬಸ್ಸು, 7 ಮಂದಿ ಸಾವು

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ವಿಆರ್​ಎಲ್​​ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, 7 ಮಂದಿ ಸಜೀವ ದಹನಗೊಂಡಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸುರಪುರದಲ್ಲಿ ಬಡವರ ಅನ್ನಕ್ಕೆ ಕನ್ನ, ಪಡಿತರ ಅಕ್ಕಿ ಅಕ್ರಮ ಮಾರಾಟ; ತಹಸೀಲ್ದಾರ್‌ಗೆ ದೂರು

ಸುರಪುರದಲ್ಲಿ ಬಡವರ ಅನ್ನಕ್ಕೆ ಕನ್ನ, ಪಡಿತರ ಅಕ್ಕಿ ಅಕ್ರಮ ಮಾರಾಟ!

Ration Rice Smuggling: ಸುರಪುರದ ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ತಿಂಗಳು ಪಡಿತರ ವಿತರಿಸುವಾಗ 2 ಕೆಜಿ ಅಕ್ಕಿ ಕಡಿತಗೊಳಿಸಿವುದಲ್ಲದೆ, ಕೆಲ ಪಡಿತರ ಚೀಟಿದಾರರಿಂದ ಅಕ್ಕಿ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Yadgir News: ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಅನುಸುಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದ ಮನಮಿಡಿಯುವ ಘಟನೆ ಮಂಗಳವಾರ ಗುರುಮಠಕಲ್ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅನುಸುಜಾ ತಂದೆಯ ಸಾವಿನ ದುಃಖದಲ್ಲೇ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.

Yadgir News: ಸುರಪುರದಲ್ಲಿ ಘೋರ ಘಟನೆ; ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳ ಸಾವು

ಸುರಪುರದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳ ಸಾವು

Four children drown in farm pond: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಸ್ಥಳದಲ್ಲಿ ಮಕ್ಕಳ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ನೇಮಕಾತಿ; SSLC ಪಾಸಾದವರಿಗೆ ಅವಕಾಶ

ಯಾದಗಿರಿ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್ ಮತ್ತು ಪ್ರೊಸೆಸ್ ಸರ್ವರ್ ಸೇರಿ 14 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರಿತ ಆಯ್ಕೆ ಬಳಿಕ ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 12 ಕೊನೆಯ ದಿನಾಂಕ.

Loading...